Homeಕೊರೊನಾಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೊ: ಪ್ರಧಾನಿ ಬಗ್ಗೆ ನಾಚಿಕೆ ಏಕೆ? ಕೇರಳ ಹೈಕೋರ್ಟ್ ಪ್ರಶ್ನೆ

ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೊ: ಪ್ರಧಾನಿ ಬಗ್ಗೆ ನಾಚಿಕೆ ಏಕೆ? ಕೇರಳ ಹೈಕೋರ್ಟ್ ಪ್ರಶ್ನೆ

- Advertisement -
- Advertisement -

ಕೊರೊನಾ ಲಸಿಕೆ ಪ್ರಮಾಣಪತ್ರದಿಂದ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ತೆಗೆಯುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿರುವ ಕೇರಳ ಹೈಕೋರ್ಟ್‌, ಪ್ರಧಾನಿ ಬಗ್ಗೆ ನಾಚಿಕೆ ಏಕೆ? ಎಂದು ಅರ್ಜಿದಾರರನ್ನು ಪ್ರಶ್ನಿಸಿದೆ. 

ಇತರ ದೇಶಗಳಲ್ಲಿ ಇಂತಹ ಪದ್ಧತಿ ಇಲ್ಲ ಎಂದು ಅರ್ಜಿದಾರರ ಪರ ವಕೀಲರು ಕೇರಳ ಹೈಕೋರ್ಟ್‌ಗೆ ತಿಳಿಸಿದರು. ಇದಕ್ಕೆ ಮೌಖಿಕವಾಗಿ ಪ್ರತಿಕ್ರಿಯಿಸಿದ ನ್ಯಾಯಾಧೀಶರು, “ಅವರು ತಮ್ಮ ಪ್ರಧಾನಿಗಳ ಬಗ್ಗೆ ಹೆಮ್ಮೆಪಡದಿರಬಹುದು, ನಮ್ಮ ಪ್ರಧಾನಿ ಬಗ್ಗೆ ನಮಗೆ ಹೆಮ್ಮೆ ಇದೆ” ಎಂದು ಹೇಳಿದೆ.

ದೇಶದ ಜನರು ಬಹುಮತದಿಂದ ಪ್ರಧಾನಿಯನ್ನು ಅಧಿಕಾರಕ್ಕೆ ಆಯ್ಕೆ ಮಾಡಿದ್ದಾರೆ. ಲಸಿಕೆ ಪ್ರಮಾಣ ಪತ್ರದಲ್ಲಿ ಅವರ ಭಾವಚಿತ್ರ ಇರುವುದರಲ್ಲಿ ತಪ್ಪೇನು ಎಂದು ನ್ಯಾಯಮೂರ್ತಿ ಪಿ ವಿ ಕುಂಞಿಕೃಷ್ಣನ್ ಹೇಳಿದ್ದಾರೆ.

“ನೀವು (ಅರ್ಜಿದಾರರು) ಪ್ರಧಾನ ಮಂತ್ರಿಯ ಬಗ್ಗೆ ಏಕೆ ನಾಚಿಕೆಪಡುತ್ತೀರಿ? ಅವರು ಜನಾದೇಶದ ಮೂಲಕ ಅಧಿಕಾರಕ್ಕೆ ಬಂದಿದ್ದಾರೆ…. ನಾವು ವಿಭಿನ್ನ ರಾಜಕೀಯ ದೃಷ್ಟಿಕೋನಗಳನ್ನು ಹೊಂದಿರಬಹುದು, ಆದರೆ ಅವರು ಇನ್ನೂ ನಮ್ಮ ಪ್ರಧಾನಿ” ಎಂದು ನ್ಯಾಯಾಲಯ ಹೇಳಿದೆ.

ಅರ್ಜಿದಾರರ ಪರ ವಕೀಲ ಪೀಟರ್ ಮೈಲಿಪರಂಪಿಲ್ ಅವರು “ಪ್ರಮಾಣಪತ್ರವು ಖಾಸಗಿ ದಾಖಲೆ ಆಗಿದ್ದು, ಅದರ ಮೇಲೆ ನಮಗೆ ಹಕ್ಕಿದೆ. ನಾವು ಹಣ ಕೊಟ್ಟು ಲಸಿಕೆ ಖರೀದಿಸಿದ್ದು, ಅದರ ಕ್ರೆಡಿಟ್ ಅನ್ನು ಪ್ರಭುತ್ವ ತೆಗೆದುಕೊಳ್ಳುವುದು ಸರಿಯಲ್ಲ” ಎಂದು ವಾದಿಸಿದ್ದಾರೆ.

ಪ್ರಮಾಣ ಪತ್ರಕ್ಕೆ ಪ್ರಧಾನಮಂತ್ರಿಯವರ ಭಾವಚಿತ್ರವನ್ನು ಸೇರಿಸಿರುವುದು ವ್ಯಕ್ತಿಯ ಖಾಸಗಿತನವನ್ನು ಉಲ್ಲಂಘಿಸಿದಂತಾಗುತ್ತದೆ ಪೀಟರ್‌ ಪ್ರತಿಪಾದಿಸಿದ್ದಾರೆ.

ಈ ದೇಶದಲ್ಲಿ ಜವಾಹಾರ್‌ ಲಾಲ್ ನೆಹರೂ ಹೆಸರಿನಲ್ಲಿ ವಿಶ್ವವಿದ್ಯಾಲಯವೇ ಇದೆ. ಹಾಗಿದ್ದಾಗ ಲಸಿಕೆ ಪ್ರಮಾಣ ಪತ್ರದ ಮೇಲೆ ಈಗಿನಿ ಪ್ರಧಾನಿಯವರ ಫೋಟೊ ಏಕಿರಬಾರದು ಎಂದು ಪೀಠ ಪ್ರಶ್ನಿಸಿದೆ.

ದೇಶದ 100 ಕೋಟಿಗೂ ಹೆಚ್ಚು ಜನರಿಗೆ ಲಸಿಕೆ ಪ್ರಮಾಣ ಪತ್ರದಲ್ಲಿ ಪ್ರಧಾನಿಯವರ ಫೋಟೊ ಇರುವುದರಿಂದ ತೊಂದರೆಯಾಗಿಲ್ಲ. ‘ನಿಮಗೇಕೆ ತೊಂದರೆ? ಎಂದು ಹೇಳಿದ್ದು, ಅರ್ಜಿಗೆ ಯಾವುದೇ ಅರ್ಹತೆ ಇದೆಯೇ ಎಂಬುದನ್ನು ಪರಿಶೀಲಿಸಲಾಗುವುದು. ಇಲ್ಲವೆಂದಾದರೆ, ಅರ್ಜಿಯನ್ನು ವಿಲೇವಾರಿ ಮಾಡಲಾಗುವುದು ಎಂದು ಹೇಳಿದೆ. 

ಒಂದು ಗಂಟೆಗೂ ಹೆಚ್ಚು ಕಾಲ ನಡೆದ ವಿಚಾರಣೆಯಲ್ಲಿ ಅರ್ಜಿದಾರರ ಪರ ವಾದ ಮಂಡಿಸಿದ ಮತ್ತೊಬ್ಬ ವಕೀಲ ಅಜಿತ್ ಜಾಯ್, ಪ್ರಧಾನಿಯ ಬಗ್ಗೆ ಹೆಮ್ಮೆ ಪಡಬೇಕೆ, ಬೇಡವೇ ಎಂಬುದು ಅವರ ವೈಯಕ್ತಿಕ ಆಯ್ಕೆಯಾಗಿದೆ ಎಂದು ಹೇಳಿದ್ದಾರೆ.

ಇದು ರಾಜಕೀಯ ಭಿನ್ನಾಭಿಪ್ರಾಯದ ವಿಷಯವಲ್ಲ. ಸಾರ್ವಜನಿಕ ಹಣವನ್ನು ಜಾಹೀರಾತು ಮತ್ತು ಪ್ರಚಾರಗಳಿಗೆ ಬಳಸಿಕೊಳ್ಳುವುದಕ್ಕೆ ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ನೀಡಿದೆ ಎಂದು ಜಾಯ್‌ ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. 

ಪ್ರಮಾಣಪತ್ರದಲ್ಲಿ ಫೋಟೋ ಇದ್ದರೆ ಮತದಾರರ ಮನಸ್ಸಿನ ಮೇಲೂ ಪ್ರಭಾವ ಬೀರುತ್ತದೆ. ಇತ್ತೀಚಿನ ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಅರ್ಜಿಸಲ್ಲಿಸಿರುವ ಅರ್ಜಿದಾರರು ಮತ್ತು ಹಿರಿಯ ನಾಗರಿಕರು ತಮ್ಮ ವ್ಯಾಕ್ಸಿನೇಷನ್ ಪ್ರಮಾಣಪತ್ರದಲ್ಲಿ ಪ್ರಧಾನ ಮಂತ್ರಿಯವರ ಫೋಟೋ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಪ್ರತಿಪಾದಿಸಿದ್ದಾರೆ.


ಇದನ್ನೂ ಓದಿ: ತನಗೆ ಮತ ನೀಡದ ದಲಿತ ಯುವಕರಿಗೆ ಎಂಜಲು ನೆಕ್ಕಿಸಿ, ಹಲ್ಲೆ: ಕ್ರೌರ್ಯವೆಸಗಿದ ವ್ಯಕ್ತಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...