Homeಮುಖಪುಟಗೋವಾ: 4 ವರ್ಷದಲ್ಲಿ 50% ಶಾಸಕರು ಪಕ್ಷಾಂತರ!

ಗೋವಾ: 4 ವರ್ಷದಲ್ಲಿ 50% ಶಾಸಕರು ಪಕ್ಷಾಂತರ!

- Advertisement -
- Advertisement -

2017 ರಿಂದ ಕಳೆದ ನಾಲ್ಕು ವರ್ಷಗಳಲ್ಲಿ ಗೋವಾದ ರಾಜಕೀಯ ವಲಯವು ಹೊಸ ಯುಗವನ್ನು ಪ್ರವೇಶಿಸಿದೆ. ಗೋವಾ ವಿಧಾನ ಸಭೆಯ 40 ಶಾಸಕರಲ್ಲಿ 50% ದಷ್ಟು ಸದಸ್ಯರು 2017 ರಲ್ಲಿ ತಮ್ಮನ್ನು ಆಯ್ಕೆ ಮಾಡಿದ ಪಕ್ಷವನ್ನು ತೊರೆದಿದ್ದರೆ. ಆಡಳಿತಾರೂಢ ಬಿಜೆಪಿಯು ಕಳೆದ ನಾಲ್ಕು ವರ್ಷಗಳಲ್ಲಿ ಕಾಂಗ್ರೆಸ್, ಪ್ರಾದೇಶಿಕ ಪಕ್ಷಗಳು ಮತ್ತು ಪಕ್ಷೇತರ ಶಾಸಕರು ಸೇರಿದಂತೆ ಹಲವರನ್ನು ತನ್ನೆಡೆಗೆ ಸೆಳೆದಿದೆ.

ವಿಧಾನಸಭಾ ಚುನಾವಣೆಯ ಮತ ಎಣಿಕೆ ಮುಗಿದು ಕೆಲವೇ ದಿನಗಳಲ್ಲಿ ಬಾಗಿಲು ತೆರೆದು ನಂತರ ಮುಚ್ಚುತ್ತಿದ್ದ ‘ಕುದುರೆ ವ್ಯಾಪಾರ’ವು ಈಗ ವರ್ಷದಾದ್ಯಂತ ನಡೆಯುವ ವಿದ್ಯಮಾನವಾಗಿ ಪರಿಣಮಿಸಿದೆ.

ಇದನ್ನೂ ಓದಿ:ಲೈಂಗಿಕ ದೌರ್ಜನ್ಯ ಆರೋಪ: ಗೋವಾ ಬಿಜೆಪಿ ಸಚಿವ ಮಿಲಿಂದ್ ನಾಯಕ್ ರಾಜೀನಾಮೆ!

2017 ರಿಂದ, ತಮ್ಮ ಪಕ್ಷಗಳನ್ನು ತೊರೆದ ಶಾಸಕರು ಪಟ್ಟಿ ಕಳಗಿನಂತಿದೆ.

2017 ರಲ್ಲಿ ಕಾಂಗ್ರೆಸ್‌ಗೆ 17 ಶಾಸಕರು ಗೆದ್ದು ಬಂದರೂ, 13 ಶಾಸಕರನ್ನು ಹೊಂದಿದ್ದ ಬಿಜೆಪಿ ಮೈತ್ರಿಗಳ ಬೆಂಬಲದೊಂದಿಗೆ ಅಧಿಕಾರ ಹಿಡಿಯಿತು. ಇದರ ನಂತರ, ಕಾಂಗ್ರೆಸ್ ಶಾಸಕ ವಿಶ್ವಜಿತ್ ರಾಣೆ ಅವರು ವಿಶ್ವಾಸಮತ ಯಾಚೆನೆಯ ದಿನ ಮಾರ್ಚ್ 16 ರಂದು ಪಕ್ಷಕ್ಕೆ ರಾಜೀನಾಮೆ ನೀಡಿದರು.

ವಿಶ್ವಜಿತ್ ರಾಣೆ, ಅವರ ತಂದೆ ಪ್ರತಾಪ್ಸಿಂಗ್ ರಾಣೆ ಅವರು ಹಿರಿಯ ಕಾಂಗ್ರೆಸ್ ನಾಯಕರಾಗಿದ್ದು, ಮಾಜಿ ಮುಖ್ಯಮಂತ್ರಿಯಾಗಿದ್ದರು. ವಿಶ್ವಜಿತ್‌ ಅವರು ಪಕ್ಷ ತೊರೆದ ನಂತರ ಆಗಿನ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ನೇತೃತ್ವದ ಸಂಪುಟದಲ್ಲಿ ಆರೋಗ್ಯ ಸಚಿವರಾಗಿ ನೇಮಕಗೊಂಡರು.

ಒಂದು ವರ್ಷದ ನಂತರ, ಇನ್ನೂ ಇಬ್ಬರು ಕಾಂಗ್ರೆಸ್ ಶಾಸಕರಾದ ದಯಾನಂದ ಸೋಪ್ಟೆ ಮತ್ತು ಮಾಜಿ ರಾಜ್ಯಾಧ್ಯಕ್ಷ ಸುಭಾಷ್ ಶಿರೋಡ್ಕರ್‌ ಅಕ್ಟೋಬರ್ 16 ರಂದು ಪಕ್ಷವನ್ನು ತೊರೆದು ಅದೇ ದಿನ ಬಿಜೆಪಿಗೆ ಸೇರಿದ್ದರು. ರಾಜೀನಾಮೆ ನೀಡದ ಮೂವರೂ ಬಿಜೆಪಿಯಿಂದ ಉಪಚುನಾವಣೆಗಳನ್ನು ಎದುರಿಸಿ ಹೊಸದಾಗಿ ಶಾಸಕರಾದರು.

ಇದನ್ನೂ ಓದಿ:ಗೋವಾ ಚುನಾವಣೆ: ಟಿಎಂಸಿ, ಆಪ್ ಜೊತೆ ಮೈತ್ರಿಯತ್ತ ಕಾಂಗ್ರೆಸ್ ಚಿತ್ತ?

2019 ರ ಮಾರ್ಚ್ ತಿಂಗಳ 27 ರಂದು, ಮೂವರು ಶಾಸಕರಿರುವ ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷದ ಇಬ್ಬರನ್ನು(ಮನೋಹರ್ ಅಜಗಾಂವ್ಕರ್ ಮತ್ತು ದೀಪಕ್ ಪೌಸ್ಕರ್) ಬಿಜೆಪಿ ಸೆಳೆದುಕೊಂಡಿತು.

ಒಂದು ಪಕ್ಷದ ಮೂರನೇ ಒಂದು ಭಾಗದಷ್ಟು ಶಾಸಕರು ಪಕ್ಷವನ್ನು ತೊರೆದರೆ ಅವರು, ರಾಜೀನಾಮೆ ನೀಡಬೇಕಾಗಿಲ್ಲ, ಹಾಗಾಗಿ ಅವರು ಶಾಸಕರಾಗಿಯೆ ಉಳಿಯುತ್ತಾರೆ. ಜೊತೆಗೆ ಅವರ ಪಕ್ಷವನ್ನು ಬೇರೆ ಪಕ್ಷದ ಜೊತೆಗೆ ವಿಲೀನಗೊಳಿಸಬಹುದಾಗಿದೆ.

ಬಿಜೆಪಿ ಗೋವಾದಲ್ಲಿ ಒಟ್ಟು ಮೂರು ಬಾರಿ ಕಾಂಗ್ರೆಸ್‌ನ ಶಾಸಕರನ್ನು ಸೆಳೆದಿದೆ. ಮೂರನೇ ಬಾರಿಗೆ ಅದು ಕಾಂಗ್ರೆಸ್‌ 10 ಶಾಸಕರನ್ನು ಸೆಳೆದುಕೊಂಡಿದೆ. ಇದು ಕಾಂಗ್ರೆಸ್ ಗೋವಾದಲ್ಲಿ ಮತ್ತಷ್ಟು ತತ್ತರಿಸುವಂತೆ ಮಾಡಿದೆ.

ಮನೋಹರ್‌ ಪರಿಕ್ಕರ್‌ ನಿಧನದ ನಂತರ ಉತ್ತರಾಧಿಕಾರಿಯಾಗಿ ನೇಮಕಗೊಂಡ ಹೊಸ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತುಸು ಸಮಯ ಆಪರೇಷನ್‌ ಕಮಲಕ್ಕೆ ವಿರಾಮ ನೀಡಿದ್ದರು.

ಇದನ್ನೂ ಓದಿ:ಗೋವಾ ಚುನಾವಣೆ: ಕಾಂಗ್ರೆಸ್ ಜೊತೆಗೆ ಗೋವಾ ಫಾರ್ವಾಡ್ ಪಾರ್ಟಿ ಮೈತ್ರಿ

ಇದೀಗ ಗೋವಾ ಫಾರ್ವರ್ಡ್ ಪಕ್ಷದ ಹಾಲಿ ಶಾಸಕ ಜಯೇಶ್ ಸಲ್ಗಾಂವ್ಕರ್,ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ನ ಶಾಸಕ ರವಿ ನಾಯ್ಕ್ ಮತ್ತು ಸ್ವತಂತ್ರ ಶಾಸಕ ರೋಹನ್ ಖೌಂಟೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಲ್ಲಿ ಇಬ್ಬರು ಈಗಾಗಲೇ ಬಿಜೆಪಿಗೆ ಸೇರ್ಪಡೆಗೊಂಡಿದ್ದರೆ, ರೋಹನ್‌ ಖೌಂಟೆ ಶುಕ್ರವಾರ ಬಿಜೆಪಿಗೆ ಸೇರಲಿದ್ದಾರೆ.

ಮತ್ತೊಬ್ಬ ಕಾಂಗ್ರೆಸ್ ಶಾಸಕ ಲುಜಿನ್ಹೋ ಫಲೈರೊ ಮಾರ್ಚ್‌ನಲ್ಲಿ ತೃಣಮೂಲ ಕಾಂಗ್ರೆಸ್‌ಗೆ ಸೇರಿದ್ದಾರೆ. ಈ ಮಧ್ಯೆ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಏಕೈಕ ಶಾಸಕ ಚರ್ಚಿಲ್ ಅಲೆಮಾವೊ ಈ ತಿಂಗಳ ಆರಂಭದಲ್ಲಿ ತೃಣಮೂಲ ಪಕ್ಷಕ್ಕೆ ವಿಲೀನಗೊಂಡಿರುವುದಾಗಿ ಹೇಳಿಕೊಂಡಿದ್ದಾರೆ.

ಆಶ್ಚರ್ಯವೆಂಬಂತೆ ಹಾಲಿ ಬಿಜೆಪಿ ಶಾಸಕಿ, ರಾಜ್ಯದ ಮಾಜಿ ಅರಣ್ಯ ಸಚಿವ ಅಲಿನಾ ಸಲ್ಡಾನ್ಹಾ ಅವರು ಗುರುವಾರದಂದು ಬಿಜೆಪಿ ತೊರೆದಿದ್ದು, ಶೀಘ್ರದಲ್ಲೇ ಆಮ್ ಆದ್ಮಿ ಪಕ್ಷಕ್ಕೆ ಸೇರಲಿದ್ದಾರೆ.

ಇದನ್ನು ಓದಿ:ಗೋವಾ ಚುನಾವಣೆ: ಉಚಿತ ವಿದ್ಯುತ್, ಉದ್ಯೋಗ ಖಾತ್ರಿ ಭರವಸೆ ನೀಡಿದ ಅರವಿಂದ್ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...