Homeಮುಖಪುಟಲಖೀಂಪುರ ಹತ್ಯಾಕಾಂಡ ಕುರಿತು SIT ವರದಿ-ಗೃಹಸಚಿವರು ರಾಜೀನಾಮೆ ನೀಡುವುದಿಲ್ಲವೇ?: ಮಮತಾ ಬ್ಯಾನರ್ಜಿ ವಾಗ್ದಾಳಿ

ಲಖೀಂಪುರ ಹತ್ಯಾಕಾಂಡ ಕುರಿತು SIT ವರದಿ-ಗೃಹಸಚಿವರು ರಾಜೀನಾಮೆ ನೀಡುವುದಿಲ್ಲವೇ?: ಮಮತಾ ಬ್ಯಾನರ್ಜಿ ವಾಗ್ದಾಳಿ

- Advertisement -
- Advertisement -

ಲಖಿಂಪುರ್‌‌ ಖೇರಿ ರೈತರ ಹತ್ಯಾಕಾಂಡ ಘಟನೆಯು ಯೋಜಿತ ಪಿತೂರಿ ಎಂದು ಎಸ್‌ಐಟಿ ವರದಿ ಹೇಳಿದೆ. ಈ ವರದಿಯನ್ನು ಉಲ್ಲೇಖಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಗೋವಾಕ್ಕೆ ಎರಡು ದಿನಗಳ ಭೇಟಿಯ ಸಂದರ್ಭದಲ್ಲಿ ಎಸ್‌ಐಟಿ ವರದಿ ಬಗ್ಗೆ ಉಲ್ಲೇಖಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, “ಗೃಹ ಸಚಿವರು ರಾಜೀನಾಮೆ ನೀಡಬೇಕಲ್ಲ? ಸಂಸತ್ತಿನಲ್ಲಿ ಈ ವಿಷಯವನ್ನು ಪ್ರಧಾನಿ ಚರ್ಚಿಸುವುದಿಲ್ಲವೇ?” ಎಂದು ಕೇಳಿದ್ದು, ರೈತರು ಮತ್ತು ಕಾರ್ಮಿಕರ ಬಗ್ಗೆ ಬಿಜೆಪಿಯಿಂದ ನಾವು ಕಲಿಯಬೇಕಾಗಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಲಖಿಂಪುರ್ ಖೇರಿ ಹತ್ಯಾಕಾಂಡ ಪೂರ್ವಯೋಜಿತವಾದುದು: SIT

ಎಂಟು ಮಂದಿ ಪ್ರಾಣ ಕಳೆದುಕೊಂಡ ಲಖಿಂಪುರ ಖೇರಿ ಹತ್ಯಾಕಾಂಡ ಘಟನೆಯ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(SIT) ಪ್ರತಿಭಟನಾ ನಿರತ ರೈತರ ಹತ್ಯೆಗೆ ಯೋಜಿತ ಸಂಚು ನಡೆದಿದೆ ಎಂದು ಹೇಳಿದೆ.

ತಮ್ಮ ತನಿಖೆಯ ಹಿನ್ನೆಲೆಯಲ್ಲಿ, ಒಕ್ಕೂಟ ಸರ್ಕಾರದ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಸೇರಿದಂತೆ ಉಳಿದ ಆರೋಪಿಗಳ ವಿರುದ್ಧದ ಆರೋಪಗಳನ್ನು ನವೀಕರಿಸಲು ತನಿಖಾಧಿಕಾರಿ ನ್ಯಾಯಾಧೀಶರಿಗೆ ಪತ್ರ ಬರೆದಿದ್ದಾರೆ.

ಈಗಾಗಲೇ ಆಶಿಶ್ ಮಿಶ್ರಾ ವಿರುದ್ಧ ಕೊಲೆಯತ್ನದ ಪ್ರಕರಣ ದಾಖಲಾಗಿದೆ. ನಂತರದ ತನಿಖೆಯ ಸಂದರ್ಭದಲ್ಲಿ ಹೊಸ ಸಾಕ್ಷ್ಯಗಳು ಸಿಕ್ಕಿದ್ದರಿಂದ ಈಗ ಎಲ್ಲಾ 13 ಆರೋಪಿಗಳ ಮೇಲೆ ಕೊಲೆಯತ್ನ ಪ್ರಕರಣ ಸೇರಿಸಲು ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ:700 ಕ್ಕೂ ಹೆಚ್ಚು ರೈತರ ಸಾವು ಮತ್ತು ಲಖಿಂಪುರ್ ಖೇರಿ ಹತ್ಯಾಕಾಂಡ ತಡೆಯಬಹುದಿತ್ತು: ಸಂಯುಕ್ತ ಕಿಸಾನ್ ಮೋರ್ಚಾ

ಜೊತೆಗೆ ಆರೋಪಿಗಳ ವಿರುದ್ಧದ ಮೂರು ಆರೋಪಗಳನ್ನು ಕೈಬಿಡುವಂತೆ ಸಹ ಎಸ್‌ಐಟಿ ನ್ಯಾಯಾಲಯಕ್ಕೆ ಮನವಿ ಮಾಡಿದೆ. ಅವುಗಳೆಂದರೆ ಐಪಿಸಿ ಸೆಕ್ಷನ್‌ 279 (ಸಾರ್ವಜನಿಕ ಮಾರ್ಗದಲ್ಲಿ ದುಡುಕಿನ ಚಾಲನೆ), 338 (ಇತರರ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಕ್ರಿಯೆ) ಮತ್ತು 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ).

ತನಿಖಾಧಿಕಾರಿ ವಿದ್ಯಾ ರಾಮ್ ದಿವಾಕರ್ ಅವರು ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ, ಲಖಿಂಪುರ ಖೇರಿಯಲ್ಲಿ ನಡೆದ ಘಟನೆಯು ಅಪಘಾತವಲ್ಲ, ಬದಲಾಗಿ ಶಸ್ತ್ರಸಜ್ಜಿತ ಕೊಲೆ ಯತ್ನದ ಯೋಜಿತ ಸಂಚು ಎಂದು ಹೇಳಿದ್ದಾರೆ.

ಲಖಿಂಪುರ ಜಿಲ್ಲಾ ನ್ಯಾಯಾಲಯವು ಮಂಗಳವಾರ ಎಲ್ಲಾ ಆರೋಪಿಗಳನ್ನು ನ್ಯಾಯಾಲಯಕ್ಕೆ ಕರೆಸಿದೆ.

ಅಕ್ಟೋಬರ್‌ 3 ರಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಭೇಟಿಯನ್ನು ವಿರೋಧಿಸಿ, ಒಕ್ಕೂಟ ಸರ್ಕಾರ ಜಾರಿಗೆ ತಂದಿದ್ದ ಮೂರು ಕೃಷಿ ಕಾನೂನುಗಳ ವಿರುದ್ಧ ಆಂದೋಲನ ನಡೆಸುತ್ತಿದ್ದ ರೈತರ ಗುಂಪಿನ ಮೇಲೆ ಆಶಿಶ್‌ ಮಿಶ್ರಾ ಕಾರನ್ನು ಹರಿಸಿದ್ದರು.

ಆಶಿಶ್ ಮಿಶ್ರಾ ಸೇರಿದಂತೆ ಪ್ರಕರಣದ ಇತರ ಆರೋಪಿಗಳು ಪ್ರಸ್ತುತ ಪೊಲೀಸ್ ವಶದಲ್ಲಿದ್ದಾರೆ.

ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡ: ಯುಪಿ ಸರ್ಕಾರದ ಬಗ್ಗೆ ಅಸಮಾಧಾನ, ಸ್ವತಂತ್ರ ಮೇಲ್ವಿಚಾರಣೆಗೆ ಸುಪ್ರೀಂ ಒಲವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...