Homeಮುಖಪುಟತಾಳಿ, ರಾಖಿಗಳ ನಡುವೆ ಕಳೆದುಹೋಗುತ್ತವೆ ಹೆಣ್ಣಿನ ಘನತೆ ಮತ್ತು ಹಕ್ಕುಗಳು!

ತಾಳಿ, ರಾಖಿಗಳ ನಡುವೆ ಕಳೆದುಹೋಗುತ್ತವೆ ಹೆಣ್ಣಿನ ಘನತೆ ಮತ್ತು ಹಕ್ಕುಗಳು!

ಗುಜರಾತಿನಲ್ಲಿ ನೀರು ಕೇಳಿದ್ದಳೆಂದು ಶಾಸಕನೊಬ್ಬ ಮಹಿಳೆಯ ಮೇಲೆ ಅಮಾನವೀಯ ಥಳಿಸುವ ವಿಡಿಯೊ ವೈರಲ್ ಆಗಿತ್ತು. ಆದರೆ ಈಗ ಅದೇ ಮಹಿಳೆ ಆತನ ಕೈಗೆ ರಾಖೀ ಕಟ್ಟಿ ರಾಜೀ ಮಾಡಿಕೊಳ್ಳುವಂತೆ ಮಾಡಲಾಗಿದೆ. ಅಂದರೆ ಥಳಿಸಿದವೇ ರಕ್ಷಕನೆಂದು ಬಿಂಬಿಸುವ ಪರಿ ಏನನ್ನು ಸೂಚಿಸುತ್ತದೆ?

- Advertisement -
- Advertisement -

| ಮಲ್ಲಿಗೆ ಸಿರಿಮನೆ |

ಮಹಿಳೆಯರ ಮೇಲೆ ಅಥವಾ ಇನ್ನಿತರ ಶೋಷಿತರ ಮೇಲೆ ನಡೆಯುವ ದೌರ್ಜನ್ಯದ ಘಟನೆಗಳನ್ನು ಅನ್ಯಾಯದ ವಿರುದ್ಧದ ಹೋರಾಟದ ರೂಪ ಪಡೆಯದಂತೆ ತಡೆಯುವ ವಿಧಾನವನ್ನು ನಮ್ಮ ಶ್ರೇಣೀಕೃತ ಸಮಾಜ ವ್ಯವಸ್ಥೆ ಗಟ್ಟಿಯಾಗಿ ರೂಪಿಸಿಕೊಂಡಿದೆ. ತನ್ನ ಸ್ಥಾಪಿತ ಸಿದ್ಧ ಮಾದರಿಯೊಳಗೇ ಆ ದೌರ್ಜನ್ಯವನ್ನೂ ಅದಕ್ಕೆ ಬಲಿಯಾದವರನ್ನೂ ಸೆಳೆದುಕೊಂಡು, ಅರಗಿಸಿಕೊಂಡು ಏನೂ ಆಗಿಯೇ ಇಲ್ಲವೆಂಬಂತೆ ಯಥಾಸ್ಥಿತಿ ಕಾಪಾಡಿಕೊಳ್ಳುವ ತಂತ್ರಗಾರಿಕೆಯನ್ನು ರೂಢಿಸಿಕೊಂಡಿದೆ.

ಹೆಣ್ಣುಮಕ್ಕಳ ಮೇಲೆ ಯಾರಾದರೊಬ್ಬ ದುಷ್ಟ ಅತ್ಯಾಚಾರ ಎಸಗಿದರೆ, ಆತನ ಕೃತ್ಯವನ್ನು ಬಯಲಿಗೆಳೆದು ಶಿಕ್ಷಿಸುವ ಬದಲು, ಶೀಲ, ಮಾನ, ಮರ್ಯಾದೆಗಳ ಹೆಸರಿನಲ್ಲಿ ಆ ಹೆಣ್ಣುಮಗಳಿಗೆ ಆತನ ಕೈಯ್ಯಲ್ಲೇ ತಾಳಿ ಕಟ್ಟಿಸಲಾಗುತ್ತದೆ. ಆತನೋ, ತಾನೇನೋ ದೊಡ್ಡ ತ್ಯಾಗ ಮಾಡಿ ಆಕೆಗೆ ‘ಬಾಳು’ ಕೊಡುತ್ತಿದ್ದೇನೆಂಬ ಅಹಂನಲ್ಲಿ ತಾಳಿಕಟ್ಟುತ್ತಾನೆ. ಅಸಹನೀಯವಾದ ಕ್ರೌರ್ಯಕ್ಕೆ ತುತ್ತಾಗಿದ್ದು ಮಾತ್ರವಲ್ಲದೆ ಹೆಣ್ಣುಮಕ್ಕಳು ಜೀವನಪಯರ್ಂತ ಅದರ ನೆನಪು ಮತ್ತು ನೆರಳಿನಲ್ಲೇ ಕೊರಗುತ್ತಾ ಬದುಕು ಸವೆಸಬೇಕಾಗುತ್ತದೆ. ಆದರೆ, ಸಂಪ್ರದಾಯನಿಷ್ಠ ಮನಸ್ಥಿತಿ, ಕಟ್ಟುಪಾಡುಗಳ ಕಬಂಧ ಬಾಹುಗಳು ಎಷ್ಟು ಬಲವಾಗಿವೆಯೆಂದರೆ ಇದನ್ನು ವಿರೋಧಿಸುವ ಮಾನಸಿಕ ಸ್ಥೈರ್ಯವೂ ಮಹಿಳಾ ಸಮುದಾಯಕ್ಕೆ ದಕ್ಕುವುದು ಕಷ್ಟಸಾಧ್ಯ!

ಅತ್ಯಾಚಾರದ ಪ್ರಕರಣ ಅಲ್ಲದಿದ್ದರೂ, ಇಂತಹದ್ದೇ ಕಟ್ಟುಪಾಡಿನ ಕಪಿಮುಷ್ಠಿಯೊಳಕ್ಕೆ ಮಹಿಳಾ ಹಕ್ಕುಗಳನ್ನು ಸೆಳೆದುಕೊಳ್ಳುವಂತಹ ಘಟನೆಯೊಂದು ಗುಜರಾತ್‍ನಿಂದ ವರದಿಯಾಗಿದೆ. ಗುಜರಾತ್‍ನ ಅಹಮದಾಬಾದ್‍ನ ನರೋಡಾ ವಿಧಾನಸಭಾ ಕ್ಷೇತ್ರದ ಶಾಸಕ ಬಲರಾಮ್ ತವಾನಿ ಮತ್ತು ಆತನ ಸಹೋದರ ಅಲ್ಲಿನ ಕಾರ್ಪೊರೇಟರ್ ಕಿಶೋರ್ ತವಾನಿ ಇಬ್ಬರೂ ಸೇರಿ, ಸ್ಥಳೀಯ ಎನ್‍ಸಿಪಿ ನಾಯಕಿ ನೀತು ತೇಜ್ವಾನಿ ಮೇಲೆ ಸಾರ್ವಜನಿಕವಾಗಿ ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ; ಅಮಾನುಷವಾಗಿ ನೆಲಕ್ಕೆ ತಳ್ಳಿ ಒದ್ದು ಹಾಕಿ ಸ್ಟಿಕ್‍ಗಳಿಂದ ಥಳಿಸಿದ್ದಾರೆ; ಇದರ ಮೇಲೆ ಗಂಭೀರವಾದ ಕಾನೂನು ಕ್ರಮ ನಡೆಯಬೇಕಿತ್ತು; ಅದರ ಬದಲು ಪತ್ರಿಕಾ ಗೋಷ್ಠಿಯಲ್ಲಿ ನೀತು ತೇಜ್ವಾನಿ ಕೈಯ್ಯಲ್ಲಿ ಬಲರಾಮ್ ತವಾನಿಗೆ ‘ರಾಖಿ ಕಟ್ಟಿಸುವ’ ಮೂಲಕ ಪ್ರಕರಣಕ್ಕೆ ಅಂತ್ಯ ಹಾಡಲಾಗಿದೆ!! ಆ ಮೂಲಕ, ಆಕ್ರಮಣ ನಡೆಸಿದವನ ಕೈಗೇ ದಾಳಿಗೆ ತುತ್ತಾದವಳನ್ನು ‘ರಕ್ಷಿಸುವ ಜವಾಬ್ದಾರಿ’ ನೀಡಲಾಗಿದೆ!?

ನಡೆದದ್ದಿಷ್ಟು

ನರೋಡದ ಎನ್‍ಸಿಪಿ ನಾಯಕಿ ನೀತು ಅವರ ಮನೆಯ ಹತ್ತಿರ ಒಂದಷ್ಟು ಹೆಣ್ಣುಮಕ್ಕಳು ನೀರಿನ ಸಮಸ್ಯೆ ಹೇಳಿಕೊಂಡು ಬಂದಿದ್ದಾರೆ. ಹಲವು ದಿನಗಳಿಂದ ತಮ್ಮ ಮನೆಗಳಿಗೆ ನೀರಿನ ಸಂಪರ್ಕ ಕಡಿತಗೊಂಡಿದ್ದು, ನೀರಿನ ತೊಂದರೆ ತೀವ್ರವಾಗಿದೆಯೆಂದೂ, ಆ ಪ್ರದೇಶದ ಮಹಿಳಾ ನಾಯಕಿಯಾದ ನೀತು ಈ ಬಗ್ಗೆ ಏನಾದರೂ ಮಾಡಿ ಸಮಸ್ಯೆ ಪರಿಹರಿಸಬೇಕೆಂದೂ ಕೇಳಿದ್ದಾರೆ. ಅದಕ್ಕೆ ಸ್ಪಂದಿಸಿದ ನೀತು ತೆಜ್ವಾನಿಯವರು, ಸ್ಥಳೀಯ ಕಾರ್ಪೊರೇಟರ್ ಕಿಶೋರ್ ತವಾನಿಯನ್ನು ಭೇಟಿಯಾಗಿ ಸಮಸ್ಯೆ ಹೇಳಿಕೊಳ್ಳಲು ಈ ಹೆಣ್ಣುಮಕ್ಕಳನ್ನೂ ಕರೆದುಕೊಂಡು ಹೋಗಿದ್ದಾರೆ.

ನಿತು ತೇಜ್ವಾನಿ, ಚಿತ್ರ ಕೃಪೆ: ಎ.ಎನ್.ಐ

ಆದರೆ, ಸ್ಥಳೀಯ ಜನಪ್ರತಿನಿಧಿಯಾದ ಕಿಶೋರ್ ತವಾನಿ (ನರೋಡಾದ ಎಂಎಲ್‍ಎ ಬಲರಾಮ್ ತವಾನಿಯ ಸಹೋದರ), ಹೆಣ್ಣುಮಕ್ಕಳ ಮಾತನ್ನೂ ಪೂರ್ತಿ ಕೇಳದೆಯೇ ನೀತು ಅವರ ಮೇಲೆ ಹಲ್ಲೆ ನಡೆಸಿದ್ದಾನೆ. ಅತ್ಯಂತ ಅವಾಚ್ಯವಾಗಿ ನಿಂದಿಸುತ್ತಾ ಅಮಾನುಷವಾಗಿ ನೀತು, ಆಕೆಯ ಪತಿ ಮತ್ತು ಜೊತೆಗೆ ಬಂದಿದ್ದ ಮಹಿಳೆಯರ ಮೇಲೆ ದೈಹಿಕ ಹಲ್ಲೆ ನಡೆಸಿದ ಕಿಶೋರ್ ಮೇಲೆ ಇವರುಗಳು ಸ್ಥಳೀಯ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆದರೆ, ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ.

ಇದರಿಂದ ಆಕ್ರೋಶಗೊಂಡ ನೀತು ತೇಜ್ವಾನಿ ಮತ್ತು ಸಂಗಡಿಗರು, ಕಾರ್ಪೊರೇಟರ್‍ನ ಸಹೋದರನೇ ಆದ ಎಂಎಲ್‍ಎಯನ್ನು ಭೇಟಿಯಾಗಿ ನ್ಯಾಯ ಕೇಳಲಿಕ್ಕೆಂದು ಭಾನುವಾರ ಬೆಳಿಗ್ಗೆ ಸ್ಥಳೀಯ ಬಿಜೆಪಿ ಕಛೇರಿಗೆ ಹೋಗಿದ್ದಾರೆ. ಎಂಎಲ್‍ಎ ಇಲ್ಲದ್ದರಿಂದ ಕಾಯುತ್ತಿದ್ದಾಗ, ಕಛೇರಿಯಲ್ಲಿದ್ದ ಬಿಜೆಪಿ ಕಾರ್ಯಕರ್ತರ ಉದ್ಧಟ ನಡವಳಿಕೆಯಿಂದ ರೋಸಿ ಹೋಗಿ, ಕಿಶೋರ್ ವಿರುದ್ಧ ನೀತು ಮತ್ತು ಇತರ ಮಹಿಳೆಯರು ಘೋಷಣೆಗಳನ್ನು ಕೂಗಲಾರಂಭಿಸಿದ್ದಾರೆ.

ತಕ್ಷಣ ಸ್ಥಳಕ್ಕೆ ಬಂದ ಎಂಎಲ್‍ಎ ಬಲರಾಮ್ ಮತ್ತು ಆತನ ಸಂಗಡಿಗರು ಏಕಾಏಕಿ ನೀತು ಅವರ ಮುಖಕ್ಕೆ ಹೊಡೆದು ಅವರನ್ನು ನೆಲಕ್ಕೆ ಕೆಡವಿದ್ದಲ್ಲದೆ ಕಾಲಿನಿಂದ ಪದೇ ಪದೇ ಬಲವಾಗಿ ಒದ್ದಿದ್ದಾರೆ. ನಂತರ ಹಾಕಿ ಸ್ಟಿಕ್‍ಗಳನ್ನು ತರಿಸಿಕೊಂಡು ಕಾಲುಗಳನ್ನು ಥಳಿಸಿದ್ದಾರೆ. ಇವೆಲ್ಲವನ್ನೂ ನೀತು ಅವರ ಪತಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ಯಾವಾಗ ನೀತು ಅವರನ್ನು ಸ್ಟಿಕ್‍ಗಳಿಂದ ಥಳಿಸಲಾರಂಭಿಸಿದರೋ ಅವರನ್ನು ಬಿಡಿಸಿಕೊಳ್ಳಲೆಂದು ಮುನ್ನುಗ್ಗಿದ ಆಕೆಯ ಪತಿಯನ್ನು ಕೂಡಾ ಬಿಜೆಪಿ ಕಾರ್ಯಕರ್ತರು ಥಳಿಸಿದ್ದಾರೆ. ಈ ಬಗ್ಗೆ ನೀತು ಪೊಲೀಸ್ ಠಾಣೆಯಲ್ಲಿ ಎಂಎಲ್‍ಎ ಬಲರಾಮ್ ತವಾಣಿ ವಿರುದ್ಧ ದೂರು ದಾಖಲಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆದ ನಂತರ, ಪತ್ರಿಕಾ ಗೋಷ್ಠಿ ನಡೆಸಿದ ಶಾಸಕ ತವಾನಿ, ಮೊದಲಿಗೆ ತನ್ನನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸಿದ್ದಾನೆ, ಆದರೆ ನಂತರ ಇದು ಉದ್ವಿಗ್ನ ಮನಸ್ಥಿತಿಯಲ್ಲಿ ಆದ ಘಟನೆ, ಅದಕ್ಕಾಗಿ ಕ್ಷಮೆ ಕೋರುವುದಾಗಿಯೂ ಹೇಳಿದ್ದಾನೆ. ಅಂದರೆ, ತಾನು ಆಕ್ರಮಣ ನಡೆಸಿದ್ದು ನಿಜವೆಂದು ಮಾಧ್ಯಮಗಳ ಮುಂದೆಯೇ ಒಪ್ಪಿಕೊಂಡಿದ್ದಾನೆ. ಅಷ್ಟಾದರೂ ಗುಜರಾತಿನ ಕಾನೂನು ಪರಿಪಾಲಕರು ಕಣ್ಣು ಮುಚ್ಚಿಕೊಂಡು ಸುಮ್ಮನೆ ಕೂತಿದ್ದಾರೆ. ರಾಜ್ಯ ಬಿಜೆಪಿ ಮುಖಂಡರು ತಮ್ಮ ಪಕ್ಷದ ಶಾಸಕನ ಕೃತ್ಯವನ್ನು ಖಂಡಿಸುವ ಅನಿವಾರ್ಯತೆ ಬಂದಿದೆ. ಈ ಹಂತದಲ್ಲಿ ಆಘಾತಕಾರಿ ರೀತಿಯಲ್ಲಿ ತಕ್ಷಣದಲ್ಲೇ ಒಂದು ಸಾರ್ವಜನಿಕ ಸಭೆಯನ್ನು ಏರ್ಪಡಿಸಿದ ಶಾಸಕ, ಆ ಸಭೆಯಲ್ಲಿ ತನ್ನಿಂದ ಹಲ್ಲೆಗೊಳಗಾಗ ನೀತು ತವಾನಿಯ ಕೈಯಿಂದ ರಾಖಿ ಕಟ್ಟಿಸಿಕೊಳ್ಳುತ್ತಾನೆ ಮತ್ತು ಆಕೆ ತನ್ನ ಸಹೋದರಿಯಿದ್ದಂತೆ, ಆಕೆಯ ರಕ್ಷಣೆ ತನ್ನ ಹೊಣೆಯೆಂದು ಭಾಷಣ ಕೊಡುತ್ತಾನೆ!!!

ರಾಖೀ ಕಟ್ಟುತ್ತಿರುವ ದೃಶ್ಯ

ಅದೇ ರೀತಿ, ಅದೇ ದಿನ ಡೆಹ್ರಾಡೂನ್‍ನ ಅತ್ಯಾಚಾರಕ್ಕೊಳಗಾದ ದಲಿತ ಬಾಲಕಿಯ ವಿಚಾರದಲ್ಲೂ ಸಾರಾಸಗಟು ಕಾನೂನು ಉಲ್ಲಂಘನೆ ನಡೆದಿರುವುದು ಪತ್ರಿಕೆಯಲ್ಲಿ ವರದಿಯಾಗಿದೆ. ಮೇಲ್ಜಾತಿ ಗಂಡಸೊಬ್ಬನಿಂದ ಅತ್ಯಾಚಾರಕ್ಕೊಳಗಾಗಿದ್ದ, ಡೆಹ್ರಾಡೂನ್‍ನ ತೆಹರಿ ಜಿಲ್ಲೆಯ 9 ವರ್ಷದ ದಲಿತ ಬಾಲಕಿಯನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲು ಆರೋಪಿಯೂ ಇದ್ದ ಅದೇ ಪೊಲೀಸ್ ಜೀಪಿನಲ್ಲಿ ಪೊಲೀಸರು ಕರೆದೊಯ್ದಿದ್ದಾರೆ.

ಹೀಗೆ ಅಪ್ರಾಪ್ತ ಸಂತ್ರಸ್ತೆಯರನ್ನು ಆರೋಪಿಯ ಕೈಯಳತೆಗೆ ನಿಲುವುಕುವಂತೆ ಸಿಲುಕಿಸಬಾರದೆಂಬ ಸ್ಪಷ್ಟವಾದ ನಿರ್ದೇಶನಗಳನ್ನು ಮಕ್ಕಳ ರಕ್ಷಣೆಗಿರುವ ಪೊಕ್ಸೋ ಕಾಯ್ದೆ ನೀಡಿದೆಯಾದರೂ, ಎಲ್ಲ ನಿಯಮಗಳನ್ನೂ ಗಾಳಿಗೆ ತೂರಿ, ಪೊಲೀಸರೇ ಹೀಗೆ ನಡೆದುಕೊಳ್ಳುತ್ತಾರೆ. ಜೀಪಿನಲ್ಲಿ ಏನು ನಡೆಯಿತೋ ಗೊತ್ತಿಲ್ಲ. ಒಟ್ಟಿನಲ್ಲಿ ನ್ಯಾಯಾಧೀಶರ ಎದುರು ಹಾಜರುಪಡಿಸುವ ಹೊತ್ತಿಗೆ ತಮ್ಮ ಮಗಳು ಮಾನಸಿಕವಾಗಿ ಅತ್ಯಂತ ಕ್ಷೋಭೆಗೊಳಗಾಗಿದ್ದಳು, ಅದರಿಂದ ಆಕೆಗೆ ಸರಿಯಾಗಿ ಹೇಳಿಕೆ ದಾಖಲಿಸಲೂ ಸಾಧ್ಯವಾಗಲಿಲ್ಲ ಎಂದು ಸಂತ್ರಸ್ತೆಯ ಪೋಷಕರು ನೊಂದು ನುಡಿದಿದ್ದಾರೆ.

ಇದೆಲ್ಲವೂ, ಕಾನೂನಿನ ನೆರಳಿನಲ್ಲೇ ನಡೆದು ಮುಗಿದು ಹೋಗುತ್ತದೆ!? ದಾಳಿ ಮಾಡಿದವರು ನೊಂದವರ ರಕ್ಷಕರಾಗಿ ಪ್ರೊಮೋಷನ್ ದೊರಕಿಸಿಕೊಳ್ಳುವ ಈ ವ್ಯವಸ್ಥೆಯಲ್ಲಿ ಕಾನೂನುಗಳಿಗೆ ಅರ್ಥವಾದರೂ ಏನಿದೆ?
ದೌರ್ಜನ್ಯಕ್ಕೊಳಗಾದವರಿಗೆ ನ್ಯಾಯದ ಬದಲು, ತಮ್ಮನ್ನು ತುಳಿದವರಿಂದಲೇ ‘ತಾಳಿ ಭಾಗ್ಯ’ಗಳು, ‘ರಾಖಿ ಭಾಗ್ಯ’ಗಳು ದೊರಕಿಸಲ್ಪಡುವ ಈ ವ್ಯವಸ್ಥೆಗೆ ಒಂದು ಧಿಕ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...