Homeಕರ್ನಾಟಕಮತಾಂತರ ನಿಷೇಧ ಮಸೂದೆಗೆ ಕಾಂಗ್ರೆಸ್‌ ವಿರೋಧ ಇರಲಿದೆ: ಡಿ.ಕೆ.ಶಿವಕುಮಾರ್‌‌

ಮತಾಂತರ ನಿಷೇಧ ಮಸೂದೆಗೆ ಕಾಂಗ್ರೆಸ್‌ ವಿರೋಧ ಇರಲಿದೆ: ಡಿ.ಕೆ.ಶಿವಕುಮಾರ್‌‌

- Advertisement -
- Advertisement -

ಸರ್ಕಾರ ಉದ್ದೇಶಪೂರ್ವಕವಾಗಿ ಮತಾಂತರ ನಿಷೇಧ ಮಸೂದೆ ಜಾರಿಗೆ ಸಂಬಂಧಿಸಿದ ವಿಚಾರವನ್ನು ಅಂತಿಮ ಗಳಿಗೆಯಲ್ಲಿ ಚರ್ಚೆಗೆ ತರಲಿದ್ದಾರೆ. ನಾವು ಅದಕ್ಕೆ ಸಿದ್ಧವಾಗಿದ್ದು, ಸಂಪುಟದಲ್ಲಿ ಅನುಮೋದನೆ ಪಡೆಯದೇ ಇದನ್ನು ತರಲು ಸಾಧ್ಯವಿಲ್ಲ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, “ಚುನಾವಣೆ ಸಮೀಪಿಸುತ್ತಿದ್ದಂತೆ ವಿಚಾರ ತಿರುಚಲು ಈ ರೀತಿ ಮಾಡುತ್ತಾರೆ. ನಿನ್ನೆ ಕಾನೂನು ಸಚಿವರು ಇದರಲ್ಲಿ ಎಸ್ಸಿ, ಬೌದ್ಧ ಧರ್ಮ ಸೇರಿದಂತೆ ಇತರೆ ವಿಚಾರ ಬರುತ್ತದೆ ಎಂದಿದ್ದಾರೆ. ಹೀಗಾಗಿ ಅವರು ಕೊನೆ ಗಳಿಗೆಯಲ್ಲಿ ತೆಗೆದುಕೊಳ್ಳುತ್ತಾರೆ. ಅವರು ಯಾವಾಗ ಬೇಕಾದರೂ ತೆಗೆದುಕೊಳ್ಳಲಿ, ಕಾಂಗ್ರೆಸ್ ಇದನ್ನು ವಿರೋಧಿಸುತ್ತದೆ. ಸದನದ ಒಳಗೆ ಹಾಗೂ ಹೊರಗೆ ನಾವು ಇದರ ವಿರುದ್ಧ ಹೋರಾಟ ಮಾಡುತ್ತೇವೆ” ಎಂದು ಎಚ್ಚರಿಸಿದ್ದಾರೆ.

ಕಾನೂನು ಈಗಾಗಲೇ ಇದೆ. ಅದನ್ನು ಪಾಲಿಸುವ ಬದಲು ಈ ವಿಚಾರವನ್ನು ಚುಚ್ಚಿ, ಚುಚ್ಚಿ ಹೇಳುತ್ತಿದ್ದಾರೆ. ಬೌದ್ಧ, ಸಿಖ್, ಜೈನ್, ಕ್ರೈಸ್ತ ಧರ್ಮಗಳಿದ್ದು, ಕೇವಲ ಒಂದನ್ನು ಗಮನದಲ್ಲಿಟ್ಟುಕೊಂಡು ಇದನ್ನು ಜಾರಿಗೆ ತರಲು ಸಾಧ್ಯವಿಲ್ಲ. ಈ ವಿಚಾರವಾಗಿ ಬಿಜೆಪಿಯವರಲ್ಲೇ ಆಂತರಿಕ ಭಿನ್ನಮತ ಇದೆ. ಇದು ರಾಜ್ಯಕ್ಕೆ ಮುಂದೆ ಬರಲಿರುವ ಬಂಡವಾಳ ಹೂಡಿಕೆ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಮೇಕೆದಾಟು ಪಾದಯಾತ್ರೆ ಕುರಿತು ಮಾತನಾಡಿದ ಅವರು, “ಮೇಕೆದಾಟು ಪಾದಯಾತ್ರೆ ಬಗ್ಗೆ ನಾವು ಚರ್ಚೆ ಮಾಡಿದ್ದೇವೆ. ಪಕ್ಷ, ನಾಯಕರು ಹಾಗೂ ಕಾರ್ಯಕರ್ತರು ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿದ್ದು, ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ” ಎಂದಿದ್ದಾರೆ.

ಗುತ್ತಿಗೆದಾರರ ಸಂಘವು ಪ್ರಧಾನಿಯವರಿಗೆ ಬರೆದಿರುವ ಪತ್ರದ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅದು ಇಡೀ ದೇಶಕ್ಕೇ ಆಶ್ಚರ್ಯ ಮೂಡಿಸಿರುವ ಪತ್ರ. ಅದು ಕೂಡ ನಮ್ಮ ಹೋರಾಟದ ಆದ್ಯತೆ ವಿಷಯಗಳಲ್ಲಿ ಒಂದು. ಅಧಿವೇಶನದಲ್ಲಿ ನಾವು ಎಲ್ಲ ವಿಚಾರಗಳನ್ನು ಒಂದೇ ದಿನ ತೆಗೆದುಕೊಳ್ಳಲು ಆಗುವುದಿಲ್ಲ. ಭ್ರಷ್ಟಾಚಾರ ಕೂಡ ಒಂದು ಪ್ರಮುಖ ವಿಚಾರ ಎಂದು ಪ್ರತಿಕ್ರಿಯಿಸಿದ್ದಾರೆ.

ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಒಳ ಒಪ್ಪಂದ ಮಾಡಿಕೊಂಡಿತ್ತು ಎಂಬ ಲಖನ್ ಜಾರಕಿಹೊಳಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ‘ಒಳಒಪ್ಪಂದವೋ ಅಥವಾ ಬೇರೆ ಏನೋ, ಸಿಎಂ ಏನು ಹೇಳಿದ್ದಾರೆ? ಅವರು ಕಾಂಗ್ರೆಸ್ ರೆಬಲ್ ಅಭ್ಯರ್ಥಿ ಎಂದಿದ್ದಾರೆ. ಯಾರು ಏನು ಬೇಕಾದರೂ ಹೇಳಿಕೊಳ್ಳಲಿ. ಅವರು ಬೇಕಾದರೆ ಸಂಪುಟ ವಿಸ್ತರಣೆ ವೇಳೆ ಲಖನ್ ಅವರನ್ನೇ ಸಚಿವರನ್ನಾಗಿ ಮಾಡಿಕೊಳ್ಳಲಿ’ ಎಂದು ತಿಳಿಸಿದ್ದಾರೆ.

ಬಿಟ್ ಕಾಯಿನ್ ವಿಚಾರದಲ್ಲಿ ಕಾಂಗ್ರೆಸ್ ಹಿಟ್ ಅಂಡ್ ರನ್ ನೀತಿ ಅನುಸರಿಸುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಈ ವಿಚಾರದಲ್ಲಿ ಹಿಟ್ ಅಂಡ್ ರನ್ ಪ್ರಶ್ನೆಯೇ ಇಲ್ಲ. ನಾವು ಹಲವು ವಿಚಾರಗಳೊಂದಿಗೆ ಈ ವಿಷಯ ತರುತ್ತೇವೆ’ ಎಂದಿದ್ದಾರೆ.

ಇದನ್ನೂ ಓದಿರಿ: ನೆಲಮಂಗಲ: ತಮಟೆ ಬಾರಿಸಿದ್ದಕ್ಕೆ ದಲಿತನಿಗೆ ಥಳಿತ; ಪ್ರಕರಣ ದಾಖಲು

ಮತಾಂತರ ನಿಷೇಧ ಚರ್ಚೆ ಬೆನ್ನಲ್ಲೇ ಹೆಚ್ಚಿದ ಕೋಮುದ್ವೇಷ

ಧರ್ಮಾಚರಣೆಯ ಅಪರಾಧೀಕರಣ, ಕರ್ನಾಟಕದಲ್ಲಿ ಕ್ರಿಶ್ಚಿಯನ್ನರ ಮೇಲಿನ ದ್ವೇಷದ ಅಪರಾಧಗಳ ಕುರಿತು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ – ಕರ್ನಾಟಕ (ಪಿಯುಸಿಎಲ್‌) ಮಂಗಳವಾರ ವರದಿ ಬಿಡುಗಡೆ ಮಾಡಿದೆ. ಜನವರಿಯಿಂದ ನವೆಂಬರ್‌‌ವರೆಗೆ ಒಟ್ಟು 39 ಕ್ರಿಶ್ಚಿಯನ್ನರ ಮೇಲಿನ ದ್ವೇಷ ಪ್ರಕರಣಗಳು ಕರ್ನಾಟಕದಲ್ಲಿ ದಾಖಲಾಗಿವೆ ಎಂದು ವರದಿ ಹೇಳಿದೆ.

ಸಂವಿಧಾನದ 25ನೇ ವಿಧಿಯ ಅಡಿಯಲ್ಲಿ ಅಂಗೀಕರಿಸಲ್ಪಟ್ಟಿರುವ, ಧರ್ಮವನ್ನು ಆಚರಿಸುವ, ಪ್ರತಿಪಾದಿಸುವ ಮತ್ತು ಪ್ರಚಾರ ಮಾಡುವ ಹಕ್ಕಿನ ಮೇಲೆ ದಾಳಿ ನಡೆಸುವುದಕ್ಕೆ ಬಳಸಲಾಗುತ್ತಿರುವ ಮತಾಂತರವೆಂಬ ಸುಳ್ಳು ನೆಪವು ಮಿಥ್ಯೆಯೇ ಆಗಿದೆ ಎಂಬ ಅಂಶವನ್ನು ಈ ವರದಿ ಸಾರಿಹೇಳಿದೆ.

‘ಮತಾಂತರ’ ಎಂಬ ಪರಿಭಾಷೆಯನ್ನು ಬಳಸಿ, ಹೇಗೆ ಕ್ರಿಶ್ಚಿಯನ್ನರು ತಮ್ಮ ಧರ್ಮವನ್ನು ಆಚರಿಸುವ ಮತ್ತು ಪ್ರತಿಪಾದಿಸುವ ಸಾಂವಿಧಾನಿಕ ಹಕ್ಕನ್ನು ಇಂದಿನ ಕರ್ನಾಟಕದಲ್ಲಿ ಮೊಟಕುಗೊಳಿಸಲಾಗುತ್ತಿದೆ ಎಂಬ ಆಘಾತಕಾರಿ ವಿಷಯವನ್ನು ವಿಸ್ತೃತವಾಗಿ ವರದಿ ಚರ್ಚಿಸಿದೆ.

ಕ್ರಿಶ್ಚಿಯನ್ನರ ವಿರುದ್ಧ ಹೆಚ್ಚುತ್ತಿರುವ ದ್ವೇಷದ ಅಪರಾಧಗಳು, ಧಾರ್ಮಿಕಾಚರಣೆಯ ಬಗೆಗೆ ಆದೇಶಿಸಲಾಗಿರುವ ಸಮೀಕ್ಷೆಗಳ ಸರಣಿ, ರಾಜ್ಯದಲ್ಲಿ ಮತಾಂತರ ನಿಷೇಧ ಕಾನೂನಿನ ನಿರೀಕ್ಷೆಯ ಸಂದರ್ಭದಲ್ಲಿ ವಿವಿಧ ಸ್ಥರಗಳಲ್ಲಿ ಕ್ರಿಶ್ಚಿಯನ್ ಸಮುದಾಯಕ್ಕೆ ಕೊಡಮಾಡಲಾಗುತ್ತಿರುವ ಕಿರುಕುಳವನ್ನು ದಾಖಲಿಸಲು ಈ ವರದಿಯನ್ನು ತಯಾರಿಸಲಾಗಿದೆ ಎಂದು ಪಿಯುಸಿಎಲ್‌ ಸಂಘಟಕರು ತಿಳಿಸಿದ್ದಾರೆ.

ಬಹುತೇಕ ಪ್ರಕರಣಗಳಲ್ಲಿ ಕ್ರಿಶ್ಚಿಯನ್ನರು ತಮ್ಮ ಪೂಜಾ ಸ್ಥಳಗಳನ್ನು ಮುಚ್ಚುವಂತೆ ಒತ್ತಾಯಿಸಲಾಗುತ್ತಿದೆ ಮತ್ತು ಅವರ ಭಾನುವಾರದ ಪ್ರಾರ್ಥನೆಗಾಗಿ ಒಟ್ಟುಗೂಡುವುದನ್ನು ನಿಲ್ಲಿಸಲಾಗುತ್ತಿದೆ. ಹಿಂದುತ್ವ ಗುಂಪುಗಳು ರಾಜ್ಯದ ಸಹಭಾಗಿತ್ವದೊಂದಿಗೆ ಸಾಮೂಹಿಕವಾಗಿ ಧಾರ್ಮಿಕ ಸಮುದಾಯವಾಗಿ ಪ್ರಾರ್ಥಿಸುವುದರ ಮೇಲಿನ ಈ ದಾಳಿಗಳು ಧರ್ಮವನ್ನು ಆಚರಿಸುವ ಸ್ವಾತಂತ್ರ್ಯಕ್ಕೆ ಅಡ್ಡಿಯಾಗಿ ಕಾರ್ಯನಿರ್ವಹಿಸುತ್ತವೆ. ಇಂದು ಕರ್ನಾಟಕದಲ್ಲಿ ನಡೆಯುತ್ತಿರುವ ದಾಳಿಗಳು ಧರ್ಮವನ್ನು ಪ್ರಚಾರಮಾಡುವ ಪ್ರಚಾರದ ಹಕ್ಕಿಗೆ ಸಂಬಂಧಿಸಿರುವುದಿಲ್ಲ. ಬದಲಿಗೆ, ಧರ್ಮವನ್ನು ಮುಕ್ತವಾಗಿ ಪ್ರತಿಪಾದಿಸುವ ಮತ್ತು ಆಚರಣೆ ಮಾಡುವ ಹಕ್ಕಿನ ಮೇಲಿನ ದಾಳಿಗಳಾಗಿವೆ ಎಂದು ವರದಿ ಹೇಳುತ್ತದೆ.


ಇದನ್ನೂ ಓದಿರಿ: ರಾಜ್ಯದಲ್ಲಿ ಕ್ರಿಶ್ಚಿಯನ್ನರ ಮೇಲೆ ದಾಳಿ: ಕಳೆದ 11 ತಿಂಗಳಲ್ಲಿ 39 ಪ್ರಕರಣ ದಾಖಲು- ಪಿಯುಸಿಎಲ್‌ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...