Homeಮುಖಪುಟಲಿಂಗ ಸಮಾನತೆಯತ್ತ ಹೆಜ್ಜೆ: ಕೇರಳದ ಶಾಲೆಯಲ್ಲಿ ಹೆಣ್ಣು-ಗಂಡು ಮಕ್ಕಳೆಲ್ಲರಿಗೂ ಒಂದೇ ಥರದ ಸಮವಸ್ತ್ರ

ಲಿಂಗ ಸಮಾನತೆಯತ್ತ ಹೆಜ್ಜೆ: ಕೇರಳದ ಶಾಲೆಯಲ್ಲಿ ಹೆಣ್ಣು-ಗಂಡು ಮಕ್ಕಳೆಲ್ಲರಿಗೂ ಒಂದೇ ಥರದ ಸಮವಸ್ತ್ರ

- Advertisement -
- Advertisement -

ಕೇರಳದ ಕೋಳಿಕ್ಕೋಡ್‌ನ ಬಲುಸ್ಸೆರಿಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯು (ಜಿಎಚ್‌ಎಸ್‌ಎಸ್) ಲಿಂಗ ಸಮಾನತೆಯತ್ತ ಹೆಜ್ಜೆ ಹಾಕಿದ್ದು, ತನ್ನ 11 ನೇ ತರಗತಿ ವಿದ್ಯಾರ್ಥಿಗಳಿಗೆ ಬುಧವಾರ ಲಿಂಗ-ತಟಸ್ಥ (ಹೆಣ್ಣು-ಗಂಡು ಮಕ್ಕಳೆಲ್ಲರಿಗೂ ಒಂದೇ ಥರದ) ಸಮವಸ್ತ್ರವನ್ನು ಅಳವಡಿಸಿಕೊಂಡು ಗಮನ ಸೆಳೆದಿದೆ.

ಬಲುಸ್ಸೆರಿಯ ಶಾಲೆಯಲ್ಲಿ 11 ನೇ ತರಗತಿಯ 200 ಹುಡುಗಿಯರು ಮತ್ತು 60 ಹುಡುಗರು ನೀಲಿ ಪ್ಯಾಂಟ್ ಮತ್ತು ಗೆರೆಗಳುಳ್ಳ ಬಿಳಿ ಶರ್ಟ್‌ ಅನ್ನು ಇನ್ನು ಮುಂದೆ ಹೊಸ ಡ್ರೆಸ್ ಕೋಡ್ ಆಗಿ ಬಳಸಲಿದ್ದಾರೆ.

ಹೆಣ್ಣು ಮತ್ತು ಗಂಡು ಮಕ್ಕಳಿಗೆ ಸಮಾನವಾದ ಸ್ವಾತಂತ್ರ್ಯವನ್ನು ಖಾತ್ರಿಪಡಿಸಲು ಪರಿಚಯಿಸಲಾದ ಹೊಸ ಸಮವಸ್ತ್ರವನ್ನು ಧರಿಸಲು ಶಾಲೆಯ ಯಾವುದೇ ವಿದ್ಯಾರ್ಥಿಗಳಿಗೆ ಒತ್ತಾಯಿಸುವುದಿಲ್ಲ. ವಿದ್ಯಾರ್ಥಿಗಳು ಮುಸುಕು ಅಥವಾ ಸ್ಕಾರ್ಫ್ ಬಳಸಲು ಮುಕ್ತರಾಗಿದ್ದಾರೆ ಎಂದು ಶಾಲೆಯ ದೈಹಿಕ ಶಿಕ್ಷಕರು ತಿಳಿಸಿದ್ದಾರೆ.

ಸರ್ಕಾರಿ ವಲಯದ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಇದೇ ಮೊದಲ ಬಾರಿಗೆ ಬಾಲಕಿಯರು ಮತ್ತು ಬಾಲಕಿಯರಿಗೆ ಸಾಮಾನ್ಯ ಸಮವಸ್ತ್ರವನ್ನು ಜಾರಿಗೊಳಿಸಲಾಗಿದೆ. ರಾಜ್ಯದ ಇತರೆಡೆಗಳಲ್ಲಿ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ವರ್ಗಗಳ ಕೆಲವು ಶಾಲೆಗಳು ಸಹ ಈ ಹಿಂದೆ ಈ ರೀತಿಯ ಸಮವಸ್ತ್ರ ನೀತಿ ಅಳವಡಿಸಿಕೊಂಡಿವೆ.

ಲಿಂಗ-ತಟಸ್ಥ ಸಮವಸ್ತ್ರವನ್ನು ಜಾರಿಗೆ ತರುವುದಾಗಿ ಘೋಷಿಸಿದ ಉನ್ನತ ಶಿಕ್ಷಣ ಸಚಿವೆ ಪ್ರೊ.ಆರ್.ಬಿಂದು ಮಾತನಾಡಿ, “ಸಮಾಜದಲ್ಲಿನ ಪ್ರಗತಿಪರ ಬದಲಾವಣೆಗಳನ್ನು ಸಂಪ್ರದಾಯವಾದಿಗಳು ವಿರೋಧಿಸುವುದು ಸಹಜ. ಲಿಂಗ-ತಟಸ್ಥ ಸಮವಸ್ತ್ರವು ಗಂಡು ಮತ್ತು ಹೆಣ್ಣು ನಡುವಿನ ಪ್ರತ್ಯೇಕತೆಯನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ ಮತ್ತು ಎಲ್ಲಾ ಮಾನವರು ಒಂದೇ ದಿಕ್ಕಿನಲ್ಲಿ ಮುನ್ನಡೆಯಬೇಕು ಎಂಬ ಸಂದೇಶವನ್ನು ನೀಡುತ್ತದೆ. ಹುಡುಗರಿಗೆ ತಮ್ಮ ಡ್ರೆಸ್ ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯ ಇದ್ದಾಗ ಹುಡುಗಿಯರಿಗೂ ಆ ಸ್ವಾತಂತ್ರ್ಯವಿರಬೇಕು. ಹೊಸ ಸಮವಸ್ತ್ರವು ಹುಡುಗಿಯರು ತಮ್ಮ ದೇಹದ ಬಗ್ಗೆ ಚಿಂತಿಸದೆ ಆತ್ಮವಿಶ್ವಾಸದಿಂದ ತಿರುಗಲು ಸಹಾಯ ಮಾಡುತ್ತದೆ. ಲಿಂಗ-ತಟಸ್ಥ ಸಮವಸ್ತ್ರವು ಉತ್ತಮ ಬದಲಾವಣೆಗಳತ್ತ ಒಂದು ಹೆಜ್ಜೆಯಾಗಿದೆ” ಎಂದು ಹೇಳಿದ್ದಾರೆ.

ಆದರೆ ಪೋಷಕರ ಜೊತೆ ಸಮರ್ಪಕ ಚರ್ಚೆ ನಡೆಸದೆ ಲಿಂಗ-ತಟಸ್ಥ ಸಮವಸ್ತ್ರವನ್ನು ಅಳವಡಿಸಲಾಗಿದೆ ಎಂದು ಆರೋಪಿಸಿ ವಿವಿಧ ಮುಸ್ಲಿಂ ಸಂಘಟನೆಗಳು ಶಾಲೆ ಎದುರು ಪ್ರತಿಭಟನೆ ನಡೆಸಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್ ನೇತೃತ್ವದ ಸುನ್ನೀ ಬಣದೊಂದಿಗೆ ಸಂಯೋಜಿತವಾಗಿರುವ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಆದರೆ ಶಾಲೆಯು ತನ್ನ ಹೊಸ ಸಮವಸ್ತ್ರ ಯೋಜನೆಯನ್ನು ಮುಂದುವರೆಸಿದೆ.


ಇದನ್ನೂ ಓದಿ: ನಾವೆಲ್ಲರು ಓದಲೇಬೇಕಾದ ಪುಸ್ತಕ: ‘ಎಲ್ಲರಿಗಾಗಿ ಸ್ತ್ರೀವಾದ – ಆಪ್ತತೆಯ ರಾಜಕಾರಣ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...