Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್:ಐಪಿಸಿಯಲ್ಲಿ ಹಿಂದೂ ಧರ್ಮ ನಿಂದಿಸುವವರ ವಿರುದ್ಧ ಸೆಕ್ಷನ್ 295 (1), 502 (2) ಅಡಿಯಲ್ಲಿ ಪ್ರಕರಣ...

ಫ್ಯಾಕ್ಟ್‌ಚೆಕ್:ಐಪಿಸಿಯಲ್ಲಿ ಹಿಂದೂ ಧರ್ಮ ನಿಂದಿಸುವವರ ವಿರುದ್ಧ ಸೆಕ್ಷನ್ 295 (1), 502 (2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗದು. ಏಕೆಂದರೆ ಐಪಿಸಿಯಲ್ಲಿ ಆ ಸೆಕ್ಷನ್‌ಗಳೆ ಇಲ್ಲ!

- Advertisement -
- Advertisement -

ಹಿಂದೂಗಳನ್ನೂ, ಹಿಂದೂ ಧರ್ಮವನ್ನು ನಿಂದಿಸುವವರ ವಿರುದ್ಧ  ಐಪಿಸಿಯ 295 (1) ಮತ್ತು 502 (2) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಬಹುದು ಎಂದು ಹಲವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಒಂದು ಶೇರ್‌  ಮಾಡುತ್ತಿದ್ದಾರೆ. ಅದು ನಿಜವೇ ಎಂಬುದನ್ನು ಪರಿಶೀಲಿಸೋಣ.

ಆದರೆ, ಈ 295 (1) ಮತ್ತು 502 (2) ವಿಭಾಗಗಳು ಭಾರತೀಯ ದಂಡ ಸಂಹಿತೆ (IPC) ಯಲ್ಲಿಲ್ಲ.

ಐಪಿಸಿಯ ಸೆಕ್ಷನ್ 295 ಮತ್ತು 295ಎ ಧಾರ್ಮಿಕ ಅಪರಾಧಗಳಿಗೆ ಸಂಬಂಧಿಸಿದೆ. ನಿರ್ದಿಷ್ಟವಾಗಿ ಹಿಂದೂ ಧರ್ಮದ ಬಗ್ಗೆ ಅಲ್ಲದೇ, ಇದು ಎಲ್ಲಾ ಧರ್ಮಗಳಿಗೆ ಸಂಬಂಧಿಸಿದೆ.

“ಯಾವುದೇ ಪಂಗಡದ ಧರ್ಮವನ್ನು ಅವಮಾನಿಸುವ ಉದ್ದೇಶದಿಂದ ಪೂಜಾ ಸ್ಥಳಗಳನ್ನು ನಾಶಪಡಿಸುವುದು ಅಥವಾ ಅಪವಿತ್ರಗೊಳಿಸುವ ಉದ್ದೇಶವನ್ನು ಹೊಂದಿದ್ದರೆ ” ಸೆಕ್ಷನ್ 295 ಅನ್ವಯಿಸುತ್ತದೆ.

ಇದನ್ನೂ ಓದಿ: Fact Check: ಬಿಪಿನ್ ರಾವತ್‌ರವರ ಹೆಲಿಕಾಪ್ಟರ್ ಪತನ ಎಂದು ಹಳೆಯ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

“ಉದ್ದೇಶಪೂರ್ವಕ ಮತ್ತು ದ್ವೇಷಪೂರಿತ ಕಾರ್ಯಗಳಿಂದ ಯಾವುದೇ ಪಂಥದ ಧಾರ್ಮಿಕ ಭಾವನೆ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಉದ್ದೇಶವನ್ನು ಹೊಂದಿರುವಾಗ”  ಸೆಕ್ಷನ್ 295A ಅನ್ವಯಿಸುತ್ತದೆ.

ಐಪಿಸಿ ಸೆಕ್ಷನ್ 502 ಧರ್ಮಕ್ಕೆ ಸಂಬಂಧಿಸಿದ್ದಲ್ಲ, ಮಾನನಷ್ಟಕ್ಕೆ ಸಂಬಂಧಿಸಿದ್ದು. “ಮಾನಹಾನಿಕರ ವಾದದ್ದನ್ನು  ಮುದ್ರಿತ ಅಥವಾ ಕೆತ್ತಿದ ಯಾವುದಾದರೂ ರೂಪದಲ್ಲಿ ಮಾರಾಟ ಮಾಡುವುದಕ್ಕೆ ಸಂಬಂಧಿಸಿದೆ.

ಒಟ್ಟಾರೆ, ಭಾರತೀಯ ದಂಡ ಸಂಹಿತೆಯಲ್ಲಿ ಯಾವುದೇ 295 (1), 502 (2) ವಿಭಾಗಗಳು ಇಲ್ಲ. IPC ಯ 295 ಮತ್ತು 295A ಎಲ್ಲಾ ಧರ್ಮಗಳಿಗೆ ಅನ್ವಯಿಸುತ್ತದೆ. ವಿಶೇಷವಾಗಿ ಹಿಂದೂ ಧರ್ಮಕ್ಕೆ ಮಾತ್ರ ಅನ್ವಯಿಸುವುದಿಲ್ಲ.

ಪ್ರತಿಪಾದನೆ: ಹಿಂದೂ ಧರ್ಮದ ವಿರುದ್ಧ ಧರ್ಮನಿಂದನೆ ಮಾಡುವವರ ವಿರುದ್ಧ ಐಪಿಸಿಯ 295 (1), 502 (2) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಬಹುದು.

ನಿಜಾಂಶ: ಭಾರತೀಯ ದಂಡ ಸಂಹಿತೆ (IPC) ಯಲ್ಲಿ 295 (1), 502 (2) ವಿಭಾಗಗಳು ಅಸ್ತಿತ್ವದಲ್ಲಿಲ್ಲ. ಐಪಿಸಿಯ ಸೆಕ್ಷನ್ 295 ಮತ್ತು 295ಎ ಧಾರ್ಮಿಕ ಅಪರಾಧಗಳಿಗೆ ಸಂಬಂಧಿಸಿದೆ. ನಿರ್ದಿಷ್ಟವಾಗಿ ಹಿಂದೂ ಧರ್ಮ ಮಾತ್ರವಲ್ಲದೆ, ಇದು ಎಲ್ಲಾ ಧರ್ಮಗಳಿಗೆ ಸಂಬಂಧಿಸಿದೆ. ಐಪಿಸಿಯ ಸೆಕ್ಷನ್ 502 ಮಾನನಷ್ಟಕ್ಕೆ ಸಂಬಂಧಿಸಿದ್ದೇ ಹೊರತು ಧರ್ಮದ ಬಗ್ಗೆ ಅಲ್ಲ. ಆದ್ದರಿಂದ, ಪೋಸ್ಟ್ ಮೂಲಕ ಹೇಳಿರುವುದು ತಪ್ಪುದಾರಿಗೆಳೆಯುವಂತಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಗುಜರಾತ್‌ನಲ್ಲಿ ಹೈಕೋರ್ಟ್‌ ಮೀಸಲಾತಿ ರದ್ದುಗೊಳಿಸಿದೆ ಎಂಬುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...