Homeಕರ್ನಾಟಕಉಪ್ಪಿನಂಗಡಿ ಲಾಠಿಚಾರ್ಜ್‌: ಪಾಪ್ಯುಲರ್ ಫ್ರಂಟ್‌‌ ಆಫ್‌ ಇಂಡಿಯಾ ಖಂಡನೆ

ಉಪ್ಪಿನಂಗಡಿ ಲಾಠಿಚಾರ್ಜ್‌: ಪಾಪ್ಯುಲರ್ ಫ್ರಂಟ್‌‌ ಆಫ್‌ ಇಂಡಿಯಾ ಖಂಡನೆ

ಅಮಾಯಕರ ಮೇಲಿನ ಕೇಸ್ ಹಿಂಪಡೆದು ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಿ: ಪಿಎಫ್‌ಐ ಆಗ್ರಹ

- Advertisement -
- Advertisement -

ಅಕ್ರಮವಾಗಿ ಬಂಧಿಸಿದ ಪಾಪ್ಯುಲರ್ ಫ್ರಂಟ್ ನಾಯಕರನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ನಾಗರಿಕರ ಮೇಲೆ ಬರ್ಬರವಾಗಿ ಪೊಲೀಸರು ಲಾಠಿಚಾರ್ಚ್ ನಡೆಸಿದ್ದು ಪೊಲೀಸರ ಕೃತ್ಯ ಖಂಡನೀಯ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹೇಳಿದೆ.

ಪಾಪ್ಯುಲರ್‌ ಫ್ರಂಟ್‌ನ ಮುಖಂಡರು ಸುದ್ದಿಗೋಷ್ಠಿ ನಡೆಸಿದ್ದು, ಗಾಯದ ತೀವ್ರತೆಯನ್ನು ಗಮನಿಸಿದರೆ ಪೊಲೀಸರು ಲಾಠಿಗೆ ಬದಲಾಗಿ ಯಾವುದೋ ಮಾರಕಾಸ್ತ್ರ ಬಳಸಿರುವ ಬಗ್ಗೆ ಸಂಶಯ ಮೂಡುತ್ತದೆ ಎಂದು ಆರೋಪಿಸಿದ್ದಾರೆ.

ರಾತೋರಾತ್ರಿ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಮೂರು ಮಂದಿಯನ್ನು ಅಕ್ರಮವಾಗಿ ಬಂಧಿಸಿದ್ದರು. ಆದರೆ ಬಂಧನದ ವೇಳೆ ಯಾವುದೇ ಸೂಚನೆಯನ್ನು ನೀಡಿರಲಿಲ್ಲ. ಯಾವ ಕಾರಣಕ್ಕಾಗಿ ಬಂಧಿಸಲಾಗುತ್ತಿದೆ ಎಂಬ ಮಾಹಿತಿಯನ್ನೂ ನೀಡಿರಲಿಲ್ಲ. ಅಕ್ರಮ ಬಂಧನವನ್ನು ಖಂಡಿಸಿ ಪ್ರತಿಭಟನಕಾರರು ಬೆಳಗ್ಗೆ ಠಾಣೆ ಮುಂದೆ ಜಮಾಯಿಸಿದಾಗಲಷ್ಟೇ ಸ್ಥಳೀಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಕರೆ ತಂದಿದ್ದೇವೆ ಎಂದು ಪೊಲೀಸರು ಸಮಜಾಯಿಷಿ ನೀಡಿದ್ದರು. ಆದರೆ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಪೊಲೀಸರಲ್ಲಿ ಎಳ್ಳಷ್ಟೂ ಆಧಾರವಿರಲಿಲ್ಲ. ಅಮಾಯಕರನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಪ್ರತಿಭಟನಕಾರರು ಪಟ್ಟು ಹಿಡಿದು ಧರಣಿ ಕುಳಿತ್ತಿದ್ದರು ಎಂದು ಮುಖಂಡರು ತಿಳಿಸಿದ್ದಾರೆ.

ಕತ್ತಲಾವರಿಸಿದರೂ ಪ್ರತಿಭಟನಕಾರರು ಅಲ್ಲಿಂದ ಕದಲದೇ ಇದ್ದಾಗ ರಾತ್ರಿ ಸುಮಾರು 7ರ ವೇಳೆಗೆ ಓರ್ವ ನಾಯಕರನ್ನು ಬಿಡುಗಡೆಗೊಳಿಸಿದ್ದರು. ಇನ್ನಿಬ್ಬರನ್ನು ಸ್ವಲ್ಪ ಸಮಯದ ನಂತರ ಬಿಡುಗಡೆಗೊಳಿಸುವುದಾಗಿ ಪೊಲೀಸ್ ಅಧಿಕಾರಿ ಭರವಸೆ ನೀಡಿದ್ದರು. ಆದರೆ ತುಂಬಾ ಸಮಯದ ನಂತರವೂ ಅವರನ್ನು ಬಿಡುಗಡೆಗೊಳಿಸುವ ಲಕ್ಷಣ ಕಂಡು ಬರಲಿಲ್ಲ. ಅವರಿಬ್ಬರನ್ನು ಸುಳ್ಳು ಕೇಸಿನಲ್ಲಿ ಸಿಲುಕಿಸುವ ಸೂಚನೆ ಕಂಡು ಬಂದಾಗ, ಉಳಿದಿಬ್ಬರು ಅಮಾಯಕರನ್ನು ಬಿಡುಗಡೆಗೊಳಿಸುವಂತೆ ಮತ್ತೇ ಪ್ರತಿಭಟನೆಯನ್ನು ಮುಂದುವರಿಸಲಾಗಿತ್ತು. ಶಾಂತಿಯುತವಾಗಿ ಪ್ರತಿಭಟನೆ ನಡೆಯುತ್ತಿರುವಾಗ ಪೊಲೀಸರು ಯಾವುದೇ ಸೂಚನೆ ನೀಡದೇ ಯದ್ವಾತದ್ವಾ ಲಾಠಿ ಬೀಸಿದ್ದಾರೆ. ಘಟನೆಯಲ್ಲಿ ಹಲವಾರು ಮಂದಿ ಪ್ರತಿಭಟನಕಾರರು ಗಂಭೀರ ಗಾಯಗೊಂಡಿದ್ದಾರೆ ಎಂದು ಮುಖಂಡರು ಹೇಳಿದ್ದಾರೆ.

ಪೊಲೀಸರ ರಾಕ್ಷಸೀಯ ವರ್ತನೆ ಖಂಡನಾರ್ಹ. ಬರ್ಬರ ಲಾಠಿಚಾರ್ಜ್‌‌ನಿಂದಾಗಿ ಪ್ರತಿಭಟನಕಾರರ ತಲೆಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿ ನಿಂತಿದ್ದ ಮುಸ್ಲಿಮರ ಧಾರ್ಮಿಕ ಗುರು ಸೈಯ್ಯದ್ ಆತೂರ್ ತಂಗಳ್ರವರ ತಲೆಗೆ ಗಂಭೀರ ಗಾಯವಾಗಿದೆ. ಗಾಯದ ತೀವ್ರತೆಯನ್ನು ಗಮನಿಸಿದರೆ ಪೊಲೀಸರು ಲಾಠಿಗೆ ಬದಲಾಗಿ ಯಾವುದೋ ಮಾರಕಾಸ್ತ್ರ ಬಳಸಿರುವ ಬಗ್ಗೆ ಸಂಶಯ ಮೂಡುತ್ತದೆ ಎಂದು ಆರೋಪಿಸಿದ್ದಾರೆ.

ಇದೇ ವೇಳೆ ಲಾಠಿ ಏಟಿಗೆ ಯುವಕನೋರ್ವ ಪ್ರಜ್ಞೆ ಕಳೆದುಕೊಂಡು ರಸ್ತೆಯಲ್ಲಿ ಬಿದ್ದಿದ್ದ ಕರುಣಾಜನಕ ದೃಶ್ಯವೂ ಕಂಡು ಬಂತು. ಆಸ್ಪತ್ರೆಗೆ ದಾಖಲಾಗಿರುವ ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಮತ್ತು ಸುಮಾರು 40ರಷ್ಟು ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಪೊಲೀಸರು ಆ್ಯಂಬುಲೆನ್ಸ್ ಮೇಲೆಯೂ ಲಾಠಿ ಬೀಸಿ ಆತಂಕದ ವಾತಾವರಣ ಸೃಷ್ಟಿಸಿದ್ದರು. ಇದೇ ವೇಳೆ ಆ್ಯಂಬುಲೆನ್ಸ್‌ ಒಂದನ್ನು ಠಾಣೆ ಬಳಿ ತಡೆ ಹಿಡಿದಿದ್ದ ಪೊಲೀಸರು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ತೀವ್ರ ಅಡಚಣೆ ಉಂಟು ಮಾಡಿದ್ದರು. ಈ ಮಧ್ಯೆ, ಪೊಲೀಸರೊಂದಿಗೆ ಮಾತುಕತೆ ನಡೆಸುತ್ತಿದ್ದ ನಾಯಕರ ಮೇಲೆಯೂ ಲಾಠಿ ಬೀಸಿ ಉದ್ಧಟತನದಿಂದ ವರ್ತಿಸಲಾಗಿದೆ ಎಂದು ದೂರಿದ್ದಾರೆ.

ಬೆಳಿಗ್ಗಿನಿಂದಲೇ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಕಾರರು ಶಾಂತಿಯುತವಾಗಿಯೇ ಪ್ರತಿಭಟನೆ ನಡೆಸುತ್ತಿದ್ದರು. ಪೊಲೀಸರ ಬೆದರಿಕೆ, ಪ್ರಚೋದನೆಯ ಹೊರತಾಗಿಯೂ ಪ್ರತಿಭಟನಕಾರರು ರಾತ್ರಿಯಾದರೂ ಸಂಯಮ ಕಳೆದುಕೊಂಡಿರಲಿಲ್ಲ. ಆದರೆ ಸುಮಾರು 9:30ರ ವೇಳೆಗೆ ಪೊಲೀಸರು ಹಿಂಬದಿಯಿಂದ ಏಕಾಏಕೀ ಲಾಠಿ ಪ್ರಯೋಗ ಮಾಡಿ ಪ್ರತಿಭಟನಕಾರರನ್ನು ಬರ್ಬರವಾಗಿ ಥಳಿಸಿದ್ದಾರೆ. ಲಾಠಿಚಾರ್ಜ್‌ನಿಂದ ಗಾಯಗೊಂಡವರ ಪೈಕಿ ಬಹುಪಾಲು ಜನರಿಗೆ ತಲೆಗೆ ಪೆಟ್ಟು ಬಿದ್ದಿರುವುದು ಪೊಲೀಸರ ಪ್ರತೀಕಾರದ ಮನೋಸ್ಥಿತಿಯನ್ನು ಬಹಿರಂಗಪಡಿಸುತ್ತದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ, ತಮ್ಮ ದುಷ್ಕೃತ್ಯವನ್ನು ಮರೆಮಾಚಲು ಪೊಲೀಸರು ಎಂದಿನಂತೆ ತಮ್ಮ ಮೇಲೆ ಹಲ್ಲೆ ನಡೆಸಿರುವ ಕಟ್ಟು ಕಥೆಯನ್ನು ಕಟ್ಟುತ್ತಿದ್ದಾರೆ ಎಂದಿದ್ದಾರೆ.

ಯಾವುದೇ ಅಹಿತಕರ ಘಟನೆ ನಡೆದಾಗ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರನ್ನು ಬಂಧಿಸುವುದು ಪೊಲೀಸರ ಕರ್ತವ್ಯ. ಆದರೆ ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಮತ್ತು ಯಾರದೋ ರಾಜಕೀಯ ಒತ್ತಡಕ್ಕೆ ಮಣಿದು ಪೊಲೀಸರು ಅಮಾಯಕರನ್ನು ಸುಳ್ಳು ಕೇಸಿನಲ್ಲಿ ಸಿಲುಕಿಸುವ ಪ್ರವೃತ್ತಿ ಆತಂಕಕಾರಿಯಾಗಿದೆ. ಘಟನೆಯ ಆರೋಪಿಗಳು ಪತ್ತೆಯಾಗಿಲ್ಲ ಎಂಬ ಕಾರಣಕ್ಕೆ ಇದೀಗ ಅಮಾಯಕರನ್ನು ಹಿಡಿದು ಪೊಲೀಸರು ಕೈತೊಳೆದುಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಈ ನೆಲದ ಕಾನೂನನ್ನು ಗೌರವಿಸುತ್ತದೆ ಮತ್ತು ಪೊಲೀಸರ ತನಿಖೆಗೂ ಸಹಕರಿಸುತ್ತದೆ. ಆದರೆ ಘಟನೆಗೆ ಸಂಬಂಧಪಡದ ಅಮಾಯಕರನ್ನು ಸಿಲುಕಿಸಿ ಪ್ರಕರಣ ದಾಖಲಿಸುವ ಅನ್ಯಾಯದ ಕ್ರಮಕ್ಕೆ ಯಾವತ್ತೂ ಅವಕಾಶ ನೀಡುವುದಿಲ್ಲ. ನಿನ್ನೆ ನಡೆದ ಪ್ರತಿಭಟನೆಯೂ ಇದೇ ನಿಲುವಿನ ಭಾಗವಾಗಿತ್ತು ಎಂದು ತಿಳಿಸಿದ್ದಾರೆ.

ವಿನಾ ಕಾರಣ ಲಾಠಿ ಚಾರ್ಜ್ ನಡೆಸಿ ಹಲವು ಮಂದಿ ಗಂಭೀರ ಗಾಯಗೊಳ್ಳಲು ಕಾರಣಕರ್ತರಾದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಲಾಠಿ ಚಾರ್ಜ್‌‌ಗೆ ಆದೇಶ ನೀಡಿದ ಅಧಿಕಾರಿಯನ್ನು ಪೊಲೀಸ್ ಇಲಾಖೆ ಕೂಡಲೇ ಅಮಾನತುಪಡಿಸಬೇಕು. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರಕಾರದ ವತಿಯಿಂದಲೇ ಭರಿಸಬೇಕು. ವಿಚಾರಣೆಯ ನೆಪದಲ್ಲಿ ಕೊಂಡೊಯ್ದು ಇಬ್ಬರ ಮೇಲೆ ಇದೀಗ ಸುಳ್ಳು ಕೇಸು ಜಡಿಯಲಾಗಿದ್ದು, ಈ ಸುಳ್ಳು ಕೇಸನ್ನು ಕೂಡಲೇ ವಾಪಸ್ ಪಡೆಯಬೇಕು. ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಪ್ರತಿಭಟನಕಾರರನ್ನೂ ಬೇಷರತ್ ಆಗಿ ಬಿಡುಗಡೆಗೊಳಿಸಬೇಕು. ಪೊಲೀಸರು ಯಾರದೇ ರಾಜಕೀಯ ಒತ್ತಡಕ್ಕೆ ಮಣಿಯದೇ ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸಬೇಕು. ಈ ಮೂಲಕ ಅವರು ಕಾನೂನಿನ ಘನತೆ, ಪಾವಿತ್ರ್ಯಾತೆಯನ್ನು ಎತ್ತಿಹಿಡಿಯಬೇಕು ಎಂದು ಮುಖಂಡರು ಆಗ್ರಹಿಸಿದ್ದಾರೆ.

ಲಾಠಿಚಾರ್ಜ್ ಘಟನೆಯನ್ನು ಖಂಡಿಸಿ ಮತ್ತು ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಡಿಸೆಂಬರ್ 17ರ ಶುಕ್ರವಾರದಂದು ಮಂಗಳೂರಿನಲ್ಲಿ ಎಸ್‌‌ಪಿ ಆಫೀಸ್ ಎದುರು ಮಾರ್ಚ್ ಹಮ್ಮಿಕೊಳ್ಳಲೂ ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಪಾಪ್ಯುಲರ್‌ ಫ್ರಂಟ್‌‌ ರಾಜ್ಯ ಕಾರ್ಯದರ್ಶಿ ಎ.ಕೆ.ಅಶ್ರಫ್, ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಇಜಾಝ್ ಅಹ್ಮದ್, ಮಂಗಳೂರು ನಗರ ಅಧ್ಯಕ್ಷ ಖಾದರ್ ಕುಳಾಯಿ, ಪುತ್ತೂರು ತಾಲ್ಲೂಕು ಅಧ್ಯಕ್ಷ ಜಾಬೀರ್ ಅರಿಯಡ್ಕ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...