Homeಮುಖಪುಟಲೈಂಗಿಕ ದೌರ್ಜನ್ಯ ಆರೋಪ: ಗೋವಾ ಬಿಜೆಪಿ ಸಚಿವ ಮಿಲಿಂದ್ ನಾಯಕ್ ರಾಜೀನಾಮೆ!

ಲೈಂಗಿಕ ದೌರ್ಜನ್ಯ ಆರೋಪ: ಗೋವಾ ಬಿಜೆಪಿ ಸಚಿವ ಮಿಲಿಂದ್ ನಾಯಕ್ ರಾಜೀನಾಮೆ!

- Advertisement -
- Advertisement -

ಗೋವಾ ಬಿಜೆಪಿ ಸಚಿವ ಮಿಲಿಂದ್ ನಾಯಕ್ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಕಾಂಗ್ರೆಸ್ ಆರೋಪಸಿದ ಬೆನ್ನಿಗೆ ಸಚಿವ ಸ್ಥಾನಕ್ಕೆ ಮಿಲಿಂದ್ ನಾಯಕ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತನಿಖೆ ನಡೆಸುವುದಾಗಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.

ಗೋವಾದ ನಗರಾಭಿವೃದ್ಧಿ ಸಚಿವರಾಗಿದ್ದ ನಾಯಕ್ ಅವರು ಬುಧವಾರ ಪಣಜಿಯಲ್ಲಿ ಮುಖ್ಯಮಂತ್ರಿಯನ್ನು ಭೇಟಿಯಾದ ಬಳಿಕ ರಾಜ್ಯ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ.

ನಾಯಕ್ ಅವರು ಸಂಪುಟ ಸದಸ್ಯರಾಗಿ ಅಧಿಕಾರ ದುರುಪಯೋಗಪಡಿಸಿಕೊಂಡು ಬಿಹಾರದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಗೋವಾ ಕಾಂಗ್ರೆಸ್ ಮುಖ್ಯಸ್ಥ ಗಿರೀಶ್ ಚೋಡಂಕರ್ ಆರೋಪಿಸಿದ್ದರು.

“ಅದು ಅಪರಾಧವೋ ಅಥವಾ ಇಲ್ಲವೋ ಎಂಬುದು ಬೇರೆ ವಿಷಯ. ಆದರೆ ಸಚಿವರೊಬ್ಬರು ತಮ್ಮ ಅಧಿಕಾರ ಸ್ಥಾನವನ್ನು ದುರ್ಬಳಕೆ ಮಾಡಿಕೊಂಡು ಮಹಿಳೆಯನ್ನು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದಾರೆ. ಇಂತಹ ಸಚಿವರು ಗೋವಾ ಮತ್ತು ಗೋವಾ ಜನರಿಗೆ ಅವಮಾನ. ಕೂಡಲೇ ಅವರನ್ನು ವಜಾಗೊಳಿಸಬೇಕು. ಮಹಿಳೆಯರನ್ನು ಶೋಷಿಸುವ ಮಿಲಿಂದ್ ನಾಯಕ್ ಅವರಂತಹ ಸಚಿವರಿಗೆ ಸ್ಥಾನವಿಲ್ಲ ಎಂಬುದನ್ನು ಸರ್ಕಾರ ಗೋವಾದ ಜನತೆಗೆ ತೋರಿಸಬೇಕು” ಎಂದು ಅವರು ಒತ್ತಾಯಿಸಿದ್ದರು.

ಸಂತ್ರಸ್ತ ಮಹಿಳೆ ಮತ್ತು ಶಾಸಕರ ನಡುವಿನ ಸಂಭಾಷಣೆಯ ಆಡಿಯೊವನ್ನು ರಾಜ್ಯ ಕಾಂಗ್ರೆಸ್ ಉಪಾಧ್ಯಕ್ಷ ಸಂಕಲ್ಪ್ ಅಮೋನ್ಕರ್ ಅವರು ಬಿಡುಗಡೆ ಮಾಡಿದ್ದು, ನಾಯಕ್ ವಿರುದ್ಧ ಪೊಲೀಸ್ ದೂರನ್ನೂ ದಾಖಲಿಸಿದ್ದಾರೆ.

“ಪ್ರಕರಣದ ಮುಕ್ತ ಮತ್ತು ನ್ಯಾಯಯುತ ತನಿಖೆಗಾಗಿ ನಾಯಕ್ ರಾಜೀನಾಮೆ ನೀಡಿದ್ದಾರೆ. ನಾನು ರಾಜೀನಾಮೆಯನ್ನು ಅಂಗೀಕರಿಸಿದ್ದೇನೆ ಮತ್ತು ಅದನ್ನು ರಾಜ್ಯಪಾಲರಿಗೂ ಕಳುಹಿಸಿದ್ದೇನೆ. ಕಾಂಗ್ರೆಸ್ ಯಾವುದೇ ಸಾಕ್ಷ್ಯವನ್ನು ನೀಡಿದ್ದರೂ ನಾವು ತನಿಖೆ ನಡೆಸುತ್ತೇವೆ” ಎಂದು ಸಿಎಂ ಸಾವಂತ್ ಹೇಳಿದ್ದಾರೆ.  

ಈ ಪ್ರಕರಣದ ವಿರುದ್ಧ ವೈಯಕ್ತಿಕ ಮಟ್ಟದಲ್ಲಿ ಹೋರಾಟ ನಡೆಸುವುದಾಗಿ ನಾಯಕ್ ಹೇಳಿದ್ದಾರೆ. ಅವರ ವಿರುದ್ಧ ಮಾಡಿರುವ ಆರೋಪಗಳು ವೈಯಕ್ತಿಕವಾಗಿದ್ದು, ಅದರ ಬಗ್ಗೆ ಅವರು ಏನು ಮಾಡುತ್ತಾರೆ ಎಂಬುದು ಅವರ ವೈಯಕ್ತಿಕ ನಿರ್ಧಾರದ ವಿಷಯವಾಗಿದೆ ಎಂದು ಗೋವಾ ಸಿಎಂ ತಿಳಿಸಿದ್ದಾರೆ. 

ಕ್ಯಾಬಿನೆಟ್ ಹುದ್ದೆ ಖಾಲಿಯಾಗಿರುತ್ತದೆ. ಆದರೆ ಸದ್ಯಕ್ಕೆ ಆ ಹುದ್ದೆಗೆ ಹೊಸ ಸೇರ್ಪಡೆ ಇರುವುದಿಲ್ಲ. ಅವರು ನಿಭಾಯಿಸುತ್ತಿದ್ದ ಖಾತೆಗಳನ್ನು ನಾನೇ ನಿಭಾಯಿಸುತ್ತೇನೆ ಎಂದು ಸಾವಂತ್ ಹೇಳಿದ್ದಾರೆ.

ಫೆಬ್ರವರಿ 2022 ರಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ನಾಯಕ್ ವಿರುದ್ಧದ ಆರೋಪದ ಬಗ್ಗೆ ಪೊಲೀಸರು ತನಿಖೆಯನ್ನು ಪ್ರಾರಂಭಿಸಬೇಕು ಎಂದು ಕಾಂಗ್ರೆಸ್‌ ನಾಯಕ ಚೋಡಂಕರ್ ಒತ್ತಾಯಿಸಿದ್ದಾರೆ.

ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ಡಿಸೆಂಬರ್ 10 ರಂದು ಬಿಹಾರದ ಮಹಿಳೆಯೊಬ್ಬರು ಅಮೋನ್ಕರ್ ಮತ್ತು ಇತರ ಕಾಂಗ್ರೆಸ್ ನಾಯಕರ ವಿರುದ್ಧ ಸುಲಿಗೆ, ಲೈಂಗಿಕ ಕಿರುಕುಳ ಮತ್ತು ಕ್ರಿಮಿನಲ್ ಪಿತೂರಿಗಾಗಿ ಪ್ರಕರಣ ದಾಖಲಿಸಿದ್ದರು. ಮಂಗಳವಾರ ಪ್ರಕರಣವನ್ನು ಗೋವಾ ಪೊಲೀಸರಿಗೆ ವರ್ಗಾಯಿಸಲಾಗಿದೆ.

ಏತನ್ಮಧ್ಯೆ, ಅಮೋನ್ಕರ್ ಮತ್ತು ಇತರ ಕಾಂಗ್ರೆಸ್ ನಾಯಕರು ನಾಯಕ್ ವಿರುದ್ಧ ಪಣಜಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಬುಧವಾರ ದಾಖಲಿಸಿದ್ದಾರೆ. ಸಚಿವರು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಮತ್ತು ಗರ್ಭಪಾತ ಮಾಡುವಂತೆ ಒತ್ತಾಯಿಸಿದ್ದಾರೆ ಎಂದು ಸಾಬೀತುಪಡಿಸುವ ಸೆಲ್ ಫೋನ್ ದಾಖಲೆಗಳು ಮತ್ತು ಇತರ ಪುರಾವೆಗಳನ್ನು ಅವರು ಒದಗಿಸಿದ್ದಾರೆ. 

“ನಾವು ನಾಯಕ್ ವಿರುದ್ಧ ಮಹಿಳೆಯ ಮೂಲ ಫೋನ್ ಎಲ್ಲಾ ಸಾಕ್ಷ್ಯಗಳನ್ನು ನಾವು ಪೊಲೀಸರಿಗೆ ಸಲ್ಲಿಸಿದ್ದೇವೆ. ನಮ್ಮ ವಿರುದ್ಧ ದೂರು ದಾಖಲಿಸುವಂತೆ ಸಂತ್ರಸ್ತೆಗೆ ಒತ್ತಾಯಿಸಲಾಗಿದೆ. ನಾನು ಪೊಲೀಸರೊಂದಿಗೆ ಸಹಕರಿಸಲು ಸಿದ್ಧನಿದ್ದೇನೆ” ಎಂದು ಅಮೋನ್ಕರ್ ಹೇಳಿದ್ದಾರೆ.

ಸಂತ್ರಸ್ತ ಮಹಿಳೆಯು 2019ರ ನವೆಂಬರ್‌ನಲ್ಲಿ ನಮ್ಮನ್ನು ಸಂಪರ್ಕಿಸಿದ್ದರು. ಅವರು ನಮಗೆ ವಾಟ್ಸಾಪ್ ಚಾಟ್‌ಗಳು, ವಿಡಿಯೋ ಮತ್ತು ಆಡಿಯೋವನ್ನು ತೋರಿಸಿದರು. ನಾನು ಅದನ್ನು ಮೊದಲು ನೋಡಿದಾಗ ನನಗೆ ತುಂಬಾ ಕೋಪ ಬಂದಿತು. ಉದ್ಯೋಗದ ಭರವಸೆ ನೀಡಿ ತನ್ನನ್ನು ಬಳಸಿಕೊಳ್ಳಲಾಗಿದೆ, ಶೋಷಣೆ ಮಾಡಲಾಗಿದೆ ಮತ್ತು ಬೆದರಿಕೆ ಹಾಕಿದ್ದಾರೆ ಎಂದು ಆಕೆ ಹೇಳಿಕೊಂಡಿದದರು ಎಂದು ಅಮೋನ್ಕರ್ ಹೇಳಿದ್ದಾರೆ.

ಐದು ತಿಂಗಳ ಹಿಂದೆ, ತನಗೆ ಮತ್ತು ತನ್ನ ಮಗುವಿಗೆ ಭಯವಾಗುತ್ತಿದೆ ಎಂದು ಹೇಳಿದ್ದ ಮಹಿಳೆ ತನ್ನ ಹೇಳಿಕೆಯನ್ನು ಹಿಂತೆಗೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

2015-16ರಲ್ಲಿ ಮಹಿಳೆ ಮತ್ತು ನಾಯಕ್ ನಡುವೆ ಸಂಭಾಷಣೆ ನಡೆದಿದೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ದೇಶದಲ್ಲಿ ಯುವತಿಯರ ಮದುವೆಯ ವಯಸ್ಸು 21 ಕ್ಕೆ ಏರಿಕೆ: ಇತರ ದೇಶಗಳಲ್ಲಿ ಮದುವೆ ವಯಸ್ಸು ಹೇಗಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...