Homeಚಳವಳಿಅಗಲಿದ ನೇಮಿಚಂದ್ರರವರಿಗೆ ಇಂದು ಅಂತಿಮ ವಿದಾಯ: ಕಂಬನಿ ಮಿಡಿದ ಒಡನಾಡಿಗಳು

ಅಗಲಿದ ನೇಮಿಚಂದ್ರರವರಿಗೆ ಇಂದು ಅಂತಿಮ ವಿದಾಯ: ಕಂಬನಿ ಮಿಡಿದ ಒಡನಾಡಿಗಳು

ಇಂದು ಬೆಳಿಗ್ಗೆ 11 ಗಂಟೆಗೆ ಬೆಳಗಾವಿಯ 'ಸದಾಶಿವ ನಗರದ ಸ್ಮಶಾನದಲ್ಲಿ' ಗೌರವಾದರಗಳೊಂದಿಗೆ ನೇಮಿಚಂದ್ರರವರ ಅಂತ್ಯಕ್ರಿಯೆ ನೆರವೇರಿಸಲಾಗುವುದು.

- Advertisement -
- Advertisement -

ಬುಧವಾರ ಅಗಲಿದೆ ಸಾಮಾಜಿಕ ಕಾರ್ಯಕರ್ತೆ, ಹಲವು ಜನಪರ ಚಳವಳಿಗಳ ಒಡನಾಡಿ ನೇಮಿಚಂದ್ರರವರ ಅಂತ್ಯಕ್ರಿಯೆ ಇಂದು ಬೆಳಗಾವಿಯಲ್ಲಿ ನಡೆಯಲಿದೆ. ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ, ಕರ್ನಾಟಕ ಜನಶಕ್ತಿ ಮತ್ತು ಕರ್ನಾಟಕ ವಿದ್ಯಾರ್ಥಿ ಸಂಘಟನೆ ಸೇರಿದಂತೆ ನೂರಾರು ಸಹ ಹೋರಾಟಗಾರರು, ಸ್ನೇಹಿತರು ಮತ್ತು ಕುಟುಂಬದವರು ಇಂದು ಅಂತಿಮ ವಿದಾಯ ಸಲ್ಲಿಸಲಿದ್ದಾರೆ.

ಮೂಲತಃ ಬೆಳಗಾವಿಯವರಾದ ನೇಮಿಚಂದ್ರ ಬೆಂಗಳೂರಿನಲ್ಲಿ ನೆಲೆಸಿದ್ದರು. ವಿದ್ಯಾರ್ಥಿ ದಿಸೆಯಲ್ಲಿಯೇ ಸಾಮಾಜಿಕ ಚಳವಳಿಗಳಲ್ಲಿ ತೊಡಗಿಸಿಕೊಂಡ ನೇಮಿಚಂದ್ರ ತನ್ನ ದಿಟ್ಟತೆ ಮತ್ತು ಜೋರು ದನಿಯಿಂದ ಹೆಸರುವಾಸಿಯಾದವರು. ಯಾವುದೇ ಮೆರವಣಿಗೆಯಲ್ಲಿ ಗಟ್ಟಿಯಾಗಿ ಕೇಳಿಬರುತ್ತಿದ್ದ ಅವರ ಘೋಷಣೆಗಳು ಎಲ್ಲರ ಗಮನ ಸೆಳೆಯುತ್ತಿದ್ದವು. ಉಡುಪಿ ಚಲೋ, ದಿಡ್ಡಳ್ಳಿ ಆದಿವಾಸಿಗಳ ಪರ ಹೋರಾಟ, ತುಮಕೂರು ಚಲೋ, ಗುಡಿಬಂಡೆ ಚಲೋ, ಕಾರಟಗಿ ಚಲೋ ಸೇರಿದಂತೆ ನೂರಾರು ಹೋರಾಟಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದ ಅವರು ತಮ್ಮ ಬದುಕಿನ ಬಹುತೇಕ ಸಮಯವನ್ನು ಶೋಷಿತರ ಪರ ಹೋರಾಟಕ್ಕೆ ಮೀಸಲಿಟ್ಟಿದ್ದರು.

ಅವರ ತಂದೆ, ತಾಯಿ ಮತ್ತು ಇಬ್ಬರು ಸಹೋದರಿಯರು ಸಹ ಚಳವಳಿಯಲ್ಲಿ ಗುರುತಿಸಿಕೊಂಡವರು. ಅವರು ಬೆಳಗಾವಿಯ ನೇಕಾರರ ಸಮಸ್ಯೆಗಳನ್ನು ಬಗೆಹರಿಸುವುಕ್ಕಾಗಿ ಹೋರಾಟದಲ್ಲಿ ತೊಡಗಿಕೊಂಡಿದ್ದರು. ಹಾಗಾಗಿ ನೇಮಿಚಂದ್ರರವರಿಗೆ ಹೋರಾಟ ಚಿಕ್ಕಂದಿನಿಂದಲೇ ಆರಂಭವಾಗಿತ್ತು. ಬೆಂಗಳೂರಿನಲ್ಲಿ ಯಾವುದೇ ಜನಪರ ಹೋರಾಟ ನಡೆಯುತ್ತಿದ್ದಲ್ಲಿ ನೇಮಿಚಂದ್ರರವರಿರುತ್ತಿದ್ದರು.

ಎ.ಕೆ ಸುಬ್ಬಯ್ಯ, ಎಚ್.ಎಸ್ ದೊರೆಸ್ವಾಮಿಯವರ ಜೊತೆಗಿದ್ದು ಆರೈಕೆ ಮಾಡುತ್ತಲೇ ಅವರು ಕಾನೂನು ಪದವಿ ಅಭ್ಯಾಸ ಮಾಡುತ್ತಿದ್ದರು. ಆದರೆ ಕೋವಿಡ್ ದಾಳಿ ನಂತರ ಟಿಬಿ, ನ್ಯುಮೋನಿಯಾ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಅವರನ್ನು ಕಾಡಿದ್ದವು. ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಡಿಸೆಂಬರ್ 15ರ ಬುಧವಾರ ಕೊನೆಯುಸಿರೆಳೆದಿದ್ದಾರೆ.

ಕೇವಲ 27ನೇ ವಯಸ್ಸಿಗೆ ನೇಮಿಚಂದ್ರರವರು ಅಗಲಿರುವುದು ಅವರ ಅಪಾರ ಸ್ನೇಹಿತರು ಮತ್ತು ಸಾಮಾಜಿಕ ಕಾರ್ಯಕರ್ತರಿಗೆ ಆಘಾತ ತಂದಿದೆ. ಅವರನ್ನು ಕಳೆದುಕೊಂಡ ಸಾವಿರಾರು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಂಬನಿ ಮಿಡಿದಿದ್ದಾರೆ. ಅವರೊಂದಿಗೆ ಹೋರಾಟದ ಭಾವನಾತ್ಮಕ ನೆನಪುಗಳನ್ನು ಹಂಚಿಕೊಂಡು ದುಃಖ ತೋಡಿಕೊಂಡಿದ್ದಾರೆ.

ಇಂದು ಬೆಳಿಗ್ಗೆ 11 ಗಂಟೆಗೆ ಬೆಳಗಾವಿಯ ‘ಸದಾಶಿವ ನಗರದ ಸ್ಮಶಾನದಲ್ಲಿ’ ಗೌರವಾದರಗಳೊಂದಿಗೆ ನೇಮಿಚಂದ್ರರವರ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.


ಇದನ್ನೂ ಓದಿ: ಗೌರಿ ಲಂಕೇಶ್‌ ಕುರಿತು ಸಾಕ್ಷ್ಯಚಿತ್ರ ನಿರ್ಮಿಸುತ್ತಿರುವ ಕವಿತಾ ಲಂಕೇಶ್: ಮುಂದಿನ ತಿಂಗಳು ಬಿಡುಗಡೆ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...