Homeಮುಖಪುಟ'ಭಾರತೀಯ' ಎಂದು ಘೋಷಿಸಲ್ಪಟ್ಟು ನಂತರ 'ವಿದೇಶಿ' ಎಂದು ಬಂಧಿಸಲ್ಪಟ್ಟ ಮಹಿಳೆಯ ಬಿಡುಗಡೆಗೆ ಗುವಾಹಟಿ ಹೈಕೋರ್ಟ್ ಆದೇಶ

‘ಭಾರತೀಯ’ ಎಂದು ಘೋಷಿಸಲ್ಪಟ್ಟು ನಂತರ ‘ವಿದೇಶಿ’ ಎಂದು ಬಂಧಿಸಲ್ಪಟ್ಟ ಮಹಿಳೆಯ ಬಿಡುಗಡೆಗೆ ಗುವಾಹಟಿ ಹೈಕೋರ್ಟ್ ಆದೇಶ

- Advertisement -
- Advertisement -

ವಿದೇಶಿಯರ ನ್ಯಾಯಮಂಡಳಿ (ಎಫ್‌ಟಿ)ಯು 2016 ರಲ್ಲಿ ‘ಭಾರತೀಯ’ ಎಂದು ಘೋಷಿಸಿ ನಂತರ, 2021 ರಲ್ಲಿ ‘ವಿದೇಶಿ’ ಎಂದು ಘೋಷಿಸಿದ್ದ 55 ವರ್ಷದ ಅಸ್ಸಾಂ ನಿವಾಸಿ ಹಸೀನಾ ಭಾನು ಅವರನ್ನು ಬಿಡುಗಡೆಗೊಳಿಸುವಂತೆ ಗುವಾಹಟಿ ಹೈಕೋರ್ಟ್‌ ಮಧ್ಯಪ್ರವೇಶಿಸಿ ಆದೇಶ ನೀಡಿದೆ.

ಹಸೀನಾ ಭಾನು, ಅಸ್ಸಾಂನ ದರ್ರಾಂಗ್ ನಿವಾಸಿಯಾಗಿದ್ದು, ಎಫ್‌ಟಿಯು ಅಕ್ಟೋಬರ್‌ ತಿಂಗಳಲ್ಲಿ ವಿದೇಶಿಯೆಂದು ಘೋಷಿಸಿತ್ತು. ಇದರ ನಂತರ ಅವರನ್ನು ತೇಜ್‌ಪುರ ಬಂಧನ ಶಿಬಿರದಲ್ಲಿ ಇರಿಸಲಾಗಿತ್ತು. ಈ ವೇಳೆ ಅವರು, 2016 ರಲ್ಲಿ ಎಫ್‌ಟಿಯು ತನ್ನನ್ನು ವಿದೇಶಿ ಅಥವಾ ಅಕ್ರಮ ವಲಸಿಗ ಅಲ್ಲ ಎಂದು ಘೋಷಿಸಿದ್ದನ್ನು ಉಲ್ಲೇಖಿಸಿ ನ್ಯಾಯಾಲಯದ ಮೊರೆ ಹೋಗಿದ್ದರು.

ಇದನ್ನೂ ಓದಿ:ಕಳೆದ 5 ವರ್ಷಗಳಲ್ಲಿ ಭಾರತದ ಪೌರತ್ವ ಪಡೆದವರಿಗಿಂತ ತ್ಯಜಿಸಿದವರು 56 ಪಟ್ಟು ಜಾಸ್ತಿ!

ಅಸ್ಸಾಂನ ಮಾಂಗ್ಲೋದೊಯ್‌‌ನಲ್ಲಿರುವ 1 ನೇ ಎಫ್‌ಟಿಯು 2016ರ ಆಗಸ್ಟ್ ತಿಂಗಳಲ್ಲಿ, “ಹಸೀನಾ ಭಾನು ವಿದೇಶಿ ಅಥವಾ ಅಕ್ರಮ ವಲಸಿಗ” ಅಲ್ಲ ಎಂದು ಘೋಷಿಸಿತ್ತು. ಆದಾಗ್ಯೂ, 2017ರಲ್ಲಿ ಆಕೆ ಬಾಂಗ್ಲಾದೇಶಿ ಪ್ರಜೆಯೆಂದು ಶಂಕಿಸಿ ಅಸ್ಸಾಂ ಬಾರ್ಡರ್ ಪೋಲೀಸರು ಉಲ್ಲೇಖಿಸಿದ ನಂತರ ಅದೇ ಎಫ್‌ಟಿಯಲ್ಲಿ ಆಕೆಯ ವಿರುದ್ಧ ಮತ್ತೊಂದು ಪ್ರಕರಣವನ್ನು ದಾಖಲಿಸಲಾಗಿತ್ತು.

2021 ಮಾರ್ಚ್‌ ತಿಂಗಳಲ್ಲಿ ನ್ಯಾಯಮಂಡಳಿಯು ಆಕೆಯನ್ನು “ವಿದೇಶಿ” ಎಂದು ಘೋಷಿಸುವ ಅಭಿಪ್ರಾಯವನ್ನು ಅಂಗೀಕರಿಸಿತ್ತು. ಇದರ ನಂತರ ಆಕೆಯನ್ನು ಬಂಧಿಸಿ ಅಕ್ಟೋಬರ್‌ನಲ್ಲಿ ತೇಜ್‌ಪುರ ಜೈಲಿನಲ್ಲಿ ಬಂಧನ ಶಿಬಿರದಲ್ಲಿ ಇರಿಸಲಾಗಿತ್ತು.

ಗುವಾಹತ್‌ ಹೈಕೋರ್ಟ್‌ ಸೋಮವಾರದಂದು ವಿದೇಶಿಯರ ನ್ಯಾಯಮಂಡಳಿಯ 2021 ರ ಅಭಿಪ್ರಾಯವನ್ನು ಬದಿಗಿಟ್ಟು, “ಎಫ್‌‌ಟಿಯ ಎರಡೂ ತೀರ್ಪುಗಳಲ್ಲಿ ಅರ್ಜಿದಾರರ ಗುರುತು ಒಂದೇ ಆಗಿರುತ್ತದೆ ಮತ್ತು ಒಂದೇ ವ್ಯಕ್ತಿಗೆ ಸಂಬಂಧಿಸಿದಂತೆ ಎರಡನೇ ಆಕ್ಷೇಪಾರ್ಹ ಅಭಿಪ್ರಾಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿದೆ.

ಇದನ್ನೂ ಓದಿ:ಮುಸ್ಲಿಮೇತರ ನಿರಾಶ್ರಿತರಿಂದ ಪೌರತ್ವಕ್ಕಾಗಿ ಅರ್ಜಿ ಆಹ್ವಾನಿಸಿದ ಕೇಂದ್ರ ಸರ್ಕಾರ

2019 ರ ಸುಪ್ರೀಂ ಕೋರ್ಟ್ ತೀರ್ಪನ್ನೂ ಉಲ್ಲೇಖಿಸಿದ [ಅಬ್ದುಲ್ ಕುದ್ದೂಸ್ Vs. ಯೂನಿಯನ್ ಆಫ್ ಇಂಡಿಯಾ, (2019) 6 SCC 604] ಹೈಕೋರ್ಟ್‌, “ರೆಸ್ ಜುಡಿಕಟ ತತ್ವವು ಒಮ್ಮೆ ತೀರ್ಪು ನೀಡಿದ ನಂತರ ಅದೇ ಜನರು ಅದೇ ಸಮಸ್ಯೆಯನ್ನು ಪುನಃ ತೆರೆಯುವುದನ್ನು ತಡೆಯುತ್ತದೆ. ಈ ತತ್ವ ವಿದೇಶಿಯರ ನ್ಯಾಯಮಂಡಳಿಯ ಮುಂದೆ ನಡೆಯುವ ಪ್ರಕ್ರಿಯೆಯಲ್ಲಿಯೂ ಸಹ ಅನ್ವಯಿಸುತ್ತದೆ” ಎಂದು ಹೇಳಿದೆ.

“ವಿದೇಶಿಯರ ನ್ಯಾಯಮಂಡಳಿಯು ಈ ವಿಷಯವನ್ನು ಹೇಗೆ ಪರಿಶೀಲಿಸಿತು ಮತ್ತು ಮೇಲೆ ಹೇಳಿದ ಅವಲೋಕನವನ್ನು ಹೇಗೆ ಮಾಡಿದೆ ಎಂಬುದನ್ನು ನಾವು ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ” ಎಂದು ಹೈಕೋರ್ಟ್‌ ನ್ಯಾಯಮೂರ್ತಿಗಳಾದ ಎನ್ ಕೋಟೀಶ್ವರ್ ಸಿಂಗ್ ಮತ್ತು ಮಾಲಾಶ್ರೀ ನಂದಿ ಅವರ ಪೀಠವು ಹೇಳಿದ್ದು, ಹೆಚ್ಚಿನ ದಾಖಲೆಗಳನ್ನು ಕೇಳದೆ ಅರ್ಜಿಯನ್ನು ವಿಲೇವಾರಿ ಮಾಡುವಂತೆ ಸೂಚಿಸಿದೆ.

ಸೋಮವಾರ ನ್ಯಾಯಾಲಯದ ನಿರ್ದೇಶನದ ನಂತರ ಹಸೀನಾ ಭಾನು ಅವರನ್ನು ಬಿಡುಗಡೆ ಆದೇಶವನ್ನು ಅನುಮೋದಿಸಿದ್ದಾಗಿ ದರ್ರಾಂಗ್ ಎಸ್ಪಿ ಸುಶಾಂತ ಬಿಸ್ವಾ ಶರ್ಮಾ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿ:ಕನ್ಹಯ್ಯ ಕುಮಾರ್ ಪೌರತ್ವ ರದ್ದುಗೊಳಿಸಿ ಎಂದ ಅರ್ಜಿದಾರನಿಗೆ 25 ಸಾವಿರ ದಂಡ!

ಹಸೀನಾ ಭಾನು ಅವರನ್ನು ಗುರುವಾರದಂದು ತೇಜ್‌ಪುರ ಜೈಲಿನಿಂದ (ದರ್ಂಗ್‌ನಿಂದ ಸುಮಾರು 100 ಕಿಮೀ ದೂರ) ಕರೆದುಕೊಂಡು ಹೋಗುವುದಾಗಿ ಕುಟುಂಬಸ್ಥರು ತಿಳಿಸಿದ್ದರು.

“ನಮಗೆ ಈಗ ಸಮಾಧಾನವಾಗಿದೆ. ಅವರನ್ನು ಈಗಾಗಲೇ 2016 ರಲ್ಲಿ ಭಾರತೀಯ ಎಂದು ಘೋಷಿಸಲಾಗಿತ್ತು. ಆದರೆ ಅದೇ ನ್ಯಾಯಾಲಯವು 2019 ರಲ್ಲಿ ಅವರ ಮೇಲೆ ಮತ್ತೊಂದು ವಿದೇಶಿ ಪ್ರಕರಣವನ್ನು ಹಾಕಿ…ನಮ್ಮನ್ನು ಓಡಾಡುವಂತೆ ಮಾಡಿತು. ಇದರಿಂದಾಗಿ ಸಾಕಷ್ಟು ಹಣವು ಖರ್ಚಾಗಿದ್ದು, ನಮಗೆ ಕಿರುಕುಳವು ಆಯಿತು. ನ್ಯಾಯ ನೀಡಿದ್ದಕ್ಕಾಗಿ ನಾವು ಗುವಾಹಟಿ ಹೈಕೋರ್ಟ್‌ಗೆ ಕೃತಜ್ಞರಾಗಿರುತ್ತೇವೆ” ಎಂದು ಹಸಿನಾ ಭಾನು ಅವರ ಸೋದರ ಅಕ್ರಂ ಹುಸೇನ್ ಹೇಳಿದ್ದಾರೆ.

“ಹಸೀನಾ ಭಾನು ಬಡ ರೈತ ಕುಟುಂಬಕ್ಕೆ ಸೇರಿದವರಾಗಿದ್ದು, ಅವರ ಎಲ್ಲಾ ದಾಖಲೆಗಳು ಕ್ರಮಬದ್ಧವಾಗಿವೆ” ಎಂದು ಹಸೀನಾ ಭಾನು ಅವರ ವಕೀಲ ಜಾಕಿರ್ ಹುಸೇನ್ ಹೇಳಿದ್ದಾರೆ.

ಅಸ್ಸಾಂನಲ್ಲಿ ಪೌರತ್ವ ಪ್ರಕರಣಗಳಲ್ಲಿ ಕೆಲಸ ಮಾಡುತ್ತಿರುವ ವಕೀಲಾಗಿರುವ ಜಾಕಿರ್‌ ಹುಸೇನ್‌, “ಈ ತೀರ್ಪು ಬಹಳ ಮಹತ್ವದ್ದಾಗಿದೆ. ಯಾಕೆಂದರೆ ವಿದೇಶಿಯರ ನ್ಯಾಯಮಂಡಳಿಗಳು ಈ ಹಿಂದೆ ‘ಭಾರತೀಯ’ ಎಂದು ಘೋಷಿಸಿದ ಅದೇ ವ್ಯಕ್ತಿಗಳ ವಿರುದ್ಧ ವಿಚಾರಣೆಯನ್ನು ಪ್ರಾರಂಭಿಸುವುದು ಸಾಮಾನ್ಯವಾಗಿದೆ. ಇದರ ವಿರುದ್ದ ಈ ತೀರ್ಪು ಉತ್ತಮ ನಿದರ್ಶನವಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ದೇಶ ವಿಭಜನೆ ಕಾಲದ ನಿರಾಶ್ರಿತರಿಗೆ ಪೌರತ್ವದ ಕುರಿತು ಸಂವಿಧಾನ ಸಭೆಯಲ್ಲಿ ಕಾವೇರಿದ ಚರ್ಚೆ: ಯುದ್ಧವಿನ್ನೂ ಮುಗಿದಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...