Homeಮುಖಪುಟಸಕ್ರಿಯ ರಾಜಕಾರಣ ತೊರೆದ ಕೇರಳ ಬಿಜೆಪಿಯ ಸಿಎಂ ಅಭ್ಯರ್ಥಿ ಇ. ಶ್ರೀಧರನ್‌!

ಸಕ್ರಿಯ ರಾಜಕಾರಣ ತೊರೆದ ಕೇರಳ ಬಿಜೆಪಿಯ ಸಿಎಂ ಅಭ್ಯರ್ಥಿ ಇ. ಶ್ರೀಧರನ್‌!

- Advertisement -
- Advertisement -

ಬಿಜೆಪಿ ಸೇರಿದ ಒಂದೇ ವರ್ಷದೊಳಗೆ ‘ಮೆಟ್ರೋಮ್ಯಾನ್’ ಖ್ಯಾತಿಯ ಇ. ಶ್ರೀಧರನ್ ಅವರು ಸಕ್ರಿಯ ರಾಜಕೀಯವನ್ನು ತೊರೆದಿದ್ದಾರೆ. ಡಿಸೆಂಬರ್ 16 ರ ಗುರುವಾರದಂದು ಕೇರಳದ ಮಲಪ್ಪುರಂನಲ್ಲಿ ಅವರು ತಮ್ಮ ನಿಲುವನ್ನು ಘೋಷಿಸಿದ್ದಾರೆ. ಏಪ್ರಿಲ್‌ನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿನ ಸೋಲಿನಿಂದ ತಾನು ಪಾಠ ಕಲಿತಿದ್ದಾಗಿ ಅವರು ಹೇಳಿದ್ದಾರೆ.

“ನಾನು ಎಂದಿಗೂ ರಾಜಕಾರಣಿಯಾಗಿರಲಿಲ್ಲ. ರಾಜಕೀಯದಲ್ಲಿ ಸಕ್ರಿಯವಾಗಿಲ್ಲ ಎಂದರೆ ನಾನು ರಾಜಕೀಯವನ್ನು ಬಿಟ್ಟುಬಿಡುತ್ತೇನೆ ಎಂದು ಅರ್ಥವಲ್ಲ” ಎಂದು ಅವರು ಸಕ್ರಿಯ ರಾಜಕೀಯದಿಂದ ನಿರ್ಗಮಿಸುವಾಗ ಹೇಳಿದ್ದಾರೆ.

ಇದನ್ನೂ ಓದಿ:ಕೇರಳದಲ್ಲಿ ಬಿಜೆಪಿ ಕಿಂಗ್‌ಮೇಕರ್‌ ಆಗಲಿದೆ – ರಾಜ್ಯ ಬಿಜೆಪಿ ನಾಯಕ ಇ. ಶ್ರೀಧರನ್‌

ಇ. ಶ್ರೀಧರನ್ ಅವರು ರಾಜಕೀಯ ಪ್ರವೇಶಿಸುವಾಗ, ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದರು ಮತ್ತು ಕೇರಳ ರಾಜಕೀಯದಲ್ಲಿ ಮಹತ್ತರದ ಪಾತ್ರವನ್ನು ವಹಿಸಲು ಆಸಕ್ತಿಯನ್ನು ವ್ಯಕ್ತಪಡಿಸಿದ್ದರು.

“ನಾನು ಸೋತಾಗ ನಿರಾಸೆಯಾಯಿತು. ಆದರೆ ಪರವಾಗಿಲ್ಲ. ಈಗ ಆ ಕಾಲಮಿತಿ ಕಳೆದಿದೆ. ನಾನು ಆಯ್ಕೆಯಾಗಿದ್ದರೆ ನಾನು ಎಂಎಲ್‌ಎ ಆಗುತ್ತಿದ್ದೆ. ಆದರೆ ಒಬ್ಬನೇ ಶಾಸಕನಾಗಿ ಏನೂ ಮಾಡಲಾಗುತ್ತಿರಲಿಲ್ಲ” ಎಂದು ಅವರು ಹೇಳಿದ್ದಾರೆ.

“ನನಗೆ ಈಗ 90 ವರ್ಷ. ನನ್ನನ್ನು ರಾಜಕೀಯಕ್ಕೆ ಮತ್ತಷ್ಟು ತಳ್ಳುವುದು ಅಪಾಯಕಾರಿ. ನನಗೆ ಈಗ ರಾಜಕೀಯದ ಕನಸು ಇಲ್ಲ. ಸೇವೆ ಮಾಡಲು ನನಗೆ ರಾಜಕೀಯ ಅಗತ್ಯವಿಲ್ಲ. ನಾನು ಈಗಾಗಲೇ ಮೂರು ಟ್ರಸ್ಟ್‌ಗಳ ಮೂಲಕ ಅದನ್ನು ಮಾಡುತ್ತಿದ್ದೇನೆ” ಎಂದು ಶ್ರೀಧರನ್ ತಿಳಿಸಿದ್ದಾರೆ.

ಕಳೆದ ಚುನಾವಣೆಯಲ್ಲಿ ಇ. ಶ್ರೀಧರನ್ ಅವರು ಪಾಲಕ್ಕಾಡ್ ಕ್ಷೇತ್ರದಲ್ಲಿ ಹಾಲಿ ಶಾಸಕ ಶಾಫಿ ಪರಂಬಿಲ್ ವಿರುದ್ಧ 3,859 ಮತಗಳಿಂದ ಸೋತಿದ್ದಾರೆ. ಕೇರಳದಲ್ಲಿ ಕನಿಷ್ಠ 35 ಸ್ಥಾನಗಳಲ್ಲಿ ಗೆಲುವಿನ ಆಸೆಯಿಂದ ಏಪ್ರಿಲ್ 2 ರ ವಿಧಾನಸಭಾ ಚುನಾವಣೆಯಲ್ಲಿ ಸೆಣಸಿದ್ದ ಬಿಜೆಪಿ ಮತ್ತು ಮೈತ್ರಿ ಪಕ್ಷಗಳು ಈ ಹಿಂದೆ ಇದ್ದ ಏಕೈಕ ಕ್ಷೇತ್ರವನ್ನೂ ಕಳೆದುಕೊಂಡಿತ್ತು. ‘ಮೆಟ್ರೋಮ್ಯಾನ್’ ಶ್ರೀಧರನ್ ಮತ್ತು ಪಕ್ಷದ ರಾಜ್ಯ ಮುಖ್ಯಸ್ಥ ಕೆ. ಸುರೇಂದ್ರನ್ ಸೇರಿದಂತೆ ಅದರ ಎಲ್ಲಾ ಪ್ರಮುಖ ಸ್ಪರ್ಧಿಗಳು ಸೋತಿದ್ದರು.

ಇದನ್ನೂ ಓದಿ: ಕೇರಳ ಬಿಜೆಪಿ ರೈಲಿನಲ್ಲಿ ಮೆಟ್ರೋಮ್ಯಾನ್: ಪ್ಯಾಸೆಂಜರ್‌ಗಳಿಲ್ಲ, ರೆಡ್ ಸಿಗ್ನಲ್‌ಗಳೇ ಎಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಸ್ಲಾಮಾಬಾದ್‌ ಶಾಂತಿ ಮಾತುಕತೆ | ಅಮೆರಿಕ–ಇಸ್ರೇಲ್ ಹತ್ಯೆಗೈದ ಮಕ್ಕಳ ರಕ್ತಸಿಕ್ತ ಬ್ಯಾಗ್‌, ಶೂ ಹೊತ್ತು ತಂದ ಇರಾನ್

ಶಾಂತಿ ಮಾತುಕತೆಯಲ್ಲಿ ಭಾಗವಹಿಸಲು ಪಾಕಿಸ್ತಾನದ ಇಸ್ಲಾಮಾಬಾದ್‌ಗೆ ಆಗಮಿಸುವಾಗ, ಅಮೆರಿಕ-ಇಸ್ರೇಲ್‌ನ ಬಾಂಬ್‌ ದಾಳಿ ನಡೆಸಿ ಹತ್ಯೆಗೈದ ಮಕ್ಕಳ ಫೋಟೋ, ರಕ್ತಸಿಕ್ತ ಬ್ಯಾಗ್ ಮತ್ತು ಶೂಗಳನ್ನು ವಿಮಾನದಲ್ಲಿ ಹೊತ್ತು ತರುವ ಮೂಲಕ ಇರಾನ್‌ ಜಗತ್ತಿನ ಗಮನಸೆಳೆದಿದೆ. ಸಾಮಾಜಿಕ ಜಾಲತಾಣ...

ಮಣಿಪುರ: ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳೊಂದಿಗೆ ಇಬ್ಬರನ್ನು ಬಂಧಿಸಿದ ಭದ್ರತಾ ಪಡೆ

ಇಂಫಾಲ: ಮಣಿಪುರದ ಚುರಚಂದಪುರ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳಿಂದ ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳನ್ನು(ಪಾಪಿ ಸೀಡ್ಸ್) ವಶಪಡಿಸಿಕೊಂಡ ನಂತರ ಭದ್ರತಾ ಪಡೆಗಳು ಅವರನ್ನು ಬಂಧಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಚುರಾಚಂದ್‌ಪುರ ಪೊಲೀಸ್ ಠಾಣೆ...

ಚಿತ್ರದುರ್ಗ: ಪ್ರೌಢಶಾಲಾ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಗರ್ಭಪಾತ ಮಾಡಿಸಿದ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ನಾಯಕನಹಟ್ಟಿ (ಚಿತ್ರದುರ್ಗ ಜಿಲ್ಲೆ): ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಆಕೆಯ ಗರ್ಭಪಾತ ಮಾಡಿದ ಆರೋಪದ ಮೇಲೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೀಡಿದ ದೂರು ಆಧರಿಸಿ...

ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ : ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕೋರಿದ್ದ ಮಹಿಳೆಯ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಿರುವ ಮಹಿಳೆಯೊಬ್ಬರು ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ (ಏ.10) ತಿರಸ್ಕರಿಸಿದೆ ಎಂದು ಕಾನೂನು...

ಇಸ್ಲಾಮಾಬಾದ್‌ನಲ್ಲಿ ಅಮೆರಿಕ–ಇರಾನ್ ಶಾಂತಿ ಮಾತುಕತೆ; ಪಾಕಿಸ್ತಾನ ಮಧ್ಯಸ್ಥಿಕೆ

ಹಲವು ರೀತಿಯ ಪ್ರತಿಷ್ಠೆ ಪ್ರದರ್ಶನ, ಭಿನ್ನಾಭಿಪ್ರಾಯಗಳ ನಡುವೆ ಅಮೆರಿಕ-ಇರಾನ್ ಶಾಂತಿ ಮಾತುಕತೆ ಶನಿವಾರ (ಏ.11) ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಪ್ರಾರಂಭಗೊಳ್ಳಲಿದೆ. ಪಾಕಿಸ್ತಾನದ ಪಾಲಿಗೆ ಇದು ಅತ್ಯಂತ ಪ್ರತಿಷ್ಠೆಯ ವಿಷಯವಾಗಿ ಮಾರ್ಪಟ್ಟಿದೆ. ಅಮೆರಿಕದ ಪರವಾಗಿ ಉಪಾಧ್ಯಕ್ಷ ಜೆ.ಡಿ....

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...