Homeಮುಖಪುಟಬಾಬರಿ ಧ್ವಂಸ ಮಾಡಿದ ತಮ್ಮ ಕಾರ್ಯಕರ್ತರ ಬಗ್ಗೆ ಶಿವಸೇನೆ ಹೆಮ್ಮೆಪಟ್ಟಿದೆ: ಸಂಜಯ್ ರಾವತ್‌

ಬಾಬರಿ ಧ್ವಂಸ ಮಾಡಿದ ತಮ್ಮ ಕಾರ್ಯಕರ್ತರ ಬಗ್ಗೆ ಶಿವಸೇನೆ ಹೆಮ್ಮೆಪಟ್ಟಿದೆ: ಸಂಜಯ್ ರಾವತ್‌

- Advertisement -
- Advertisement -

ಶಿವಸೇನೆಯ ಹಿರಿಯ ನಾಯಕ ಸಂಜಯ್ ರಾವತ್ ಅವರು ತಮ್ಮ ಮಾಜಿ ಮಿತ್ರಪಕ್ಷ ಬಿಜೆಪಿಯನ್ನು ಬುಧವಾರ ಟೀಕಿಸಿದ್ದು, “ಹಿಂದುತ್ವಕ್ಕಾಗಿ ಶಿವಸೇನೆಯ ಬದ್ಧತೆಯು ರಾಜಕೀಯ ಅಥವಾ ಚುನಾವಣೆಗೆ ಮಾತ್ರ ಸೀಮಿತವಾಗಿಲ್ಲ, ಜನರ ಆಹಾರ, ಬಟ್ಟೆ ಮತ್ತು ವಸತಿಯನ್ನು ಖಚಿತಪಡಿಸುತ್ತದೆ” ಎಂದು ಹೇಳಿದ್ದಾರೆ.

ಸಂಜಯ್‌ ರಾವತ್ ಬುಧವಾರದಂದು ತಮ್ಮ ಹಿಂದುತ್ವದ ಕಾರ್ಡ್‌ ಬಳಸಿ, ತಮ್ಮ ಪಕ್ಷದ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆಯು, ‘‘ಹಿಂದೂಗಳು ತಮ್ಮ ಮತವನ್ನು ಧರ್ಮದ ಹೆಸರಿನಲ್ಲಿ ಚಲಾಯಿಸುತ್ತಾರೆ ಎಂದು ಖಚಿತಪಡಿಸಿದ್ದಾರೆ’’ ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ:ಕಾಂಗ್ರೆಸ್ ಇಲ್ಲದೆ ವಿರೋಧ ಪಕ್ಷಗಳ ಒಕ್ಕೂಟವಿಲ್ಲ: ಶಿವಸೇನೆ ಮುಖಂಡ ಸಂಜಯ್ ರಾವತ್

“ಅಯೋಧ್ಯೆಯಲ್ಲಿ ಬಾಬರಿ ಧ್ವಂಸವಾಗುತ್ತಿದ್ದಾಗ ಇಂದು ಹಿಂದುತ್ವದ ಮತಬ್ಯಾಂಕ್ ಅನ್ನು ಪ್ರತಿಪಾದಿಸುವವರು ಓಡಿ ಹೋಗಿದ್ದರು. ಶಿವ ಸೇನೆಯ ಕಾರ್ಯಕರ್ತರು ಮತ್ತು ಬಾಳಾಸಾಹೇಬ್ ಠಾಕ್ರೆ ಅವರು ಹಿಂದೂಗಳ ಪರವಾಗಿ ದೃಢವಾಗಿ ನಿಂತಿದ್ದರು ಮತ್ತು ಬಾಬರಿಯನ್ನು ಧ್ವಂಸ ಮಾಡಿದ ಶಿವಸೇನೆ ಕಾರ್ಯಕರ್ತರ ಬಗ್ಗೆ ಹೆಮ್ಮೆಪಟ್ಟಿದ್ದರು” ಎಂದು ಸಂಜಯ್‌ ರಾವತ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಹಿಂದೂ ವೋಟ್ ಬ್ಯಾಂಕ್ ಸೃಷ್ಟಿಸಿದ ಮೊದಲ ವ್ಯಕ್ತಿ ಛತ್ರಪತಿ ಶಿವಾಜಿ ಎಂದು ಮಹಾರಾಷ್ಟ್ರ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದರು.

ಛತ್ರಪತಿ ಶಿವಾಜಿ ಮೊದಲ ಹಿಂದೂ ವೋಟ್ ಬ್ಯಾಂಕ್ ಅನ್ನು ಹುಟ್ಟುಹಾಕಿದ್ದಾರೋ ಇಲ್ಲವೋ ಗೊತ್ತಿಲ್ಲ, ಆದರೆ ಅವರು ದೇಶದಲ್ಲಿ ಮೊದಲ ಹಿಂದವಿ ಸ್ವರಾಜ್ಯವನ್ನು ಸ್ಥಾಪಿಸಿದರು ಎಂದು ರಾವತ್‌ ಪ್ರತಿಪಾದಿಸಿದ್ದಾರೆ.

ಛತ್ರಪತಿ ಶಿವಾಜಿಯವರ ಬೋಧನೆಗಳನ್ನು ಬಾಳಾಸಾಹೇಬ್ ಠಾಕ್ರೆ ಹಾಗೂ ಅದಕ್ಕಿಂಲೂ ಮೊದಲು ಸಾವರ್ಕರ್ ಮಹಾರಾಷ್ಟ್ರದಲ್ಲಿ ಮತ್ತು ದೇಶಾದ್ಯಂತ ಪೋಷಿಸಿದರು ಎಂದು ರಾವತ್ ಹೇಳಿದ್ದಾರೆ.

ಇದನ್ನೂ ಓದಿ: 2024ಕ್ಕೆ ರಾವಣನನ್ನು ಸಂಪೂರ್ಣವಾಗಿ ಸುಡುತ್ತೇವೆ: ಶಿವಸೇನೆ ಸಂಸದ ಸಂಜಯ್ ರಾವತ್

ಬಾಳಾಸಾಹೇಬ್ ಠಾಕ್ರೆ ಅವರು ದೇಶದ ಹಿಂದೂಗಳು ಹಿಂದೂಗಳಾಗಿ ಮತ ಚಲಾಯಿಸುವುದನ್ನು ಖಚಿತಪಡಿಸಿದ್ದಾರೆ ಎಂದು ದಿವಂಗತ ಬಿಜೆಪಿ ನಾಯಕ ಪ್ರಮೋದ್ ಮಹಾಜನ್ ಹೇಳಿದ್ದರು ಎಂದು ರಾವತ್ ನೆನಪಿಸಿಕೊಂಡಿದ್ದಾರೆ.

ದೇಶದಲ್ಲಿ ಹಿಂದೂ ವೋಟ್ ಬ್ಯಾಂಕ್ ಅಸ್ತಿತ್ವದಲ್ಲಿದೆ ಮತ್ತು ಹಿಂದೂಗಳು ಧರ್ಮದ ಹೆಸರಿನಲ್ಲಿ ಮತ ಚಲಾಯಿಸುವುದನ್ನು ಖಾತ್ರಿಪಡಿಸಿಕೊಂಡರು ಎಂಬುದನ್ನು ಬಾಳಾಸಾಹೇಬ್ ಅವರು ಮೊದಲ ಬಾರಿಗೆ ತೋರಿಸಿಕೊಟ್ಟಿದ್ದಾರೆ ಎಂದು ಅಯೋಧ್ಯೆ ಧ್ವಂಸದ ನಂತರ ನಡೆದ ಮಹಾರಾಷ್ಟ್ರ ವಿಧಾನಸಭಾ ಉಪಚುನಾವಣೆಯನ್ನು ಉಲ್ಲೇಖಿಸಿ ರಾವತ್ ಹೇಳಿದ್ದಾರೆ.

ಹಿಂದುತ್ವದ ವಿಚಾರವಾಗಿ ಚುನಾವಣೆಯಲ್ಲಿ ಗೆದ್ದಿದ್ದೇವೆ ಎಂದು ಪ್ರತಿಪಾದಿಸಿದ ಶಿವಸೇನೆ ಶಾಸಕರನ್ನು ವಿಧಾನಸಭೆಯಿಂದ ಅಮಾನತುಗೊಳಿಸಲಾಗಿದೆ. ಆದರೆ, ಅಮಾನತು ವಿರುದ್ಧ ಹೋರಾಟ ನಡೆಸಿ ಗೆದ್ದಿದ್ದೇವೆ. ಯಾವುದೇ ಬಿಜೆಪಿ ಶಾಸಕರು ಇದೇ ರೀತಿಯ ಕ್ರಮವನ್ನು ಎದುರಿಸುತ್ತಿದ್ದಾರೆಂದು ನನಗೆ ನೆನಪಿಲ್ಲ ಎಂದು ರಾವತ್ ಹೇಳಿದ್ದಾರೆ.

“ನಮ್ಮ ಹಿಂದುತ್ವ ನಮಗೆ ಭಯಪಡುವುದನ್ನು ಕಲಿಸುವುದಿಲ್ಲ. ನಾವು ದೃಢವಾಗಿ ನಿಲ್ಲುತ್ತೇವೆ, ಹೋರಾಡುತ್ತೇವೆ ಮತ್ತು ಗೆಲ್ಲುತ್ತೇವೆ. ನಮ್ಮ ಹಿಂದುತ್ವ ಕೇವಲ ರಾಜಕೀಯ ಮತ್ತು ಚುನಾವಣೆಗಾಗಿ ಅಲ್ಲ, ಕೇವಲ ದೇವಸ್ಥಾನಗಳಿಗೆ ಸೀಮಿತವಲ್ಲ. ನಮ್ಮ ಹಿಂದುತ್ವವು ಜನರಿಗೆ ಆಹಾರ, ಬಟ್ಟೆ ಮತ್ತು ವಸತಿ ಸಿಗುವಂತೆ ನೋಡಿಕೊಳ್ಳುವುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಗೋವಾ ವಿಧಾನಸಭಾ ಚುನಾವಣೆ: 22 ಸ್ಥಾನಗಳಲ್ಲಿ ಸ್ಪರ್ಧಿಸಲಿರುವ ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...