Homeಕರ್ನಾಟಕಕನ್ನಡಪರ ಹೋರಾಟಗಾರರನ್ನು ಬೆಂಬಲಿಸಿದ ಕನ್ನಡ ಚಿತ್ರರಂಗ

ಕನ್ನಡಪರ ಹೋರಾಟಗಾರರನ್ನು ಬೆಂಬಲಿಸಿದ ಕನ್ನಡ ಚಿತ್ರರಂಗ

ನಟ ಶಿವ ರಾಜ್‌ಕುಮಾರ್‌, ದರ್ಶನ್‌ ತೂಗುದೀಪ, ದುನಿಯಾ ವಿಜಯ್‌ ಸೇರಿದಂತೆ ಹಲವಾರು ಜನರು ಕನ್ನಡ ಧ್ವಜವನ್ನು ಸುಟ್ಟವರಿಗೆ ತಕ್ಕ ಶಿಕ್ಷೆ ನೀಡುವಂತೆ ಮುಖ್ಯಮಂತ್ರಿಗೆ ಆಗ್ರಹಿಸಿದ್ದಾರೆ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜ ಸುಟ್ಟಿದ್ದನ್ನು ವಿರೋಧಿಸಿ ಮತ್ತು ಎಂಇಎಸ್ ಮುಖಂಡರು ಮುಖಕ್ಕೆ ಮಸಿಬಳಿದವರನ್ನು ಪೊಲೀಸರು ಬಂಧಿಸಿದ್ದನ್ನು ವಿರೋಧಿಸಿ ಕನ್ನಡ ಚಿತ್ರರಂಗ ಸಿಡಿದೆದ್ದಿದೆ. ನಟ ಶಿವ ರಾಜ್‌ಕುಮಾರ್‌, ದರ್ಶನ್‌ ತೂಗುದೀಪ, ದುನಿಯಾ ವಿಜಯ್ ಮತ್ತು ನಿರ್ದೇಶಕ ಪವನ್‌ ಒಡೆಯರ್‌ ಸೇರಿದಂತೆ ಹಲವಾರು ಜನರು ಕನ್ನಡ ಧ್ವಜವನ್ನು ಸುಟ್ಟವರಿಗೆ ತಕ್ಕ ಶಿಕ್ಷೆ ನೀಡುವಂತೆ ಮತ್ತು ಕನ್ನಡ ಪರ ಹೋರಾಟಗಾರರನ್ನು ಬಿಡುಗಡೆಗೊಳಿಸುವಂತೆ ಆಗ್ರಹಿಸಿದ್ದಾರೆ.

ಬೆಳಗಾವಿಯಲ್ಲಿ ವಿಧಾನ ಮಂಡಲ ಅಧಿವೇಶನ ನಡೆಸುವುದನ್ನು ವಿರೋಧಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್‌) ರ್‍ಯಾಲಿಯನ್ನು ನಡೆಸಲು ಉದ್ದೇಶಿಸಿತ್ತು. ಆದರೆ ಇದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಎಂಇಎಸ್‌ ಮುಖಂಡರ ಮುಖಕ್ಕೆ ಮಸಿ ಬಳಿದಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಕನ್ನಡ ಪರ ಸಂಘಟನೆಗಳ ಮೂವರನ್ನು ಬಂಧಿಸಿದ್ದರು. ಈ ಮಧ್ಯೆ ಎಂಇಎಸ್‌ ಕಾರ್ಯಕರ್ತರು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡ ಧ್ವಜವನ್ನು ಸುಟ್ಟು ತಮ್ಮ ನಾಯಕರ ಮೇಲೆ ಮಸಿ ಬಳಿದಿದ್ದಕ್ಕೆ ಪ್ರತಿಭಟಿಸಿದ್ದರು.

ಇದನ್ನೂ ಓದಿ: ಕಸಾಪ ನೂತನ ಅಧ್ಯಕ್ಷರ ಶುದ್ಧ ಕನ್ನಡ ವ್ಯಾಮೋಹ ಮತ್ತು ಭಾಷೆಯ ಜಾಯಮಾನ

ಈ ಘಟನೆಗಳ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ನಟ ಶಿವ ರಾಜ್‌ಕುಮಾರ್‌, “ನಮ್ಮ ನಾಡ ಧ್ವಜ ಸುಟ್ಟವರಿಗೆ ತಕ್ಕ ಶಿಕ್ಷೆ ಆಗಲಿ. ನಿಜವಾದ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿಸಿ” ಎಂದು ಮುಖ್ಯಮಂತ್ರಿ ಬೊಮ್ಮಾಯಿ, ಗೃಹ ಸಚಿವ ಅರಗ ಜ್ಞಾನೇಂದ್ರ ಮತ್ತು ಬೆಳಗಾವಿ ಪೊಲೀಸರಿಗೆ ಆಗ್ರಹಿಸಿದ್ದಾರೆ.

ಇಷ್ಟೇ ಅಲ್ಲದೆ, ಶಿವ ರಾಜ್‌ಕುಮಾರ್‌ ಅವರು ತಮ್ಮ ಟ್ವೀಟ್‌ನಲ್ಲಿ, “ಜೈ ಕನ್ನಡ, ಜೈ ಕರ್ನಾಟಕ” ಎಂದು ಉಲ್ಲೇಖಿಸಿದ್ದು,#ಕನ್ನಡಹೋರಾಟಗಾರರನ್ನಬಿಡುಗಡೆಗೊಳಿಸಿ ಎಂಬ ಹ್ಯಾಶ್‌ಟ್ಯಾಗ್‌ ಅನ್ನು ಬಳಿಸಿದ್ದಾರೆ.

ಇದನ್ನೂ ಓದಿ:ನಟ ಚೇತನ್‌‌ ಎತ್ತಿರುವ ಮೌಲಿಕ ಪ್ರಶ್ನೆಗಳು ಮತ್ತು ಕನ್ನಡ ಚಿತ್ರರಂಗದ ಮೌನ

ನಟ ದರ್ಶನ್ ತೂಗುದೀಪ ಅವರು, “ನಮ್ಮ ಕರುನಾಡ ಧ್ವಜ ಸುಟ್ಟ ಹೇಡಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು. ನಿಜವಾಗಿ ಕನ್ನಡ ಪರ ಹೋರಾಟ ಮಾಡುವವರನ್ನು ಬಿಡುಗಡೆಗೊಳಿಸಿ. ಕನ್ನಡ ತಾಯಿ ತಾಯ್ನಾಡು ವಿಷಯಕ್ಕೆ ಈ ರೀತಿ ಅಪಮಾನ ಮಾಡಿರುವವರಿಗೆ ತಕ್ಕ ಪಾಠ ಕಲಿಸಲೇಬೇಕು” ಎಂದು ಮುಖ್ಯಮಂತ್ರಿ ಬಸವರಾಜ್‌‌ ಬೊಮ್ಮಾಯಿ ಅವರಿಗೆ ವಿನಂತಿಸಿದ್ದಾರೆ.

ನಟ ದುನಿಯಾ ವಿಜಯ್ ಅವರು, “ನಾಡು,ನುಡಿ,ಭಾಷೆ ನಮ್ಮ ಉಸಿರಾಟದ ಒಂದು ಭಾಗ.ಕನ್ನಡಕ್ಕೆ ಮಾಡಿದ ಅವಮಾನವನ್ನು ಕನ್ನಡಾಂಬೆಯ ಮಕ್ಕಳಾಗಿ ನಾವ್ಯಾರು ಸಹಿಸೆವು. ನಾಡಧ್ವಜ ಸುಟ್ಟ ದ್ರೋಹಿಗಳನ್ನು ಬಂಧಿಸಿ ನಮ್ಮ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿಸಬೇಕೆಂದು ಸರ್ಕಾರಕ್ಕೆ ನನ್ನ ಕಳಕಳಿಯ ಮನವಿ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:ಹಳತು ವಿವೇಕ : ಕನ್ನಡ ಭಾಷೆಗೆ ಅಸಹಜವಾಗಿ ನುಸುಳಿರುವ ಮಹಾಪ್ರಾಣಗಳು

ನಿರ್ದೇಶಕ ಪವನ್‌ ಒಡೆಯರ್‌ ಅವರು, “ನಿಜವಾದ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿಸಿ. ಜೈ ಕನ್ನಡ. ಜಯ ಕರ್ನಾಟಕ” ಎಂದು ಟ್ವೀಟ್ ಮಾಡಿದ್ದು #ಕನ್ನಡಹೋರಾಟಗಾರರನ್ನಬಿಡುಗಡೆಗೊಳಿಸಿ ಎಂದು ಹ್ಯಾಶ್‌ ಟ್ಯಾಗ್ ಬಳಸಿಕೊಂಡಿದ್ದಾರೆ.

ಇಷ್ಟೇ ಅಲ್ಲದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವಾರು ರಾಜಕೀಯ ನಾಯಕರು ಕನ್ನಡ ಪರ ಹೋರಾಟಗಾರರ ಬೆಂಬಲಕ್ಕೆ ನಿಂತಿದ್ದಾರೆ.

ಸಿದ್ದರಾಮಯ್ಯ ಅವರು, “ಕನ್ನಡಿಗರೆಲ್ಲರ ಅಧಿಕೃತ ಬೆಂಬಲದ ಠಸ್ಸೆ ಬಿದ್ದಿರುವ ಕನ್ನಡ ಬಾವುಟ ನಮ್ಮ ಘನತೆ, ಗೌರವ ಮತ್ತು ಅಸ್ಮಿತೆಯ ಸಂಕೇತ. ಕನ್ನಡ ಧ್ವಜಕ್ಕೆ ಮಾಡುವ ಅವಮಾನ ಕನ್ನಡಿಗರಿಗೆ ಮಾತ್ರವಲ್ಲ, ಕರ್ನಾಟಕಕ್ಕೆ ಮಾಡುವ ಅವಮಾನ. ಕನ್ನಡ ಧ್ವಜವನ್ನು ಸುಟ್ಟು ಅವಮಾನಿಸಿದ ಕನ್ನಡ ದ್ರೋಹಿ ದುರುಳರನ್ನು ತಕ್ಷಣ ಬಂಧಿಸಿ, ಸೂಕ್ತ ಕ್ರಮಕೈಗೊಳ್ಳಿ” ಎಂದು ಮುಖ್ಯಮಂತ್ರಿಗೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಕಸಾಪ ನೂತನ ಅಧ್ಯಕ್ಷರ ಶುದ್ಧ ಕನ್ನಡ ವ್ಯಾಮೋಹ ಮತ್ತು ಭಾಷೆಯ ಜಾಯಮಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...