Homeಅಂತರಾಷ್ಟ್ರೀಯಪ್ರಖರ ಸ್ತ್ರೀವಾದಿ ಬೆಲ್‌ ಹುಕ್ಸ್‌‌ (69) ನಿಧನ

ಪ್ರಖರ ಸ್ತ್ರೀವಾದಿ ಬೆಲ್‌ ಹುಕ್ಸ್‌‌ (69) ನಿಧನ

- Advertisement -
- Advertisement -

ವಿಶ್ವದ ಜನಪ್ರಿಯ ಸ್ತ್ರೀವಾದಿ ಲೇಖಕಿ ಬೆಲ್ ಹುಕ್ಸ್‌ ಅವರು ಬುಧವಾರದಂದು ತನ್ನ 69 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ತಮ್ಮ ಬರಹಗಳಲ್ಲಿ ಲಿಂಗ, ಜನಾಂಗ ಮತ್ತು ವರ್ಗ ಚಿಂತನೆಗಳಲ್ಲಿ ಹೊಸ ಮಾರ್ಗಗಳನ್ನು ಹುಟ್ಟುಹಾಕಿದ್ದರು.

ಗ್ಲೋರಿಯಾ ಜೀನ್ ವಾಟ್ಕಿನ್ಸ್‌ನಲ್ಲಿ 1952 ರಲ್ಲಿ ಜನಿಸಿದ ಬೆಲ್‌‌ ಹುಕ್ಸ್ ಬುಧವಾರ ಮುಂಜಾನೆ ಅಮೆರಿಕಾದ ಕೆಂಟುಕಿಯ ತನ್ನ ಮನೆಯಲ್ಲಿ ನಿಧನರಾಗಿದ್ದಾರೆ. ಈ ಬಗ್ಗೆ ಅವರ ಸೋದರ ಸೊಸೆ ಎಬೊನಿ ಮೋಟ್ಲಿ ಟ್ವಿಟರ್‌ನಲ್ಲಿ ಬರೆದಿದ್ದಾರೆ.

ತನ್ನ ಮುತ್ತಜ್ಜಿ ಬೆಲ್ ಬ್ಲೇರ್ ಹುಕ್ಸ್ ಅವರ ಗೌರವಾರ್ಥವಾಗಿ ‘ಬೆಲ್ ಹುಕ್ಸ್‌‌’ ಎಂಬ ಕಾವ್ಯನಾಮಗಳನ್ನು ಬಳಸಿ ಬರೆಯುತ್ತಿದ್ದ ಅವರು 1978 ರಲ್ಲಿ “ಅಂಡ್ ದೇರ್ ವಿ ವೆಪ್ಟ್” ಕವನಗಳ ಮೊದಲ ಪುಸ್ತಕವನ್ನು ಪ್ರಕಟಿಸಿದ್ದರು.

ಇದನ್ನೂ ಓದಿ:ಬೆಲ್‌ಹುಕ್ಸ್- ಸ್ತ್ರೀವಾದ: ಅಂಚಿನಿಂದ ಕೇಂದ್ರದೆಡೆಗೆ; ಒಪ್ಪಿತ ಮಾದರಿಯನ್ನು ಪ್ರಶ್ನಿಸಿ ಹೊಸ ಸ್ತ್ರೀವಾದಕ್ಕೆ ಅಣಿಗೊಳಿಸುವ ಚಿಂತನೆ

ಅವರು 1981 ರಲ್ಲಿ “ಆಯ್‌ನ್ಟ್‌‌ ಐ ಎ ವುಮನ್? ಬ್ಲ್ಯಾಕ್ ವುಮೆನ್ ಆಂಡ್‌ ಫೆಮಿನಿಸಂ” ಪುಸ್ತಕಕ್ಕಾಗಿ ಭಾರಿ ಮೆಚ್ಚುಗೆಯನ್ನು ಪಡೆದರು. ಈ ಪುಸ್ತಕದಲ್ಲಿ ಅವರು ಕಪ್ಪು ಮಹಿಳೆಯರ ಮೇಲೆ ಲಿಂಗಭೇದಭಾವ ಮತ್ತು ವರ್ಣಭೇದ ನೀತಿಯ ಪ್ರಭಾವವನ್ನು ಪರಿಶೀಲಿಸಿದ್ದರು. ಜೊತೆಗೆ ಸ್ತ್ರೀವಾದದೊಳಗಿನ ವರ್ಣಭೇದ ನೀತಿಯ ಬಗ್ಗೆ ಚರ್ಚಿಸಿದ್ದರು.

ಅವರು ಕವನ, ಮಕ್ಕಳ ಕಾದಂಬರಿ, ಆತ್ಮಚರಿತ್ರೆ ಮತ್ತು ಸಾಹಿತ್ಯ ವಿಮರ್ಶೆ ಸೇರಿದಂತೆ ಸುಮಾರು 40 ಕೃತಿಗಳನ್ನು ಪ್ರಕಟಿಸಿದ್ದಾರೆ. ಸ್ತ್ರೀವಾದ, ವರ್ಣಭೇದ ನೀತಿ ಮತ್ತು ಇತರ ಸಾಮಾಜಿಕ ನ್ಯಾಯದ ಸಮಸ್ಯೆಗಳ ಬಗ್ಗೆ ಅವರು ತಮ್ಮ ಕೃತಿಗಳಲ್ಲಿ ಚರ್ಚಿಸಿದ್ದಾರೆ.

ವಿಶ್ವದ ಹಲವು ಪ್ರಸಿದ್ದ ಸಾಹಿತಿಗಳು ಅವರ ನಿಧನಕ್ಕೆ ಕಂಬನಿ ಮಿಡಿದಿದ್ದರೆ.

ಅವರ ‘ಫೆಮಿನಿಸಂ ಇಸ್ ಫಾರ್ ಎವೆರಿಬಡಿ: ಪ್ಯಾಶನೇಟ್ ಪಾಲಿಟಿಕ್ಸ್’ (2000) ಎಂಬ ಮಹತ್ವದ ಕೃತಿಯನ್ನು ಕನ್ನಡ ಸ್ತ್ರೀವಾದಿ ಲೇಖಕಿ ಎಚ್‌.ಎಸ್‌‌. ಶ್ರೀಮತಿ ಅವರು ‘ಎಲ್ಲರಿಗಾಗಿ ಸ್ತ್ರೀವಾದ’ ಎಂಬ ಹೆಸರಿನಲ್ಲಿ ಅನುವಾದಿಸಿದ್ದಾರೆ.

ಇದನ್ನೂ ಓದಿ: ದೌರ್ಜನ್ಯವನ್ನು ಕೊನೆಗಾಣಿಸಲು ಸ್ತ್ರೀವಾದೀ ಚಳುವಳಿ “ಸ್ತ್ರೀವಾದ: ಅಂಚಿನಿಂದ ಕೇಂದ್ರದೆಡೆಗೆ” ಪುಸ್ತಕದ ಅಧ್ಯಾಯವೊಂದರ ಆಯ್ದ ಭಾಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...