Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಮೋದಿ ಪ್ರಭಾವದಿಂದ ದಲ್ವೀರ್ ಭಂಡಾರಿ ಅಂತಾರಾಷ್ಟ್ರೀಯ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಆಗಿದ್ದು ನಿಜವೇ?

ಫ್ಯಾಕ್ಟ್‌‌ಚೆಕ್‌: ಮೋದಿ ಪ್ರಭಾವದಿಂದ ದಲ್ವೀರ್ ಭಂಡಾರಿ ಅಂತಾರಾಷ್ಟ್ರೀಯ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಆಗಿದ್ದು ನಿಜವೇ?

- Advertisement -
- Advertisement -

ಸುಪ್ರೀಂಕೋರ್ಟ್‌‌‌‌‌ ಮಾಜಿ ನ್ಯಾಯಮೂರ್ತಿ “ದಲ್ವೀರ್‌‌‌ ಭಂಡಾರಿ ಅವರು ಅಂತಾರಾಷ್ಟ್ರೀಯ ನ್ಯಾಯಾಲಯದ(ICJ) ಮುಖ್ಯ ನ್ಯಾಯಮೂರ್ತಿಯಾಗಿ ಆಯ್ಕೆಯಾಗಿದ್ದಾರೆ” ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶವೊಂದು ಹರಿದಾಡುತ್ತಿದೆ. ಅವರ ಆಯ್ಕೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಭಾವವೇ ಕಾರಣವಾಗಿದ್ದು, ಭಾರತವನ್ನು ಇದೀಗ ವಿಶ್ವ ಗುರುತಿಸುತ್ತಿದೆ ಎಂಬ ರೀತಿಯಲ್ಲಿ ಈ ಸಂದೇಶ ಹರಿದಾಡುತ್ತಿದೆ.

ಫೇಸ್‌ಬುಕ್‌, ವಾಟ್ಸಪ್‌ ಮತ್ತು ಟ್ವಿಟರ್‌ನಲ್ಲಿ ಈ ಸಂದೇಶ ಹರಿದಾಡುತ್ತಿದೆ. ಬಿಜೆಪಿ ಬಿಹಾರದ ಪ್ರಧಾನ ಕಾರ್ಯದರ್ಶಿ (ಸಂಘಟನೆ) ನಾಗೇಂದ್ರ ನಾಥ್ ತ್ರಿಪಾಠಿ, “ನ್ಯಾಯಮೂರ್ತಿ ದಲ್ವೀರ್ ಭಂಡಾರಿ ಅವರು ಅಂತರರಾಷ್ಟ್ರೀಯ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಆಯ್ಕೆಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯ ಕಠಿಣ ಪರಿಶ್ರಮವು ವಿಶ್ವದಾದ್ಯಂತದ ದೇಶಗಳೊಂದಿಗೆ ಉತ್ತಮ ಸಂಬಂಧ ಬೆಳೆದಿದೆ” ಎಂದು ಅವರು ಪ್ರತಿಪಾದಿಸಿದ್ದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಯುಪಿಯಲ್ಲಿ 34 ಮುಸ್ಲಿಂ ಕುಟುಂಬಗಳು ಹಿಂದೂ ಧರ್ಮಕ್ಕೆ ಮತಾಂತರಗೊಂಡರು ಎಂಬುದು ಸುಳ್ಳು

ತ್ರಿಪಾಠಿ ಅವರು ತಮ್ಮ ಫೇಸ್‌ಬುಕ್ ಫೇಜ್‌ನಿಂದಲೂ ಹೇಳಿಕೆಯನ್ನು ನೀಡಿದ್ದರು. ಇದನ್ನು ಬಿಹಾರ ಬಿಜೆಪಿ ಹಂಚಿಕೊಂಡಿತ್ತು.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ಗುಜರಾತ್‌ನಲ್ಲಿ ಹೈಕೋರ್ಟ್‌ ಮೀಸಲಾತಿ ರದ್ದುಗೊಳಿಸಿದೆ ಎಂಬುದು ಸುಳ್ಳು

ಇದರ ಹೊರತಾಗಿ, ಬಿಜೆಪಿ ಪರವಾದ ಹಲವಾರು ಫೇಸ್‌ಬುಕ್ ಖಾತೆಗಳು ಈ ಸಂದೇಶವನ್ನು ಕಳೆದ ಒಂದು ದಿನದಿಂದ ಹಂಚಿಕೊಳ್ಳುತ್ತಿವೆ. ಇದನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಜೊತೆಗೆ ವಾಟ್ಸಪ್‌ನಲ್ಲಿಯೂ ಈ ಸಂದೇಶ ವ್ಯಾಪಕವಾಗಿ ಹರಿದಾಡುತ್ತಿದೆ.

ಫ್ಯಾಕ್ಟ್‌‌ಚೆಕ್‌‌

ನ್ಯಾಯಮೂರ್ತಿ ದಲ್ವೀರ್‌ ಸಿಂಗ್‌ ಅವರು ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಮುಖ್ಯ ನ್ಯಾಯಮೂರ್ತಿಯಾಗಿ ಆಯ್ಕೆಯಾಗಿರುವ ಯಾವುದೆ ಸುದ್ದಿ ಲಭ್ಯವಿ‌ಲ್ಲ. ಈ ರೀತಿ ನಡೆದಿದ್ದರೆ, ವಿಶ್ವದ ಪ್ರಮುಖ ಸುದ್ದಿ ಮಾಧ್ಯಮಗಳು ಅದನ್ನು ವರದಿ ಮಾಡುತ್ತಿದ್ದವು. ಆದರೆ ವಾಸ್ತವದಲ್ಲಿ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಮುಖ್ಯ ನ್ಯಾಯಮೂರ್ತಿ ಹುದ್ದೆಯೆ ಇಲ್ಲ!.

ದಲ್ವೀರ್‌ ಸಿಂಗ್ ಬಗ್ಗೆ ಹುಡುಕಾಡಿದಾಗ 2017 ರ ಕೆಲವು ವರದಿಗಳು, ಅವರು ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ನ್ಯಾಯಾಧೀಶರಾಗಿ ಮರು ಆಯ್ಕೆಯಾದರು ಎಂದು ಹೇಳಿದೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ಮಮತಾ ಬ್ಯಾನರ್ಜಿ ಆಡಳಿತದಲ್ಲಿ ಪೊಲೀಸರು ಮಸೀದಿ ಸ್ವಚ್ಛಗೊಳಿಸುತ್ತಿರುವುದು ನಿಜವೇ?

ನಂತರ ಅವರು ನವೆಂಬರ್ 22, 2017 ರಂದು ಚುನಾವಣೆ ನಡೆದು ಎರಡನೇ ಬಾರಿಗೆ ನ್ಯಾಯಮೂರ್ತಿಯಾಗಿ ಆಯ್ಕೆಯಾಗಿದ್ದಾರೆ. ಈ ವೇಳೆ ಅವರ ಪ್ರತಿಸ್ಪರ್ಧಿ ಇಂಗ್ಲೇಂಡಿನ ಕ್ರಿಸ್ಟೋಫರ್ ಗ್ರೀನ್‌ವುಡ್ ತನ್ನ ನಾಮಪತ್ರವನ್ನು ವಾಪಾಸು ಪಡೆದುಕೊಂಡಿದ್ದರು. ಹಾಗಾಗಿ ಅವರು ಮರು ಆಯ್ಕೆಯಾದರು.

ಅಂತರಾಷ್ಟ್ರೀಯ ನ್ಯಾಯಾಲಯದ ವೆಬ್‌ಸೈಟ್ ಪ್ರಕಾರ, ಮುಖ್ಯ ನ್ಯಾಯಮೂರ್ತಿ ಹುದ್ದೆಯೇ ಇಲ್ಲ. ನ್ಯಾಯಾಲಯವು 15 ಸದಸ್ಯ ನ್ಯಾಯಾಧೀಶರನ್ನು ಹೊಂದಿದ್ದು, ಒಬ್ಬ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ತಲಾ ಮೂರು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ‘ಪ್ಲಾಸ್ಟಿಕ್ ಅಕ್ಕಿ ಉತ್ಪಾದನೆ ಮಾಡುತ್ತಿದ್ದಾರೆ’ ಎಂಬುವುದು ನಿಜವೇ?

ಅಷ್ಟೇ ಅಲ್ಲದೆ, ICJ ವೆಬ್‌ಸೈಟ್‌ನ ಪ್ರಕಾರ, 2021 ರ ಫೆಬ್ರವರಿ 8 ರಂದು ಅಮೆರಿಕದ ಜೋನ್ ಇ. ಡೊನೊಗ್ ಮತ್ತು ರಷ್ಯಾದ ಕಿರಿಲ್ ಗೆವೊರ್ಜಿಯನ್ ಕ್ರಮವಾಗಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಐಸಿಜೆಯಲ್ಲಿ ದಲ್ವೀರ್ ಭಂಡಾರಿ ಅವರ ಹುದ್ದೆ

ಏಪ್ರಿಲ್ 27, 2012 ರಂದು, ದಲ್ವೀರ್ ಭಂಡಾರಿ ಅವರು ICJ ನ 15 ಸದಸ್ಯರ ನ್ಯಾಯಾಧೀಶರಲ್ಲಿ ಒಬ್ಬರಾಗಿ ಆಯ್ಕೆಯಾದರು ಮತ್ತು ಮರುಆಯ್ಕೆಯಾಗಿ ಇಂದಿಗೂ ಮುಂದುವರಿದಿದ್ದಾರೆ.

ಒಟ್ಟಿನಲ್ಲಿ ಮೋದಿ ಸರ್ಕಾರಕ್ಕೂ, ನ್ಯಾಯಮೂರ್ತಿ ದಲ್ವಿರ್‌ ಭಂಡಾರಿ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ನ್ಯಾಯಮೂರ್ತಿಯಾಗಿ ಆಯ್ಕೆಯಾಗುವುದಕ್ಕೂ ಸಂಭಂಧವೇ ಇಲ್ಲ. ಅವರು ಮೋದಿ ಸರಕಾರ ಅಧಿಕಾರಕ್ಕೆ ಬರುವ ಮುನ್ನವೇ ಈ ಸಾಧನೆ ನಡೆದಿರುವುದು ದೃಢಪಟ್ಟಿದೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ಮಂಗಳೂರಿನಲ್ಲಿ ಮತ್ಸ್ಯಕನ್ಯೆ ಸಿಕ್ಕಿದೆ ಎಂಬುದು ನಿಜವಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...