Homeಫ್ಯಾಕ್ಟ್‌ಚೆಕ್ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಟ್ಯ್ರಾಪ್‌‌ ಮಾಡುತ್ತಿದ್ದಾರೆ ಎಂದು ತಪ್ಪಾಗಿ ವಿಡಿಯೊ ಶೇರ್‌ ಮಾಡಲಾಗುತ್ತಿದೆ

ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಟ್ಯ್ರಾಪ್‌‌ ಮಾಡುತ್ತಿದ್ದಾರೆ ಎಂದು ತಪ್ಪಾಗಿ ವಿಡಿಯೊ ಶೇರ್‌ ಮಾಡಲಾಗುತ್ತಿದೆ

- Advertisement -
- Advertisement -

‘ಹಿಂದೂ ಯುವತಿಯರನ್ನು ಲೈಂಗಿಕವಾಗಿ ಬಳಸಿಕೊಳ್ಳಲು ಮುಸ್ಲಿಂ ಯುವಕರು ದುಷ್ಕೃತ್ಯವನ್ನು ಮಾಡುತ್ತಿದ್ದಾರೆ’ ಎಂದು ಪ್ರತಿಪಾದಿಸಿ ವಿಡಿಯೊವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ, ನಾಲ್ವರು ಹುಡುಗರ ಗುಂಪೊಂದು ಹುಟ್ಟುಹಬ್ಬದ ಪಾರ್ಟಿಯ ಹೆಸರಿನಲ್ಲಿ ಇಬ್ಬರು ಹುಡುಗಿಯರನ್ನು ಆಹ್ವಾನಿಸಿ, ಹುಟ್ಟುಹಬ್ಬದ ಕೇಕ್ ಮೇಲೆ ರಹಸ್ಯವಾಗಿ ಹುಡಿಯನ್ನು ಸುರಿದು, ಯುವತಿಯರನ್ನು ಪ್ರಜ್ಞೆ ತಪ್ಪಿಸುವಂತೆ ತೋರಿಸಲಾಗಿದೆ.

ವೀಡಿಯೊವನ್ನು ಶೇರ್ ಮಾಡುತ್ತಾ, ‘‘ಮುಸ್ಲಿಮರು ನಿಮ್ಮ ಸ್ನೇಹಿತರು, ಅವರು ಹೇಗೆ ಜಿಹಾದ್ ಮಾಡುತ್ತಾರೆ ಎಂದು ನೋಡಿ. ಪ್ರಜ್ಞೆ ತಪ್ಪಿಸಿ ಸೆಕ್ಸ್ ಕ್ಲಿಪ್‌ಗಳನ್ನು ತೆಗೆದು, ನಂತರ ನಿಮ್ಮನ್ನು ಲೈಂಗಿಕ ಗುಲಾಮಗಿರಿ, ಪರಿವರ್ತನೆ ಮತ್ತು ನೀವು ಕನಸು ಕಾಣದಂತಹದನ್ನು ಮಾಡುತ್ತಾರೆ” ಎಂದು ಬರೆಯಲಾಗಿದೆ.

ಪೋಸ್ಟ್‌ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ಗರ್ಭಿಣಿಯನ್ನು ಬಾಲಕಿ ರಕ್ಷಿಸುವ ವಿಡಿಯೊ ನಿಜವಾದ ಘಟನೆಯದ್ದಲ್ಲ

ಫ್ಯಾಕ್ಟ್‌ಚೆಕ್‌

ವೀಡಿಯೊದ ಸ್ಕ್ರೀನ್‌ಶಾಟ್‌ಗಳನ್ನು ಬಳಸಿಕೊಂಡು ರಿವರ್ಸ್ ಸರ್ಚ್ ಮೂಲಕ ಹುಡುಕಾಡಿದಾಗ, ಇದೇ ರೀತಿಯ ದೃಶ್ಯಗಳಿರುವ ವೀಡಿಯೊವನ್ನು ಕನ್ನಡದ ಜನಪ್ರಿಯ ನಟಿ ಸಂಜನಾ ಗಲ್ರಾನಿ ಅವರ ಅಧಿಕೃತ ಫೇಸ್‌ಬುಕ್ ಪುಟದಲ್ಲಿ ಪ್ರಕಟಿಸಲಾಗಿದೆ.

ಈ ವೀಡಿಯೊ ವಿವರಣೆಯಲ್ಲಿ, “ಎಚ್ಚರಿಕೆಯಿಂದಿರಿ…ವೀಕ್ಷಿಸಿದ್ದಕ್ಕಾಗಿ ಧನ್ಯವಾದಗಳು! ಈ ಪುಟವು ಸ್ಕ್ರಿಪ್ಟ್ ಮಾಡಿದ ನಾಟಕಗಳು ಮತ್ತು ವಿಡಂಬನೆಗಳನ್ನು ಸಹ ಒಳಗೊಂಡಿದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ಕಿರುಚಿತ್ರಗಳು ಮನರಂಜನೆ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರ!” ಎಂದು ಬರೆಯಲಾಗಿದೆ. ನಟಿ ಸಂಜನಾ ಗಲ್ರಾನಿ ಅವರು ತಾನು ಹಂಚಿರುವ ವಿಡಿಯೊದಲ್ಲಿ ಸ್ನೇಹಿತರನ್ನು ಕುರುಡಾಗಿ ನಂಬದಂತೆ ಹುಡುಗಿಯರಿಗೆ ಶಿಕ್ಷಣ ನೀಡಲು ರಚಿಸಲಾದ ಸ್ಕ್ರಿಪ್ಟ್ ವೀಡಿಯೊ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಅಲ್ಲದೆ, ಮೂಲ ವೀಡಿಯೊದ ಕೊನೆಯಲ್ಲಿ, “ವೀಕ್ಷಿಸಿದ್ದಕ್ಕಾಗಿ ಧನ್ಯವಾದಗಳು! ಈ ಪುಟವು ಸ್ಕ್ರಿಪ್ಟ್ ಮಾಡಿದ ನಾಟಕಗಳು ಮತ್ತು ವಿಡಂಬನೆಗಳನ್ನು ಸಹ ಒಳಗೊಂಡಿದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ಕಿರುಚಿತ್ರಗಳು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರ!” ಎಂದು ಬರೆಯಾಲಾಗಿದೆ.

ಇದನ್ನೂ ಓದಿ:ಫ್ಯಾಕ್ಟ್ ಚೆಕ್: ಕಪ್ಪು ಕಲ್ಲಿನ ಮೇಲೆ ಇಟ್ಟ ಕಬ್ಬಿಣದ ಮೊಳೆಗಳು ಕರಗುತ್ತವೆ ಎಂಬುದು ನಿಜವೇ?

ವೈರಲ್‌ ಪೋಸ್ಟ್‌ನಲ್ಲಿರುವ ವಿಡಿಯೊವನ್ನು, ಮೂಲ ವೀಡಿಯೊದಲ್ಲಿನ ಹಕ್ಕು ನಿರಾಕರಣೆ ಭಾಗವನ್ನು ತೆಗೆದುಹಾಕಿ, ಎಡಿಟ್ ಮಾಡಿ ಅದಕ್ಕೆ ಕೋಮು ನಿರೂಪಣೆಯೊಂದಿಗೆ ಹಂಚಲಾಗುತ್ತಿದೆ. ವಾಸ್ತವದಲ್ಲಿ ನಾಟಕೀಯ ವಿಡಿಯೊದಲ್ಲಿ ಕೂಡಾ ಹುಡುಗರನ್ನು ಮುಸ್ಲಿಮರು ಎಂಬಂತೆ ಚಿತ್ರಿಸಿಲ್ಲ.

ಇತ್ತೀಚೆಗೆ, ಇದೇ ರೀತಿಯ ಸ್ಕ್ರಿಪ್ಟ್ ಮಾಡಿದ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ನೈಜ ಘಟನೆಗಳು ಎಂಬಂತೆ ವೈರಲ್ ಆಗಿದೆ. ಈ ವಿಡಿಯೊಗಳ ಪ್ರತಿಪಾದನೆಯನ್ನು ನಿರಾಕರಿಸಿ ಪ್ಯಾಕ್ಟ್‌‌ಲಿ ಹಲವು ಫ್ಯಾಕ್ಟ್‌ಚೆಕ್‌ಗಳನ್ನು ಮಾಡಿದೆ. ಆ ಲೇಖನಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ಓದಬಹುದು.

ಒಟ್ಟಾರೆಯಾಗಿ ಹೇಳುವುದಾದರೆ, ಹಿಂದೂ ಹುಡುಗಿಯರನ್ನು ಲೈಂಗಿಕವಾಗಿ ಬಳಸಿಕೊಳ್ಳಲು ಮುಸ್ಲಿಂ ಯುವಕರು ಮಾಡುತ್ತಿರುವ ದುಷ್ಕೃತ್ಯ ಎಂದು ನಟನೆ ಮಾಡಿರುವ ವಿಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ.

ಪ್ರತಿಪಾದನೆ: ಬರ್ತ್‌ಡೇ ಪಾರ್ಟಿಯ ಹೆಸರಿನಲ್ಲಿ ಮುಸ್ಲಿಂ ಸ್ನೇಹಿತರು ಹಿಂದೂ ಹುಡುಗಿಯರನ್ನು ಲೈಂಗಿಕವಾಗಿ ಬಳಸಿಕೊಳ್ಳಲು ಮಾಡುತ್ತಿರುವ ದುಷ್ಕೃತ್ಯದ ವಿಡಿಯೋ. ವಾಸ್ತವ: ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವೀಡಿಯೊ ನಾಟಕೀಯವಾಗಿ ಮಾಡಲ್ಪಟ್ಟಿದೆ. ಹುಡುಗಿಯರಲ್ಲಿ ಜಾಗೃತಿ ಮೂಡಿಸಲು ಉದ್ದೇಶಪೂರ್ವಕವಾಗಿ ಈ ವೀಡಿಯೊವನ್ನು ತಯಾರಿಸಲಾಗಿದೆ. ಈ ನಾಟಕೀಯ ವೀಡಿಯೊ ಹುಡುಗರನ್ನು ಮುಸ್ಲಿಮರಂತೆ ಚಿತ್ರಿಸಿಲ್ಲ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ:Fact Check: ಬಿಪಿನ್ ರಾವತ್‌ರವರ ಹೆಲಿಕಾಪ್ಟರ್ ಪತನ ಎಂದು ಹಳೆಯ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...