Homeಕರ್ನಾಟಕರೈತ ಹೋರಾಟ ಮಾದರಿಯಲ್ಲೇ ಕಾರ್ಮಿಕ ಹೋರಾಟಕ್ಕೆ ವೇದಿಕೆ ಸಜ್ಜು!

ರೈತ ಹೋರಾಟ ಮಾದರಿಯಲ್ಲೇ ಕಾರ್ಮಿಕ ಹೋರಾಟಕ್ಕೆ ವೇದಿಕೆ ಸಜ್ಜು!

ಕಾರ್ಮಿಕ ಸಂಘಟನೆಗಳ ಒಕ್ಕೂಟದಿಂದ ಡಿಸೆಂಬರ್‌ 19ರ ಭಾನುವಾರದಂದು ಬೆಂಗಳೂರಿನ ಕೇಂದ್ರ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ ‘ಕಾರ್ಮಿಕರ ಬೃಹತ್‌ ಹಕ್ಕೊತ್ತಾಯ ರ್‍ಯಾಲಿ’ ನಡೆಯಲಿದೆ.

- Advertisement -
- Advertisement -

ರೈತ ಆಂದೋಲನದ ಮುಂದೆ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮಂಡಿಯೂರಿದ ಬೆನ್ನಿಗೆ ಪ್ರಬಲ ಕಾರ್ಮಿಕ ಆಂದೋಲನಕ್ಕೆ ವೇದಿಕೆ ಸಜ್ಜಾಗುತ್ತಿದೆ. ಕಾರ್ಮಿಕ ಸಂಘಟನೆಗಳ ಒಕ್ಕೂಟವಾದ, “ಕಾರ್ಮಿಕ ಹಕ್ಕುಗಳ ಹೋರಾಟ ಸಮಿತಿ(MASA)” ಅಡಿಯಲ್ಲಿ ಡಿಸೆಂಬರ್‌ 19ರ ಭಾನುವಾರದಂದು ಬೆಂಗಳೂರಿನ ಕೇಂದ್ರ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ “ಕಾರ್ಮಿಕರ ಬೃಹತ್‌ ಹಕ್ಕೊತ್ತಾಯ ರ್‍ಯಾಲಿ” ನಡೆಯಲಿದೆ.

“ಕ್ರೌರ್ಯಕ್ಕೆ ಕರುಣೆ ಎಂದು, ಸುಲಿಗೆಗೆ ಸುಧಾರಣೆ ಎಂದು, ದಮನ ದಬ್ಬಾಳಿಕೆಗಳಿಗೆ ದಯಾ ದಾಕ್ಷಿಣ್ಯವೆಂದು, ದೇಶ ಮಾರಾಟವನ್ನು ಅಪ್ಪಟ ದೇಶ ಪ್ರೇಮವೆಂದು ಬಿಂಬಿಸುವ ಮೋದಿ ಆಳ್ವಿಕೆಯಡಿ ನಾವಿದ್ದೇವೆ” ಎಂದು MASA ಹೇಳಿದ್ದು, ವಂಚಕ ಮತ್ತು ಕ್ರೂರ ಆಳುವ ವಿಧಾನ ಈ ದೇಶದ ಜನಸಾಮಾನ್ಯರನ್ನು ವಿಶೇಷವಾಗಿ ದುಡಿವ ಜನರ ಬದುಕನ್ನು ಅವನತಿಯ ಅಂಚಿಗೆ ತಂದು ನಿಲ್ಲಿಸಿದೆ ಎಂದು ಅದು ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ:ಬೆಂಗಳೂರು: ಕನಿಷ್ಠ ವೇತನಕ್ಕೆ ಆಗ್ರಹಿಸಿ ಪೌರಕಾರ್ಮಿಕರ ಬೃಹತ್ ಪ್ರತಿಭಟನೆ

“ಕೃಷಿರಂಗ ಮತ್ತು ರೈತಾಪಿ ವರ್ಗವನ್ನು ಕಾರ್ಪೊರೇಟ್‌ ಕೃಷಿ ಕಂಪನಿಗಳಿಗೆ ಬಲಿಕೊಡುವ ಉದ್ದೇಶದಿ೦ದ ತರಲಾಗಿದ್ದ ಮೂರು ಕೃಷಿ ಕಾಯಿದೆಗಳನ್ನು ಮೋದಿ ಸರ್ಕಾರ ಮಹಾನ್‌ ಕ್ರಾಂತಿ ತರಲಿರುವ ಕಲ್ಯಾಣ ಕಾಯಿದೆಗಳೆಂದು ಬಣಿಸಿತ್ತು. ಆದರೆ ದೇಶದ ರೈತರು ತಮ್ಮ ಅಚಲವಾದ ಧೀರ್ಫಕಾಲಿನ ಸಾಮೂಹಿಕ ಹೋರಾಟದಿಂದ ಈ ಕಾಯಿದೆಗಳ ಬಣ್ಣ ಬಯಲು ಮಾಡಿ ವಿಜಯಿಗಳಾಗಿದ್ದಾರೆ. ಈಗ ಅಂತಹದ್ದೆ ಅತೀ ದೊಡ್ಡ ಸವಾಲು ಭಾರತದ ಕಾರ್ಮಿಕ ವರ್ಗದ ಮುಂದಿದೆ” ಎಂದು MASA ಹೇಳಿದೆ.

“ಶತಮಾನದ ಹೋರಾಟಗಳ ಫಲವಾಗಿ ಬಂದಿದ್ದ 44 ಕೇಂದ್ರ ಕಾರ್ಮಿಕ ಕಾಯಿದೆಗಳನ್ನು ಕಿತ್ತುಹಾಕಿ 4 ಕಾರ್ಮಿಕ ಸಂಹಿತೆಗಳನ್ನು ಒಕ್ಕೂಟ ಸರಕಾರ ಜಾರಿಗೆ ತಂದಿದೆ. ಇಲ್ಲಿಯು ಕಾರ್ಮಿಕ ಕಲ್ಯಾಣದ ಘೋಷಣೆ ಮೊಳಗಿಸಲಾಗುತ್ತಿದೆ. ವಾಸ್ತವದಲ್ಲಿ ಕಾರ್ಮಿಕರಿಗಿದ್ದ ಸಂವಿಧಾನಿಕ ಹಕ್ಕುಗಳನ್ನೆಲ್ಲಾ ಕಸಿದುಕೊಳ್ಳುವ, ಕಾರ್ಮಿಕರು ಖಾಯಂ ಕೆಲಸದ ಬಗ್ಗೆ ವಿಚಾರ ಮಾಡುವುದೇ ಪ್ರಗತಿ ವಿರೋಧಿಯೆಂದು ಸಾರಿ, ‘ಉದ್ಯೋಗಿ-ಉದ್ಯೋಗದಾತ-ಸರ್ಕಾರ’ ಎಂಬ ತ್ರಿಪಕ್ಷೀಯ ಸಂಭಂದದಿಂದ ಸರ್ಕಾರ ನುಣುಚಿಕೊಂಡಿದೆ” ಎಂದು MASA ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ:ಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾಗೊಳಿಸಿದ ಬೆಂಗಳೂರಿನ ITI ಕಂಪೆನಿ: ಕಾರ್ಮಿಕರ ಆರೋಪ- ಪ್ರತಿಭಟನೆ

“ಒಟ್ಟಾರೆ ದೇಶದ 50 ಕೋಟಿ ಕಾರ್ಮಿಕರಿಗೆ ಅದರಲ್ಲೂ ಅಸಂಘಟಿತ ವಲಯದ ಕಾರ್ಮಿಕರ ದುಡಿಮೆಗೆ ಇದ್ದ ಕನಿಷ್ಠ ಕಾನೂನಿನ ಸಂರಕ್ಷಣೆಯನ್ನು ತೆಗೆದು ಹಾಕುವ ದುರುದ್ದೇಶ ಈ ಕಾರ್ಮಿಕ ಸಂಹಿತೆಗಳ ಹಿಂದೆ ಅಡಗಿದೆ. ಆದ್ದರಿಂದ ಕೃಷಿ ಕಾಯಿದೆಗಳನ್ನು ಹಿಂಪಡೆದಂತೆ 4 ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಲು ಒತ್ತಾಯಿಸಿ ದೇಶವ್ಯಾಪಿ ಪ್ರಬಲ ಕಾರ್ಮಿಕ ಆಂದೋಲನವನ್ನು ಕಟ್ಟಲು ‘ಕಾರ್ಮಿಕ ಹಕ್ಕುಗಳ ಹೋರಾಟ ಸಮಿತಿ’ (Mazoor Adhikar Sangharsha Abhiyan – MASA) ಮುಂದಾಗಿದೆ” ಎಂದು MASA ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಅಂಗೈ ತುಂಬದ ಅರ್ಧ ಕೂಲಿ ಹಾಗೂ ಮುಂಗೈಗೆ ನಿಲುಕದ ಜೀವನಾಗತ್ಯ ಪದಾರ್ಥಗಳ ಬೆಲೆ ಏರಿಕೆಯ ನಡುವೆ ಕಾರ್ಮಿಕರು ನಜ್ಜುಗುಜ್ಜಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ MASA, “ಕಾರ್ಮಿಕ ಕುಟುಂಬವೊಂದು ಬದುಕುಳಿಯಬೇಕಾದರೆ ಮಾಸಿಕ 25,000 ರೂ. ಕನಿಷ್ಠ ಕೂಲಿ ಬೇಕು. ಕಾಯಂ ಸ್ವರೂಪದ ಕೆಲಸವಿದ್ದಕಡೆ ಗುತ್ತಿಗೆ ಕಾರ್ಮಿಕ ಪದ್ಧತಿಯನ್ನು ರದ್ದಗೋಳಿಸಬೇಕು” ಎಂದು ಒತ್ತಾಯಿಸಿದೆ.

ಇದನ್ನೂ ಓದಿ:ಪತ್ರಕರ್ತೆ ಗೌರಿ ಲಂಕೇಶ್ ಹೆಸರಿನಲ್ಲಿ ವಲಸೆ ಕಾರ್ಮಿಕರಿಗೆ ಉಚಿತ ಆಂಬುಲೆನ್ಸ್ ಸೇವೆ

ಕಟ್ಟಡ, ಪೌರಸೇವೆ, ಪ್ಲಾಂಟೇಶನ್‌, ಗಣಿ, ಮನೆಗೆಲಸ ಸೇರಿದಂತೆ ಹಾಗೂ ಅತ್ಯಧಿಕ ಲಾಭ ತಂದುಕೊಡುವ ಸಾರ್ವಜನಿಕ ಉದ್ದಿಮೆಗಳಲ್ಲಿ ಕಾರ್ಮಿಕರಿಗೆ ಕನಿಷ್ಠ ದಿನಗೂಲಿ ಹಾಗೂ ಶಾಸನಬದ್ಧ ಹಕ್ಕುಗಳಾದ ಭವಿಷ್ಯನಿಧಿ, ನೌಕರರ ಸಾಮಾಜಿಕ ವಿಮೆ ಹಾಗೂ ಸಂರಕ್ಷಣೆ ನೀಡಬೇಕು ಎಂದು MASA ಆಗ್ರಹಿಸಿದೆ. ಜೊತೆಗೆ ವಲಸೆ ಕಾರ್ಮಿಕರು ಮತ್ತು ನೇಕಾರ ಕಾರ್ಮಿಕರಿಗೆ ಕಲ್ಯಾಣ ಮಂಡಳಿಗಳನ್ನು ರಚಿಸಬೇಕೆಂದು ಅದು ಒತ್ತಾಯಿಸಿದೆ.

ಭಾರತದ ಸಂವಿಧಾನದ ಅನ್ವಯ ಕೊಡಮಾಡಲಾದ ಕಾರ್ಮಿಕ ಹಕ್ಕುಗಳ ರಕ್ಷಣೆ ಹಾಗೂ ಅವುಗಳ ಅನುಷ್ಠಾನಕ್ಕೆ ಒತ್ತಾಯಿಸಿ ದೇಶದ ವಿವಿಧ ಕಡೆ ನಿರಂತರವಾದ ಹಾಗೂ ಹೋರಾಟವನ್ನು ಮುಂದುವರಿಸುವುದರ ಭಾಗವಾಗಿ ಡಿಸೆಂಬರ್‌ 19,2021 ರಂದು ಬೆಂಗಳೂರಿನಲ್ಲಿ ಸಮಾವೇಶವನ್ನು ಸಂಘಟಸಲಾಗುತ್ತಿದೆ ಎಂದು MASA ಹೇಳಿದೆ.

ಇದನ್ನೂ ಓದಿ: 2 ತಿಂಗಳಿನಿಂದ ವೇತನವಿಲ್ಲ: ಎಐಸಿಸಿಟಿಯು ನೇತೃತ್ವದಲ್ಲಿ ವಿಕ್ಟೋರಿಯಾ ಆಸ್ಪತ್ರೆ ಕಾರ್ಮಿಕರ ಪ್ರತಿಭಟನೆ

ಅಂದು ಬೆಳಿಗ್ಗೆ 1 ಘಂಟೆಗೆ ಬೆಂಗಳೂರು ರೈಲು ನಿಲ್ದಾಣದಿಂದ ಕಾರ್ಮಿಕರು ಮೆರವಣಿಗೆ ಮೂಲಕ ಸಾಗಿ ಫ್ರೀಡಂ ಪಾರ್ಕಿನಲ್ಲಿ ಅಧಿವೇಶನ ನಡೆಸಲಿದ್ದಾರೆ. ಈ ಬಹಿರಂಗ ಸಮಾವೇಶದಲ್ಲಿ ಪೌರ ಕಾರ್ಮಿಕರು, ನೀರು ಸರಬರಾಜು ಕಾರ್ಮಿಕರು, ಅನ್ನಭಾಗ್ಯ ಜಾರಿ ಮಾಡುವ ಹಮಾಲಿ ಕಾರ್ಮಿಕರು, ಕಟ್ಟಡ ಕಾರ್ಮಿಕರು, ವಲಸೆ ಕಾರ್ಮಿಕರು, ಗಣಿ ಕಾರ್ಮಿಕರು, ನೇಕಾರ ಕಾರ್ಮಿಕರು, ಮನೆಗೆಲಸ ಸೇರಿದಂತೆ ಇನ್ನು ಹಲವಾರು ಕ್ಷೇತ್ರಗಳ ಶ್ರಮಜೀವಿಗಳು ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು MASA ಹೇಳಿದೆ.

ಹಿರಿಯ ಹೈಕೋರ್ಟ್‌ ವಕೀಲರು ಹಾಗೂ ಕಾರ್ಮಿಕ ಮುಖಂಡರಾದ ಎಸ್‌ ಬಾಲನ್‌, ಟಯುಸಿಐನ ರಾಜ್ಯಾಧ್ಯಕ್ಷರಾಗಿರುವ ಆರ್‌. ಮಾನಸಯ್ಯ, ಶ್ರಮಿಕ ಶಕ್ತಿಯ ವರದರಾಜೇಂದ್ರ ಸೇರಿದಂತೆ ಹಲವು ಕಾರ್ಮಿಕ ಮುಖಂಡರು ಭಾಗವಹಿಸಲಿದ್ದು, ಪಶ್ಚಿಮ ಬಂಗಾಳದ ಕಾರ್ಮಿಕ ನೇತಾರರಾದ ಅಮಿತಾಬ್‌ ಬಟ್ಟಾಚಾರ್ಯ, ಮುಂಬೈಯ ಸಂಜಯ ಸಿಂಗ್ವಿ, ತೆಲಂಗಾಣದ ವೆಂಕಟೇಶ್ವರ ರಾವ್‌ ಸೇರಿದಂತೆ ಇನ್ನೂ ಹಲವು ಗಣ್ಯರು ಅಂದು ಸಮಾವೇಶವನ್ನು ಉದ್ದೇಶಿಸಿ ಮಾತಾಡಲಿದ್ದಾರೆ.

ಇದನ್ನೂ ಓದಿ:ಹೈದರಾಬಾದ್: ಪಿಯುಸಿಯಲ್ಲಿ 80% ಗಳಿಸಿದರೂ ಕಾಲೇಜು ಶುಲ್ಕ ಕಟ್ಟಲಾಗದೇ ಕೂಲಿ ಕಾರ್ಮಿಕಳಾದ ವಿದ್ಯಾರ್ಥಿನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...