Homeಚಳವಳಿಅಗಲಿದ ನೇಮಿಚಂದ್ರರವರಿಗೆ ಇಂದು ಅಂತಿಮ ವಿದಾಯ: ಕಂಬನಿ ಮಿಡಿದ ಒಡನಾಡಿಗಳು

ಅಗಲಿದ ನೇಮಿಚಂದ್ರರವರಿಗೆ ಇಂದು ಅಂತಿಮ ವಿದಾಯ: ಕಂಬನಿ ಮಿಡಿದ ಒಡನಾಡಿಗಳು

ಇಂದು ಬೆಳಿಗ್ಗೆ 11 ಗಂಟೆಗೆ ಬೆಳಗಾವಿಯ 'ಸದಾಶಿವ ನಗರದ ಸ್ಮಶಾನದಲ್ಲಿ' ಗೌರವಾದರಗಳೊಂದಿಗೆ ನೇಮಿಚಂದ್ರರವರ ಅಂತ್ಯಕ್ರಿಯೆ ನೆರವೇರಿಸಲಾಗುವುದು.

- Advertisement -
- Advertisement -

ಬುಧವಾರ ಅಗಲಿದೆ ಸಾಮಾಜಿಕ ಕಾರ್ಯಕರ್ತೆ, ಹಲವು ಜನಪರ ಚಳವಳಿಗಳ ಒಡನಾಡಿ ನೇಮಿಚಂದ್ರರವರ ಅಂತ್ಯಕ್ರಿಯೆ ಇಂದು ಬೆಳಗಾವಿಯಲ್ಲಿ ನಡೆಯಲಿದೆ. ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ, ಕರ್ನಾಟಕ ಜನಶಕ್ತಿ ಮತ್ತು ಕರ್ನಾಟಕ ವಿದ್ಯಾರ್ಥಿ ಸಂಘಟನೆ ಸೇರಿದಂತೆ ನೂರಾರು ಸಹ ಹೋರಾಟಗಾರರು, ಸ್ನೇಹಿತರು ಮತ್ತು ಕುಟುಂಬದವರು ಇಂದು ಅಂತಿಮ ವಿದಾಯ ಸಲ್ಲಿಸಲಿದ್ದಾರೆ.

ಮೂಲತಃ ಬೆಳಗಾವಿಯವರಾದ ನೇಮಿಚಂದ್ರ ಬೆಂಗಳೂರಿನಲ್ಲಿ ನೆಲೆಸಿದ್ದರು. ವಿದ್ಯಾರ್ಥಿ ದಿಸೆಯಲ್ಲಿಯೇ ಸಾಮಾಜಿಕ ಚಳವಳಿಗಳಲ್ಲಿ ತೊಡಗಿಸಿಕೊಂಡ ನೇಮಿಚಂದ್ರ ತನ್ನ ದಿಟ್ಟತೆ ಮತ್ತು ಜೋರು ದನಿಯಿಂದ ಹೆಸರುವಾಸಿಯಾದವರು. ಯಾವುದೇ ಮೆರವಣಿಗೆಯಲ್ಲಿ ಗಟ್ಟಿಯಾಗಿ ಕೇಳಿಬರುತ್ತಿದ್ದ ಅವರ ಘೋಷಣೆಗಳು ಎಲ್ಲರ ಗಮನ ಸೆಳೆಯುತ್ತಿದ್ದವು. ಉಡುಪಿ ಚಲೋ, ದಿಡ್ಡಳ್ಳಿ ಆದಿವಾಸಿಗಳ ಪರ ಹೋರಾಟ, ತುಮಕೂರು ಚಲೋ, ಗುಡಿಬಂಡೆ ಚಲೋ, ಕಾರಟಗಿ ಚಲೋ ಸೇರಿದಂತೆ ನೂರಾರು ಹೋರಾಟಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದ ಅವರು ತಮ್ಮ ಬದುಕಿನ ಬಹುತೇಕ ಸಮಯವನ್ನು ಶೋಷಿತರ ಪರ ಹೋರಾಟಕ್ಕೆ ಮೀಸಲಿಟ್ಟಿದ್ದರು.

ಅವರ ತಂದೆ, ತಾಯಿ ಮತ್ತು ಇಬ್ಬರು ಸಹೋದರಿಯರು ಸಹ ಚಳವಳಿಯಲ್ಲಿ ಗುರುತಿಸಿಕೊಂಡವರು. ಅವರು ಬೆಳಗಾವಿಯ ನೇಕಾರರ ಸಮಸ್ಯೆಗಳನ್ನು ಬಗೆಹರಿಸುವುಕ್ಕಾಗಿ ಹೋರಾಟದಲ್ಲಿ ತೊಡಗಿಕೊಂಡಿದ್ದರು. ಹಾಗಾಗಿ ನೇಮಿಚಂದ್ರರವರಿಗೆ ಹೋರಾಟ ಚಿಕ್ಕಂದಿನಿಂದಲೇ ಆರಂಭವಾಗಿತ್ತು. ಬೆಂಗಳೂರಿನಲ್ಲಿ ಯಾವುದೇ ಜನಪರ ಹೋರಾಟ ನಡೆಯುತ್ತಿದ್ದಲ್ಲಿ ನೇಮಿಚಂದ್ರರವರಿರುತ್ತಿದ್ದರು.

ಎ.ಕೆ ಸುಬ್ಬಯ್ಯ, ಎಚ್.ಎಸ್ ದೊರೆಸ್ವಾಮಿಯವರ ಜೊತೆಗಿದ್ದು ಆರೈಕೆ ಮಾಡುತ್ತಲೇ ಅವರು ಕಾನೂನು ಪದವಿ ಅಭ್ಯಾಸ ಮಾಡುತ್ತಿದ್ದರು. ಆದರೆ ಕೋವಿಡ್ ದಾಳಿ ನಂತರ ಟಿಬಿ, ನ್ಯುಮೋನಿಯಾ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಅವರನ್ನು ಕಾಡಿದ್ದವು. ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಡಿಸೆಂಬರ್ 15ರ ಬುಧವಾರ ಕೊನೆಯುಸಿರೆಳೆದಿದ್ದಾರೆ.

ಕೇವಲ 27ನೇ ವಯಸ್ಸಿಗೆ ನೇಮಿಚಂದ್ರರವರು ಅಗಲಿರುವುದು ಅವರ ಅಪಾರ ಸ್ನೇಹಿತರು ಮತ್ತು ಸಾಮಾಜಿಕ ಕಾರ್ಯಕರ್ತರಿಗೆ ಆಘಾತ ತಂದಿದೆ. ಅವರನ್ನು ಕಳೆದುಕೊಂಡ ಸಾವಿರಾರು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಂಬನಿ ಮಿಡಿದಿದ್ದಾರೆ. ಅವರೊಂದಿಗೆ ಹೋರಾಟದ ಭಾವನಾತ್ಮಕ ನೆನಪುಗಳನ್ನು ಹಂಚಿಕೊಂಡು ದುಃಖ ತೋಡಿಕೊಂಡಿದ್ದಾರೆ.

ಇಂದು ಬೆಳಿಗ್ಗೆ 11 ಗಂಟೆಗೆ ಬೆಳಗಾವಿಯ ‘ಸದಾಶಿವ ನಗರದ ಸ್ಮಶಾನದಲ್ಲಿ’ ಗೌರವಾದರಗಳೊಂದಿಗೆ ನೇಮಿಚಂದ್ರರವರ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.


ಇದನ್ನೂ ಓದಿ: ಗೌರಿ ಲಂಕೇಶ್‌ ಕುರಿತು ಸಾಕ್ಷ್ಯಚಿತ್ರ ನಿರ್ಮಿಸುತ್ತಿರುವ ಕವಿತಾ ಲಂಕೇಶ್: ಮುಂದಿನ ತಿಂಗಳು ಬಿಡುಗಡೆ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...