Homeಕರ್ನಾಟಕರೈತ ಹೋರಾಟ ಮಾದರಿಯಲ್ಲೇ ಕಾರ್ಮಿಕ ಹೋರಾಟಕ್ಕೆ ವೇದಿಕೆ ಸಜ್ಜು!

ರೈತ ಹೋರಾಟ ಮಾದರಿಯಲ್ಲೇ ಕಾರ್ಮಿಕ ಹೋರಾಟಕ್ಕೆ ವೇದಿಕೆ ಸಜ್ಜು!

ಕಾರ್ಮಿಕ ಸಂಘಟನೆಗಳ ಒಕ್ಕೂಟದಿಂದ ಡಿಸೆಂಬರ್‌ 19ರ ಭಾನುವಾರದಂದು ಬೆಂಗಳೂರಿನ ಕೇಂದ್ರ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ ‘ಕಾರ್ಮಿಕರ ಬೃಹತ್‌ ಹಕ್ಕೊತ್ತಾಯ ರ್‍ಯಾಲಿ’ ನಡೆಯಲಿದೆ.

- Advertisement -
- Advertisement -

ರೈತ ಆಂದೋಲನದ ಮುಂದೆ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮಂಡಿಯೂರಿದ ಬೆನ್ನಿಗೆ ಪ್ರಬಲ ಕಾರ್ಮಿಕ ಆಂದೋಲನಕ್ಕೆ ವೇದಿಕೆ ಸಜ್ಜಾಗುತ್ತಿದೆ. ಕಾರ್ಮಿಕ ಸಂಘಟನೆಗಳ ಒಕ್ಕೂಟವಾದ, “ಕಾರ್ಮಿಕ ಹಕ್ಕುಗಳ ಹೋರಾಟ ಸಮಿತಿ(MASA)” ಅಡಿಯಲ್ಲಿ ಡಿಸೆಂಬರ್‌ 19ರ ಭಾನುವಾರದಂದು ಬೆಂಗಳೂರಿನ ಕೇಂದ್ರ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ “ಕಾರ್ಮಿಕರ ಬೃಹತ್‌ ಹಕ್ಕೊತ್ತಾಯ ರ್‍ಯಾಲಿ” ನಡೆಯಲಿದೆ.

“ಕ್ರೌರ್ಯಕ್ಕೆ ಕರುಣೆ ಎಂದು, ಸುಲಿಗೆಗೆ ಸುಧಾರಣೆ ಎಂದು, ದಮನ ದಬ್ಬಾಳಿಕೆಗಳಿಗೆ ದಯಾ ದಾಕ್ಷಿಣ್ಯವೆಂದು, ದೇಶ ಮಾರಾಟವನ್ನು ಅಪ್ಪಟ ದೇಶ ಪ್ರೇಮವೆಂದು ಬಿಂಬಿಸುವ ಮೋದಿ ಆಳ್ವಿಕೆಯಡಿ ನಾವಿದ್ದೇವೆ” ಎಂದು MASA ಹೇಳಿದ್ದು, ವಂಚಕ ಮತ್ತು ಕ್ರೂರ ಆಳುವ ವಿಧಾನ ಈ ದೇಶದ ಜನಸಾಮಾನ್ಯರನ್ನು ವಿಶೇಷವಾಗಿ ದುಡಿವ ಜನರ ಬದುಕನ್ನು ಅವನತಿಯ ಅಂಚಿಗೆ ತಂದು ನಿಲ್ಲಿಸಿದೆ ಎಂದು ಅದು ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ:ಬೆಂಗಳೂರು: ಕನಿಷ್ಠ ವೇತನಕ್ಕೆ ಆಗ್ರಹಿಸಿ ಪೌರಕಾರ್ಮಿಕರ ಬೃಹತ್ ಪ್ರತಿಭಟನೆ

“ಕೃಷಿರಂಗ ಮತ್ತು ರೈತಾಪಿ ವರ್ಗವನ್ನು ಕಾರ್ಪೊರೇಟ್‌ ಕೃಷಿ ಕಂಪನಿಗಳಿಗೆ ಬಲಿಕೊಡುವ ಉದ್ದೇಶದಿ೦ದ ತರಲಾಗಿದ್ದ ಮೂರು ಕೃಷಿ ಕಾಯಿದೆಗಳನ್ನು ಮೋದಿ ಸರ್ಕಾರ ಮಹಾನ್‌ ಕ್ರಾಂತಿ ತರಲಿರುವ ಕಲ್ಯಾಣ ಕಾಯಿದೆಗಳೆಂದು ಬಣಿಸಿತ್ತು. ಆದರೆ ದೇಶದ ರೈತರು ತಮ್ಮ ಅಚಲವಾದ ಧೀರ್ಫಕಾಲಿನ ಸಾಮೂಹಿಕ ಹೋರಾಟದಿಂದ ಈ ಕಾಯಿದೆಗಳ ಬಣ್ಣ ಬಯಲು ಮಾಡಿ ವಿಜಯಿಗಳಾಗಿದ್ದಾರೆ. ಈಗ ಅಂತಹದ್ದೆ ಅತೀ ದೊಡ್ಡ ಸವಾಲು ಭಾರತದ ಕಾರ್ಮಿಕ ವರ್ಗದ ಮುಂದಿದೆ” ಎಂದು MASA ಹೇಳಿದೆ.

“ಶತಮಾನದ ಹೋರಾಟಗಳ ಫಲವಾಗಿ ಬಂದಿದ್ದ 44 ಕೇಂದ್ರ ಕಾರ್ಮಿಕ ಕಾಯಿದೆಗಳನ್ನು ಕಿತ್ತುಹಾಕಿ 4 ಕಾರ್ಮಿಕ ಸಂಹಿತೆಗಳನ್ನು ಒಕ್ಕೂಟ ಸರಕಾರ ಜಾರಿಗೆ ತಂದಿದೆ. ಇಲ್ಲಿಯು ಕಾರ್ಮಿಕ ಕಲ್ಯಾಣದ ಘೋಷಣೆ ಮೊಳಗಿಸಲಾಗುತ್ತಿದೆ. ವಾಸ್ತವದಲ್ಲಿ ಕಾರ್ಮಿಕರಿಗಿದ್ದ ಸಂವಿಧಾನಿಕ ಹಕ್ಕುಗಳನ್ನೆಲ್ಲಾ ಕಸಿದುಕೊಳ್ಳುವ, ಕಾರ್ಮಿಕರು ಖಾಯಂ ಕೆಲಸದ ಬಗ್ಗೆ ವಿಚಾರ ಮಾಡುವುದೇ ಪ್ರಗತಿ ವಿರೋಧಿಯೆಂದು ಸಾರಿ, ‘ಉದ್ಯೋಗಿ-ಉದ್ಯೋಗದಾತ-ಸರ್ಕಾರ’ ಎಂಬ ತ್ರಿಪಕ್ಷೀಯ ಸಂಭಂದದಿಂದ ಸರ್ಕಾರ ನುಣುಚಿಕೊಂಡಿದೆ” ಎಂದು MASA ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ:ಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾಗೊಳಿಸಿದ ಬೆಂಗಳೂರಿನ ITI ಕಂಪೆನಿ: ಕಾರ್ಮಿಕರ ಆರೋಪ- ಪ್ರತಿಭಟನೆ

“ಒಟ್ಟಾರೆ ದೇಶದ 50 ಕೋಟಿ ಕಾರ್ಮಿಕರಿಗೆ ಅದರಲ್ಲೂ ಅಸಂಘಟಿತ ವಲಯದ ಕಾರ್ಮಿಕರ ದುಡಿಮೆಗೆ ಇದ್ದ ಕನಿಷ್ಠ ಕಾನೂನಿನ ಸಂರಕ್ಷಣೆಯನ್ನು ತೆಗೆದು ಹಾಕುವ ದುರುದ್ದೇಶ ಈ ಕಾರ್ಮಿಕ ಸಂಹಿತೆಗಳ ಹಿಂದೆ ಅಡಗಿದೆ. ಆದ್ದರಿಂದ ಕೃಷಿ ಕಾಯಿದೆಗಳನ್ನು ಹಿಂಪಡೆದಂತೆ 4 ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಲು ಒತ್ತಾಯಿಸಿ ದೇಶವ್ಯಾಪಿ ಪ್ರಬಲ ಕಾರ್ಮಿಕ ಆಂದೋಲನವನ್ನು ಕಟ್ಟಲು ‘ಕಾರ್ಮಿಕ ಹಕ್ಕುಗಳ ಹೋರಾಟ ಸಮಿತಿ’ (Mazoor Adhikar Sangharsha Abhiyan – MASA) ಮುಂದಾಗಿದೆ” ಎಂದು MASA ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಅಂಗೈ ತುಂಬದ ಅರ್ಧ ಕೂಲಿ ಹಾಗೂ ಮುಂಗೈಗೆ ನಿಲುಕದ ಜೀವನಾಗತ್ಯ ಪದಾರ್ಥಗಳ ಬೆಲೆ ಏರಿಕೆಯ ನಡುವೆ ಕಾರ್ಮಿಕರು ನಜ್ಜುಗುಜ್ಜಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ MASA, “ಕಾರ್ಮಿಕ ಕುಟುಂಬವೊಂದು ಬದುಕುಳಿಯಬೇಕಾದರೆ ಮಾಸಿಕ 25,000 ರೂ. ಕನಿಷ್ಠ ಕೂಲಿ ಬೇಕು. ಕಾಯಂ ಸ್ವರೂಪದ ಕೆಲಸವಿದ್ದಕಡೆ ಗುತ್ತಿಗೆ ಕಾರ್ಮಿಕ ಪದ್ಧತಿಯನ್ನು ರದ್ದಗೋಳಿಸಬೇಕು” ಎಂದು ಒತ್ತಾಯಿಸಿದೆ.

ಇದನ್ನೂ ಓದಿ:ಪತ್ರಕರ್ತೆ ಗೌರಿ ಲಂಕೇಶ್ ಹೆಸರಿನಲ್ಲಿ ವಲಸೆ ಕಾರ್ಮಿಕರಿಗೆ ಉಚಿತ ಆಂಬುಲೆನ್ಸ್ ಸೇವೆ

ಕಟ್ಟಡ, ಪೌರಸೇವೆ, ಪ್ಲಾಂಟೇಶನ್‌, ಗಣಿ, ಮನೆಗೆಲಸ ಸೇರಿದಂತೆ ಹಾಗೂ ಅತ್ಯಧಿಕ ಲಾಭ ತಂದುಕೊಡುವ ಸಾರ್ವಜನಿಕ ಉದ್ದಿಮೆಗಳಲ್ಲಿ ಕಾರ್ಮಿಕರಿಗೆ ಕನಿಷ್ಠ ದಿನಗೂಲಿ ಹಾಗೂ ಶಾಸನಬದ್ಧ ಹಕ್ಕುಗಳಾದ ಭವಿಷ್ಯನಿಧಿ, ನೌಕರರ ಸಾಮಾಜಿಕ ವಿಮೆ ಹಾಗೂ ಸಂರಕ್ಷಣೆ ನೀಡಬೇಕು ಎಂದು MASA ಆಗ್ರಹಿಸಿದೆ. ಜೊತೆಗೆ ವಲಸೆ ಕಾರ್ಮಿಕರು ಮತ್ತು ನೇಕಾರ ಕಾರ್ಮಿಕರಿಗೆ ಕಲ್ಯಾಣ ಮಂಡಳಿಗಳನ್ನು ರಚಿಸಬೇಕೆಂದು ಅದು ಒತ್ತಾಯಿಸಿದೆ.

ಭಾರತದ ಸಂವಿಧಾನದ ಅನ್ವಯ ಕೊಡಮಾಡಲಾದ ಕಾರ್ಮಿಕ ಹಕ್ಕುಗಳ ರಕ್ಷಣೆ ಹಾಗೂ ಅವುಗಳ ಅನುಷ್ಠಾನಕ್ಕೆ ಒತ್ತಾಯಿಸಿ ದೇಶದ ವಿವಿಧ ಕಡೆ ನಿರಂತರವಾದ ಹಾಗೂ ಹೋರಾಟವನ್ನು ಮುಂದುವರಿಸುವುದರ ಭಾಗವಾಗಿ ಡಿಸೆಂಬರ್‌ 19,2021 ರಂದು ಬೆಂಗಳೂರಿನಲ್ಲಿ ಸಮಾವೇಶವನ್ನು ಸಂಘಟಸಲಾಗುತ್ತಿದೆ ಎಂದು MASA ಹೇಳಿದೆ.

ಇದನ್ನೂ ಓದಿ: 2 ತಿಂಗಳಿನಿಂದ ವೇತನವಿಲ್ಲ: ಎಐಸಿಸಿಟಿಯು ನೇತೃತ್ವದಲ್ಲಿ ವಿಕ್ಟೋರಿಯಾ ಆಸ್ಪತ್ರೆ ಕಾರ್ಮಿಕರ ಪ್ರತಿಭಟನೆ

ಅಂದು ಬೆಳಿಗ್ಗೆ 1 ಘಂಟೆಗೆ ಬೆಂಗಳೂರು ರೈಲು ನಿಲ್ದಾಣದಿಂದ ಕಾರ್ಮಿಕರು ಮೆರವಣಿಗೆ ಮೂಲಕ ಸಾಗಿ ಫ್ರೀಡಂ ಪಾರ್ಕಿನಲ್ಲಿ ಅಧಿವೇಶನ ನಡೆಸಲಿದ್ದಾರೆ. ಈ ಬಹಿರಂಗ ಸಮಾವೇಶದಲ್ಲಿ ಪೌರ ಕಾರ್ಮಿಕರು, ನೀರು ಸರಬರಾಜು ಕಾರ್ಮಿಕರು, ಅನ್ನಭಾಗ್ಯ ಜಾರಿ ಮಾಡುವ ಹಮಾಲಿ ಕಾರ್ಮಿಕರು, ಕಟ್ಟಡ ಕಾರ್ಮಿಕರು, ವಲಸೆ ಕಾರ್ಮಿಕರು, ಗಣಿ ಕಾರ್ಮಿಕರು, ನೇಕಾರ ಕಾರ್ಮಿಕರು, ಮನೆಗೆಲಸ ಸೇರಿದಂತೆ ಇನ್ನು ಹಲವಾರು ಕ್ಷೇತ್ರಗಳ ಶ್ರಮಜೀವಿಗಳು ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು MASA ಹೇಳಿದೆ.

ಹಿರಿಯ ಹೈಕೋರ್ಟ್‌ ವಕೀಲರು ಹಾಗೂ ಕಾರ್ಮಿಕ ಮುಖಂಡರಾದ ಎಸ್‌ ಬಾಲನ್‌, ಟಯುಸಿಐನ ರಾಜ್ಯಾಧ್ಯಕ್ಷರಾಗಿರುವ ಆರ್‌. ಮಾನಸಯ್ಯ, ಶ್ರಮಿಕ ಶಕ್ತಿಯ ವರದರಾಜೇಂದ್ರ ಸೇರಿದಂತೆ ಹಲವು ಕಾರ್ಮಿಕ ಮುಖಂಡರು ಭಾಗವಹಿಸಲಿದ್ದು, ಪಶ್ಚಿಮ ಬಂಗಾಳದ ಕಾರ್ಮಿಕ ನೇತಾರರಾದ ಅಮಿತಾಬ್‌ ಬಟ್ಟಾಚಾರ್ಯ, ಮುಂಬೈಯ ಸಂಜಯ ಸಿಂಗ್ವಿ, ತೆಲಂಗಾಣದ ವೆಂಕಟೇಶ್ವರ ರಾವ್‌ ಸೇರಿದಂತೆ ಇನ್ನೂ ಹಲವು ಗಣ್ಯರು ಅಂದು ಸಮಾವೇಶವನ್ನು ಉದ್ದೇಶಿಸಿ ಮಾತಾಡಲಿದ್ದಾರೆ.

ಇದನ್ನೂ ಓದಿ:ಹೈದರಾಬಾದ್: ಪಿಯುಸಿಯಲ್ಲಿ 80% ಗಳಿಸಿದರೂ ಕಾಲೇಜು ಶುಲ್ಕ ಕಟ್ಟಲಾಗದೇ ಕೂಲಿ ಕಾರ್ಮಿಕಳಾದ ವಿದ್ಯಾರ್ಥಿನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...