Homeಮುಖಪುಟಲಿಂಗಾಯತ ಸಸ್ಯಹಾರಿ ಧರ್ಮವೇ?-ಬಾಲಾಜಿ ಕುಂಬಾರ

ಲಿಂಗಾಯತ ಸಸ್ಯಹಾರಿ ಧರ್ಮವೇ?-ಬಾಲಾಜಿ ಕುಂಬಾರ

- Advertisement -
- Advertisement -

  • ಬಾಲಾಜಿ ಕುಂಬಾರ,ಬೀದರ
  • ರಾಜ್ಯದ ಶಾಲಾ ಕಾಲೇಜಿನ ಬಹುತೇಕ ಹಾಸ್ಟೇಲ್ ಮಕ್ಕಳಿಗೆ, ಗರ್ಭಿಣಿಯರಿಗೆ, ಅಂಗನವಾಡಿ ಮಕ್ಕಳಿಗೆ ಮೊಟ್ಟೆ ಹಾಗೂ ಬಾಳೆಹಣ್ಣು ಜೊತೆಗೆ ಇತರೆ ಪೌಷ್ಟಿಕಾಂಶದ ಕಾಳುಗಳನ್ನೂ ಕೊಡುವುದು ಮೊದಲಿನಿಂದಲೂ ಜಾರಿಯಲ್ಲಿದೆ. ಆದರೆ ಅದನ್ನು ಯಾವತ್ತೂ ಯಾರೂ ವಿರೋಧ ಮಾಡಲಿಲ್ಲ, ಆದರೆ ಈಗ ಸರ್ಕಾರ ಹೈದರಾಬಾದ್‌ ಕರ್ನಾಟಕ ಭಾಗದ ಶಾಲಾ ಮಕ್ಕಳಿಗೆ (ವಾರದಲ್ಲಿ ಮೂರು ದಿನ) ಮೊಟ್ಟೆ ಕೊಡಬೇಕೆಂದು ಜಾರಿಗೊಳಿಸಿದ “ಮೊಟ್ಟೆ ಯೋಜನೆ” ಮೇಲೆ ಕೆಲವು ಸಂಘಟನೆ, ಮಠಾಧೀಶರ ಕಣ್ಣು ಬಿದ್ದಿದೆ. ಮೊಟ್ಟೆ ವಿರುದ್ಧ ಇಷ್ಟೊಂದು ವ್ಯಾಪಕವಾಗಿ ಮೊಟ್ಟೆ ಚಳವಳಿ ಆರಂಭಿಸಲು ಉದ್ದೇಶ ಏನಿರಬಹುದು ಅರ್ಥವಾಗುತ್ತಿಲ್ಲ. ಇದು ಅಷ್ಟೇ ವಿಚಿತ್ರವೂ….ಹಾಸ್ಯಾಸ್ಪದಕ್ಕೂ ಕಾರಣವಾಗಿದೆ.

    ಹೌದು, ನಾನು ಮೊಟ್ಟೆ ತಿನ್ನುತ್ತೇನೆ, ಆದರೆ ನಾನು ಇಲ್ಲಿಯವರೆಗೆ ನಾನು ಯಾವುದೇ, ಮಾಂಸ ಸೇವಿಸಲಿಲ್ಲ (ನಮ್ಮ ಕುಟುಂಬವೂ ಸಸ್ಯಹಾರಿ). ಆದರೆ ನಾನು ಮಾಂಸಹಾರಿಗಳನ್ನು ಎಂದಿಗೂ ತಿರಸ್ಕಾರದಿಂದ ನೋಡಲಿಲ್ಲ. ಅವರು ನನ್ನೆದುರಿಗೆ ಕುಳಿತು ಮಾಂಸ ತಿಂದರೂ ನನಗ್ಯಾವ ತೊಂದರೆಯೂ ಆಗಲ್ಲ. ಅವರು ‘ ಮಾಂಸ ತಿನ್ನಿ’ ಎಂದು ನನಗೆ ಒತ್ತಾಯ ಮಾಡಲ್ಲ. ನೀವು ‘ಮಾಂಸ ಬಿಡಿ’ ಎಂದು ನಾನು ಆಗ್ರಹಿಸುವುದಿಲ್ಲ. ಆಹಾರ ಅವರವರ ವೈಯುಕ್ತಿಕ ಹಕ್ಕು, ಆದರೆ ಇದೇ ತಿನ್ನಿ, ಇದು ಬಿಡಿ ಎಂದು ಪ್ರಶ್ನಿಸುವ, ಹೇರುವ, ವಿರೋಧಿಸುವ ಹಕ್ಕು ಯಾರಿಗೂ ಇಲ್ಲ ಎಂದು ನಂಬಿರುವನು ನಾನು.

    ಇದನ್ನೂ ಓದಿ:ಮಾಂಸಾಹಾರಿ ಸಮುದಾಯಗಳ ರಾಕ್ಶಸೀಕರಣ ನಿಲ್ಲಲಿ

    ಆಹಾರದ ಕುರಿತು ಕಟ್ಟುಪಾಡು ಹೊರಡಿಸಿದ ಯಾವ ಧರ್ಮಗಳು ವ್ಯಾಪಕವಾಗಿ ಬೆಳೆಯಲು ಸಾಧ್ಯವಿಲ್ಲ. ಲಿಂಗಾಯತ ಕೂಡ ಅಷ್ಟೇ, ಕಳ್ಳರನ್ನು, ಸುಳ್ಳರನ್ನು ವೇಶ್ಯೆಯರನ್ನು, ಹೆಂಡ ಮಾರುವರನ್ನು ಸೇರಿ ಇನ್ನಿತರ ಹಲವರನ್ನು ಲಿಂಗಾಯತರನ್ನಾಗಿಸಿ, ಒಬ್ಬ ಪ್ರಜ್ಞಾವಂತ ಮನುಷ್ಯರಾಗಿ ಬದುಕುವಂತೆ ಕಲಿಸಿಕೊಟ್ಟ ಬಸವಣ್ಣ ಹಾಗೂ ಸಮಕಾಲೀನ ಶರಣರ ಮಹೋನ್ನತ ತತ್ವ ಸಿದ್ಧಾಂತದ ಆಶಯಗಳು ಇಂದು ಮತ್ತೆ ಮುನ್ನೆಲೆಗೆ ಬರಬೇಕಾಗಿದೆ. ಆದರೆ ಅವೆಲ್ಲವೂ ಇಂದು ಜಾತಿಯತೆ ದೃಷ್ಟಿಕೋನದಿಂದ ಅಳೆದು – ತೂಗಿ ಇವ್ರು ಲಿಂಗಾಯತರು ಎಂದು ಹೇಳುವ ಪರಿಸ್ಥಿತಿ ನಿರ್ಮಾಣವಾಗಿರುವುದು ದೊಡ್ಡ ದುರಂತ ಅನ್ನಬಹುದು.

    ಮಾಂಸಹಾರಿಗಳು ಕನಿಷ್ಟರು, ಸಸ್ಯಹಾರಿಗಳು ಶ್ರೇಷ್ಠರು ಎಂದು ವಿಂಗಡಿಸುವುದು ಕಂಡರೆ ಇದು ಜಾತಿಯತೆಯ ಭಾಗವೇ ಎಂದೆನಿಸುತ್ತದೆ. ಎಲ್ಲಾ ಲಿಂಗಾಯತರು ಸಸ್ಯಹಾರಿಗಳಲ್ಲ, ಸಸ್ಯಹಾರಿಗಳು ಎಲ್ಲರೂ ಲಿಂಗಾಯತರಲ್ಲ, ಇದರೊಳಗೆ ಮಾಂಸಹಾರಿ ಲಿಂಗಾಯತರೂ ಇದ್ದಾರೆ. ಅಷ್ಟೇ ಯಾಕೆ ಶುದ್ದ ಮಾಂಸಹಾರಿಗಳೂ ಕೂಡ ಬಸವತತ್ವವನ್ನು ಅತಿಯಾಗಿ ಹಚ್ಚಿಕೊಂಡು ಬಸವಾದಿ ಶರಣರನ್ನೇ ಉಸಿರಾಗಿಸಿಕೊಂಡು ಬದುಕುವ ಅದೆಷ್ಟೋ ಕುಟುಂಬಗಳು, ಸಮುದಾಯವೇ ನಮ್ಮಲ್ಲಿದೆ. ಬಹುತೇಕ ಸಸ್ಯಹಾರಿ, ಮಾಂಸಹಾರಿಗಳು ಬಸವಣ್ಣನವರನ್ನು ಬರೀ ಗುರುವಾಗಿ ಸ್ವೀಕರಿಸಿದ್ದಾರೆ ಹೊರತು ಅವರ್ಯಾರು ತತ್ವಕ್ಕೆ ಬದ್ಧರಲ್ಲ. ಒಟ್ಟಿನಲ್ಲಿ ಶರಣರ ಆಶಯಗಳ ವಿರೋಧ ನಡೆ.

    ಇದನ್ನೂ ಓದಿ:‘ಕೆಲವು ಜನರ ಅಹಂ ತಣಿಸಲು ಹೊರಗಡೆ ಮಾಂಸಾಹಾರ ಮಾರಾಟ ಮಾಡಬೇಡಿ ಎನ್ನುತ್ತೀರಿ’: ಚಾಟಿ ಬೀಸಿದ ಗುಜರಾತ್‌ ಹೈಕೋರ್ಟ್‌

    ಮೊಟ್ಟೆ ತಿನ್ನದ ಮಕ್ಕಳಿಗೆ ಪರ್ಯಾಯವಾಗಿ ಬಾಳೆಹಣ್ಣು ಇದೆ, ಆದರೆ ಕೆಲವರು ಮೊಟ್ಟೆ ತಿನ್ನುವರು ಮನೆಯಲ್ಲಿ ತಿಂದು ಬರಲಿ ಅಂತಾರೆ, ಇನ್ನೂ ಕೆಲವರು ಮೊಟ್ಟೆ ತಿನ್ನವರಿಗೆ ಮೊಟ್ಟೆ ಬದಲು ಹಣ ಕೊಡಿ ಅಂತಾರೆ, ಮೊಟ್ಟೆ ಬಾಳೆಹಣ್ಣು ನೀಡುವುದರಿಂದ ಭೇದಭಾವ , ಅಸಮಾನತೆ ಆಗುತ್ತೆ ಅನ್ನುವರು ಇನ್ನೂ ಒಂದಿಷ್ಟು ಮಂದಿ. ತಮ್ಮ ತಮ್ಮ ಸಮುದಾಯದಲ್ಲೇ ನಾವು ಶ್ರೇಷ್ಠರು ಅವರು ಕನಿಷ್ಟರು ಎಂದು ರಕ್ತಸಂಬಂಧ ಬೆಳೆಸಲು ಹಿಂದೇಟು ಹಾಕುವವರು, ತಳವರ್ಗ ಸಮುದಾಯವರನ್ನು ಇನ್ನೂ ಮನೆಯೊಳಗೆ ಬಿಡದೇ ಮೇಲಿಂದ ರೊಟ್ಟಿ ಕೊಡುವ ಅಸ್ಪೃಶ್ಯತೆಗಿಂತ ಮೊಟ್ಟೆ ಬಾಳೆಹಣ್ಣಿನ ನಡುವಿನ ಅಸಮಾನತೆ ದೊಡ್ಡದೇನಲ್ಲ ಬಿಡಿ.

    ನಾವು ಗಟ್ಟಿಯಾಗಿ ಮಾತನಾಡಬೇಕಾಗಿದ್ದು ಹಸಿವಿನ ಬಗ್ಗೆ, ಕ್ರೂರ ಜಾತಿಯತೆ ಬಗ್ಗೆ, ಅದನ್ನು ಬಿಟ್ಟು ಆಹಾರದ ಬಗ್ಗೆ ಅನಗತ್ಯ ವಿಷಯವಲ್ಲ. ಇದರಿಂದಾಗಿ ಲಿಂಗಾಯತ ತತ್ವವನ್ನು ಒಪ್ಪಿಕೊಂಡು, ಅಪ್ಪಿಕೊಂಡು ಸಾಧ್ಯವಾದಷ್ಟು ಮೈಗೂಡಿಸಿಕೊಂಡು ಬದುಕುವ ಮಾಂಸಪ್ರಿಯರಿಗೆ ಗೊಂದಲ ಸೃಷ್ಟಿಸಿದೆ. ಶರಣತತ್ವ ಅಂದ್ರೆ ಶುದ್ದ ಸಸ್ಯಹಾರಿ ಧರ್ಮವೇ? ಎಂಬುದು ಈಗ ಯಕ್ಷ ಪ್ರಶ್ನೆಯಾಗಿಯೇ ಕಾಡುತ್ತಿದೆ. ಲಿಂಗಾಯತ ಸಸ್ಯಹಾರಿ ಧರ್ಮವೇ ಆದರೆ ಈಗಾಗಲೇ ಲಿಂಗಾಯತದಲ್ಲಿ ಇರುವ ಮಾಂಸಹಾರಿ ಉಪಪಂಗಡದವರು ಎಲ್ಲಿ ಹೋಗಬೇಕು? ಆಹಾರದ ಕಟ್ಟುಪಾಡಿನ ಕಾರಣಕ್ಕೇ ಅವರನ್ನು ಲಿಂಗಾಯತರೆಂದು ಪರಿಗಣಿಸಬಾರದೇ?

    ಶರಣರ ಯಾರನ್ನೂ ಕೀಳಾಗಿ, ಕನಿಷ್ಟರು, ಶ್ರೇಷ್ಠರು ಭೇದಭಾವ ಮಾಡಲಿಲ್ಲ. ‘ಎನಗಿಂತ ಕಿರಿಯರಿಲ್ಲ’ ಎಂಬ ಭಾವ ಅದೆಷ್ಟು ಸರಳ..ಸುಂದರ…ಅನನ್ಯ ಅರ್ಥೈಸುತ್ತದೆ. ಯೋಚಿಸೋಣ..!!

    ಇದನ್ನೂ ಓದಿ:ಸಸ್ಯಹಾರಿಯಾಗಿದ್ದ ನಾನು ಬಾಡೂಟಕ್ಕೆ ತೆರೆದುಕೊಂಡದ್ದು ಹೀಗೆ…

    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

    LEAVE A REPLY

    Please enter your comment!
    Please enter your name here

    - Advertisment -

    ‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

    ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

    ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

    ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

    2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

    ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

    ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

    ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

    ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

    ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

    ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

    ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

    ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

    ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

    ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

    ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

    ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

    ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

    ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

    ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....