Homeಫ್ಯಾಕ್ಟ್‌ಚೆಕ್ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಟ್ಯ್ರಾಪ್‌‌ ಮಾಡುತ್ತಿದ್ದಾರೆ ಎಂದು ತಪ್ಪಾಗಿ ವಿಡಿಯೊ ಶೇರ್‌ ಮಾಡಲಾಗುತ್ತಿದೆ

ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಟ್ಯ್ರಾಪ್‌‌ ಮಾಡುತ್ತಿದ್ದಾರೆ ಎಂದು ತಪ್ಪಾಗಿ ವಿಡಿಯೊ ಶೇರ್‌ ಮಾಡಲಾಗುತ್ತಿದೆ

- Advertisement -
- Advertisement -

‘ಹಿಂದೂ ಯುವತಿಯರನ್ನು ಲೈಂಗಿಕವಾಗಿ ಬಳಸಿಕೊಳ್ಳಲು ಮುಸ್ಲಿಂ ಯುವಕರು ದುಷ್ಕೃತ್ಯವನ್ನು ಮಾಡುತ್ತಿದ್ದಾರೆ’ ಎಂದು ಪ್ರತಿಪಾದಿಸಿ ವಿಡಿಯೊವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ, ನಾಲ್ವರು ಹುಡುಗರ ಗುಂಪೊಂದು ಹುಟ್ಟುಹಬ್ಬದ ಪಾರ್ಟಿಯ ಹೆಸರಿನಲ್ಲಿ ಇಬ್ಬರು ಹುಡುಗಿಯರನ್ನು ಆಹ್ವಾನಿಸಿ, ಹುಟ್ಟುಹಬ್ಬದ ಕೇಕ್ ಮೇಲೆ ರಹಸ್ಯವಾಗಿ ಹುಡಿಯನ್ನು ಸುರಿದು, ಯುವತಿಯರನ್ನು ಪ್ರಜ್ಞೆ ತಪ್ಪಿಸುವಂತೆ ತೋರಿಸಲಾಗಿದೆ.

ವೀಡಿಯೊವನ್ನು ಶೇರ್ ಮಾಡುತ್ತಾ, ‘‘ಮುಸ್ಲಿಮರು ನಿಮ್ಮ ಸ್ನೇಹಿತರು, ಅವರು ಹೇಗೆ ಜಿಹಾದ್ ಮಾಡುತ್ತಾರೆ ಎಂದು ನೋಡಿ. ಪ್ರಜ್ಞೆ ತಪ್ಪಿಸಿ ಸೆಕ್ಸ್ ಕ್ಲಿಪ್‌ಗಳನ್ನು ತೆಗೆದು, ನಂತರ ನಿಮ್ಮನ್ನು ಲೈಂಗಿಕ ಗುಲಾಮಗಿರಿ, ಪರಿವರ್ತನೆ ಮತ್ತು ನೀವು ಕನಸು ಕಾಣದಂತಹದನ್ನು ಮಾಡುತ್ತಾರೆ” ಎಂದು ಬರೆಯಲಾಗಿದೆ.

ಪೋಸ್ಟ್‌ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ಗರ್ಭಿಣಿಯನ್ನು ಬಾಲಕಿ ರಕ್ಷಿಸುವ ವಿಡಿಯೊ ನಿಜವಾದ ಘಟನೆಯದ್ದಲ್ಲ

ಫ್ಯಾಕ್ಟ್‌ಚೆಕ್‌

ವೀಡಿಯೊದ ಸ್ಕ್ರೀನ್‌ಶಾಟ್‌ಗಳನ್ನು ಬಳಸಿಕೊಂಡು ರಿವರ್ಸ್ ಸರ್ಚ್ ಮೂಲಕ ಹುಡುಕಾಡಿದಾಗ, ಇದೇ ರೀತಿಯ ದೃಶ್ಯಗಳಿರುವ ವೀಡಿಯೊವನ್ನು ಕನ್ನಡದ ಜನಪ್ರಿಯ ನಟಿ ಸಂಜನಾ ಗಲ್ರಾನಿ ಅವರ ಅಧಿಕೃತ ಫೇಸ್‌ಬುಕ್ ಪುಟದಲ್ಲಿ ಪ್ರಕಟಿಸಲಾಗಿದೆ.

ಈ ವೀಡಿಯೊ ವಿವರಣೆಯಲ್ಲಿ, “ಎಚ್ಚರಿಕೆಯಿಂದಿರಿ…ವೀಕ್ಷಿಸಿದ್ದಕ್ಕಾಗಿ ಧನ್ಯವಾದಗಳು! ಈ ಪುಟವು ಸ್ಕ್ರಿಪ್ಟ್ ಮಾಡಿದ ನಾಟಕಗಳು ಮತ್ತು ವಿಡಂಬನೆಗಳನ್ನು ಸಹ ಒಳಗೊಂಡಿದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ಕಿರುಚಿತ್ರಗಳು ಮನರಂಜನೆ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರ!” ಎಂದು ಬರೆಯಲಾಗಿದೆ. ನಟಿ ಸಂಜನಾ ಗಲ್ರಾನಿ ಅವರು ತಾನು ಹಂಚಿರುವ ವಿಡಿಯೊದಲ್ಲಿ ಸ್ನೇಹಿತರನ್ನು ಕುರುಡಾಗಿ ನಂಬದಂತೆ ಹುಡುಗಿಯರಿಗೆ ಶಿಕ್ಷಣ ನೀಡಲು ರಚಿಸಲಾದ ಸ್ಕ್ರಿಪ್ಟ್ ವೀಡಿಯೊ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಅಲ್ಲದೆ, ಮೂಲ ವೀಡಿಯೊದ ಕೊನೆಯಲ್ಲಿ, “ವೀಕ್ಷಿಸಿದ್ದಕ್ಕಾಗಿ ಧನ್ಯವಾದಗಳು! ಈ ಪುಟವು ಸ್ಕ್ರಿಪ್ಟ್ ಮಾಡಿದ ನಾಟಕಗಳು ಮತ್ತು ವಿಡಂಬನೆಗಳನ್ನು ಸಹ ಒಳಗೊಂಡಿದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ಕಿರುಚಿತ್ರಗಳು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರ!” ಎಂದು ಬರೆಯಾಲಾಗಿದೆ.

ಇದನ್ನೂ ಓದಿ:ಫ್ಯಾಕ್ಟ್ ಚೆಕ್: ಕಪ್ಪು ಕಲ್ಲಿನ ಮೇಲೆ ಇಟ್ಟ ಕಬ್ಬಿಣದ ಮೊಳೆಗಳು ಕರಗುತ್ತವೆ ಎಂಬುದು ನಿಜವೇ?

ವೈರಲ್‌ ಪೋಸ್ಟ್‌ನಲ್ಲಿರುವ ವಿಡಿಯೊವನ್ನು, ಮೂಲ ವೀಡಿಯೊದಲ್ಲಿನ ಹಕ್ಕು ನಿರಾಕರಣೆ ಭಾಗವನ್ನು ತೆಗೆದುಹಾಕಿ, ಎಡಿಟ್ ಮಾಡಿ ಅದಕ್ಕೆ ಕೋಮು ನಿರೂಪಣೆಯೊಂದಿಗೆ ಹಂಚಲಾಗುತ್ತಿದೆ. ವಾಸ್ತವದಲ್ಲಿ ನಾಟಕೀಯ ವಿಡಿಯೊದಲ್ಲಿ ಕೂಡಾ ಹುಡುಗರನ್ನು ಮುಸ್ಲಿಮರು ಎಂಬಂತೆ ಚಿತ್ರಿಸಿಲ್ಲ.

ಇತ್ತೀಚೆಗೆ, ಇದೇ ರೀತಿಯ ಸ್ಕ್ರಿಪ್ಟ್ ಮಾಡಿದ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ನೈಜ ಘಟನೆಗಳು ಎಂಬಂತೆ ವೈರಲ್ ಆಗಿದೆ. ಈ ವಿಡಿಯೊಗಳ ಪ್ರತಿಪಾದನೆಯನ್ನು ನಿರಾಕರಿಸಿ ಪ್ಯಾಕ್ಟ್‌‌ಲಿ ಹಲವು ಫ್ಯಾಕ್ಟ್‌ಚೆಕ್‌ಗಳನ್ನು ಮಾಡಿದೆ. ಆ ಲೇಖನಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ಓದಬಹುದು.

ಒಟ್ಟಾರೆಯಾಗಿ ಹೇಳುವುದಾದರೆ, ಹಿಂದೂ ಹುಡುಗಿಯರನ್ನು ಲೈಂಗಿಕವಾಗಿ ಬಳಸಿಕೊಳ್ಳಲು ಮುಸ್ಲಿಂ ಯುವಕರು ಮಾಡುತ್ತಿರುವ ದುಷ್ಕೃತ್ಯ ಎಂದು ನಟನೆ ಮಾಡಿರುವ ವಿಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ.

ಪ್ರತಿಪಾದನೆ: ಬರ್ತ್‌ಡೇ ಪಾರ್ಟಿಯ ಹೆಸರಿನಲ್ಲಿ ಮುಸ್ಲಿಂ ಸ್ನೇಹಿತರು ಹಿಂದೂ ಹುಡುಗಿಯರನ್ನು ಲೈಂಗಿಕವಾಗಿ ಬಳಸಿಕೊಳ್ಳಲು ಮಾಡುತ್ತಿರುವ ದುಷ್ಕೃತ್ಯದ ವಿಡಿಯೋ. ವಾಸ್ತವ: ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವೀಡಿಯೊ ನಾಟಕೀಯವಾಗಿ ಮಾಡಲ್ಪಟ್ಟಿದೆ. ಹುಡುಗಿಯರಲ್ಲಿ ಜಾಗೃತಿ ಮೂಡಿಸಲು ಉದ್ದೇಶಪೂರ್ವಕವಾಗಿ ಈ ವೀಡಿಯೊವನ್ನು ತಯಾರಿಸಲಾಗಿದೆ. ಈ ನಾಟಕೀಯ ವೀಡಿಯೊ ಹುಡುಗರನ್ನು ಮುಸ್ಲಿಮರಂತೆ ಚಿತ್ರಿಸಿಲ್ಲ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ:Fact Check: ಬಿಪಿನ್ ರಾವತ್‌ರವರ ಹೆಲಿಕಾಪ್ಟರ್ ಪತನ ಎಂದು ಹಳೆಯ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...