Homeಕರ್ನಾಟಕಉಪ್ಪಿನಂಗಡಿ ಲಾಠಿಚಾರ್ಜ್‌: ಪಾಪ್ಯುಲರ್ ಫ್ರಂಟ್‌‌ ಆಫ್‌ ಇಂಡಿಯಾ ಖಂಡನೆ

ಉಪ್ಪಿನಂಗಡಿ ಲಾಠಿಚಾರ್ಜ್‌: ಪಾಪ್ಯುಲರ್ ಫ್ರಂಟ್‌‌ ಆಫ್‌ ಇಂಡಿಯಾ ಖಂಡನೆ

ಅಮಾಯಕರ ಮೇಲಿನ ಕೇಸ್ ಹಿಂಪಡೆದು ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಿ: ಪಿಎಫ್‌ಐ ಆಗ್ರಹ

- Advertisement -
- Advertisement -

ಅಕ್ರಮವಾಗಿ ಬಂಧಿಸಿದ ಪಾಪ್ಯುಲರ್ ಫ್ರಂಟ್ ನಾಯಕರನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ನಾಗರಿಕರ ಮೇಲೆ ಬರ್ಬರವಾಗಿ ಪೊಲೀಸರು ಲಾಠಿಚಾರ್ಚ್ ನಡೆಸಿದ್ದು ಪೊಲೀಸರ ಕೃತ್ಯ ಖಂಡನೀಯ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹೇಳಿದೆ.

ಪಾಪ್ಯುಲರ್‌ ಫ್ರಂಟ್‌ನ ಮುಖಂಡರು ಸುದ್ದಿಗೋಷ್ಠಿ ನಡೆಸಿದ್ದು, ಗಾಯದ ತೀವ್ರತೆಯನ್ನು ಗಮನಿಸಿದರೆ ಪೊಲೀಸರು ಲಾಠಿಗೆ ಬದಲಾಗಿ ಯಾವುದೋ ಮಾರಕಾಸ್ತ್ರ ಬಳಸಿರುವ ಬಗ್ಗೆ ಸಂಶಯ ಮೂಡುತ್ತದೆ ಎಂದು ಆರೋಪಿಸಿದ್ದಾರೆ.

ರಾತೋರಾತ್ರಿ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಮೂರು ಮಂದಿಯನ್ನು ಅಕ್ರಮವಾಗಿ ಬಂಧಿಸಿದ್ದರು. ಆದರೆ ಬಂಧನದ ವೇಳೆ ಯಾವುದೇ ಸೂಚನೆಯನ್ನು ನೀಡಿರಲಿಲ್ಲ. ಯಾವ ಕಾರಣಕ್ಕಾಗಿ ಬಂಧಿಸಲಾಗುತ್ತಿದೆ ಎಂಬ ಮಾಹಿತಿಯನ್ನೂ ನೀಡಿರಲಿಲ್ಲ. ಅಕ್ರಮ ಬಂಧನವನ್ನು ಖಂಡಿಸಿ ಪ್ರತಿಭಟನಕಾರರು ಬೆಳಗ್ಗೆ ಠಾಣೆ ಮುಂದೆ ಜಮಾಯಿಸಿದಾಗಲಷ್ಟೇ ಸ್ಥಳೀಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಕರೆ ತಂದಿದ್ದೇವೆ ಎಂದು ಪೊಲೀಸರು ಸಮಜಾಯಿಷಿ ನೀಡಿದ್ದರು. ಆದರೆ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಪೊಲೀಸರಲ್ಲಿ ಎಳ್ಳಷ್ಟೂ ಆಧಾರವಿರಲಿಲ್ಲ. ಅಮಾಯಕರನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಪ್ರತಿಭಟನಕಾರರು ಪಟ್ಟು ಹಿಡಿದು ಧರಣಿ ಕುಳಿತ್ತಿದ್ದರು ಎಂದು ಮುಖಂಡರು ತಿಳಿಸಿದ್ದಾರೆ.

ಕತ್ತಲಾವರಿಸಿದರೂ ಪ್ರತಿಭಟನಕಾರರು ಅಲ್ಲಿಂದ ಕದಲದೇ ಇದ್ದಾಗ ರಾತ್ರಿ ಸುಮಾರು 7ರ ವೇಳೆಗೆ ಓರ್ವ ನಾಯಕರನ್ನು ಬಿಡುಗಡೆಗೊಳಿಸಿದ್ದರು. ಇನ್ನಿಬ್ಬರನ್ನು ಸ್ವಲ್ಪ ಸಮಯದ ನಂತರ ಬಿಡುಗಡೆಗೊಳಿಸುವುದಾಗಿ ಪೊಲೀಸ್ ಅಧಿಕಾರಿ ಭರವಸೆ ನೀಡಿದ್ದರು. ಆದರೆ ತುಂಬಾ ಸಮಯದ ನಂತರವೂ ಅವರನ್ನು ಬಿಡುಗಡೆಗೊಳಿಸುವ ಲಕ್ಷಣ ಕಂಡು ಬರಲಿಲ್ಲ. ಅವರಿಬ್ಬರನ್ನು ಸುಳ್ಳು ಕೇಸಿನಲ್ಲಿ ಸಿಲುಕಿಸುವ ಸೂಚನೆ ಕಂಡು ಬಂದಾಗ, ಉಳಿದಿಬ್ಬರು ಅಮಾಯಕರನ್ನು ಬಿಡುಗಡೆಗೊಳಿಸುವಂತೆ ಮತ್ತೇ ಪ್ರತಿಭಟನೆಯನ್ನು ಮುಂದುವರಿಸಲಾಗಿತ್ತು. ಶಾಂತಿಯುತವಾಗಿ ಪ್ರತಿಭಟನೆ ನಡೆಯುತ್ತಿರುವಾಗ ಪೊಲೀಸರು ಯಾವುದೇ ಸೂಚನೆ ನೀಡದೇ ಯದ್ವಾತದ್ವಾ ಲಾಠಿ ಬೀಸಿದ್ದಾರೆ. ಘಟನೆಯಲ್ಲಿ ಹಲವಾರು ಮಂದಿ ಪ್ರತಿಭಟನಕಾರರು ಗಂಭೀರ ಗಾಯಗೊಂಡಿದ್ದಾರೆ ಎಂದು ಮುಖಂಡರು ಹೇಳಿದ್ದಾರೆ.

ಪೊಲೀಸರ ರಾಕ್ಷಸೀಯ ವರ್ತನೆ ಖಂಡನಾರ್ಹ. ಬರ್ಬರ ಲಾಠಿಚಾರ್ಜ್‌‌ನಿಂದಾಗಿ ಪ್ರತಿಭಟನಕಾರರ ತಲೆಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿ ನಿಂತಿದ್ದ ಮುಸ್ಲಿಮರ ಧಾರ್ಮಿಕ ಗುರು ಸೈಯ್ಯದ್ ಆತೂರ್ ತಂಗಳ್ರವರ ತಲೆಗೆ ಗಂಭೀರ ಗಾಯವಾಗಿದೆ. ಗಾಯದ ತೀವ್ರತೆಯನ್ನು ಗಮನಿಸಿದರೆ ಪೊಲೀಸರು ಲಾಠಿಗೆ ಬದಲಾಗಿ ಯಾವುದೋ ಮಾರಕಾಸ್ತ್ರ ಬಳಸಿರುವ ಬಗ್ಗೆ ಸಂಶಯ ಮೂಡುತ್ತದೆ ಎಂದು ಆರೋಪಿಸಿದ್ದಾರೆ.

ಇದೇ ವೇಳೆ ಲಾಠಿ ಏಟಿಗೆ ಯುವಕನೋರ್ವ ಪ್ರಜ್ಞೆ ಕಳೆದುಕೊಂಡು ರಸ್ತೆಯಲ್ಲಿ ಬಿದ್ದಿದ್ದ ಕರುಣಾಜನಕ ದೃಶ್ಯವೂ ಕಂಡು ಬಂತು. ಆಸ್ಪತ್ರೆಗೆ ದಾಖಲಾಗಿರುವ ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಮತ್ತು ಸುಮಾರು 40ರಷ್ಟು ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಪೊಲೀಸರು ಆ್ಯಂಬುಲೆನ್ಸ್ ಮೇಲೆಯೂ ಲಾಠಿ ಬೀಸಿ ಆತಂಕದ ವಾತಾವರಣ ಸೃಷ್ಟಿಸಿದ್ದರು. ಇದೇ ವೇಳೆ ಆ್ಯಂಬುಲೆನ್ಸ್‌ ಒಂದನ್ನು ಠಾಣೆ ಬಳಿ ತಡೆ ಹಿಡಿದಿದ್ದ ಪೊಲೀಸರು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ತೀವ್ರ ಅಡಚಣೆ ಉಂಟು ಮಾಡಿದ್ದರು. ಈ ಮಧ್ಯೆ, ಪೊಲೀಸರೊಂದಿಗೆ ಮಾತುಕತೆ ನಡೆಸುತ್ತಿದ್ದ ನಾಯಕರ ಮೇಲೆಯೂ ಲಾಠಿ ಬೀಸಿ ಉದ್ಧಟತನದಿಂದ ವರ್ತಿಸಲಾಗಿದೆ ಎಂದು ದೂರಿದ್ದಾರೆ.

ಬೆಳಿಗ್ಗಿನಿಂದಲೇ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಕಾರರು ಶಾಂತಿಯುತವಾಗಿಯೇ ಪ್ರತಿಭಟನೆ ನಡೆಸುತ್ತಿದ್ದರು. ಪೊಲೀಸರ ಬೆದರಿಕೆ, ಪ್ರಚೋದನೆಯ ಹೊರತಾಗಿಯೂ ಪ್ರತಿಭಟನಕಾರರು ರಾತ್ರಿಯಾದರೂ ಸಂಯಮ ಕಳೆದುಕೊಂಡಿರಲಿಲ್ಲ. ಆದರೆ ಸುಮಾರು 9:30ರ ವೇಳೆಗೆ ಪೊಲೀಸರು ಹಿಂಬದಿಯಿಂದ ಏಕಾಏಕೀ ಲಾಠಿ ಪ್ರಯೋಗ ಮಾಡಿ ಪ್ರತಿಭಟನಕಾರರನ್ನು ಬರ್ಬರವಾಗಿ ಥಳಿಸಿದ್ದಾರೆ. ಲಾಠಿಚಾರ್ಜ್‌ನಿಂದ ಗಾಯಗೊಂಡವರ ಪೈಕಿ ಬಹುಪಾಲು ಜನರಿಗೆ ತಲೆಗೆ ಪೆಟ್ಟು ಬಿದ್ದಿರುವುದು ಪೊಲೀಸರ ಪ್ರತೀಕಾರದ ಮನೋಸ್ಥಿತಿಯನ್ನು ಬಹಿರಂಗಪಡಿಸುತ್ತದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ, ತಮ್ಮ ದುಷ್ಕೃತ್ಯವನ್ನು ಮರೆಮಾಚಲು ಪೊಲೀಸರು ಎಂದಿನಂತೆ ತಮ್ಮ ಮೇಲೆ ಹಲ್ಲೆ ನಡೆಸಿರುವ ಕಟ್ಟು ಕಥೆಯನ್ನು ಕಟ್ಟುತ್ತಿದ್ದಾರೆ ಎಂದಿದ್ದಾರೆ.

ಯಾವುದೇ ಅಹಿತಕರ ಘಟನೆ ನಡೆದಾಗ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರನ್ನು ಬಂಧಿಸುವುದು ಪೊಲೀಸರ ಕರ್ತವ್ಯ. ಆದರೆ ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಮತ್ತು ಯಾರದೋ ರಾಜಕೀಯ ಒತ್ತಡಕ್ಕೆ ಮಣಿದು ಪೊಲೀಸರು ಅಮಾಯಕರನ್ನು ಸುಳ್ಳು ಕೇಸಿನಲ್ಲಿ ಸಿಲುಕಿಸುವ ಪ್ರವೃತ್ತಿ ಆತಂಕಕಾರಿಯಾಗಿದೆ. ಘಟನೆಯ ಆರೋಪಿಗಳು ಪತ್ತೆಯಾಗಿಲ್ಲ ಎಂಬ ಕಾರಣಕ್ಕೆ ಇದೀಗ ಅಮಾಯಕರನ್ನು ಹಿಡಿದು ಪೊಲೀಸರು ಕೈತೊಳೆದುಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಈ ನೆಲದ ಕಾನೂನನ್ನು ಗೌರವಿಸುತ್ತದೆ ಮತ್ತು ಪೊಲೀಸರ ತನಿಖೆಗೂ ಸಹಕರಿಸುತ್ತದೆ. ಆದರೆ ಘಟನೆಗೆ ಸಂಬಂಧಪಡದ ಅಮಾಯಕರನ್ನು ಸಿಲುಕಿಸಿ ಪ್ರಕರಣ ದಾಖಲಿಸುವ ಅನ್ಯಾಯದ ಕ್ರಮಕ್ಕೆ ಯಾವತ್ತೂ ಅವಕಾಶ ನೀಡುವುದಿಲ್ಲ. ನಿನ್ನೆ ನಡೆದ ಪ್ರತಿಭಟನೆಯೂ ಇದೇ ನಿಲುವಿನ ಭಾಗವಾಗಿತ್ತು ಎಂದು ತಿಳಿಸಿದ್ದಾರೆ.

ವಿನಾ ಕಾರಣ ಲಾಠಿ ಚಾರ್ಜ್ ನಡೆಸಿ ಹಲವು ಮಂದಿ ಗಂಭೀರ ಗಾಯಗೊಳ್ಳಲು ಕಾರಣಕರ್ತರಾದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಲಾಠಿ ಚಾರ್ಜ್‌‌ಗೆ ಆದೇಶ ನೀಡಿದ ಅಧಿಕಾರಿಯನ್ನು ಪೊಲೀಸ್ ಇಲಾಖೆ ಕೂಡಲೇ ಅಮಾನತುಪಡಿಸಬೇಕು. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರಕಾರದ ವತಿಯಿಂದಲೇ ಭರಿಸಬೇಕು. ವಿಚಾರಣೆಯ ನೆಪದಲ್ಲಿ ಕೊಂಡೊಯ್ದು ಇಬ್ಬರ ಮೇಲೆ ಇದೀಗ ಸುಳ್ಳು ಕೇಸು ಜಡಿಯಲಾಗಿದ್ದು, ಈ ಸುಳ್ಳು ಕೇಸನ್ನು ಕೂಡಲೇ ವಾಪಸ್ ಪಡೆಯಬೇಕು. ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಪ್ರತಿಭಟನಕಾರರನ್ನೂ ಬೇಷರತ್ ಆಗಿ ಬಿಡುಗಡೆಗೊಳಿಸಬೇಕು. ಪೊಲೀಸರು ಯಾರದೇ ರಾಜಕೀಯ ಒತ್ತಡಕ್ಕೆ ಮಣಿಯದೇ ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸಬೇಕು. ಈ ಮೂಲಕ ಅವರು ಕಾನೂನಿನ ಘನತೆ, ಪಾವಿತ್ರ್ಯಾತೆಯನ್ನು ಎತ್ತಿಹಿಡಿಯಬೇಕು ಎಂದು ಮುಖಂಡರು ಆಗ್ರಹಿಸಿದ್ದಾರೆ.

ಲಾಠಿಚಾರ್ಜ್ ಘಟನೆಯನ್ನು ಖಂಡಿಸಿ ಮತ್ತು ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಡಿಸೆಂಬರ್ 17ರ ಶುಕ್ರವಾರದಂದು ಮಂಗಳೂರಿನಲ್ಲಿ ಎಸ್‌‌ಪಿ ಆಫೀಸ್ ಎದುರು ಮಾರ್ಚ್ ಹಮ್ಮಿಕೊಳ್ಳಲೂ ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಪಾಪ್ಯುಲರ್‌ ಫ್ರಂಟ್‌‌ ರಾಜ್ಯ ಕಾರ್ಯದರ್ಶಿ ಎ.ಕೆ.ಅಶ್ರಫ್, ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಇಜಾಝ್ ಅಹ್ಮದ್, ಮಂಗಳೂರು ನಗರ ಅಧ್ಯಕ್ಷ ಖಾದರ್ ಕುಳಾಯಿ, ಪುತ್ತೂರು ತಾಲ್ಲೂಕು ಅಧ್ಯಕ್ಷ ಜಾಬೀರ್ ಅರಿಯಡ್ಕ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...