Homeಮುಖಪುಟಗುಜರಾತಿಯೊಬ್ಬ ದೇಶದಾದ್ಯಂತ ಹೋಗಬಹುದಾದರೆ, ಬಂಗಾಳಿ ಯಾಕೆ ಹೋಗಬಾರದು: ಮಮತಾ ಬ್ಯಾನರ್ಜಿ

ಗುಜರಾತಿಯೊಬ್ಬ ದೇಶದಾದ್ಯಂತ ಹೋಗಬಹುದಾದರೆ, ಬಂಗಾಳಿ ಯಾಕೆ ಹೋಗಬಾರದು: ಮಮತಾ ಬ್ಯಾನರ್ಜಿ

- Advertisement -
- Advertisement -

“ಗುಜರಾತಿಯೊಬ್ಬ ದೇಶದಾದ್ಯಂತ ಹೋಗಬಹುದಾದರೆ, ಬಂಗಾಳಿಯೊಬ್ಬ ಯಾಕೆ ಹೋಗಬಾರದು?” ಎಂದು ಟಿಎಂಸಿ ನಾಯಕಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ.

ಗೋವಾದ ಅಸ್ಸೋನೋರಾದಲ್ಲಿ ನಡೆದ ರ್‍ಯಾಲಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, “ನಾನು ಬಂಗಾಳಿ ಎಂದು ನನಗೆ ಹೇಳಲಾಗುತ್ತಿದೆ. ಹಾಗಾದರೆ ಅವರು ಯಾರು? ಅವರು ಗುಜರಾತಿ ಅಲ್ಲವೆ? ಅವರು ಗುಜರಾತಿ ಆಗಿರುವುದರಿಂದ ಅವರು ಇಲ್ಲಿಗೆ ಬರಬಾರದು ಎಂದು ಹೇಳಬಹುದೇ? ಒಬ್ಬ ಬಂಗಾಳಿ ರಾಷ್ಟ್ರಗೀತೆಯನ್ನು ಬರೆಯಬಹುದು; ಆದರೆ, ಒಬ್ಬ ಬಂಗಾಳಿ ಗೋವಾಕ್ಕೆ ಬರಲು ಸಾಧ್ಯವಿಲ್ಲವೇ? ನಾವೆಲ್ಲರೂ ಗಾಂಧೀಜಿಯನ್ನು ಗೌರವಿಸುತ್ತೇವೆ. ಗಾಂಧೀಜಿ ಬೆಂಗಾಲಿಯೋ ಅಥವಾ ಬೆಂಗಾಲಿ ಅಲ್ಲದವರೋ ಅಥವಾ ಗೋವನ್ನರೋ ಅಥವಾ ಯುಪಿಯವರೋ ಎಂದು ನಾವು ಎಂದಾದರೂ ಪ್ರಶ್ನಿಸಿದ್ದೇವೆಯೇ? ರಾಷ್ಟ್ರೀಯ ನಾಯಕರೆಂದರೆ ಎಲ್ಲರನ್ನೂ ಮುನ್ನಡೆಸಿಕೊಂಡು ಹೋಗುವವರು” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಗಂಗಾ ಸ್ವಚ್ಛವಾಗಿಲ್ಲವೆಂದು ತಿಳಿದಿದ್ದರಿಂದಲೇ ಆದಿತ್ಯನಾಥ್‌ ಮೋದಿಯಂತೆ ಸ್ನಾನ ಮಾಡಿಲ್ಲ: ಅಖಿಲೇಶ್ ಯಾದವ್

ಗೋವಾದ ರಾಜಕೀಯಕ್ಕೆ ತಮ್ಮ ಪಕ್ಷದ ಪ್ರವೇಶವನ್ನು ಇತರ ಪಕ್ಷಗಳು ಪ್ರಶ್ನಿಸಿವೆ. ಆದಾಗ್ಯೂ, ಗೋವಾದಲ್ಲಿರುವ ಟಿಎಂಸಿ ನಾಯಕರನ್ನು ರಿಮೋಟ್ ಕಂಟ್ರೋಲ್ ಮಾಡಲು ನಾವು ಗೋವಾಕ್ಕೆ ಬಂದಿಲ್ಲ. ನಾವು ಅವರನ್ನು ಬೆಂಬಲಿಸಲು ಬಂದಿದ್ದೇವೆ ಎಂದು ಅವರು ಹೇಳಿದ್ದಾರೆ.

“ಅವರು ರಾಷ್ಟ್ರೀಯ ನಾಯಕರಾಗುತ್ತಾರೆಯೇ? ಅವರು ಗೋವಾವನ್ನು ಗುಜರಾತ್‌ನಿಂದ ನಿಯಂತ್ರಿಸುತ್ತಾರೆ. ಗೋವಾವನ್ನು ಗುಜರಾತ್ ಅಥವಾ ದೆಹಲಿಯಿಂದ ಮುನ್ನಡೆಸಬಾದರು. ಗೋವಾದ ಜನರು ಗೋವಾವನ್ನು ಮುನ್ನಡೆಸುತ್ತಾರೆ” ಎಂದು ಅವರು ಹೇಳಿದ್ದಾರೆ.

“ನಮಗೆ ಬಿಜೆಪಿಯಿಂದ ‘ಕ್ಯಾರೆಕ್ಟರ್ ಸರ್ಟಿಫಿಕೇಟ್’ ಅಗತ್ಯವಿಲ್ಲ. ನಾವು ಚುನಾವಣೆಯ ಸಮಯ ಬಂದಾಗ ಮಾತ್ರ ಗಂಗಾ ತೀರಕ್ಕೆ ಹೋಗಿ ಪೂಜೆ ಮಾಡುವುದಿಲ್ಲ. ಚುನಾವಣಾ ಸಮಯ ಬಂದಾಗ ಮೋದಿ ಗಂಗಾ ನದಿಯಲ್ಲಿ ಸ್ನಾನ ಮಾಡುತ್ತಾರೆ. ಅವರು ತಪಸ್ಸಿಗಾಗಿ ಉತ್ತರಾಖಂಡದ ದೇವಸ್ಥಾನಕ್ಕೆ ಹೋಗುತ್ತಾರೆ. ಮತದಾನದ ಸಮಯ ಬಂದಾಗ ಅವರೇ ಪುರೋಹಿತ ಆಗುತ್ತಾರೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ:ಮೋದಿ, ಯೋಗಿ ಆದಿತ್ಯನಾಥರೇ ನೀವು ಚರಿತ್ರೆ ಮುಚ್ಚಿಹಾಕಲು ಹೊರಟಿದ್ದೀರಿ: ಬಿಜೆಪಿ ಎಂಎಲ್‌ಸಿ ವಿಶ್ವನಾಥ್‌

“ಅದನ್ನು ಮಾಡುವ ಎಲ್ಲಾ ಸ್ವಾತಂತ್ರ್ಯ ಅವರಿಗಿದೆ. ಆದರೆ ವರ್ಷದ ಉಳಿದ ದಿನಗಳಲ್ಲಿ ಅವರು ಎಲ್ಲಿರುತ್ತಾರೆ? ಯುಪಿ ಸರ್ಕಾರವು ಕೊರೊನಾದಿಂದ ಸಾವನ್ನಪ್ಪಿದ ಮೃತ ದೇಹಗಳನ್ನು ನದಿಗೆ ಎಸೆಯುತ್ತದೆ. ಅವರು ಗಂಗಾ ತಾಯಿಯನ್ನು ಅಶುದ್ಧಗೊಳಿಸಿದ್ದಾರೆ. ಕೋವಿಡ್‌ನಿಂದ ಸಾವನ್ನಪ್ಪಿದವರ ಸಂಖ್ಯೆ ಅವರ ಬಳಿ ಇಲ್ಲ. ನಾವು ಗಂಗೆಯನ್ನು ನಮ್ಮ ತಾಯಿ ಎಂದು ಕರೆಯುತ್ತೇವೆ. ಬಿಜೆಪಿಯವರು ಕೋವಿಡ್ ಮೃತ ದೇಹಗಳನ್ನು ಗಂಗಾ ನದಿಯಲ್ಲಿ ಎಸೆದಿದ್ದಾರೆ. ಇದನ್ನು ಸಹಿಸಲಾಗದು” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ನಾಲ್ವರು ರೈತರು ಮತ್ತು ಪತ್ರಕರ್ತರನ್ನು ಕೊಂದ ಲಖಿಂಪುರ ಖೇರಿ ಘಟನೆಯ ಬಗ್ಗೆ ಎಸ್‌ಐಟಿ ತನಿಖೆಯನ್ನು ಉಲ್ಲೇಸಿದ ಬ್ಯಾನರ್ಜಿ, ಲಖಿಂಪುರ್ ಘಟನೆಯು “ಯೋಜಿತ ಪಿತೂರಿ” ಎಂದು ಎಸ್‌ಐಟಿ ಹೇಳಿದೆ. “ಯುಪಿ ಸಿಎಂ ರಾಜೀನಾಮೆ ನೀಡಬೇಕಲ್ಲವೇ? ಗೃಹ ಸಚಿವರು ರಾಜೀನಾಮೆ ನೀಡಬಾರದೇ? ಪ್ರಧಾನಿಯವರು ಇದರ ಬಗ್ಗೆ ಮಾತನಾಡಬೇಕು?” ಎಂದು ಒತ್ತಾಯಿಸಿದ್ದಾರೆ.

“ಬಿಜೆಪಿಯನ್ನು ಸೋಲಿಸಲು ಬಯಸುವವರು ಮತಗಳನ್ನು ವಿಭಜಿಸಬೇಡಿ, ನಮ್ಮೊಂದಿಗೆ ಸೇರಿಕೊಳ್ಳಿ” ಎಂದು ಮಮತಾ ಮನವಿ ಮಾಡಿದ್ದಾರೆ. 

ಬಿಜೆಪಿ ವಿರುದ್ಧ ಹೋರಾಡುವ ಬಗ್ಗೆ ಗಂಭೀರವಾಗಿರುವ ಯಾವುದೇ ಪಕ್ಷದೊಂದಿಗೆ ಕೆಲಸ ಮಾಡಲು ತಮ್ಮ ಪಕ್ಷವು ಮುಕ್ತವಾಗಿದೆ. “ಕಾಂಗ್ರೆಸ್ ದೊಡ್ಡ ದೊಡ್ಡ ವಿಷಯಗಳನ್ನು ಹೇಳುತ್ತದೆ. ಏಕಾಂಗಿಯಾಗಿ ಹೋರಾಡುತ್ತೇವೆ ಎನ್ನುತ್ತಾರೆ. ಈಗಲೂ ನಮ್ಮೊಂದಿಗೆ ಜಗಳವಾಡುತ್ತಿದ್ದಾರೆ. ಮೊದಲು ಬಿಜೆಪಿ ವಿರುದ್ಧ ಹೋರಾಡಿ ನಂತರ ದೊಡ್ಡದಾಗಿ ಮಾತನಾಡಿ. ಕಾಂಗ್ರೆಸ್‌ ವಿರುದ್ದ ಮಾತನಾಡಲು ಏನೂ ಇಲ್ಲ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ:ನರೇಂದ್ರ ಮೋದಿ ಟ್ವಿಟರ್‌‌ ಖಾತೆ ಹ್ಯಾಕ್‌: ಬಿಟ್‌ ಕಾಯಿನ್‌ ಕುರಿತು ನಕಲಿ ಪೋಸ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....