Homeಮುಖಪುಟಲಿಂಗಾಯತ ಸಸ್ಯಹಾರಿ ಧರ್ಮವೇ?-ಬಾಲಾಜಿ ಕುಂಬಾರ

ಲಿಂಗಾಯತ ಸಸ್ಯಹಾರಿ ಧರ್ಮವೇ?-ಬಾಲಾಜಿ ಕುಂಬಾರ

- Advertisement -
- Advertisement -

  • ಬಾಲಾಜಿ ಕುಂಬಾರ,ಬೀದರ
  • ರಾಜ್ಯದ ಶಾಲಾ ಕಾಲೇಜಿನ ಬಹುತೇಕ ಹಾಸ್ಟೇಲ್ ಮಕ್ಕಳಿಗೆ, ಗರ್ಭಿಣಿಯರಿಗೆ, ಅಂಗನವಾಡಿ ಮಕ್ಕಳಿಗೆ ಮೊಟ್ಟೆ ಹಾಗೂ ಬಾಳೆಹಣ್ಣು ಜೊತೆಗೆ ಇತರೆ ಪೌಷ್ಟಿಕಾಂಶದ ಕಾಳುಗಳನ್ನೂ ಕೊಡುವುದು ಮೊದಲಿನಿಂದಲೂ ಜಾರಿಯಲ್ಲಿದೆ. ಆದರೆ ಅದನ್ನು ಯಾವತ್ತೂ ಯಾರೂ ವಿರೋಧ ಮಾಡಲಿಲ್ಲ, ಆದರೆ ಈಗ ಸರ್ಕಾರ ಹೈದರಾಬಾದ್‌ ಕರ್ನಾಟಕ ಭಾಗದ ಶಾಲಾ ಮಕ್ಕಳಿಗೆ (ವಾರದಲ್ಲಿ ಮೂರು ದಿನ) ಮೊಟ್ಟೆ ಕೊಡಬೇಕೆಂದು ಜಾರಿಗೊಳಿಸಿದ “ಮೊಟ್ಟೆ ಯೋಜನೆ” ಮೇಲೆ ಕೆಲವು ಸಂಘಟನೆ, ಮಠಾಧೀಶರ ಕಣ್ಣು ಬಿದ್ದಿದೆ. ಮೊಟ್ಟೆ ವಿರುದ್ಧ ಇಷ್ಟೊಂದು ವ್ಯಾಪಕವಾಗಿ ಮೊಟ್ಟೆ ಚಳವಳಿ ಆರಂಭಿಸಲು ಉದ್ದೇಶ ಏನಿರಬಹುದು ಅರ್ಥವಾಗುತ್ತಿಲ್ಲ. ಇದು ಅಷ್ಟೇ ವಿಚಿತ್ರವೂ….ಹಾಸ್ಯಾಸ್ಪದಕ್ಕೂ ಕಾರಣವಾಗಿದೆ.

    ಹೌದು, ನಾನು ಮೊಟ್ಟೆ ತಿನ್ನುತ್ತೇನೆ, ಆದರೆ ನಾನು ಇಲ್ಲಿಯವರೆಗೆ ನಾನು ಯಾವುದೇ, ಮಾಂಸ ಸೇವಿಸಲಿಲ್ಲ (ನಮ್ಮ ಕುಟುಂಬವೂ ಸಸ್ಯಹಾರಿ). ಆದರೆ ನಾನು ಮಾಂಸಹಾರಿಗಳನ್ನು ಎಂದಿಗೂ ತಿರಸ್ಕಾರದಿಂದ ನೋಡಲಿಲ್ಲ. ಅವರು ನನ್ನೆದುರಿಗೆ ಕುಳಿತು ಮಾಂಸ ತಿಂದರೂ ನನಗ್ಯಾವ ತೊಂದರೆಯೂ ಆಗಲ್ಲ. ಅವರು ‘ ಮಾಂಸ ತಿನ್ನಿ’ ಎಂದು ನನಗೆ ಒತ್ತಾಯ ಮಾಡಲ್ಲ. ನೀವು ‘ಮಾಂಸ ಬಿಡಿ’ ಎಂದು ನಾನು ಆಗ್ರಹಿಸುವುದಿಲ್ಲ. ಆಹಾರ ಅವರವರ ವೈಯುಕ್ತಿಕ ಹಕ್ಕು, ಆದರೆ ಇದೇ ತಿನ್ನಿ, ಇದು ಬಿಡಿ ಎಂದು ಪ್ರಶ್ನಿಸುವ, ಹೇರುವ, ವಿರೋಧಿಸುವ ಹಕ್ಕು ಯಾರಿಗೂ ಇಲ್ಲ ಎಂದು ನಂಬಿರುವನು ನಾನು.

    ಇದನ್ನೂ ಓದಿ:ಮಾಂಸಾಹಾರಿ ಸಮುದಾಯಗಳ ರಾಕ್ಶಸೀಕರಣ ನಿಲ್ಲಲಿ

    ಆಹಾರದ ಕುರಿತು ಕಟ್ಟುಪಾಡು ಹೊರಡಿಸಿದ ಯಾವ ಧರ್ಮಗಳು ವ್ಯಾಪಕವಾಗಿ ಬೆಳೆಯಲು ಸಾಧ್ಯವಿಲ್ಲ. ಲಿಂಗಾಯತ ಕೂಡ ಅಷ್ಟೇ, ಕಳ್ಳರನ್ನು, ಸುಳ್ಳರನ್ನು ವೇಶ್ಯೆಯರನ್ನು, ಹೆಂಡ ಮಾರುವರನ್ನು ಸೇರಿ ಇನ್ನಿತರ ಹಲವರನ್ನು ಲಿಂಗಾಯತರನ್ನಾಗಿಸಿ, ಒಬ್ಬ ಪ್ರಜ್ಞಾವಂತ ಮನುಷ್ಯರಾಗಿ ಬದುಕುವಂತೆ ಕಲಿಸಿಕೊಟ್ಟ ಬಸವಣ್ಣ ಹಾಗೂ ಸಮಕಾಲೀನ ಶರಣರ ಮಹೋನ್ನತ ತತ್ವ ಸಿದ್ಧಾಂತದ ಆಶಯಗಳು ಇಂದು ಮತ್ತೆ ಮುನ್ನೆಲೆಗೆ ಬರಬೇಕಾಗಿದೆ. ಆದರೆ ಅವೆಲ್ಲವೂ ಇಂದು ಜಾತಿಯತೆ ದೃಷ್ಟಿಕೋನದಿಂದ ಅಳೆದು – ತೂಗಿ ಇವ್ರು ಲಿಂಗಾಯತರು ಎಂದು ಹೇಳುವ ಪರಿಸ್ಥಿತಿ ನಿರ್ಮಾಣವಾಗಿರುವುದು ದೊಡ್ಡ ದುರಂತ ಅನ್ನಬಹುದು.

    ಮಾಂಸಹಾರಿಗಳು ಕನಿಷ್ಟರು, ಸಸ್ಯಹಾರಿಗಳು ಶ್ರೇಷ್ಠರು ಎಂದು ವಿಂಗಡಿಸುವುದು ಕಂಡರೆ ಇದು ಜಾತಿಯತೆಯ ಭಾಗವೇ ಎಂದೆನಿಸುತ್ತದೆ. ಎಲ್ಲಾ ಲಿಂಗಾಯತರು ಸಸ್ಯಹಾರಿಗಳಲ್ಲ, ಸಸ್ಯಹಾರಿಗಳು ಎಲ್ಲರೂ ಲಿಂಗಾಯತರಲ್ಲ, ಇದರೊಳಗೆ ಮಾಂಸಹಾರಿ ಲಿಂಗಾಯತರೂ ಇದ್ದಾರೆ. ಅಷ್ಟೇ ಯಾಕೆ ಶುದ್ದ ಮಾಂಸಹಾರಿಗಳೂ ಕೂಡ ಬಸವತತ್ವವನ್ನು ಅತಿಯಾಗಿ ಹಚ್ಚಿಕೊಂಡು ಬಸವಾದಿ ಶರಣರನ್ನೇ ಉಸಿರಾಗಿಸಿಕೊಂಡು ಬದುಕುವ ಅದೆಷ್ಟೋ ಕುಟುಂಬಗಳು, ಸಮುದಾಯವೇ ನಮ್ಮಲ್ಲಿದೆ. ಬಹುತೇಕ ಸಸ್ಯಹಾರಿ, ಮಾಂಸಹಾರಿಗಳು ಬಸವಣ್ಣನವರನ್ನು ಬರೀ ಗುರುವಾಗಿ ಸ್ವೀಕರಿಸಿದ್ದಾರೆ ಹೊರತು ಅವರ್ಯಾರು ತತ್ವಕ್ಕೆ ಬದ್ಧರಲ್ಲ. ಒಟ್ಟಿನಲ್ಲಿ ಶರಣರ ಆಶಯಗಳ ವಿರೋಧ ನಡೆ.

    ಇದನ್ನೂ ಓದಿ:‘ಕೆಲವು ಜನರ ಅಹಂ ತಣಿಸಲು ಹೊರಗಡೆ ಮಾಂಸಾಹಾರ ಮಾರಾಟ ಮಾಡಬೇಡಿ ಎನ್ನುತ್ತೀರಿ’: ಚಾಟಿ ಬೀಸಿದ ಗುಜರಾತ್‌ ಹೈಕೋರ್ಟ್‌

    ಮೊಟ್ಟೆ ತಿನ್ನದ ಮಕ್ಕಳಿಗೆ ಪರ್ಯಾಯವಾಗಿ ಬಾಳೆಹಣ್ಣು ಇದೆ, ಆದರೆ ಕೆಲವರು ಮೊಟ್ಟೆ ತಿನ್ನುವರು ಮನೆಯಲ್ಲಿ ತಿಂದು ಬರಲಿ ಅಂತಾರೆ, ಇನ್ನೂ ಕೆಲವರು ಮೊಟ್ಟೆ ತಿನ್ನವರಿಗೆ ಮೊಟ್ಟೆ ಬದಲು ಹಣ ಕೊಡಿ ಅಂತಾರೆ, ಮೊಟ್ಟೆ ಬಾಳೆಹಣ್ಣು ನೀಡುವುದರಿಂದ ಭೇದಭಾವ , ಅಸಮಾನತೆ ಆಗುತ್ತೆ ಅನ್ನುವರು ಇನ್ನೂ ಒಂದಿಷ್ಟು ಮಂದಿ. ತಮ್ಮ ತಮ್ಮ ಸಮುದಾಯದಲ್ಲೇ ನಾವು ಶ್ರೇಷ್ಠರು ಅವರು ಕನಿಷ್ಟರು ಎಂದು ರಕ್ತಸಂಬಂಧ ಬೆಳೆಸಲು ಹಿಂದೇಟು ಹಾಕುವವರು, ತಳವರ್ಗ ಸಮುದಾಯವರನ್ನು ಇನ್ನೂ ಮನೆಯೊಳಗೆ ಬಿಡದೇ ಮೇಲಿಂದ ರೊಟ್ಟಿ ಕೊಡುವ ಅಸ್ಪೃಶ್ಯತೆಗಿಂತ ಮೊಟ್ಟೆ ಬಾಳೆಹಣ್ಣಿನ ನಡುವಿನ ಅಸಮಾನತೆ ದೊಡ್ಡದೇನಲ್ಲ ಬಿಡಿ.

    ನಾವು ಗಟ್ಟಿಯಾಗಿ ಮಾತನಾಡಬೇಕಾಗಿದ್ದು ಹಸಿವಿನ ಬಗ್ಗೆ, ಕ್ರೂರ ಜಾತಿಯತೆ ಬಗ್ಗೆ, ಅದನ್ನು ಬಿಟ್ಟು ಆಹಾರದ ಬಗ್ಗೆ ಅನಗತ್ಯ ವಿಷಯವಲ್ಲ. ಇದರಿಂದಾಗಿ ಲಿಂಗಾಯತ ತತ್ವವನ್ನು ಒಪ್ಪಿಕೊಂಡು, ಅಪ್ಪಿಕೊಂಡು ಸಾಧ್ಯವಾದಷ್ಟು ಮೈಗೂಡಿಸಿಕೊಂಡು ಬದುಕುವ ಮಾಂಸಪ್ರಿಯರಿಗೆ ಗೊಂದಲ ಸೃಷ್ಟಿಸಿದೆ. ಶರಣತತ್ವ ಅಂದ್ರೆ ಶುದ್ದ ಸಸ್ಯಹಾರಿ ಧರ್ಮವೇ? ಎಂಬುದು ಈಗ ಯಕ್ಷ ಪ್ರಶ್ನೆಯಾಗಿಯೇ ಕಾಡುತ್ತಿದೆ. ಲಿಂಗಾಯತ ಸಸ್ಯಹಾರಿ ಧರ್ಮವೇ ಆದರೆ ಈಗಾಗಲೇ ಲಿಂಗಾಯತದಲ್ಲಿ ಇರುವ ಮಾಂಸಹಾರಿ ಉಪಪಂಗಡದವರು ಎಲ್ಲಿ ಹೋಗಬೇಕು? ಆಹಾರದ ಕಟ್ಟುಪಾಡಿನ ಕಾರಣಕ್ಕೇ ಅವರನ್ನು ಲಿಂಗಾಯತರೆಂದು ಪರಿಗಣಿಸಬಾರದೇ?

    ಶರಣರ ಯಾರನ್ನೂ ಕೀಳಾಗಿ, ಕನಿಷ್ಟರು, ಶ್ರೇಷ್ಠರು ಭೇದಭಾವ ಮಾಡಲಿಲ್ಲ. ‘ಎನಗಿಂತ ಕಿರಿಯರಿಲ್ಲ’ ಎಂಬ ಭಾವ ಅದೆಷ್ಟು ಸರಳ..ಸುಂದರ…ಅನನ್ಯ ಅರ್ಥೈಸುತ್ತದೆ. ಯೋಚಿಸೋಣ..!!

    ಇದನ್ನೂ ಓದಿ:ಸಸ್ಯಹಾರಿಯಾಗಿದ್ದ ನಾನು ಬಾಡೂಟಕ್ಕೆ ತೆರೆದುಕೊಂಡದ್ದು ಹೀಗೆ…

    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

    LEAVE A REPLY

    Please enter your comment!
    Please enter your name here

    - Advertisment -

    ‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

    ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

    ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

    ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

    ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

    ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

    SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

    ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

    ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

    ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

    ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

    ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

    ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

    ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

    ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

    ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

    ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

    ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

    ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

    ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...