Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಗರ್ಭಿಣಿಯನ್ನು ಬಾಲಕಿ ರಕ್ಷಿಸುವ ವಿಡಿಯೊ ನಿಜವಾದ ಘಟನೆಯದ್ದಲ್ಲ

ಫ್ಯಾಕ್ಟ್‌ಚೆಕ್‌: ಗರ್ಭಿಣಿಯನ್ನು ಬಾಲಕಿ ರಕ್ಷಿಸುವ ವಿಡಿಯೊ ನಿಜವಾದ ಘಟನೆಯದ್ದಲ್ಲ

- Advertisement -
- Advertisement -

ಬಾಲಕಿಯೊಬ್ಬಳು ಗರ್ಭಿಣಿಯನ್ನು ರಕ್ಷಿಸುವ ನೈಜ ಸಿಸಿಟಿವಿ ದೃಶ್ಯಾವಳಿ ಎಂದು ಪ್ರತಿಪಾದಿಸಿ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಆಟೋ ರಿಕ್ಷಾ ಚಾಲಕನೊಬ್ಬ ತನ್ನ ಆಟೋ ರಿಕ್ಷಾದೊಳಗೆ ಕುಳಿತು, ನೋವಿನಿಂದ ಬಳಲುತ್ತಿರುವ ಗರ್ಭಿಣಿಗೆ ಸಹಾಯ ಮಾಡುವಂತೆ ಪ್ರಯಾಣಿಕರನ್ನು ಬೇಡಿಕೊಳ್ಳುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು.

ಹಲವು ಪ್ರಯತ್ನಗಳ ನಂತರ, ಆಟೋ ಚಾಲಕನ ಮನವಿಯನ್ನು ಗಮನಿಸಿ ಬಿಎಂಡಬ್ಲ್ಯೂ ಕಾರು ನಿಲ್ಲುತ್ತದೆ. ಬಾಲಕಿಯೊಬ್ಬಳು ಕಾರಿನಿಂದ ಹೊರಬರುವುದನ್ನು ವಿಡಿಯೊದಲ್ಲಿ ನೋಡಬಹುದು. ಗರ್ಭಿಣಿಗೆ ಬಾಲಕಿ ನೀರು ನೀಡಿ ಆಸ್ಪತ್ರೆಗೆ ಕರೆದೊಯ್ದು ರಕ್ಷಿಸುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು. ಮಾನವೀಯತೆಯನ್ನು ಪ್ರತಿಪಾದಿಸುವ ಈ ವಿಡಿಯೊ ಸಂದೇಶ ನಿಜಕ್ಕೂ ಮಹತ್ವದ್ದು. ಆದರೆ ಇದನ್ನು ನಿಜವಾಗಿ ನಡೆದ ಘಟನೆಯೆಂದು ಪ್ರತಿಪಾದಿಸುತ್ತಿರುವುದು ಸತ್ಯಕ್ಕೆ ದೂರವಾಗಿದೆ.

ಸತ್ಯಾಂಶವೇನು? ಯಾವುದರ ವಿಡಿಯೊವಿದು?

ವೀಡಿಯೊದಲ್ಲಿನ ಸ್ಕ್ರೀನ್‌ಶಾಟ್‌ಗಳ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ, ಡಿಸೆಂಬರ್ 06, 2021ರಂದು ಜಮ್ಮು ಮತ್ತು ಕಾಶ್ಮೀರ ಪೀಸ್ ಫೌಂಡೇಶನ್ ಫೇಸ್‌ಬುಕ್ ಪುಟದಲ್ಲಿ ಇದೇ ರೀತಿಯ ದೃಶ್ಯಗಳನ್ನು ಹೊಂದಿರುವ ವೀಡಿಯೊ ಕಂಡುಬಂದಿದೆ. ಮಕ್ಕಳಲ್ಲಿ ಮತ್ತು ಸಮಾಜದ ಜನರಲ್ಲಿ ಮಾನವೀಯತೆಯನ್ನು ಪ್ರೇರೇಪಿಸಲು ರಚಿಸಲಾದ ಸ್ಕ್ರಿಪ್ಟ್‌ ಇದಾಗಿದೆ ಎಂದು ವೀಡಿಯೊದ ವಿವರಣೆಯು ಹೇಳುತ್ತದೆ. ಈ ಫೇಸ್‌ಬುಕ್ ಪೇಜ್‌ ಮನರಂಜನೆ, ಶೈಕ್ಷಣಿಕ ಉದ್ದೇಶಗಳಿಗಾಗಿ ಸ್ಕ್ರಿಪ್ಟ್ ಮಾಡಿದ ನಾಟಕಗಳು ಮತ್ತು ವಿಡಂಬನೆಗಳನ್ನು ಒಳಗೊಂಡಿರುತ್ತದೆ ಎಂದು ಅವರು ಸ್ಪಷ್ಟವಾಗಿ ವಿವರಿಸಿದ್ದಾರೆ.

ಅಲ್ಲದೆ, ಇದೇ ರೀತಿಯ ಸ್ಕ್ರಿಪ್ಟ್ ಮಾಡಿದ ವೀಡಿಯೊಗಳನ್ನು ವೀಕ್ಷಕರು ‘LOBO 619’ ಫೇಸ್‌ಬುಕ್ ಪುಟದಲ್ಲೂ ನೋಡಬಹುದು ಎಂದು ಈ ಫೇಸ್‌ಬುಕ್ ಪೋಸ್ಟ್ ಶಿಫಾರಸು ಮಾಡುತ್ತದೆ. ಇದೇ ರೀತಿಯ ಶೈಕ್ಷಣಿಕ ಮತ್ತು ಜಾಗೃತಿ ವೀಡಿಯೊಗಳನ್ನು ‘LOBO 619’ Facebook ಪುಟದಲ್ಲಿ ಪ್ರಕಟಿಸಲಾಗಿದೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ಕಾಣಬಹುದು. ತೆಲಂಗಾಣ ರಾಜ್ಯದ ಹೈದ್ರಾಬಾದ್‌ ಹಾಸ್ಯ ಕಲಾವಿದ ಮೊಹಮ್ಮದ್ ಖಯ್ಯೂಮ್ ಅವರು ಲೋಬೋ ಎಂದು ಜನಪ್ರಿಯವಾಗಿದ್ದಾರೆ.

ಈ ಹಿಂದೆ, ಲೈಂಗಿಕ ಕಿರುಕುಳ ಸಂಬಂಧಿಸಿದಂತೆ ಇದೇ ರೀತಿಯ ಜಾಗೃತಿ ವೀಡಿಯೊವು ಕೋಮುದ್ವೇಷ ಪ್ರತಿಪಾದನೆಯೊಂದಿಗೆ ವೈರಲ್ ಆಗಿದ್ದಾಗ ಸತ್ಯಾಂಶವನ್ನು ಪತ್ತೆ ಹಚ್ಚಿ ಪ್ರಕಟಿಸಲಾಗಿತ್ತು. ಅದನ್ನು ಇಲ್ಲಿ ನೋಡಬಹುದು.

ಸಂಕ್ಷಿಪ್ತವಾಗಿ ಹೇಳುವುದಾದರೆ, ಪೂರ್ವ ನಿಯೋಜಿತ ವೀಡಿಯೊವನ್ನು “ಬಾಲಕಿಯು ಗರ್ಭಿಣಿಯನ್ನು ರಕ್ಷಿಸುವ ನೈಜ ಘಟನೆ” ಎಂದು ತಪ್ಪಾಗಿ ಪ್ರತಿಪಾದಿಸಿ ಹಂಚಿಕೊಳ್ಳಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...