Homeಕರ್ನಾಟಕಕಾರವಾರದ ಕಾಳಿ ನದಿ ದಂಡೆ ಮತ್ತು ಕಡಲ ತೀರದಲ್ಲಿ ಹಿಮಾಲಯದ ವಲಸೆ ಹಕ್ಕಿಗಳ ಹಾಡು

ಕಾರವಾರದ ಕಾಳಿ ನದಿ ದಂಡೆ ಮತ್ತು ಕಡಲ ತೀರದಲ್ಲಿ ಹಿಮಾಲಯದ ವಲಸೆ ಹಕ್ಕಿಗಳ ಹಾಡು

- Advertisement -
- Advertisement -

ಚಳಿಗಾಲದಲ್ಲಿ ವಲಸೆ ಬರುವ ದೂರದ ಹಿಮಾಲಯ ಮತ್ತು ಹಲವು ಕಡೆಯ ಹಕ್ಕಿಗಳ ಹಾಡು ಕಾರವಾರದ ಕಾಳಿ ನದಿಯ ಇಕ್ಕೆಲ ಮತ್ತು ಅರಬ್ಭೀ ಸಮುದ್ರದ ದಂಡೆಯಲ್ಲಿ ಕೇಳಿ ಬರಲಾರಂಭಿಸಿದ್ದು ಪಕ್ಷಿ ಪ್ರಿಯರನ್ನು ಖುಷಿ ಪಡಿಸುತ್ತಿದೆ. ನದಿಯ ಎರಡೂ ಕಡೆಯ ಜವುಗು, ಹುಲ್ಲುಗಾವಲು, ಅಳಿವೆ ಹಾಗೂ ಕಡಲಂಚಿಗೆ ಉತ್ತರ ಗೋಲಾರ್ಧದ ತುತ್ತತುದಿಯ ಹಿಮಚ್ಛಾದಿತ ಪ್ರದೇಶದಿಂದ ವಲಸೆ ಬಂದಿರುವ ವಿವಿಧ ಬಗೆಯ ಹಕ್ಕಿಗಳು ಮತ್ತವುಗಳ ಚಲನವಲನಗಳನ್ನು ಕೈಗಾ ಬರ್ಡರ್ಸ್ ತಂಡ ಸೆರೆಹಿಡಿದಿದೆ.

ಕೋವಿಡ್ ಹಾವಳಿಯಿಂದಾಗಿ ಕಳೆದೆರಡು ವರ್ಷದಿಂದ ಕ್ಷೇತ್ರ ಕಾರ್ಯ ಮಾಡಲಾಗದ ಬೇಸರದಲ್ಲಿದ್ದ ಕೈಗಾ ಬರ್ಡರ್ಸ್ ತಂಡವೀಗ ವಲಸೆ ಹಕ್ಕಿಗಳ ಕಲರವ, ಹಾರಾಟ, ಸಂತಾನೋತ್ಪತ್ತಿಯೇ ಮುಂತಾದ ಚಟುವಟಿಕೆಗಳ ದಾಖಲೆಯಲ್ಲಿ ತೊಡಗಿದೆ. ಶಕ್ತಿ ಮೂಲಗಳು ಮತ್ತು ನೈಸರ್ಗಿಕ ಸಂಪನ್ಮೂಲಗಳ ಅವೈಜ್ಞಾನಿಕ ಬಳಕೆಯಿಂದ ಭೂಮಂಡಲದ ತಾಪಮಾನ ಏರುಗತಿಯಲ್ಲಿರುವ ಈ ವಿಷಮ ಕಾಲಘಟ್ಟದಲ್ಲಿ ಋತು ಮಾನಗಳ ಬದಲಾವಣೆಯ ಬಹುಮೂಲ್ಯವಾದ ಸೂಚಕಗಳಾದ ಪಕ್ಷಿಗಳ ಸಂರಕ್ಷಣೆಯ ಅರಿವು ಜನರಲ್ಲಿ ಮೂಡಬೇಕಾದ ಅನಿವಾರ್ಯತೆ ಎದುರಾಗಿದೆಯೆಂದು ತಂಡದ ಹಿರಿಯ ಪಕ್ಷಿ ತಜ್ಞ ಜಲೀಲ್ ಬಾರ್ಗಿರ್ ಹೇಳುತ್ತಾರೆ.

ಉತ್ತರ ಯುರೋಪ್, ಸೈಬಿರಿಯಾ, ಫಿನ್ಲ್ಯಾಂಡ್, ಮೆಡಿಟೆರಿಯನ್ ಸಮುದ್ರ, ಲಡಾಕ್, ಟಿಬೆಟ್‌ಗಳಿಂದ ಸಾವಿರಾರು ಕಿಮೀ ದೂರದ ಕಾರವಾರ ನದಿ-ಕಡಲು ದಂಡೆಗೆ ಹಾರಿ ಬಂದಿರುವ ಪಕ್ಷಿಗಳ ಅಪರೂಪದ ಚಿತ್ರ ಕೈಗಾ ಬರ್ಡರ್ಸ್ ಬಳಗ ತೆಗೆದಿದೆ. ಕಿತ್ತಳೆ ಕಾಲಿನ ಕಡಲಹಕ್ಕಿ [RUDDY TURNSTONE], ನೀಲಕತ್ತಿನ ಉಲ್ಲಂಕಿ [Ruff], ಕಡಲ ಉಲ್ಲಂಕಿ [Great Knot], ಬೂದು ಬೆನ್ನಿನ ಕಡಲಕ್ಕಿ [Heuglin’s Gull], ಕೆಂಪು ಕಾಲಿನ ಚಾಣ [Amur Falcon], ಪಟ್ಟೆರೆಕ್ಕೆಯ ಸೆಳೆವ [Montagu’s Harrier], ಪಟ್ಟೆತಲೆ ಹೆಬ್ಬಾತು [Bar Headed Geese] ಮತ್ತು ಬಿಳಿಕತ್ತಿನ ಉಲಿಯಕ್ಕಿ [Lesser Whltethroat] ಕಾರವಾರದ ಸುತ್ತಮುತ್ತ ಕಂಡುಬಂದಿವೆ. ಉತ್ತರ ಗೋಲಾರ್ಧದ ಹಿಮಾವೃತ ಪ್ರದೇಶಗಳ ಅತ್ಯುಗ್ರ ಛಳಿಗಾಲ ತಾಳಲಾಗದೆ ಸ್ವಲ್ಪ ಬೆಚ್ಚಗಿರವ ದಕ್ಷಿಣದತ್ತ ಹಕ್ಕಿಗಳು ವಲಸೆ ಬರುವುದು ಸಾಮಾನ್ಯ.

ಹಿಮ ಪ್ರದೇಶದ ಹಕ್ಕಿಗಳ ಜತೆ ಸ್ಥಳೀಯ ಅಳಿವಿನಂಚಿನ ವಲಸಿಗ ಬಿಳಿ ರಣ ಹದ್ದು [Egyptian Vulture] ಹಾಗೂ ಹಿಮಾಲಯದ ದೊಡ್ಡ ರಣ ಹದ್ದು [Himalayan Griffon Vulture] ಸಹ ಕಂಡುಬಂದಿದೆಯೆಂದು ಕೈಗಾ ಬರ್ಡ್‌ರ್ಸ್ ಬಳಗದವರು ಹೇಳುತ್ತಾರೆ. ಬಿಳಿರಣಹದ್ದು ತರುಣಾವಸ್ಥೆಯಲ್ಲಿ ಕಂಡುಬಂದಿರುವುದು ಅವುಗಳ ಸಂತಾನ ಹತ್ತಿರದಲ್ಲೆ ಆಗಿರುವುದನ್ನು ದೃಢಪಡಿಸುವಂತಿದೆ. ಸತ್ತ ಜಾನುವಾರುಗಳ ಕಳೆಬರದ [ಆಹಾರದ] ಕೊರತೆ, ಪಶುವೈದ್ಯಕೀಯದಲ್ಲಿ ನಿಷೇದಿತ ಔಷಧಿಗಳ ಮಿತಿಮಿಮೀರಿದ ಬಳಕೆ ಮತ್ತು ವಾಸಸ್ಥಳಗಳ ಒತ್ತುವರಿಯಿಂದ ಅಳಿವಿನಂಚಿನಲ್ಲಿರುವ ಬಿಳಿ ರಣಹದ್ದು, ಹಿಮಾಲಯದ ಬೃಹತ್ ಹದ್ದು ಮತ್ತು ಕಡಲ ಉಲ್ಲಂಕಿ ಪ್ರಬೇಧಗಳು ಕಾರವಾರದ ಆಚೀಚೆ ಕಾಣಿಸಿಕೊಂಡಿರುವುದು ವಿಶೇಷವಾಗಿದೆ.

ಅಪಾಯದಂಚಿನಲ್ಲಿರುವ ರಣ ಹದ್ದುಗಳ ಸಂರಕ್ಷಣೆಗೆ ಜಿಲ್ಲಾಡಳಿತ, ಅರಣ್ಯ ಇಲಾಖೆ ಮತ್ತು ಪಶುಸಂದೋಪನಾ ಇಲಾಖೆಗಳು ಒಂದಾಗಿ ಪ್ರಯತ್ನ ನಡೆಸಬೇಕೆಂದು ಕೈಗಾ ಬರ್ಡರ್ಸ್ ತಂಡದ ಸಂಯೋಜಕ ಮೋಹನದಾಸ್ ಸರ್ಕಾರಕ್ಕೆ ಪತ್ರ ಬರೆದು ಮನವಿಮಾಡಿದ್ದಾರೆ.


ಇದನ್ನೂ ಓದಿ: ಆಹಾರ ಶ್ರೇಷ್ಠತೆಯ ರಾಜಕೀಯದ ವಿವಿಧ ಮುಖಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...