Homeಮುಖಪುಟಲಿಂಗಾಯತ ಸಸ್ಯಹಾರಿ ಧರ್ಮವೇ?-ಬಾಲಾಜಿ ಕುಂಬಾರ

ಲಿಂಗಾಯತ ಸಸ್ಯಹಾರಿ ಧರ್ಮವೇ?-ಬಾಲಾಜಿ ಕುಂಬಾರ

- Advertisement -
- Advertisement -

  • ಬಾಲಾಜಿ ಕುಂಬಾರ,ಬೀದರ
  • ರಾಜ್ಯದ ಶಾಲಾ ಕಾಲೇಜಿನ ಬಹುತೇಕ ಹಾಸ್ಟೇಲ್ ಮಕ್ಕಳಿಗೆ, ಗರ್ಭಿಣಿಯರಿಗೆ, ಅಂಗನವಾಡಿ ಮಕ್ಕಳಿಗೆ ಮೊಟ್ಟೆ ಹಾಗೂ ಬಾಳೆಹಣ್ಣು ಜೊತೆಗೆ ಇತರೆ ಪೌಷ್ಟಿಕಾಂಶದ ಕಾಳುಗಳನ್ನೂ ಕೊಡುವುದು ಮೊದಲಿನಿಂದಲೂ ಜಾರಿಯಲ್ಲಿದೆ. ಆದರೆ ಅದನ್ನು ಯಾವತ್ತೂ ಯಾರೂ ವಿರೋಧ ಮಾಡಲಿಲ್ಲ, ಆದರೆ ಈಗ ಸರ್ಕಾರ ಹೈದರಾಬಾದ್‌ ಕರ್ನಾಟಕ ಭಾಗದ ಶಾಲಾ ಮಕ್ಕಳಿಗೆ (ವಾರದಲ್ಲಿ ಮೂರು ದಿನ) ಮೊಟ್ಟೆ ಕೊಡಬೇಕೆಂದು ಜಾರಿಗೊಳಿಸಿದ “ಮೊಟ್ಟೆ ಯೋಜನೆ” ಮೇಲೆ ಕೆಲವು ಸಂಘಟನೆ, ಮಠಾಧೀಶರ ಕಣ್ಣು ಬಿದ್ದಿದೆ. ಮೊಟ್ಟೆ ವಿರುದ್ಧ ಇಷ್ಟೊಂದು ವ್ಯಾಪಕವಾಗಿ ಮೊಟ್ಟೆ ಚಳವಳಿ ಆರಂಭಿಸಲು ಉದ್ದೇಶ ಏನಿರಬಹುದು ಅರ್ಥವಾಗುತ್ತಿಲ್ಲ. ಇದು ಅಷ್ಟೇ ವಿಚಿತ್ರವೂ….ಹಾಸ್ಯಾಸ್ಪದಕ್ಕೂ ಕಾರಣವಾಗಿದೆ.

    ಹೌದು, ನಾನು ಮೊಟ್ಟೆ ತಿನ್ನುತ್ತೇನೆ, ಆದರೆ ನಾನು ಇಲ್ಲಿಯವರೆಗೆ ನಾನು ಯಾವುದೇ, ಮಾಂಸ ಸೇವಿಸಲಿಲ್ಲ (ನಮ್ಮ ಕುಟುಂಬವೂ ಸಸ್ಯಹಾರಿ). ಆದರೆ ನಾನು ಮಾಂಸಹಾರಿಗಳನ್ನು ಎಂದಿಗೂ ತಿರಸ್ಕಾರದಿಂದ ನೋಡಲಿಲ್ಲ. ಅವರು ನನ್ನೆದುರಿಗೆ ಕುಳಿತು ಮಾಂಸ ತಿಂದರೂ ನನಗ್ಯಾವ ತೊಂದರೆಯೂ ಆಗಲ್ಲ. ಅವರು ‘ ಮಾಂಸ ತಿನ್ನಿ’ ಎಂದು ನನಗೆ ಒತ್ತಾಯ ಮಾಡಲ್ಲ. ನೀವು ‘ಮಾಂಸ ಬಿಡಿ’ ಎಂದು ನಾನು ಆಗ್ರಹಿಸುವುದಿಲ್ಲ. ಆಹಾರ ಅವರವರ ವೈಯುಕ್ತಿಕ ಹಕ್ಕು, ಆದರೆ ಇದೇ ತಿನ್ನಿ, ಇದು ಬಿಡಿ ಎಂದು ಪ್ರಶ್ನಿಸುವ, ಹೇರುವ, ವಿರೋಧಿಸುವ ಹಕ್ಕು ಯಾರಿಗೂ ಇಲ್ಲ ಎಂದು ನಂಬಿರುವನು ನಾನು.

    ಇದನ್ನೂ ಓದಿ:ಮಾಂಸಾಹಾರಿ ಸಮುದಾಯಗಳ ರಾಕ್ಶಸೀಕರಣ ನಿಲ್ಲಲಿ

    ಆಹಾರದ ಕುರಿತು ಕಟ್ಟುಪಾಡು ಹೊರಡಿಸಿದ ಯಾವ ಧರ್ಮಗಳು ವ್ಯಾಪಕವಾಗಿ ಬೆಳೆಯಲು ಸಾಧ್ಯವಿಲ್ಲ. ಲಿಂಗಾಯತ ಕೂಡ ಅಷ್ಟೇ, ಕಳ್ಳರನ್ನು, ಸುಳ್ಳರನ್ನು ವೇಶ್ಯೆಯರನ್ನು, ಹೆಂಡ ಮಾರುವರನ್ನು ಸೇರಿ ಇನ್ನಿತರ ಹಲವರನ್ನು ಲಿಂಗಾಯತರನ್ನಾಗಿಸಿ, ಒಬ್ಬ ಪ್ರಜ್ಞಾವಂತ ಮನುಷ್ಯರಾಗಿ ಬದುಕುವಂತೆ ಕಲಿಸಿಕೊಟ್ಟ ಬಸವಣ್ಣ ಹಾಗೂ ಸಮಕಾಲೀನ ಶರಣರ ಮಹೋನ್ನತ ತತ್ವ ಸಿದ್ಧಾಂತದ ಆಶಯಗಳು ಇಂದು ಮತ್ತೆ ಮುನ್ನೆಲೆಗೆ ಬರಬೇಕಾಗಿದೆ. ಆದರೆ ಅವೆಲ್ಲವೂ ಇಂದು ಜಾತಿಯತೆ ದೃಷ್ಟಿಕೋನದಿಂದ ಅಳೆದು – ತೂಗಿ ಇವ್ರು ಲಿಂಗಾಯತರು ಎಂದು ಹೇಳುವ ಪರಿಸ್ಥಿತಿ ನಿರ್ಮಾಣವಾಗಿರುವುದು ದೊಡ್ಡ ದುರಂತ ಅನ್ನಬಹುದು.

    ಮಾಂಸಹಾರಿಗಳು ಕನಿಷ್ಟರು, ಸಸ್ಯಹಾರಿಗಳು ಶ್ರೇಷ್ಠರು ಎಂದು ವಿಂಗಡಿಸುವುದು ಕಂಡರೆ ಇದು ಜಾತಿಯತೆಯ ಭಾಗವೇ ಎಂದೆನಿಸುತ್ತದೆ. ಎಲ್ಲಾ ಲಿಂಗಾಯತರು ಸಸ್ಯಹಾರಿಗಳಲ್ಲ, ಸಸ್ಯಹಾರಿಗಳು ಎಲ್ಲರೂ ಲಿಂಗಾಯತರಲ್ಲ, ಇದರೊಳಗೆ ಮಾಂಸಹಾರಿ ಲಿಂಗಾಯತರೂ ಇದ್ದಾರೆ. ಅಷ್ಟೇ ಯಾಕೆ ಶುದ್ದ ಮಾಂಸಹಾರಿಗಳೂ ಕೂಡ ಬಸವತತ್ವವನ್ನು ಅತಿಯಾಗಿ ಹಚ್ಚಿಕೊಂಡು ಬಸವಾದಿ ಶರಣರನ್ನೇ ಉಸಿರಾಗಿಸಿಕೊಂಡು ಬದುಕುವ ಅದೆಷ್ಟೋ ಕುಟುಂಬಗಳು, ಸಮುದಾಯವೇ ನಮ್ಮಲ್ಲಿದೆ. ಬಹುತೇಕ ಸಸ್ಯಹಾರಿ, ಮಾಂಸಹಾರಿಗಳು ಬಸವಣ್ಣನವರನ್ನು ಬರೀ ಗುರುವಾಗಿ ಸ್ವೀಕರಿಸಿದ್ದಾರೆ ಹೊರತು ಅವರ್ಯಾರು ತತ್ವಕ್ಕೆ ಬದ್ಧರಲ್ಲ. ಒಟ್ಟಿನಲ್ಲಿ ಶರಣರ ಆಶಯಗಳ ವಿರೋಧ ನಡೆ.

    ಇದನ್ನೂ ಓದಿ:‘ಕೆಲವು ಜನರ ಅಹಂ ತಣಿಸಲು ಹೊರಗಡೆ ಮಾಂಸಾಹಾರ ಮಾರಾಟ ಮಾಡಬೇಡಿ ಎನ್ನುತ್ತೀರಿ’: ಚಾಟಿ ಬೀಸಿದ ಗುಜರಾತ್‌ ಹೈಕೋರ್ಟ್‌

    ಮೊಟ್ಟೆ ತಿನ್ನದ ಮಕ್ಕಳಿಗೆ ಪರ್ಯಾಯವಾಗಿ ಬಾಳೆಹಣ್ಣು ಇದೆ, ಆದರೆ ಕೆಲವರು ಮೊಟ್ಟೆ ತಿನ್ನುವರು ಮನೆಯಲ್ಲಿ ತಿಂದು ಬರಲಿ ಅಂತಾರೆ, ಇನ್ನೂ ಕೆಲವರು ಮೊಟ್ಟೆ ತಿನ್ನವರಿಗೆ ಮೊಟ್ಟೆ ಬದಲು ಹಣ ಕೊಡಿ ಅಂತಾರೆ, ಮೊಟ್ಟೆ ಬಾಳೆಹಣ್ಣು ನೀಡುವುದರಿಂದ ಭೇದಭಾವ , ಅಸಮಾನತೆ ಆಗುತ್ತೆ ಅನ್ನುವರು ಇನ್ನೂ ಒಂದಿಷ್ಟು ಮಂದಿ. ತಮ್ಮ ತಮ್ಮ ಸಮುದಾಯದಲ್ಲೇ ನಾವು ಶ್ರೇಷ್ಠರು ಅವರು ಕನಿಷ್ಟರು ಎಂದು ರಕ್ತಸಂಬಂಧ ಬೆಳೆಸಲು ಹಿಂದೇಟು ಹಾಕುವವರು, ತಳವರ್ಗ ಸಮುದಾಯವರನ್ನು ಇನ್ನೂ ಮನೆಯೊಳಗೆ ಬಿಡದೇ ಮೇಲಿಂದ ರೊಟ್ಟಿ ಕೊಡುವ ಅಸ್ಪೃಶ್ಯತೆಗಿಂತ ಮೊಟ್ಟೆ ಬಾಳೆಹಣ್ಣಿನ ನಡುವಿನ ಅಸಮಾನತೆ ದೊಡ್ಡದೇನಲ್ಲ ಬಿಡಿ.

    ನಾವು ಗಟ್ಟಿಯಾಗಿ ಮಾತನಾಡಬೇಕಾಗಿದ್ದು ಹಸಿವಿನ ಬಗ್ಗೆ, ಕ್ರೂರ ಜಾತಿಯತೆ ಬಗ್ಗೆ, ಅದನ್ನು ಬಿಟ್ಟು ಆಹಾರದ ಬಗ್ಗೆ ಅನಗತ್ಯ ವಿಷಯವಲ್ಲ. ಇದರಿಂದಾಗಿ ಲಿಂಗಾಯತ ತತ್ವವನ್ನು ಒಪ್ಪಿಕೊಂಡು, ಅಪ್ಪಿಕೊಂಡು ಸಾಧ್ಯವಾದಷ್ಟು ಮೈಗೂಡಿಸಿಕೊಂಡು ಬದುಕುವ ಮಾಂಸಪ್ರಿಯರಿಗೆ ಗೊಂದಲ ಸೃಷ್ಟಿಸಿದೆ. ಶರಣತತ್ವ ಅಂದ್ರೆ ಶುದ್ದ ಸಸ್ಯಹಾರಿ ಧರ್ಮವೇ? ಎಂಬುದು ಈಗ ಯಕ್ಷ ಪ್ರಶ್ನೆಯಾಗಿಯೇ ಕಾಡುತ್ತಿದೆ. ಲಿಂಗಾಯತ ಸಸ್ಯಹಾರಿ ಧರ್ಮವೇ ಆದರೆ ಈಗಾಗಲೇ ಲಿಂಗಾಯತದಲ್ಲಿ ಇರುವ ಮಾಂಸಹಾರಿ ಉಪಪಂಗಡದವರು ಎಲ್ಲಿ ಹೋಗಬೇಕು? ಆಹಾರದ ಕಟ್ಟುಪಾಡಿನ ಕಾರಣಕ್ಕೇ ಅವರನ್ನು ಲಿಂಗಾಯತರೆಂದು ಪರಿಗಣಿಸಬಾರದೇ?

    ಶರಣರ ಯಾರನ್ನೂ ಕೀಳಾಗಿ, ಕನಿಷ್ಟರು, ಶ್ರೇಷ್ಠರು ಭೇದಭಾವ ಮಾಡಲಿಲ್ಲ. ‘ಎನಗಿಂತ ಕಿರಿಯರಿಲ್ಲ’ ಎಂಬ ಭಾವ ಅದೆಷ್ಟು ಸರಳ..ಸುಂದರ…ಅನನ್ಯ ಅರ್ಥೈಸುತ್ತದೆ. ಯೋಚಿಸೋಣ..!!

    ಇದನ್ನೂ ಓದಿ:ಸಸ್ಯಹಾರಿಯಾಗಿದ್ದ ನಾನು ಬಾಡೂಟಕ್ಕೆ ತೆರೆದುಕೊಂಡದ್ದು ಹೀಗೆ…

    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

    LEAVE A REPLY

    Please enter your comment!
    Please enter your name here

    - Advertisment -

    ಸಭಾಪತಿ ಹೊರಟ್ಟಿ ಉಮಾಶ್ರೀ ಜೊತೆ ಬಳಸಿದ ಭಾಷೆ ಶಿಸ್ತಿನ ಹೆಸರಿನ ಅಹಂಕಾರ: ನಿರ್ದೇಶಕಿ ಸುಮನಾ ಕಿತ್ತೂರು

    ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಧಾನಪರಿಷತ್‌ನಲ್ಲಿ ಉಮಾಶ್ರೀ ಅವರಿಗೆ ಬಳಸಿದ ಭಾಷೆ ಶಿಸ್ತಿನ ಹೆಸರಲ್ಲಿನ ಅಹಂಕಾರವಾಗಿದೆ ಎಂದು ನಿರ್ದೇಶಕಿ ಸುಮನಾ ಕಿತ್ತೂರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗುರುವಾರ (ಫೆ.5) ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ...

    ವಾಷಿಂಗ್ಟನ್ ಪೋಸ್ಟ್‌ನಲ್ಲಿ ಉದ್ಯೋಗ ಕಡಿತ : ಕೆಲಸ ಕಳೆದುಕೊಂಡ ಶಶಿ ತರೂರ್ ಮಗ

    ಪ್ರಮುಖ ಮಾಧ್ಯಮ ಸಂಸ್ಥೆ ವಾಷಿಂಗ್ಟನ್‌ ಪೋಸ್ಟ್‌ನಲ್ಲಿ ಭಾರೀ ಉದ್ಯೋಗ ಕಡಿತ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಕೆಲಸ ಕಳೆದುಕೊಂಡಿರುವ ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಸಂಸದ ಶಶಿ ತರೂರ್ ಅವರ ಮಗ...

    ಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆ : ಲೋಕಸಭೆ ಕಲಾಪ ಮುಂದೂಡಿಕೆ

    ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಗುರುವಾರ (ಫೆ.5) ಲೋಕಸಭೆ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಮಧ್ಯಾಹ್ನದವರೆಗೆ ಮುಂದೂಡಿದರು. ಬೆಳಿಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ, ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಆರಂಭಿಸಿದರು. ವಿಶೇಷವಾಗಿ,...

    ಗದಗ | ಕ್ಯಾಂಟರ್-ಕ್ರೂಸರ್ ನಡುವೆ ಅಪಘಾತ : ಮೂವರು ಸ್ಥಳದಲ್ಲೇ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

    ಗದಗ ಜಿಲ್ಲೆ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಜೇಂದ್ರಗಡದ...

    ‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

    ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...

    ‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

    ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...

    ಪ.ಬಂಗಾಳವನ್ನು ಗುರಿಯಾಗಿಸಲಾಗುತ್ತಿದೆ, ಅಸ್ಸಾಂನಲ್ಲಿ ಎಸ್‌ಐಆರ್‌ ಏಕಿಲ್ಲ? : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ವಾದ

    ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪಶ್ಚಿಮ ಬಂಗಾಳವನ್ನು ಗುರಿಯಾಗಿಸಲಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಫೆ.4) ಆರೋಪಿಸಿದ್ದು, ಬಿಜೆಪಿ ಆಡಳಿತವಿರುವ ಅಸ್ಸಾಂನಲ್ಲಿ ಏಕೆ ಎಸ್‌ಐಆರ್ ನಡೆಸುತ್ತಿಲ್ಲ ಎಂಬುವುದಾಗಿ...

    ತಮಿಳುನಾಡು| ದಲಿತ ಯುವಕನನ್ನು ಪ್ರೀತಿಸುತ್ತಿದ್ದ ಯುವತಿ ಅನುಮಾನಾಸ್ಪದ ಸಾವು; ಮರ್ಯಾದೆಗೇಡು ಹತ್ಯೆ ಶಂಕೆ

    ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿ ಸಾವು ಮರ್ಯಾದಾ ಹತ್ಯೆಯ ಗಂಭೀರ ಆರೋಪಗಳನ್ನು ಹುಟ್ಟುಹಾಕಿದೆ. ಸಾವಿನ ಆರಂಭಿಕ ತನಿಖೆಯು ಆತ್ಮಹತ್ಯೆಯತ್ತ ಬೊಟ್ಟು ಮಾಡುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿಯ ನಂತರವೇ ಸಾವಿಗೆ ಅಂತಿಮ ಕಾರಣ...

    ‘ರಾಜ್ಯವನ್ನು ನಿರ್ಲಕ್ಷಿಸಲಾಗಿದೆ’ : ಕೇಂದ್ರ ಬಜೆಟ್‌ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

    ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್ ವಿರುದ್ದ ಕೇರಳ ವಿಧಾನಸಭೆ ನಿರ್ಣಯ ಅಂಗೀಕರಿಸಿದ್ದು, ರಾಜ್ಯವನ್ನು 'ನಿರ್ಲಕ್ಷಿಸಲಾಗಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದೆ. ಬಜೆಟ್‌ನಲ್ಲಿ ಕೇರಳದ ದೀರ್ಘಕಾಲದ ಬೇಡಿಕೆಗಳನ್ನು ಪರಿಗಣಿಸದೆ ಇರುವುದು ಮತ್ತು ರಾಜ್ಯಕ್ಕೆ ನೀಡಬೇಕಾದ ನ್ಯಾಯಯುತ...

    ದೇವಾಲಯ-ಶಾಲೆಗಳ ಬಳಿ ಇರುವ ಮಾಂಸ ಮಳಿಗೆಗಳ ಕುರಿತು ಏಕರೂಪ ನೀತಿ ರೂಪಿಸಿ: ತೆಲಂಗಾಣ ಹೈಕೋರ್ಟ್

    ಸಾರ್ವಜನಿಕ ಭಾವನೆ, ನೈರ್ಮಲ್ಯ, ಸಂಚಾರ ನಿರ್ವಹಣೆ, ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಕಳವಳಗಳನ್ನು ಉಲ್ಲೇಖಿಸಿ, ದೇವಾಲಯಗಳು, ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳಿಂದ 100 ಮೀಟರ್ ಒಳಗೆ ಮಾಂಸ ಮತ್ತು ಮಾಂಸಾಹಾರಿ ಆಹಾರ ಮಾರಾಟವನ್ನು...