Homeಮುಖಪುಟಲಖಿಂಪುರ್ ಖೇರಿ ಹತ್ಯಾಕಾಂಡ ಪೂರ್ವಯೋಜಿತವಾದುದು: SIT

ಲಖಿಂಪುರ್ ಖೇರಿ ಹತ್ಯಾಕಾಂಡ ಪೂರ್ವಯೋಜಿತವಾದುದು: SIT

SIT ಯು ಕಾರು ಹರಿಸಿ ಕೊಂದ 13 ಆರೋಪಿಗಳ ವಿರುದ್ಧ ಶಸಸ್ತ್ರ ಕಾಯ್ದೆಯಡಿಯಲ್ಲಿ ಕೊಲೆಯತ್ನ ಸೇರಿ ನಾಲ್ಕು ಹೊಸ ಸೆಕ್ಷನ್‌ಗಳನ್ನು ಸೇರಿಸಲು CJM ಮುಂದೆ ಅರ್ಜಿ ಸಲ್ಲಿಸಿದೆ.

- Advertisement -
- Advertisement -

ನಾಲ್ವರು ರೈತರು ಸೇರಿದಂತೆ ಒಟ್ಟು 8 ಜನರ ಅಮಾನುಷ ಸಾವಿಗೆ ಕಾರಣವಾದ ಅಕ್ಟೋಬರ್ 3 ರ ಉತ್ತರ ಪ್ರದೇಶದ ಲಖೀಂಪುರ್ ಖೇರಿ ಹತ್ಯಾಕಾಂಡವು ಯೋಜಿತವಾದ ಮತ್ತು ಉದ್ದೇಶಪೂರ್ವಕ ಕೃತ್ಯವಾಗಿದೆಯೆ ಹೊರತು ನಿರ್ಲಕ್ಷತನದಿಂದ ಆಗಿದ್ದಲ್ಲ ಎಂದು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ತಿಳಿಸಿದೆ.

ಹಾಗಾಗಿ SIT ಯು ಕಾರು ಹರಿಸಿ ಕೊಂದ 13 ಆರೋಪಿಗಳ ವಿರುದ್ಧ ಶಸಸ್ತ್ರ ಕಾಯ್ದೆಯಡಿಯಲ್ಲಿ ಕೊಲೆಯತ್ನ ಸೇರಿ ನಾಲ್ಕು ಹೊಸ ಸೆಕ್ಷನ್‌ಗಳನ್ನು ಸೇರಿಸಲು ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (CJM) ಮುಂದೆ ಅರ್ಜಿ ಸಲ್ಲಿಸಿದೆ.

ಈಗಾಗಲೇ ಕೇಂದ್ರ ಸಚಿವ ಅಜಯ್ ಮಿಶ್ರಾ ಟೆನಿ ಅವರ ಪುತ್ರ ಆಶಿಶ್ ಮಿಶ್ರಾ ವಿರುದ್ಧ ಕೊಲೆಯತ್ನದ ಪ್ರಕರಣ ದಾಖಲಾಗಿದೆ. ನಂತರದ ತನಿಖೆಯ ಸಂದರ್ಭದಲ್ಲಿ ಹೊಸ ಸಾಕ್ಷ್ಯಗಳು ಸಿಕ್ಕಿದ್ದರಿಂದ ಈಗ ಎಲ್ಲಾ 13 ಆರೋಪಿಗಳ ಮೇಲೆ ಕೊಲೆಯತ್ನ ಪ್ರಕರಣ ಸೇರಿಸಲು ಮನವಿ ಮಾಡಿದೆ. ಜೊತೆಗೆ ಆರೋಪಿಗಳ ವಿರುದ್ಧದ ಮೂರು ಆರೋಪಗಳನ್ನು ಕೈಬಿಡುವಂತೆ ಸಹ ಎಸ್‌ಐಟಿ ನ್ಯಾಯಾಲಯಕ್ಕೆ ಮನವಿ ಮಾಡಿದೆ. ಅವುಗಳೆಂದರೆ ಐಪಿಸಿ ಸೆಕ್ಷನ್‌ 279 (ಸಾರ್ವಜನಿಕ ಮಾರ್ಗದಲ್ಲಿ ದುಡುಕಿನ ಚಾಲನೆ), 338 (ಇತರರ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಕ್ರಿಯೆ) ಮತ್ತು 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ).

ಅವುಗಳ ಬದಲಿಗೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307 (ಕೊಲೆಯ ಯತ್ನ), 326 (ಸ್ವಯಂಪ್ರೇರಿತವಾಗಿ ಅಪಾಯಕಾರಿ ಶಸ್ತ್ರಾಸ್ತ್ರಗಳು ಅಥವಾ ವಿಧಾನಗಳಿಂದ ಗಂಭೀರವಾದ ಗಾಯವನ್ನು ಉಂಟುಮಾಡುವುದು), 34 (ಸಾಮಾನ್ಯ ಉದ್ದೇಶಕ್ಕಾಗಿ ಹಲವಾರು ವ್ಯಕ್ತಿಗಳು ಮಾಡಿದ ಕೃತ್ಯಗಳು) ಸೇರಿಸಲು ವಿನಂತಿಸಲಾಗಿದೆ.

ರೈತರು ಮತ್ತು ಪತ್ರಕರ್ತನ ಮೇಲೆ ಯೋಜನಾಬದ್ದವಾಗಿ ಮತ್ತು ಕೊಲ್ಲುವ ಉದ್ದೇಶದಿಂದಲೇ ಎಸ್‌ಯವಿ ಕಾರುಗಳು ಹರಿದಿವೆ ಎಂದು ಎಸ್‌ಐಟಿ ತಿಳಿಸಿದೆ.

ಅಕ್ಟೋಬರ್ 3 ರಂದು, ಕೇಂದ್ರ ಸಚಿವ ಅಜಯ್ ಮಿಶ್ರಾ ಟೆನಿ ಅವರ ಪುತ್ರ ಆಶಿಶ್ ಮಿಶ್ರಾ ಅವರಿಗೆ ಸೇರಿದ ಎಸ್‌ಯುವಿ ಮತ್ತು ಇತರ ಎರಡು ಬೆಂಗಾವಲು ವಾಹನಗಳು ಶಾಂತಿಯುತ ಪ್ರತಿಭಟನೆ ನಡೆಸಿ ತೆರಳುತ್ತಿದ್ದ ರೈತರ ಮೇಲೆ ಹರಿದವು. ಈ ಹತ್ಯಾಕಾಂಡದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದರು. ಪ್ರಕರಣದ ಆರೋಪಿಗಳಾಗಿ ಆಶಿಶ್ ಮಿಶ್ರಾ, ಲುವ್ಕುಶ್, ಆಶಿಶ್ ಪಾಂಡೆ, ಶೇಖರ್ ಭಾರ್ತಿ, ಅಂಕಿತ್ ದಾಸ್, ಲತೀಫ್, ಶಿಶುಪಾಲ್, ನಂದನ್ ಸಿಂಗ್, ಸತ್ಯಂ ತ್ರಿಪಾಠಿ, ಸುಮಿತ್ ಜೈಸ್ವಾಲ್, ಧರ್ಮೇಂದ್ರ ಬಂಜಾರಾ, ರಿಂಕು ರಾಣಾ ಮತ್ತು ಉಲ್ಲಾಸ್ ತ್ರಿವೇದಿ ಅವರನ್ನು ಎಸ್‌ಐಟಿ ಇದುವರೆಗೆ ಬಂಧಿಸಿದೆ.

ಅವರನ್ನು ಲಖಿಂಪುರ ಖೇರಿ ಜಿಲ್ಲಾ ಕಾರಾಗೃಹದಲ್ಲಿ ಇರಿಸಲಾಗಿದೆ. ಈ ನಡುವೆ ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ಆಶಿಶ್ ಮಿಶ್ರಾನ ಜಾಮೀನು ಅರ್ಜಿಗೆ ಪ್ರತಿ-ಅಫಿಡವಿಟ್ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಎರಡು ವಾರಗಳ ಕಾಲಾವಕಾಶ ನೀಡಿದೆ.


ಇದನ್ನೂ ಓದಿ: ನೆಲಮಂಗಲ: ತಮಟೆ ಬಾರಿಸಿದ್ದಕ್ಕೆ ದಲಿತನಿಗೆ ಥಳಿತ; ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...