Homeಮುಖಪುಟಲಿಂಗ ಸಮಾನತೆಯತ್ತ ಹೆಜ್ಜೆ: ಕೇರಳದ ಶಾಲೆಯಲ್ಲಿ ಹೆಣ್ಣು-ಗಂಡು ಮಕ್ಕಳೆಲ್ಲರಿಗೂ ಒಂದೇ ಥರದ ಸಮವಸ್ತ್ರ

ಲಿಂಗ ಸಮಾನತೆಯತ್ತ ಹೆಜ್ಜೆ: ಕೇರಳದ ಶಾಲೆಯಲ್ಲಿ ಹೆಣ್ಣು-ಗಂಡು ಮಕ್ಕಳೆಲ್ಲರಿಗೂ ಒಂದೇ ಥರದ ಸಮವಸ್ತ್ರ

- Advertisement -
- Advertisement -

ಕೇರಳದ ಕೋಳಿಕ್ಕೋಡ್‌ನ ಬಲುಸ್ಸೆರಿಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯು (ಜಿಎಚ್‌ಎಸ್‌ಎಸ್) ಲಿಂಗ ಸಮಾನತೆಯತ್ತ ಹೆಜ್ಜೆ ಹಾಕಿದ್ದು, ತನ್ನ 11 ನೇ ತರಗತಿ ವಿದ್ಯಾರ್ಥಿಗಳಿಗೆ ಬುಧವಾರ ಲಿಂಗ-ತಟಸ್ಥ (ಹೆಣ್ಣು-ಗಂಡು ಮಕ್ಕಳೆಲ್ಲರಿಗೂ ಒಂದೇ ಥರದ) ಸಮವಸ್ತ್ರವನ್ನು ಅಳವಡಿಸಿಕೊಂಡು ಗಮನ ಸೆಳೆದಿದೆ.

ಬಲುಸ್ಸೆರಿಯ ಶಾಲೆಯಲ್ಲಿ 11 ನೇ ತರಗತಿಯ 200 ಹುಡುಗಿಯರು ಮತ್ತು 60 ಹುಡುಗರು ನೀಲಿ ಪ್ಯಾಂಟ್ ಮತ್ತು ಗೆರೆಗಳುಳ್ಳ ಬಿಳಿ ಶರ್ಟ್‌ ಅನ್ನು ಇನ್ನು ಮುಂದೆ ಹೊಸ ಡ್ರೆಸ್ ಕೋಡ್ ಆಗಿ ಬಳಸಲಿದ್ದಾರೆ.

ಹೆಣ್ಣು ಮತ್ತು ಗಂಡು ಮಕ್ಕಳಿಗೆ ಸಮಾನವಾದ ಸ್ವಾತಂತ್ರ್ಯವನ್ನು ಖಾತ್ರಿಪಡಿಸಲು ಪರಿಚಯಿಸಲಾದ ಹೊಸ ಸಮವಸ್ತ್ರವನ್ನು ಧರಿಸಲು ಶಾಲೆಯ ಯಾವುದೇ ವಿದ್ಯಾರ್ಥಿಗಳಿಗೆ ಒತ್ತಾಯಿಸುವುದಿಲ್ಲ. ವಿದ್ಯಾರ್ಥಿಗಳು ಮುಸುಕು ಅಥವಾ ಸ್ಕಾರ್ಫ್ ಬಳಸಲು ಮುಕ್ತರಾಗಿದ್ದಾರೆ ಎಂದು ಶಾಲೆಯ ದೈಹಿಕ ಶಿಕ್ಷಕರು ತಿಳಿಸಿದ್ದಾರೆ.

ಸರ್ಕಾರಿ ವಲಯದ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಇದೇ ಮೊದಲ ಬಾರಿಗೆ ಬಾಲಕಿಯರು ಮತ್ತು ಬಾಲಕಿಯರಿಗೆ ಸಾಮಾನ್ಯ ಸಮವಸ್ತ್ರವನ್ನು ಜಾರಿಗೊಳಿಸಲಾಗಿದೆ. ರಾಜ್ಯದ ಇತರೆಡೆಗಳಲ್ಲಿ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ವರ್ಗಗಳ ಕೆಲವು ಶಾಲೆಗಳು ಸಹ ಈ ಹಿಂದೆ ಈ ರೀತಿಯ ಸಮವಸ್ತ್ರ ನೀತಿ ಅಳವಡಿಸಿಕೊಂಡಿವೆ.

ಲಿಂಗ-ತಟಸ್ಥ ಸಮವಸ್ತ್ರವನ್ನು ಜಾರಿಗೆ ತರುವುದಾಗಿ ಘೋಷಿಸಿದ ಉನ್ನತ ಶಿಕ್ಷಣ ಸಚಿವೆ ಪ್ರೊ.ಆರ್.ಬಿಂದು ಮಾತನಾಡಿ, “ಸಮಾಜದಲ್ಲಿನ ಪ್ರಗತಿಪರ ಬದಲಾವಣೆಗಳನ್ನು ಸಂಪ್ರದಾಯವಾದಿಗಳು ವಿರೋಧಿಸುವುದು ಸಹಜ. ಲಿಂಗ-ತಟಸ್ಥ ಸಮವಸ್ತ್ರವು ಗಂಡು ಮತ್ತು ಹೆಣ್ಣು ನಡುವಿನ ಪ್ರತ್ಯೇಕತೆಯನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ ಮತ್ತು ಎಲ್ಲಾ ಮಾನವರು ಒಂದೇ ದಿಕ್ಕಿನಲ್ಲಿ ಮುನ್ನಡೆಯಬೇಕು ಎಂಬ ಸಂದೇಶವನ್ನು ನೀಡುತ್ತದೆ. ಹುಡುಗರಿಗೆ ತಮ್ಮ ಡ್ರೆಸ್ ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯ ಇದ್ದಾಗ ಹುಡುಗಿಯರಿಗೂ ಆ ಸ್ವಾತಂತ್ರ್ಯವಿರಬೇಕು. ಹೊಸ ಸಮವಸ್ತ್ರವು ಹುಡುಗಿಯರು ತಮ್ಮ ದೇಹದ ಬಗ್ಗೆ ಚಿಂತಿಸದೆ ಆತ್ಮವಿಶ್ವಾಸದಿಂದ ತಿರುಗಲು ಸಹಾಯ ಮಾಡುತ್ತದೆ. ಲಿಂಗ-ತಟಸ್ಥ ಸಮವಸ್ತ್ರವು ಉತ್ತಮ ಬದಲಾವಣೆಗಳತ್ತ ಒಂದು ಹೆಜ್ಜೆಯಾಗಿದೆ” ಎಂದು ಹೇಳಿದ್ದಾರೆ.

ಆದರೆ ಪೋಷಕರ ಜೊತೆ ಸಮರ್ಪಕ ಚರ್ಚೆ ನಡೆಸದೆ ಲಿಂಗ-ತಟಸ್ಥ ಸಮವಸ್ತ್ರವನ್ನು ಅಳವಡಿಸಲಾಗಿದೆ ಎಂದು ಆರೋಪಿಸಿ ವಿವಿಧ ಮುಸ್ಲಿಂ ಸಂಘಟನೆಗಳು ಶಾಲೆ ಎದುರು ಪ್ರತಿಭಟನೆ ನಡೆಸಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್ ನೇತೃತ್ವದ ಸುನ್ನೀ ಬಣದೊಂದಿಗೆ ಸಂಯೋಜಿತವಾಗಿರುವ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಆದರೆ ಶಾಲೆಯು ತನ್ನ ಹೊಸ ಸಮವಸ್ತ್ರ ಯೋಜನೆಯನ್ನು ಮುಂದುವರೆಸಿದೆ.


ಇದನ್ನೂ ಓದಿ: ನಾವೆಲ್ಲರು ಓದಲೇಬೇಕಾದ ಪುಸ್ತಕ: ‘ಎಲ್ಲರಿಗಾಗಿ ಸ್ತ್ರೀವಾದ – ಆಪ್ತತೆಯ ರಾಜಕಾರಣ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...