Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

- Advertisement -
- Advertisement -

ತಮಿಳುನಾಡಿನ ನ್ಯಾಯಾಲಯದ ವಿಚಾರಣೆಯ ಸಂದರ್ಭದಲ್ಲಿ, ಆಹಾರದ ಮೇಲೆ ಉಗುಳುವುದು ಹಲಾಲ್ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತದೆ ಎಂದು ಮುಸ್ಲಿಮರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ ಎಂದು ಹೇಳುವ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಪೋಸ್ಟ್ ಕಾರ್ಡ್ ಎಂಬ ಫೇಕ್ ಸುದ್ದಿಗಳನ್ನು ಪ್ರಸಾರ ಮಾಡುವ ಮತ್ತು ಅದಕ್ಕಾಗಿ ಬಂಧನವಾಗಿದ್ದ ಮಹೇಶ್ ವಿಕ್ರಮ್ ಹೆಗ್ಡೆ ಇದನ್ನು ಟ್ವೀಟ್ ಮಾಡಿದ್ದಾರೆ. ಅದು ನಿಜವೇ ಎಂಬುದನ್ನು ಪರಿಶೀಲಿಸೋಣ.

ಈ ಹಿಂದೆ ನವೆಂಬರ್ 2021 ರಲ್ಲಿ, ತಮಿಳುನಾಡಿನ ಇಂದು ಮಕ್ಕಳ್ ಕಚ್ಚಿ ಟ್ವೀಟ್ ಮೂಲಕ ಅದೇ ರೀತಿಯ ಹೇಳಿಕೆಯನ್ನು ಪೋಸ್ಟ್‌ ಮಾಡಿದ್ದರು. ಆ ನಂತರ, ಈ ಹೇಳಿಕೆ ವೈರಲ್ ಆಗುತ್ತಿದೆ.

ಈಕುರಿತು ಹುಡುಕಿದಾಗ, ಪ್ರಕರಣದ ವಿಚಾರಣೆ ನಡೆಯುತ್ತಿರುವುದು ತಮಿಳುನಾಡು ನ್ಯಾಯಾಲಯದಲ್ಲಿ ಅಲ್ಲ. ಬದಲಾಗಿ, ಕೇರಳ ಹೈಕೋರ್ಟ್‌ನಲ್ಲಿ ಎಂದು ಕಂಡುಬಂದಿದೆ. ಇದರಲ್ಲಿ ಶಬರಿಮಲೆ ಕ್ರಿಯಾ ಸಮಿತಿಯ ಪ್ರಧಾನ ಸಂಚಾಲಕ ಎಸ್‌ಜೆಆರ್ ಕುಮಾರ್ ಸಲ್ಲಿಸಿದ ಮನವಿಯಲ್ಲಿ ಅರ್ಜಿದಾರರು, ಶಬರಿಮಲೆ ದೇವಸ್ಥಾನವನ್ನು ನಿರ್ವಹಿಸುತ್ತಿರುವ ಟ್ರಾವಂಕೂರ್ ದೇವಸ್ವಂ ಮಂಡಳಿ (ಟಿಡಿಬಿ)ಯು ದೇವಸ್ಥಾನದಲ್ಲಿ ನೈವೇದ್ಯಂ ಮತ್ತು ಪ್ರಸಾದವನ್ನು ತಯಾರಿಸಲು ಹಲಾಲ್ ದೃಢಪಡಿಸಿರುವ ಹಾಳಾದ ಬೆಲ್ಲವನ್ನು ಬಳಸುತ್ತಿದೆ ಎಂದು ಆರೋಪಿಸಿದ್ದಾರೆ.

ಹಲಾಲ್ಅನ್ನು ದೃಢಪಡಿಸುವ ಉತ್ಪನ್ನಗಳ ಬಳಕೆಯ ವಿರುದ್ಧ ಅರ್ಜಿದಾರರು ಮಾಡಿದ ಬಹು ಆರೋಪಗಳಲ್ಲಿ ಒಂದಾದ ‘ಮುಸ್ಲಿಂ ಸಮುದಾಯದ ಧಾರ್ಮಿಕ ವಿದ್ವಾಂಸರು ಆಹಾರ ಸಾಮಗ್ರಿಗಳ ತಯಾರಿಕೆಯಲ್ಲಿ ಹಲಾಲ್ ಅನ್ನು ಪ್ರಮಾಣೀಕರಿಸಲು ಲಾಲಾರಸವು(ಉಗುಳು) ಅವಶ್ಯಕ ಅಂಶವಾಗಿದೆ ಎಂದು ಸಾರ್ವಜನಿಕವಾಗಿ ಘೋಷಿಸುತ್ತಿದ್ದಾರೆ. ಧಾರ್ಮಿಕ ವಿದ್ವಾಂಸರು ಪವಿತ್ರ ಗ್ರಂಥಗಳಲ್ಲಿ ಮಾನ್ಯವಾದ ವ್ಯಾಖ್ಯಾನಗಳನ್ನು ಅರ್ಥೈಸುವ ಮೂಲಕ ಮೇಲಿನ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಅಂದರೆ ಕಲ್ಪಿತ ಆರೋಪವನ್ನು ಮಾಡಲಾಗಿದೆ. ಈ ಬಗ್ಗೆ ತಿರುವಾಂಕೂರು ದೇವಸ್ವಂ ಮಂಡಳಿ ಪ್ರತಿಕ್ರಿಯೆ ಸಲ್ಲಿಸಿದೆ. ಅವರ ಪ್ರತಿಕ್ರಿಯೆಯಲ್ಲಿ, ಕೋವಿಡ್-19 ಪ್ರೋಟೋಕಾಲ್‌ನಿಂದಾಗಿ 2019-20ನೇ ವರ್ಷಕ್ಕೆ ಹೆಚ್ಚಿನ ಪ್ರಮಾಣದ ಬೆಲ್ಲವು ಬಳಸದೆ ಉಳಿದಿದೆ. ಆದ್ದರಿಂದ ಮಂಡಳಿಯು ಈ ಉಳಿದ ಬೆಲ್ಲವನ್ನು M/s ಸದರ್ನ್ ಆಗ್ರೋ ಟೆಕ್ ಪ್ರೈವೇಟ್‌ ಲಿಮಿಟೆಡ್, ತ್ರಿಶೂರ್‌ಗೆ ನೀಡಿದೆ ಎಂದು ಮಂಡಳಿಯು ಹೇಳಿದೆ. ಆದರೆ 2020-21ನೇ ಸಾಲಿಗೆ ಬೆಲ್ಲ ಪೂರೈಕೆಯ ಗುತ್ತಿಗೆಯನ್ನು M/s S.P.Sugar and Agro Pvt. lmt, ಮಹಾರಾಷ್ಟ್ರಕ್ಕೆ ನೀಡಲಾಗಿದ್ದು, ಅವರು ಏಪ್ರಿಲ್ 2021 ರಿಂದ ಪೂರೈಕೆಯನ್ನು ಪ್ರಾರಂಭಿಸಿದ್ದಾರೆ. ಅಂದಿನಿಂದ ಆ ಬೆಲ್ಲವನ್ನು ಬಳಸಲಾಗುತ್ತಿದೆ.

ಹಲಾಲ್‌ನ ಪ್ರಶ್ನೆಗೆ, ‘ಬೆಲ್ಲದ ಪ್ಯಾಕೇಜಿಂಗ್‌ನಲ್ಲಿ ಇಂಗ್ಲಿಷ್‌ನಲ್ಲಿ “permissible” ಎಂದು ಅನುವಾದಿಸುವ ಅರೇಬಿಕ್ ಪದವಾದ ಹಲಾಲ್ ಎಂಬ ಪದವನ್ನು ಉಲ್ಲೇಖಿಸಲಾಗಿದೆ ಎಂದು TDB ವಿವರಿಸಿದೆ. ಈ ಸರಕುಗಳನ್ನು ಪಡೆದ ಕಂಪನಿಯು ಅರಬ್ ದೇಶಗಳಿಗೆ ಬೆಲ್ಲವನ್ನು ರಫ್ತು ಮಾಡಿದೆ. ಅಲ್ಲಿನ ನಿಯಮಗಳು ಇಸ್ಲಾಮಿಕ್ ನಿಯಮಗಳನ್ನು ಅನುಸರಿಸುವುದರಿಂದಾಗಿ, ಹಲಾಲ್ ಆಹಾರಗಳ ಮಾರಾಟವನ್ನು ಕಡ್ಡಾಯಗೊಳಿಸುತ್ತವೆ ಎಂದು ನ್ಯೂಸ್ 18 ವರದಿ ಮಾಡಿದೆ.

ಅರ್ಜಿದಾರರು ಹಲಾಲ್ ಬಗ್ಗೆ ತಮ್ಮ ಅಭಿಪ್ರಾಯವನ್ನು ಸಾಕ್ಷಿ ಸಮೇತ ವಿವರಿಸಲು ವಿಫಲವಾದ ಹಿನ್ನೆಲೆಯಲ್ಲಿ ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಾಲಯವು ‘ಹಲಾಲ್ ಉತ್ಪನ್ನಗಳ ಬಳಕೆಯನ್ನು ಪ್ರಶ್ನಿಸುವ ಅರ್ಜಿಯನ್ನು ಸಲ್ಲಿಸುವ ಮೊದಲು, ಎಂದು ಅಭಿಪ್ರಾಯಪಟ್ಟಿದೆ. ಸುಮ್ಮನೆ ನಿರಾಧಾರ ಆರೋಪ ಮಾಡುವುದು ಥರವಲ್ಲ ಎಂದು ತಾಕೀತು ಮಾಡಿದೆ.

ಹಲಾಲ್ ಪರಿಕಲ್ಪನೆಯು ಕೆಲವು ವಿಷಯಗಳನ್ನು ನಿಷೇಧಿಸಲಾಗಿದೆ ಎಂದು ಮಾತ್ರ ಹೇಳುತ್ತದೆ; ಉಳಿದಂತೆ ಎಲ್ಲಾ ಇತರ ವಿಷಯಗಳು ಹಲಾಲ್‌ಗೆ ಒಳಪಟ್ಟಿವೆ ಎಂದು ಸೂಚಿಸಲಾಗುತ್ತದೆ. ಈ ಪ್ರಮಾಣೀಕರಣವು (ಹಲಾಲ್‌) ಆ ನಿಷೇಧಿತ ವಸ್ತುಗಳನ್ನು ನಿರ್ದಿಷ್ಟ ಉತ್ಪನ್ನದಲ್ಲಿ ಸೇರಿಸಲಾಗಿಲ್ಲ ಎಂಬುದನ್ನು ಮಾತ್ರ ಖಾತ್ರಿಪಡಿಸುತ್ತವೆ. ಯುಕೆಯಂತಹ ಇತರ ದೇಶಗಳಲ್ಲಿ ಇದು ಜಾರಿಯಲ್ಲಿದೆ. ಅಲ್ಲದೆ, ಕೆಲವು ಸುಪ್ರೀಂ ಕೋರ್ಟ್ ತೀರ್ಪುಗಳು ಕೂಡ ಅದರ ಬಗ್ಗೆ ಉಲ್ಲೇಖಿಸಿವೆ.

ಇದಲ್ಲದೆ, ಪ್ರಕರಣದ ವಿಚಾರಣೆಯ ಪ್ರಕ್ರಿಯೆಯ ಅವಧಿಯಲ್ಲಿ, ವೈರಲ್ ಪೋಸ್ಟ್‌ನಲ್ಲಿ ಮಾಡಿದ ಹೇಳಿಕೆಗೆ ವಿರುದ್ಧವಾಗಿ ಯಾವುದೇ ಮುಸ್ಲಿಂ ಸಂಘಟನೆ ಅಥವಾ ಯಾವುದೇ ಮುಸ್ಲಿಂ ವ್ಯಕ್ತಿಯನ್ನು ಪ್ರತಿವಾದಿಯನ್ನಾಗಿ ಮಾಡಲಾಗಿಲ್ಲ ಎಂದು ನಮೂದಿಸುವುದು ಗಮನಾರ್ಹವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಂ ಸಮುದಾಯವು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ.


ಇದನ್ನೂ ಓದಿ: ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಟ್ಯ್ರಾಪ್‌‌ ಮಾಡುತ್ತಿದ್ದಾರೆ ಎಂದು ತಪ್ಪಾಗಿ ವಿಡಿಯೊ ಶೇರ್‌ ಮಾಡಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...