Homeಮುಖಪುಟಗಂಗಾ ಸ್ವಚ್ಛವಾಗಿಲ್ಲವೆಂದು ತಿಳಿದಿದ್ದರಿಂದಲೇ ಆದಿತ್ಯನಾಥ್‌ ಮೋದಿಯಂತೆ ಸ್ನಾನ ಮಾಡಿಲ್ಲ: ಅಖಿಲೇಶ್ ಯಾದವ್

ಗಂಗಾ ಸ್ವಚ್ಛವಾಗಿಲ್ಲವೆಂದು ತಿಳಿದಿದ್ದರಿಂದಲೇ ಆದಿತ್ಯನಾಥ್‌ ಮೋದಿಯಂತೆ ಸ್ನಾನ ಮಾಡಿಲ್ಲ: ಅಖಿಲೇಶ್ ಯಾದವ್

‘ಅಂತ್ಯ ಸಮೀಪಿಸುವಾಗ ಬನಾರಸ್‌ನಲ್ಲಿ ಉಳಿಯಲು ಬಯಸುತ್ತಾರೆ’ ಎಂದು ಪ್ರಧಾನಿ ಮೋದಿಗೆ ಹೇಳಿದ್ದ ವ್ಯಂಗ್ಯಕ್ಕೆ ಕ್ಷಮೆಯಾಚಿಸಲು ಅಖಿಲೇಶ್‌ ನಿರಾಕರಿಸಿದ್ದಾರೆ

- Advertisement -
- Advertisement -

ಯುಪಿ ಮುಖ್ಯಮಂತ್ರಿ ಆದಿತ್ಯನಾಥ್ ವಿರುದ್ಧ ವಾಗ್ದಾಳಿ ನಡೆಸಿರುವ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, “ನದಿಯ ನೀರು ಶುದ್ಧವಾಗಿಲ್ಲ ಎಂದು ತಿಳಿದಿರುವುದರಿಂದಲೇ ಆದಿತ್ಯನಾಥ್‌ ಅವರು ಪ್ರಧಾನಿ ನರೇಂದ್ರ ಮೋದಿಯಂತೆ ಗಂಗಾದಲ್ಲಿ ಸ್ನಾನ ಮಾಡುವುದನ್ನು ಜಾಣತನದಿಂದ ತಪ್ಪಿಸಿಕೊಂಡಿದ್ದಾರೆ” ಎಂದು ಹೇಳಿದ್ದಾರೆ.

“ಅಂತ್ಯ ಸಮೀಪಿಸುವಾಗ ಬನಾರಸ್‌ನಲ್ಲಿ ಉಳಿಯಲು ಬಯಸುತ್ತಾರೆ” ಎಂಬ ತಮ್ಮ ವ್ಯಂಗ್ಯಕ್ಕೆ ಕ್ಷಮೆಯಾಚಿಸಲು ನಿರಾಕರಿಸಿದ ಅಖಿಲೇಶ್‌ ಯಾದವ್‌, ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆಯನ್ನು ಸಮಾಜವಾದಿ ಪಕ್ಷದ ಆಡಳಿತದಲ್ಲಿ ಪ್ರಾರಂಭಿಸಲಾಗಿದೆ ಎಂದು ಬಿಜೆಪಿ ಮೊದಲು ದೇವಸ್ಥಾನದಲ್ಲಿ ನಿಂತು ಒಪ್ಪಿಕೊಳ್ಳಲಿ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೊ: ಪ್ರಧಾನಿ ಬಗ್ಗೆ ನಾಚಿಕೆ ಏಕೆ? ಕೇರಳ ಹೈಕೋರ್ಟ್ ಪ್ರಶ್ನೆ

“ಮುಖ್ಯಮಂತ್ರಿ ಎಷ್ಟು ಬುದ್ಧಿವಂತರು (‘ಹೋಶಿಯಾರ್’) ನೋಡಿ, ಅವರು ಗಂಗಾದಲ್ಲಿ ಸ್ನಾನ ಮಾಡಲಿಲ್ಲ. ಅವರು ಯಾಕೆ ಸ್ನಾನ ಮಾಡಲಿಲ್ಲ? ನಾನು ಮೀರತ್‌ಗೆ ಹೋಗಿದ್ದೆ, ಹಿಂಡನ್ ನದಿಯ ನೀರು ಕಪ್ಪು ಬಣ್ಣಕ್ಕೆ ತಿರುಗಿತ್ತು” ಎಂದು ಅಖಿಲೇಶ್‌ ಹೇಳಿದ್ದಾರೆ.

ಹಿಂಡನ್‌ ನದಿಯು ಯಮುನಾ ನದಿಯ ಉಪನದಿಯಾಗಿದ್ದು, ಯಮುನಾ ಗಂಗಾ ನದಿಯ ಉಪನದಿಯಾಗಿದೆ.

“ಕಾಳಿ ನದಿಯು ಈಗಾಗಲೇ ಕಪ್ಪಾಗಿದೆ, ಯಮುನಾ ನದಿಯ ದಡವು ಕಪ್ಪಾಗಿದೆ, ಚಂಬಲ್ ನದಿಯು ಯಮುನಾವನ್ನು ಸೇರದಿದ್ದರೆ, ಯಮುನೆಯು ಸತ್ತಂತೆ” ಎಂದು ಅಖಿಲೇಶ್‌ ಹೇಳಿದ್ದಾರೆ.

“ತಾಯಿ ಗಂಗೆ ಶುದ್ದೀಕರಣ ಮಾಡುವುದಾಗಿ ಹೇಳಿದ್ದು ಯಾರು? ಗೋಮತಿ ನದಿಯನ್ನು ಸ್ವಚ್ಛಗೊಳಿಸಲಾಗಿದೆಯೇ? ಬಜೆಟ್ ಹರಿದಿದೆ, ಆದರೆ ನದಿಗಳನ್ನು ಸ್ವಚ್ಛಗೊಳಿಸಿಲ್ಲ. ಯಾವುದೇ ನದಿಗಳು ಸ್ವಚ್ಛವಾಗಿಲ್ಲ ಎಂದು ನಮ್ಮ ಸಿಎಂಗೆ ತಿಳಿದಿದೆ, ಆದ್ದರಿಂದ ಅವರು ಗಂಗಾ ನದಿಯಲ್ಲಿ ಮುಳುಗಿಲ್ಲ” ಎಂದು ಯುಪಿಯ ಮಾಜಿ ಮುಖ್ಯಮಂತ್ರಿಯೂ ಆಗಿರುವ ಅಖಿಲೇಶ್‌ ಯಾದವ್‌ ಜಾನ್‌ಪುರದಲ್ಲಿ ತಿಳಿಸಿದರು.

ಇದನ್ನೂ ಓದಿ:ನರೇಂದ್ರ ಮೋದಿ ಟ್ವಿಟರ್‌‌ ಖಾತೆ ಹ್ಯಾಕ್‌: ಬಿಟ್‌ ಕಾಯಿನ್‌ ಕುರಿತು ನಕಲಿ ಪೋಸ್ಟ್‌

ಸೋಮವಾರ ಪ್ರಧಾನಿ ಮೋದಿ ವಾರಣಾಸಿಗೆ ಭೇಟಿ ನೀಡಿದ್ದರು. ಕಾಶಿಯ ಕಾಲ ಭೈರವ ದೇವಾಲಯ ಮತ್ತು ಕಾಶಿ ವಿಶ್ವನಾಥ ಧಾಮದಲ್ಲಿ ಪ್ರಾರ್ಥನೆ ಸಲ್ಲಿಸಿದ್ದ ಮೋದಿ, ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಿದ್ದರು.

ಈ ಬಗ್ಗೆ ವ್ಯಂಗ್ಯವಾಗಿ ಟೀಕಿಸಿದ್ದ ಅಖಿಲೇಶ್‌ ಯಾದವ್, “ಇದು ತುಂಬಾ ಒಳ್ಳೆಯ ವಿಷಯ. ಕೇವಲ ಒಂದು ತಿಂಗಳಲ್ಲ. ಎರಡು ತಿಂಗಳು, ಮೂರು ತಿಂಗಳು ಅಲ್ಲಿಯೇ ಇರಬೇಕು. ಅದು ಉಳಿಯಲು ಇರುವ ಸ್ಥಳವಾಗಿದೆ. ಅಂತ್ಯ ಸಮೀಪಿಸುವಾಗ ಬನಾರಸ್‌ನಲ್ಲಿ ಉಳಿಯುತ್ತಾರೆ” ಎಂದು ಹೇಳಿದ್ದರು.

ಅವರ ಈ ಹೇಳಿಕೆಯನ್ನು ವಿರೋಧಿಸಿರುವ ಬಿಜೆಪಿ ಕ್ಷಮೆಕೇಳಲು ಒತ್ತಾಯಿಸುತ್ತಿದೆ. ಆದರೆ ಇದಕ್ಕೆ ನಿರಾಕರಿಸಿರುವ ಅವರು ಮತ್ತೆ ವಾಗ್ದಾಳಿ ನಡೆಸಿದ್ದಾರೆ.

“ಕ್ಷಮೆಯಾಚಿಸಲು ಯಾರು ಒತ್ತಾಯಿಸುತ್ತಿದ್ದಾರೆ? ಕಾಶಿ ವಿಶ್ವನಾಥ ಕಾರಿಡಾರ್‌ನ ಕಾಮಗಾರಿ ಯಾವಾಗ ಪ್ರಾರಂಭವಾಯಿತು? ಇದಕ್ಕೆ ಬಿಜೆಪಿ ಯಾವಾಗ ಉತ್ತರಿಸುತ್ತದೆ. ದೇವಾಲಯದಲ್ಲಿ ನಿಂತು ಅವರು ಸತ್ಯ ಹೇಳಿದರೆ ನಂತರ ನೀವು ನನ್ನಿಂದ ಉತ್ತರವನ್ನು ಪಡೆಯಬಹುದು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ರೈತರ ಎಲ್ಲಾ ಬೇಡಿಕೆಗಳ ಮುಂದೆ ಮಂಡಿಯೂರಿದ ಮೋದಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...