Homeಕರ್ನಾಟಕರಾಜ್ಯಸಭೆ ಅವಹೇಳನ ಆರೋಪ: ರಂಜನ್‌ ಗೊಗೊಯ್‌‌ ವಿರುದ್ಧ ನೋಟಿಸ್ ಸಲ್ಲಿಕೆ

ರಾಜ್ಯಸಭೆ ಅವಹೇಳನ ಆರೋಪ: ರಂಜನ್‌ ಗೊಗೊಯ್‌‌ ವಿರುದ್ಧ ನೋಟಿಸ್ ಸಲ್ಲಿಕೆ

- Advertisement -
- Advertisement -

ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಭಾರತದ ಮಾಜಿ ಸಿಜೆಐ, ರಾಜ್ಯಸಭಾ ಸದಸ್ಯ ರಂಜನ್ ಗೊಗೊಯ್ ಅವರ ನೀಡಿದ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. ಸಂಸತ್ತಿನಲ್ಲಿ ವಿಶೇಷ ಹಕ್ಕು ನೋಟಿಸ್‌ಗೆ ಕಾರಣವಾಗಿವೆ.

“ನನಗೆ ಅನಿಸಿದಾಗಲೆಲ್ಲಾ ನಾನು ರಾಜ್ಯಸಭೆಗೆ ಹೋಗುತ್ತೇನೆ” ಎಂದು ನ್ಯಾಯಮೂರ್ತಿ ಗೊಗೊಯ್ ಎನ್‌ಡಿಟಿವಿಗೆ ಸಂದರ್ಶನದಲ್ಲಿ ಹೇಳುತ್ತಾ ತಮ್ಮ ಆತ್ಮಚರಿತ್ರೆಯಾದ “ಜಸ್ಟೀಸ್ ಫಾರ್ ದಿ ಜಡ್ಜ್” ಕುರಿತು ಮಾತನಾಡಿದ್ದರು.

“ನ್ಯಾಯಮೂರ್ತಿ ಗೊಗೊಯ್ ಅವರ ಹೇಳಿಕೆಗಳು ರಾಜ್ಯಸಭೆಯನ್ನು ಅವಹೇಳನ ಮಾಡಿವೆ. ಸದನದ ಘನತೆಗೆ ಧಕ್ಕೆ ತರುತ್ತದೆ ಮತ್ತು ವಿಶೇಷ ಹಕ್ಕುಗಳ ಉಲ್ಲಂಘನೆಯಾಗಿದೆ” ಎಂದು ತೃಣಮೂಲ ಕಾಂಗ್ರೆಸ್ ನೋಟೀಸ್ ಸಲ್ಲಿಸಿದೆ. ರಂಜನ್‌ ಗೊಗೊಯ್‌ ನೀಡಿದ ವಿವಾದಾತ್ಮಕ ಹೇಳಿಕೆಗಳನ್ನು ಈ ನೋಟಿಸ್‌ ಪ್ರಸ್ತಾಪಿಸಿದೆ.

“ಒಂದು ಅಥವಾ ಎರಡು ಸೆಷನ್‌ಗಳಿಗೆ ಕೋವಿಡ್‌ ಕಾರಣದಿಂದಾಗಿ (ವೈದ್ಯಕೀಯ ಸಲಹೆಯ ಆಧಾರದ ಮೇಲೆ) ನಾನು ಅಧಿವೇಶನಕ್ಕೆ ಹಾಜರಾಗಿಲ್ಲ. ಇವತ್ತಿಗೂ ನಾನು ಈ ವಿಚಾರವಾಗಿ ಆರಾಮವಾಗಿ ಇಲ್ಲ ಎನ್ನುತ್ತೇನೆ. ಸಾರ್ವಜನಿಕ ಅಂತರದ ನಿಯಮಗಳನ್ನು ಜಾರಿಗೊಳಿಸಲಾಗಿದೆ, ಆದರೆ ಅವುಗಳನ್ನು ಪಾಲಿಸಲಾಗುತ್ತಿಲ್ಲ. ಕುಳಿತುಕೊಳ್ಳಲು ಮಾಡಲಾಗಿರುವ ವ್ಯವಸ್ಥೆ ನನಗೆ ಆರಾಮದಾಯಕವೆನಿಸುತ್ತಿಲ್ಲ. ಇದನ್ನು ಒತ್ತು ಹೇಳುವುದಾದರೆ ನಾನು ರಾಜ್ಯಸಭಾಕ್ಕೆ ನನಗೆ ಅನಿಸಿದಾಗ ಹೋಗುತ್ತೇನೆ” ಎಂದಿದ್ದರು ಗೊಗೊಯ್‌.

ಮುಂದುವರಿದು, “ಅತ್ಯಂತ ಮಹತ್ವದ ವಿಷಯಗಳ ಬಗ್ಗೆ ಮಾತನಾಡಬೇಕು ಎಂದು ನಾನು ಭಾವಿಸಿದಾಗ ಹೋಗುತ್ತೇನೆ. ನಾನು ನಾಮನಿರ್ದೇಶಿತ ಸದಸ್ಯ, ಯಾವುದೇ ಪಕ್ಷದ ವಿಪ್‌ಗೆ ನಾನು ಒಳಪಡುವುದಿಲ್ಲ. ಪಕ್ಷದ ಸದಸ್ಯರಿಗೆ ಬರಲು ಸೂಚಿಸಿದಾಗ ಅದು ನನಗೆ ಅನ್ವಯವಾಗುವುದಿಲ್ಲ. ನಾನು ನನ್ನ ಆಯ್ಕೆಯ ಮೇರೆಗೆ ಅಲ್ಲಿಗೆ ಹೋಗುತ್ತೇನೆ ಮತ್ತು ನನ್ನ ಆಯ್ಕೆಯ ಮೇಲೆ ಹೊರಬರುತ್ತೇನೆ” ಎಂದು ನ್ಯಾಯಮೂರ್ತಿ ಗೊಗೊಯ್ ಸಂದರ್ಶನದಲ್ಲಿ ಹೇಳಿದ್ದರು.

ನ್ಯಾಯಮೂರ್ತಿ ಗೊಗೊಯ್ ಅವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಾಗಿನಿಂದ ಅವರು ಅತ್ಯಂತ ಕಡಿಮೆ ಹಾಜರಾತಿ ಹೊಂದಿದ್ದಾರೆ ಎಂದು ಸಂದರ್ಶನದಲ್ಲಿ ಪ್ರಶ್ನಿಸಲಾಗಿತ್ತು. ಮಾರ್ಚ್ 2020ರಿಂದ ಈವರೆಗೆ ನಡೆದ ಎಲ್ಲಾ ಸಭೆಗಳಲ್ಲಿ ಶೇಕಡಾ 10ಕ್ಕಿಂತ ಕಡಿಮೆ ಹಾಜರಾತಿ ಹೊಂದಿದ್ದಾರೆ ಎಂದು ಸಂಸತ್ತಿನ ದಾಖಲೆಗಳು ತೋರಿಸುತ್ತವೆ.

ಸುಪ್ರೀಂ ಕೋರ್ಟ್‌ನಿಂದ ನಿವೃತ್ತರಾದ ನಾಲ್ಕು ತಿಂಗಳ ನಂತರ ರಾಜ್ಯಸಭೆಗೆ ಸೇರುವ ತಮ್ಮ ನಿರ್ಧಾರವನ್ನು ನ್ಯಾಯಮೂರ್ತಿ ಗೊಗೊಯ್ ತೆಗೆದುಕೊಂಡರು. ಇತ್ತೀಚೆಗೆ ಪ್ರಕಟಿಸಲಾಗಿರುವ ಅವರ ಆತ್ಮಚರಿತ್ರೆಯಲ್ಲೂ ಅದನ್ನು ಸಮರ್ಥಿಸಿಕೊಂಡಿದ್ದಾರೆ. ತಾನು ಸೇರಿರುವ ನ್ಯಾಯಾಂಗ ಮತ್ತು ಈಶಾನ್ಯ ಪ್ರದೇಶದ ಸಮಸ್ಯೆಗಳನ್ನು ಪ್ರಸ್ತಾಪಿಸಲು ಬಯಸಿದ್ದರಿಂದ ಹಿಂಜರಿಕೆಯಿಲ್ಲದೆ ಈ ಸ್ಥಾನವನ್ನು ಒಪ್ಪಿಕೊಂಡಿದ್ದೇನೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿರಿ: ನೀವು ಡಿನ್ನರ್‌ಗೆ ಹೋಗುವುದಿಲ್ಲವೇ?: ಅಯೋಧ್ಯೆ ತೀರ್ಪಿತ್ತ ದಿನದ ನಡೆ ಸಮರ್ಥಿಸಿಕೊಂಡ ನಿವೃತ್ತ ಸಿಜೆಐ ರಂಜನ್ ಗೊಗೊಯ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...