Homeಕರ್ನಾಟಕರಾಜ್ಯಸಭೆ ಅವಹೇಳನ ಆರೋಪ: ರಂಜನ್‌ ಗೊಗೊಯ್‌‌ ವಿರುದ್ಧ ನೋಟಿಸ್ ಸಲ್ಲಿಕೆ

ರಾಜ್ಯಸಭೆ ಅವಹೇಳನ ಆರೋಪ: ರಂಜನ್‌ ಗೊಗೊಯ್‌‌ ವಿರುದ್ಧ ನೋಟಿಸ್ ಸಲ್ಲಿಕೆ

- Advertisement -
- Advertisement -

ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಭಾರತದ ಮಾಜಿ ಸಿಜೆಐ, ರಾಜ್ಯಸಭಾ ಸದಸ್ಯ ರಂಜನ್ ಗೊಗೊಯ್ ಅವರ ನೀಡಿದ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. ಸಂಸತ್ತಿನಲ್ಲಿ ವಿಶೇಷ ಹಕ್ಕು ನೋಟಿಸ್‌ಗೆ ಕಾರಣವಾಗಿವೆ.

“ನನಗೆ ಅನಿಸಿದಾಗಲೆಲ್ಲಾ ನಾನು ರಾಜ್ಯಸಭೆಗೆ ಹೋಗುತ್ತೇನೆ” ಎಂದು ನ್ಯಾಯಮೂರ್ತಿ ಗೊಗೊಯ್ ಎನ್‌ಡಿಟಿವಿಗೆ ಸಂದರ್ಶನದಲ್ಲಿ ಹೇಳುತ್ತಾ ತಮ್ಮ ಆತ್ಮಚರಿತ್ರೆಯಾದ “ಜಸ್ಟೀಸ್ ಫಾರ್ ದಿ ಜಡ್ಜ್” ಕುರಿತು ಮಾತನಾಡಿದ್ದರು.

“ನ್ಯಾಯಮೂರ್ತಿ ಗೊಗೊಯ್ ಅವರ ಹೇಳಿಕೆಗಳು ರಾಜ್ಯಸಭೆಯನ್ನು ಅವಹೇಳನ ಮಾಡಿವೆ. ಸದನದ ಘನತೆಗೆ ಧಕ್ಕೆ ತರುತ್ತದೆ ಮತ್ತು ವಿಶೇಷ ಹಕ್ಕುಗಳ ಉಲ್ಲಂಘನೆಯಾಗಿದೆ” ಎಂದು ತೃಣಮೂಲ ಕಾಂಗ್ರೆಸ್ ನೋಟೀಸ್ ಸಲ್ಲಿಸಿದೆ. ರಂಜನ್‌ ಗೊಗೊಯ್‌ ನೀಡಿದ ವಿವಾದಾತ್ಮಕ ಹೇಳಿಕೆಗಳನ್ನು ಈ ನೋಟಿಸ್‌ ಪ್ರಸ್ತಾಪಿಸಿದೆ.

“ಒಂದು ಅಥವಾ ಎರಡು ಸೆಷನ್‌ಗಳಿಗೆ ಕೋವಿಡ್‌ ಕಾರಣದಿಂದಾಗಿ (ವೈದ್ಯಕೀಯ ಸಲಹೆಯ ಆಧಾರದ ಮೇಲೆ) ನಾನು ಅಧಿವೇಶನಕ್ಕೆ ಹಾಜರಾಗಿಲ್ಲ. ಇವತ್ತಿಗೂ ನಾನು ಈ ವಿಚಾರವಾಗಿ ಆರಾಮವಾಗಿ ಇಲ್ಲ ಎನ್ನುತ್ತೇನೆ. ಸಾರ್ವಜನಿಕ ಅಂತರದ ನಿಯಮಗಳನ್ನು ಜಾರಿಗೊಳಿಸಲಾಗಿದೆ, ಆದರೆ ಅವುಗಳನ್ನು ಪಾಲಿಸಲಾಗುತ್ತಿಲ್ಲ. ಕುಳಿತುಕೊಳ್ಳಲು ಮಾಡಲಾಗಿರುವ ವ್ಯವಸ್ಥೆ ನನಗೆ ಆರಾಮದಾಯಕವೆನಿಸುತ್ತಿಲ್ಲ. ಇದನ್ನು ಒತ್ತು ಹೇಳುವುದಾದರೆ ನಾನು ರಾಜ್ಯಸಭಾಕ್ಕೆ ನನಗೆ ಅನಿಸಿದಾಗ ಹೋಗುತ್ತೇನೆ” ಎಂದಿದ್ದರು ಗೊಗೊಯ್‌.

ಮುಂದುವರಿದು, “ಅತ್ಯಂತ ಮಹತ್ವದ ವಿಷಯಗಳ ಬಗ್ಗೆ ಮಾತನಾಡಬೇಕು ಎಂದು ನಾನು ಭಾವಿಸಿದಾಗ ಹೋಗುತ್ತೇನೆ. ನಾನು ನಾಮನಿರ್ದೇಶಿತ ಸದಸ್ಯ, ಯಾವುದೇ ಪಕ್ಷದ ವಿಪ್‌ಗೆ ನಾನು ಒಳಪಡುವುದಿಲ್ಲ. ಪಕ್ಷದ ಸದಸ್ಯರಿಗೆ ಬರಲು ಸೂಚಿಸಿದಾಗ ಅದು ನನಗೆ ಅನ್ವಯವಾಗುವುದಿಲ್ಲ. ನಾನು ನನ್ನ ಆಯ್ಕೆಯ ಮೇರೆಗೆ ಅಲ್ಲಿಗೆ ಹೋಗುತ್ತೇನೆ ಮತ್ತು ನನ್ನ ಆಯ್ಕೆಯ ಮೇಲೆ ಹೊರಬರುತ್ತೇನೆ” ಎಂದು ನ್ಯಾಯಮೂರ್ತಿ ಗೊಗೊಯ್ ಸಂದರ್ಶನದಲ್ಲಿ ಹೇಳಿದ್ದರು.

ನ್ಯಾಯಮೂರ್ತಿ ಗೊಗೊಯ್ ಅವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಾಗಿನಿಂದ ಅವರು ಅತ್ಯಂತ ಕಡಿಮೆ ಹಾಜರಾತಿ ಹೊಂದಿದ್ದಾರೆ ಎಂದು ಸಂದರ್ಶನದಲ್ಲಿ ಪ್ರಶ್ನಿಸಲಾಗಿತ್ತು. ಮಾರ್ಚ್ 2020ರಿಂದ ಈವರೆಗೆ ನಡೆದ ಎಲ್ಲಾ ಸಭೆಗಳಲ್ಲಿ ಶೇಕಡಾ 10ಕ್ಕಿಂತ ಕಡಿಮೆ ಹಾಜರಾತಿ ಹೊಂದಿದ್ದಾರೆ ಎಂದು ಸಂಸತ್ತಿನ ದಾಖಲೆಗಳು ತೋರಿಸುತ್ತವೆ.

ಸುಪ್ರೀಂ ಕೋರ್ಟ್‌ನಿಂದ ನಿವೃತ್ತರಾದ ನಾಲ್ಕು ತಿಂಗಳ ನಂತರ ರಾಜ್ಯಸಭೆಗೆ ಸೇರುವ ತಮ್ಮ ನಿರ್ಧಾರವನ್ನು ನ್ಯಾಯಮೂರ್ತಿ ಗೊಗೊಯ್ ತೆಗೆದುಕೊಂಡರು. ಇತ್ತೀಚೆಗೆ ಪ್ರಕಟಿಸಲಾಗಿರುವ ಅವರ ಆತ್ಮಚರಿತ್ರೆಯಲ್ಲೂ ಅದನ್ನು ಸಮರ್ಥಿಸಿಕೊಂಡಿದ್ದಾರೆ. ತಾನು ಸೇರಿರುವ ನ್ಯಾಯಾಂಗ ಮತ್ತು ಈಶಾನ್ಯ ಪ್ರದೇಶದ ಸಮಸ್ಯೆಗಳನ್ನು ಪ್ರಸ್ತಾಪಿಸಲು ಬಯಸಿದ್ದರಿಂದ ಹಿಂಜರಿಕೆಯಿಲ್ಲದೆ ಈ ಸ್ಥಾನವನ್ನು ಒಪ್ಪಿಕೊಂಡಿದ್ದೇನೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿರಿ: ನೀವು ಡಿನ್ನರ್‌ಗೆ ಹೋಗುವುದಿಲ್ಲವೇ?: ಅಯೋಧ್ಯೆ ತೀರ್ಪಿತ್ತ ದಿನದ ನಡೆ ಸಮರ್ಥಿಸಿಕೊಂಡ ನಿವೃತ್ತ ಸಿಜೆಐ ರಂಜನ್ ಗೊಗೊಯ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...