Homeಕರ್ನಾಟಕಸೇವಾ ಅಭದ್ರತೆ, ವೇತನ ತಾರತಮ್ಯ ಖಂಡಿಸಿ ಅತಿಥಿ ಉಪನ್ಯಾಸಕರ ಬೃಹತ್‌ ಪ್ರತಿಭಟನೆ

ಸೇವಾ ಅಭದ್ರತೆ, ವೇತನ ತಾರತಮ್ಯ ಖಂಡಿಸಿ ಅತಿಥಿ ಉಪನ್ಯಾಸಕರ ಬೃಹತ್‌ ಪ್ರತಿಭಟನೆ

- Advertisement -
- Advertisement -

ಸೇವಾ ಅಭದ್ರತೆ, ವೇತನ ತಾರತಮ್ಯ ಖಂಡಿಸಿ ಅತಿಥಿ ಉಪನ್ಯಾಸಕರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಅನಿರ್ದಿಷ್ಟಾವಧಿ ತರಗತಿ ಬಹಿಷ್ಕಾರ ಮಾಡಿದ್ದಾರೆ.

ಬೆಳಗಾವಿ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಾವಿರಾರು ಅತಿಥಿ ಉಪನ್ಯಾಸಕರು ಬೆಳಗಾವಿಯಲ್ಲಿ ಸೇರಿ ಪ್ರತಿಭಟಿಸಿದ್ದಾರೆ. ಒಂದು ದಶಕದಿಂದ ಆಗುತ್ತಿರುವ ಅನ್ಯಾಯಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಅತಿಥಿ ಉಪನ್ಯಾಸಕರನ್ನು ಸರ್ಕಾರ ನೇಮಕ ಮಾಡಿಕೊಳ್ಳುತ್ತದೆ. ನಿಯಮದ ಪ್ರಕಾರ ಸರ್ಕಾರ ನಮಗೆ ಹತ್ತು ತಿಂಗಳು ಕೆಲಸ ಕೊಡಬೇಕು. ಆದರೆ ಸೆಮಿಸ್ಟರ್‌ ವ್ಯವಸ್ಥೆಯಿಂದಾಗಿ ನಮಗೆ ಮೂರು + ಮೂರು ತಿಂಗಳು ಕೆಲಸ ಸಿಗುತ್ತಿದೆ. ಅಂದರೆ ವರ್ಷಕ್ಕೆ ಆರು ತಿಂಗಳು ಮಾತ್ರ ಕೆಲಸ ನೀಡುತ್ತಾರೆ. ಬೇರೆ ರಾಜ್ಯಗಳಲ್ಲಿ ಯುಜಿಸಿ ನಿರ್ದೇಶನದಂತೆ ಅತಿಥಿ ಉಪನ್ಯಾಸಕರಿಗೆ ಉತ್ತಮ ಸಂಬಳ ನೀಡಲಾಗುತ್ತಿದೆ. ನಮ್ಮ ರಾಜ್ಯದಲ್ಲಿ ಕೇವಲ 11ರಿಂದ 13 ಸಾವಿರ ರೂ. ಸಂಬಳ ಕೊಡುತ್ತಿದ್ದಾರೆ ಎಂದು ಅತಿಥಿ ಉಪನ್ಯಾಸಕರು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿನ 430 ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಸುಮಾರು 14,500ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕೆಲಸ ಮಾಡುತ್ತಿದ್ದೇವೆ. ನಮಗೆ ಕಡಿಮೆ ಸಂಬಳ ಕೊಡುವುದಷ್ಟೇ ಅಲ್ಲದೇ ಮೂರು ತಿಂಗಳಾದರೂ ಸಂಬಳವನ್ನು ನೀಡುವುದಿಲ್ಲ. ನಮಗೆ ಯಾವುದೇ ಸೇವಾ ಭದ್ರತೆ ಕೂಡ ಇಲ್ಲ. ಖಾಯಂ ಉಪನ್ಯಾಸಕರು ಸೇವೆಗೆ ಬಂದಾಗ ಬೋಧನ ಕಾರ್ಯಭಾರ ಕಡಿಮೆಯಾಗಿ ನಮ್ಮನ್ನು ಕೆಲಸದಿಂದ ತೆರವು ಮಾಡಲಾಗುತ್ತದೆ. ಜೊತೆಗೆ ನಮಗೆ ಪಿ.ಎಫ್‌. ಆಗಲೀ, ಇಎಸ್‌ಐ ಸೌಲಭ್ಯವೂ ಇಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

ದೆಹಲಿ, ಪಶ್ಚಿಮ ಬಂಗಾಳ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡಿದ್ದಾರೆ. ಕೆಲವು ಕಡೆ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡಿದ್ದಾರೆ. ಕರ್ನಾಟಕ ಸರ್ಕಾರ ಈ ರೀತಿಯ ಉದಾರತೆ ಹಾಗೂ ಮಾನವೀಯತೆಯನ್ನು ತೋರಬೇಕಿದೆ. ಸಾಕಷ್ಟು ಅತಿಥಿ ಉಪನ್ಯಾಸಕರು ಆರೋಗ್ಯ ಸಮಸ್ಯೆಗಳಿಂದ ಮೃತಪಟ್ಟಿದ್ದಾರೆ. ಅನೇಕರು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಕೆಲವರು ಆರ್ಥಿಕ ಪರಿಸ್ಥಿತಿ ಹದಗೆಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಡಿಸೆಂಬರ್‌ 10ರಿಂದ ಅನಿರ್ದಿಷ್ಟಾವತಿ ಹೋರಾಟ, ಉಪವಾಸ ಸತ್ಯಾಗ್ರಹ, ತರಗತಿ ಬಹಿಷ್ಕಾರ ಹಾಕಿದ್ದೇವೆ. ಬೆಳಗಾವಿ ಅಧಿವೇಶನದಲ್ಲೂ ಅತಿಥಿ ಉಪನ್ಯಾಸಕರ ಸಮಸ್ಯೆಗಳು ಚರ್ಚೆಗೆ ಕೂಡ ಬಂದಿವೆ. ನಮ್ಮ ಸಮಸ್ಯೆಗಳ ಅರಿವಿದ್ದರೂ ಉನ್ನತ ಶಿಕ್ಷಣ ಸಚಿವರು ನಮ್ಮ ಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ ಎಂಬುದು ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ಧರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಒಕ್ಕೂಟದ ಬೇಸರ.

ಮೊದಲೆಲ್ಲ ಶೈಕ್ಷಣಿಕ ವರ್ಷ ಆರಂಭವಾದಾಗಿನಿಂದ ಮುಗಿಯುವವರೆಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿತ್ತು. ಅಂದರೆ ವರ್ಷಕ್ಕೆ ಒಂದು ಬಾರಿ ಆದೇಶ ಹೊರಡಿಸಲಾಗುತ್ತಿತ್ತು. ಆದರೆ ಒಂದು ವರ್ಷದಿಂದೀಚೆಗೆ ಪ್ರತಿ ಸೆಮಿಸ್ಟರ್‌‌ ಬಳಿಕ ಆದೇಶ ನೀಡಲಾಗುತ್ತಿರುವುದು ಸಮಸ್ಯೆಯನ್ನು ಮತ್ತಷ್ಟು ಗಂಭೀರವಾಗಿಸಿದೆ ಎಂದು ಆರೋಪಿಸಿದ್ದಾರೆ.

ಇತರೆ ಸರ್ಕಾರ ಉದ್ಯೋಗಕ್ಕಾಗಿ ಅರ್ಜಿಗಳನ್ನು ಸರ್ಕಾರ ಆಹ್ವಾನಿಸಿದರೂ ಅನೇಕ ಅತಿಥಿ ಉಪನ್ಯಾಸಕರು ವಯೋಮಿತಿಯನ್ನು ಮೀರಿದ್ದು, ಅರ್ಜಿ ಹಾಕಲೂ ಅವಕಾಶ ಇಲ್ಲ. ಅನೇಕ ಅತಿಥಿ ಉಪನ್ಯಾಸಕರು ನೆಟ್‌, ಸ್ಲೆಟ್‌ ಮಾಡಿಕೊಂಡಿದ್ದಾರೆ. ಇಷ್ಟು ಅರ್ಹತೆಗಳು ಇದ್ದರೂ ಸೇವಾ ಭದ್ರತೆ ನೀಡುತ್ತಿಲ್ಲ. ಖಾಯಂಗೊಳಿಸುತ್ತಿಲ್ಲ ಎನ್ನುತ್ತಾರೆ ಉಪನ್ಯಾಸಕರು.

ನಾನುಗೌರಿ.ಕಾಂ ಜೊತೆ ಮಾತನಾಡಿದ ಉಪನ್ಯಾಸಕರೊಬ್ಬರು, “ಎನ್‌ಇಪಿ ಜಾರಿಗೊಳಿಸಿದ ಬಳಿಕ ವರ್ಕ್‌‌ಲೋಡ್ ಹೆಚ್ಚಾಗಿದೆ. ಶೇ. 100ರಷ್ಟು ಪಿಯುಸಿ ಫಲಿತಾಂಶ ಬಂದಿದ್ದರಿಂದ ರಾಜ್ಯದ ಎಲ್ಲ 430 ಪ್ರಥಮದರ್ಜೆ ಕಾಲೇಜುಗಳಲ್ಲೂ ಪ್ರವೇಶಾತಿ ಹೆಚ್ಚಿದೆ. ಆದರೆ ಅತಿಥಿ ಉಪನ್ಯಾಸಕರ ಸ್ಥಿತಿಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಅತಿಥಿ ಉಪನ್ಯಾಸಕರು ಕಡಿಮೆ ವೇತನವನ್ನೇ ಪಡೆಯುತ್ತಿದ್ದಾರೆ” ಎಂದರು.

“ಪರೀಕ್ಷೆ, ಮೌಲ್ಯಮಾಪನ ಕಾರ್ಯಗಳನ್ನೂ ಅತಿಥಿ ಉಪನ್ಯಾಸಕರು ಮಾಡುತ್ತೇವೆ. ಸುಮಾರು 7,500 ಖಾಯಂ ಉದ್ಯೋಗಗಳು ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇವೆ. ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡಿಕೊಂಡರೆ ಬಹಳ ಅನುಕೂಲವಾಗುತ್ತದೆ” ಎಂದು ತಿಳಿಸಿದರು.


ಇದನ್ನೂ ಓದಿರಿ: ಅತ್ಯಾಚಾರದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಕ್ಷಮೆ ಕೇಳಿದ ಮಾಜಿ ಸ್ಪೀಕರ್‌ ರಮೇಶ್ ಕುಮಾರ್‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...