Homeಮುಖಪುಟಬಂಧಿತ ಕಾರ್ಯಕರ್ತ ರೋಣಾ ವಿಲ್ಸನ್ ಮೇಲೆ ಒಂದು ವರ್ಷ ಪೆಗಾಸಸ್ ಗೂಢಚರ್ಯೆ: ಹೊಸ ವರದಿ

ಬಂಧಿತ ಕಾರ್ಯಕರ್ತ ರೋಣಾ ವಿಲ್ಸನ್ ಮೇಲೆ ಒಂದು ವರ್ಷ ಪೆಗಾಸಸ್ ಗೂಢಚರ್ಯೆ: ಹೊಸ ವರದಿ

- Advertisement -
- Advertisement -

2018ರ ಜೂನ್ 6 ರಂದು ಭೀಮಾ-ಕೋರೆಗಾಂವ್‌ ಪ್ರಕರಣದಲ್ಲಿ ಬಂಧಿತರಾಗಿರುವ ಸಾಮಾಜಿಕ ಕಾರ್ಯಕರ್ತ ರೋಣಾ ವಿಲ್ಸನ್‌ರವರ ಕಂಪ್ಯೂಟರ್‌ನಲ್ಲಿ ಅವರ ಬಂಧನಕ್ಕೂ ಒಂದು ವರ್ಷದ ಮೊದಲೇ ಹ್ಯಾಕರ್ “ದೋಷಾರೋಪಣೆ” ಫೈಲ್‌ಗಳನ್ನು ಸೇರಿಸಲಾಗಿತ್ತು ಮತ್ತು ಅವರ ಮೊಬೈಲ್ ಮೇಲೆ ಪೆಗಾಸಸ್ ಗೂಢಚರ್ಯೆ ನಡೆಸಲಾಗಿತ್ತು ಎಂದು ಯುಎಸ್ ಮೂಲದ ಡಿಜಿಟಲ್ ಫೊರೆನ್ಸಿಕ್ಸ್ ಕಂಪನಿಯ ಹೊಸ ವರದಿಯು ತಿಳಿಸಿದೆ.

ಈ ಸಾಕ್ಷ್ಯಗಳನ್ನೇ ಬಳಸಿಕೊಂಡು ರೋಣಾ ವಿಲ್ಸನ್ ಮತ್ತು ವಕೀಲರು, ಶಿಕ್ಷಣ ತಜ್ಞರು ಮತ್ತು ಕಲಾವಿದರು ಸೇರಿದಂತೆ ಇತರ 15 ಜನರನ್ನು ಮೂರು ವರ್ಷಗಳಿಂದ ಜಾಮೀನು ಇಲ್ಲದೆ ಬಂಧಿಸಿ ಜೈಲಿಗೆ ಹಾಕಲಾಗಿದೆ.

ಮ್ಯಾಸಚೂಸೆಟ್ಸ್ ಮೂಲದ ಡಿಜಿಟಲ್ ಫೋರೆನ್ಸಿಕ್ಸ್ ಸಂಸ್ಥೆ ಆರ್ಸೆನಲ್ ಕನ್ಸಲ್ಟಿಂಗ್‌ ಅಂತಿಮ ವರದಿಯಲ್ಲಿ ವಿಲ್ಸನ್‌ರವರ ಆಪಲ್ ಫೋನ್ ಅನ್ನು ಇಸ್ರೇಲ್ ಮೂಲದ ಎನ್‌ಎಸ್‌ಒ ಗ್ರೂಪ್ ಮಾತ್ರವಲ್ಲದೇ ಹಲವು ಕಂಪನಿಗಳು ಗೂಢಾಚರ್ಯೆ ನಡೆಸಿದ್ದವು ಎಂದು ತಿಳಿಸಿದೆ. ಪೆಗಾಸಸ್ ಅನ್ನು ಆಯ್ಕೆಯಾದ ಸರ್ಕಾರಗಳಿಗೆ ಮಾತ್ರ ಮಾರಲಾಗುತ್ತದೆ ಎನ್ನುವುದನ್ನು ಈ ಸಂದರ್ಭದಲ್ಲಿ ನಾನು ಗಮನಿಸಬಹುದಾಗಿದೆ.

ಭೀಮಾ ಕೊರೆಗಾವ್ ಪ್ರಕರಣದಲ್ಲಿ ವಿಲ್ಸನ್ ಮೊದಲ ಟಾರ್ಗೆಟ್ ಆಗಿದ್ದರು. 2017ರ ಮಧ್ಯಭಾಗದಿಂದಲೇ ರೋಣಾ ವಿಲ್ಸನ್‌ರವರ ಮೇಲೆ ಪೆಗಾಸಸ್ ಗೂಢಾಚರ್ಯೆ ನಡೆಸಲಾಗಿದೆ. ಜೊತೆಗೆ ಅವರ ಲ್ಯಾಪ್‌ ಟಾಪ್ ಹ್ಯಾಕ್ ಮಾಡಿ ಸುಳ್ಳು ಸಾಕ್ಷಿಗಳನ್ನು ತುರುಕಲಾಗಿದೆ. ಈ ಫೈಲ್‌ಗಳನ್ನು 15 ನವೆಂಬರ್ 2018 ರಿಂದ, ಆರಂಭದಲ್ಲಿ ಪುಣೆ ಪೊಲೀಸರು ಮತ್ತು ನಂತರ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರಮುಖ ಸಾಕ್ಷಿಯಾಗಿ ಉಲ್ಲೇಖಿಸಲಾಗಿದೆ. ಆದರೆ ಅವರ ಮೊಬೈಲ್ ಮತ್ತು ಲ್ಯಾಪ್ ಟಾಪ್ ಎನ್‌ಐಎ ಪೊಲೀಸರ ವಶದಲ್ಲಿರುವುದರಿಂದ ಫೋರೆನ್ಸಿಕ್ಸ್ ತನಿಖೆ ನಡೆಸಲಾಗುತ್ತಿಲ್ಲ.

ಜುಲೈ 5, 2017 ರಿಂದ ಏಪ್ರಿಲ್ 10, 2018ರವರೆಗೆ ಪೆಗಾಸಸ್ ಬಳಸಿ ಐಫೋನ್ 6S ನಿಂದ ಎರಡು ಐಟ್ಯೂನ್ಸ್ ಬ್ಯಾಕಪ್‌ಗಳಲ್ಲಿ ವಿಲ್ಸನ್ ಕಂಪ್ಯೂಟರ್‌ನ ವಿಂಡೋಸ್ ವಾಲ್ಯೂಮ್‌ನಲ್ಲಿ ದೋಷಾರೋಪಣೆಗಳನ್ನು ಸೇರಿಸಲಾಗಿದೆ ಎಂದು ಆರ್ಸೆನಲ್ ಕನ್ಸಲ್ಟಿಂಗ್‌ ಹೇಳಿದೆ.


ಇದನ್ನೂ ಓದಿ: ಅಜೀವಪರ್ಯಂತ ಮಾನವಹಕ್ಕುಗಳ ಹೋರಾಟಗಾರ ರೋಣ ವಿಲ್ಸನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...