Homeಮುಖಪುಟವಿಧಾನ ಪರಿಷತ್ ಫಲಿತಾಂಶ: ಬಿಜೆಪಿ 11, ಕಾಂಗ್ರೆಸ್ 11, ಜೆಡಿಎಸ್ 02 ಸ್ಥಾನಗಳಲ್ಲಿ ಮುನ್ನಡೆ

ವಿಧಾನ ಪರಿಷತ್ ಫಲಿತಾಂಶ: ಬಿಜೆಪಿ 11, ಕಾಂಗ್ರೆಸ್ 11, ಜೆಡಿಎಸ್ 02 ಸ್ಥಾನಗಳಲ್ಲಿ ಮುನ್ನಡೆ

ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿಯ ಪ್ರಾಣೇಶ್‌ರವರು 06 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ. ಮರು ಮತ ಎಣಿಕೆಗೆ ಕಾಂಗ್ರೆಸ್ ಆಗ್ರಹಿಸಿದೆ.

- Advertisement -
- Advertisement -

ರಾಜ್ಯದ 25 ಸ್ಥಾನಗಳಿಗೆ ನಡೆದಿದ್ದ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಬಿಜೆಪಿ 11, ಕಾಂಗ್ರೆಸ್ 11, ಜೆಡಿಎಸ್ 02 ಮತ್ತು ಪಕ್ಷೇತರ 01 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.

ಗೆಲುವು ಕಂಡಿರುವ ಮತ್ತು ಮುನ್ನಡೆ ಸಾಧಿಸಿರುವ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ.

ಬೆಂಗಳೂರು ನಗರ: ಎಚ್.ಎಸ್ ಗೋಪಿನಾಥ್ ಗೆಲುವು

ಉತ್ತರ ಕನ್ನಡ: ಗಣಪತಿ ಉಳ್ವೇಕರ್ ಗೆಲುವು

ಕಲಬುರಗಿ: ಬಿಜೆಪಿಯ ಬಿ.ಜಿ ಪಾಟೀಲ್ ಗೆಲುವು

ಬಳ್ಳಾರಿ: ವೈಎಂ ಸತೀಶ್ ಗೆಲುವು

ಚಿಕ್ಕಮಗಳೂರು: ಬಿಜೆಪಿಯ ಪ್ರಾಣೇಶ್‌ರವರು 06 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ದಕ್ಷಿಣ ಕನ್ನಡ 1: ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಗೆ ಗೆಲುವು

ಶಿವಮೊಗ್ಗ: ಬಿಜೆಪಿ ಅಭ್ಯರ್ಥಿ ಡಿ.ಎಸ್ ಅರುಣ್ ಗೆಲವು ಸಾಧಿಸಿದ್ದಾರೆ.

ಧಾರವಾಡ 2: ಬಿಜೆಪಿ ಅಭ್ಯರ್ಥಿ ಪ್ರದೀಪ್ ಶೆಟ್ಟರ್ ಮುನ್ನಡೆ ಸಾಧಿಸಿದ್ದಾರೆ.

ಚಿತ್ರದುರ್ಗ: ಕೆ.ಎಸ್ ನವೀನ್ ಮುನ್ನಡೆ

ಕೊಡಗಿನಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪರವರು ಕಾಂಗ್ರೆಸ್ ಅಭ್ಯರ್ಥಿ ಎದುರು ಜಯ ಸಾಧಿಸಿದ್ದಾರೆ.

ವಿಜಯಪುರ-ಭಾಗಲಕೋಟೆ 1: ಪಿ.ಎಚ್ ಪೂಜಾರ ಗೆಲುವು

ಕಾಂಗ್ರೆಸ್

ಗೆಲುವು ಕಂಡಿರುವ ಮತ್ತು ಮುನ್ನಡೆ ಸಾಧಿಸಿರುವ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ.

ಬೀದರ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಬಿ ಪಾಟೀಲ್ ಬಿಜೆಪಿ ಎದುರು ಜಯಗಳಿಸಿದ್ದಾರೆ.

ವಿಜಯಪುರ-ಭಾಗಲಕೋಟೆ 2: ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಗೌಡ ಗೆಲುವು

ಮೈಸೂರು ಚಾಮರಾಜನಗರ 1: ಡಾ.ಡಿ ತಿಮ್ಮಯ್ಯ ಮುನ್ನಡೆ

ಕೋಲಾರ: ಕಾಂಗ್ರೆಸ್ ಅಭ್ಯರ್ಥಿ ಅನಿಲ್ ಕುಮಾರ್ ಗೆಲುವು ಸಾಧಿಸಿದ್ದಾರೆ.

ಧಾರವಾಡ 1: ಕಾಂಗ್ರೇಸ್ ಅಭ್ಯರ್ಥಿ ಸಲೀಂ ಅಹ್ಮದ್ ಗೆಲುವು ಸಾಧಿಸಿದ್ದಾರೆ.

ದಕ್ಷಿಣ ಕನ್ನಡ 2: ಕಾಂಗ್ರೆಸ್‌ನ ಮಂಜುನಾಥ್ ಭಂಡಾರಿ ಗೆಲುವು ಸಾಧಿಸಿದ್ದಾರೆ.

ಮಂಡ್ಯ: ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ.

ಬೆಳಗಾವಿ: ಕಾಂಗ್ರೆಸ್‌ನ ಚನ್ನರಾಜ ಹಟ್ಟಿಹೊಳಿ ಮುನ್ನಡೆ ಸಾಧಿಸಿದ್ದಾರೆ.

ತುಮಕೂರು: ಆರ್ ರಾಜೇಂದ್ರ ಗೆಲುವು

ರಾಯಚೂರು: ಕಾಂಗ್ರೆಸ್ ಮುನ್ನಡೆ

ಜೆಡಿಎಸ್

ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಗೆಲುವು ಸಾಧಿಸಿದ್ದಾರೆ.

ಮೈಸೂರು ಚಾಮರಾಜನಗರ 2: ಜೆಡಿಎಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ.

ಬೆಳಗಾವಿಯಲ್ಲಿ ಎರಡನೇ ಸ್ಥಾನಕ್ಕೆ ಲಖನ್ ಜಾರಕಿಹೊಳಿ ಮುನ್ನಡೆ ಸಾಧಿಸಿದ್ದಾರೆ.

ಕರ್ನಾಟಕ ವಿಧಾನ ಪರಿಷತ್‌ನ ಒಟ್ಟು ಸದಸ್ಯರ ಸಂಖ್ಯೆ 75. ಪರಿಷತ್ತಿನ ಒಟ್ಟು ಸದಸ್ಯರಲ್ಲಿ ಮೂರನೇ ಒಂದರಷ್ಟು ಸದಸ್ಯರನ್ನು ಇತರ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ, ಗ್ರಾಮ ಸಭೆ, ಗ್ರಾಮ ಪಂಚಾಯಿತಿ, ಪಂಚಾಯಿತಿ ಸಮಿತಿಗಳು ಹಾಗು ಜಿಲ್ಲಾ ಪರಿಷತ್ತುಗಳ ಸದಸ್ಯರು ಆಯ್ಕೆ ಮಾಡುತ್ತಾರೆ.

ಇನ್ನು ಮೂರನೇ ಒಂದರಷ್ಟು ಸದಸ್ಯರನ್ನು ವಿಧಾನ ಸಭಾ ಸದಸ್ಯರು ಆಯ್ಕೆ ಮಾಡುತ್ತಾರೆ. ಪರಿಷತ್‌ನ ಒಟ್ಟು ಸದಸ್ಯರಲ್ಲಿ ಆರನೇ ಒಂದರಷ್ಟು ಸದಸ್ಯರು ರಾಜ್ಯಪಾಲರಿಂದ ನೇರವಾಗಿ ನೇಮಕವಾಗುತ್ತಾರೆ. ಸಾಹಿತ್ಯ, ವಿಜ್ಞಾನ, ಕಲೆ, ಸಮಾಜ ಸೇವೆ ಮತ್ತಿತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ರಾಜ್ಯಪಾಲರು ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡುತ್ತಾರೆ. ಉಳಿದ ಆರನೇ ಒಂದು ಭಾಗದಷ್ಟು ಸದಸ್ಯರನ್ನು ಪದವೀಧರರು ಮತ್ತು ಶಿಕ್ಷಕರು ಆಯ್ಕೆ ಮಾಡುತ್ತಾರೆ.

ಭಾರತದಲ್ಲಿ ಕೇವಲ ಆರು ರಾಜ್ಯಗಳು ಮಾತ್ರ ವಿಧಾನ ಪರಿಷತ್ ಹೊಂದಿವೆ. ಉಳಿದ ರಾಜ್ಯಗಳಲ್ಲಿ ವಿಧಾನ ಸಭೆ ಮಾತ್ರ ಇದೆ. ವಿಧಾನ ಪರಿಷತ್ ಹೊಂದಿರುವ ರಾಜ್ಯಗಳೆಂದರೆ ಆಂಧ್ರ ಪ್ರದೇಶ, ಬಿಹಾರ, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ ಮತ್ತು ಉತ್ತರಪ್ರದೇಶ.


ಇದನ್ನೂ ಓದಿ: ಮೇಲ್ಮನೆ ವಿಧಾನ ಪರಿಷತ್ ಯಾರಿಗೆ ಬೇಕಾಗಿದೆ?

ಇದನ್ನೂ ಓದಿ; ವಿಧಾನ ಪರಿಷತ್ ಖಂಡಿತಾ ಉಳಿಸಿಕೊಳ್ಳಬೇಕಿದೆ; ಉತ್ತಮ ಪ್ರತಿನಿಧಿತ್ವಕ್ಕಾಗಿ ಸುಧಾರಣೆಗಳ ಜೊತೆಗೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...