Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

- Advertisement -
- Advertisement -

ತಮಿಳುನಾಡಿನ ನ್ಯಾಯಾಲಯದ ವಿಚಾರಣೆಯ ಸಂದರ್ಭದಲ್ಲಿ, ಆಹಾರದ ಮೇಲೆ ಉಗುಳುವುದು ಹಲಾಲ್ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತದೆ ಎಂದು ಮುಸ್ಲಿಮರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ ಎಂದು ಹೇಳುವ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಪೋಸ್ಟ್ ಕಾರ್ಡ್ ಎಂಬ ಫೇಕ್ ಸುದ್ದಿಗಳನ್ನು ಪ್ರಸಾರ ಮಾಡುವ ಮತ್ತು ಅದಕ್ಕಾಗಿ ಬಂಧನವಾಗಿದ್ದ ಮಹೇಶ್ ವಿಕ್ರಮ್ ಹೆಗ್ಡೆ ಇದನ್ನು ಟ್ವೀಟ್ ಮಾಡಿದ್ದಾರೆ. ಅದು ನಿಜವೇ ಎಂಬುದನ್ನು ಪರಿಶೀಲಿಸೋಣ.

ಈ ಹಿಂದೆ ನವೆಂಬರ್ 2021 ರಲ್ಲಿ, ತಮಿಳುನಾಡಿನ ಇಂದು ಮಕ್ಕಳ್ ಕಚ್ಚಿ ಟ್ವೀಟ್ ಮೂಲಕ ಅದೇ ರೀತಿಯ ಹೇಳಿಕೆಯನ್ನು ಪೋಸ್ಟ್‌ ಮಾಡಿದ್ದರು. ಆ ನಂತರ, ಈ ಹೇಳಿಕೆ ವೈರಲ್ ಆಗುತ್ತಿದೆ.

ಈಕುರಿತು ಹುಡುಕಿದಾಗ, ಪ್ರಕರಣದ ವಿಚಾರಣೆ ನಡೆಯುತ್ತಿರುವುದು ತಮಿಳುನಾಡು ನ್ಯಾಯಾಲಯದಲ್ಲಿ ಅಲ್ಲ. ಬದಲಾಗಿ, ಕೇರಳ ಹೈಕೋರ್ಟ್‌ನಲ್ಲಿ ಎಂದು ಕಂಡುಬಂದಿದೆ. ಇದರಲ್ಲಿ ಶಬರಿಮಲೆ ಕ್ರಿಯಾ ಸಮಿತಿಯ ಪ್ರಧಾನ ಸಂಚಾಲಕ ಎಸ್‌ಜೆಆರ್ ಕುಮಾರ್ ಸಲ್ಲಿಸಿದ ಮನವಿಯಲ್ಲಿ ಅರ್ಜಿದಾರರು, ಶಬರಿಮಲೆ ದೇವಸ್ಥಾನವನ್ನು ನಿರ್ವಹಿಸುತ್ತಿರುವ ಟ್ರಾವಂಕೂರ್ ದೇವಸ್ವಂ ಮಂಡಳಿ (ಟಿಡಿಬಿ)ಯು ದೇವಸ್ಥಾನದಲ್ಲಿ ನೈವೇದ್ಯಂ ಮತ್ತು ಪ್ರಸಾದವನ್ನು ತಯಾರಿಸಲು ಹಲಾಲ್ ದೃಢಪಡಿಸಿರುವ ಹಾಳಾದ ಬೆಲ್ಲವನ್ನು ಬಳಸುತ್ತಿದೆ ಎಂದು ಆರೋಪಿಸಿದ್ದಾರೆ.

ಹಲಾಲ್ಅನ್ನು ದೃಢಪಡಿಸುವ ಉತ್ಪನ್ನಗಳ ಬಳಕೆಯ ವಿರುದ್ಧ ಅರ್ಜಿದಾರರು ಮಾಡಿದ ಬಹು ಆರೋಪಗಳಲ್ಲಿ ಒಂದಾದ ‘ಮುಸ್ಲಿಂ ಸಮುದಾಯದ ಧಾರ್ಮಿಕ ವಿದ್ವಾಂಸರು ಆಹಾರ ಸಾಮಗ್ರಿಗಳ ತಯಾರಿಕೆಯಲ್ಲಿ ಹಲಾಲ್ ಅನ್ನು ಪ್ರಮಾಣೀಕರಿಸಲು ಲಾಲಾರಸವು(ಉಗುಳು) ಅವಶ್ಯಕ ಅಂಶವಾಗಿದೆ ಎಂದು ಸಾರ್ವಜನಿಕವಾಗಿ ಘೋಷಿಸುತ್ತಿದ್ದಾರೆ. ಧಾರ್ಮಿಕ ವಿದ್ವಾಂಸರು ಪವಿತ್ರ ಗ್ರಂಥಗಳಲ್ಲಿ ಮಾನ್ಯವಾದ ವ್ಯಾಖ್ಯಾನಗಳನ್ನು ಅರ್ಥೈಸುವ ಮೂಲಕ ಮೇಲಿನ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಅಂದರೆ ಕಲ್ಪಿತ ಆರೋಪವನ್ನು ಮಾಡಲಾಗಿದೆ. ಈ ಬಗ್ಗೆ ತಿರುವಾಂಕೂರು ದೇವಸ್ವಂ ಮಂಡಳಿ ಪ್ರತಿಕ್ರಿಯೆ ಸಲ್ಲಿಸಿದೆ. ಅವರ ಪ್ರತಿಕ್ರಿಯೆಯಲ್ಲಿ, ಕೋವಿಡ್-19 ಪ್ರೋಟೋಕಾಲ್‌ನಿಂದಾಗಿ 2019-20ನೇ ವರ್ಷಕ್ಕೆ ಹೆಚ್ಚಿನ ಪ್ರಮಾಣದ ಬೆಲ್ಲವು ಬಳಸದೆ ಉಳಿದಿದೆ. ಆದ್ದರಿಂದ ಮಂಡಳಿಯು ಈ ಉಳಿದ ಬೆಲ್ಲವನ್ನು M/s ಸದರ್ನ್ ಆಗ್ರೋ ಟೆಕ್ ಪ್ರೈವೇಟ್‌ ಲಿಮಿಟೆಡ್, ತ್ರಿಶೂರ್‌ಗೆ ನೀಡಿದೆ ಎಂದು ಮಂಡಳಿಯು ಹೇಳಿದೆ. ಆದರೆ 2020-21ನೇ ಸಾಲಿಗೆ ಬೆಲ್ಲ ಪೂರೈಕೆಯ ಗುತ್ತಿಗೆಯನ್ನು M/s S.P.Sugar and Agro Pvt. lmt, ಮಹಾರಾಷ್ಟ್ರಕ್ಕೆ ನೀಡಲಾಗಿದ್ದು, ಅವರು ಏಪ್ರಿಲ್ 2021 ರಿಂದ ಪೂರೈಕೆಯನ್ನು ಪ್ರಾರಂಭಿಸಿದ್ದಾರೆ. ಅಂದಿನಿಂದ ಆ ಬೆಲ್ಲವನ್ನು ಬಳಸಲಾಗುತ್ತಿದೆ.

ಹಲಾಲ್‌ನ ಪ್ರಶ್ನೆಗೆ, ‘ಬೆಲ್ಲದ ಪ್ಯಾಕೇಜಿಂಗ್‌ನಲ್ಲಿ ಇಂಗ್ಲಿಷ್‌ನಲ್ಲಿ “permissible” ಎಂದು ಅನುವಾದಿಸುವ ಅರೇಬಿಕ್ ಪದವಾದ ಹಲಾಲ್ ಎಂಬ ಪದವನ್ನು ಉಲ್ಲೇಖಿಸಲಾಗಿದೆ ಎಂದು TDB ವಿವರಿಸಿದೆ. ಈ ಸರಕುಗಳನ್ನು ಪಡೆದ ಕಂಪನಿಯು ಅರಬ್ ದೇಶಗಳಿಗೆ ಬೆಲ್ಲವನ್ನು ರಫ್ತು ಮಾಡಿದೆ. ಅಲ್ಲಿನ ನಿಯಮಗಳು ಇಸ್ಲಾಮಿಕ್ ನಿಯಮಗಳನ್ನು ಅನುಸರಿಸುವುದರಿಂದಾಗಿ, ಹಲಾಲ್ ಆಹಾರಗಳ ಮಾರಾಟವನ್ನು ಕಡ್ಡಾಯಗೊಳಿಸುತ್ತವೆ ಎಂದು ನ್ಯೂಸ್ 18 ವರದಿ ಮಾಡಿದೆ.

ಅರ್ಜಿದಾರರು ಹಲಾಲ್ ಬಗ್ಗೆ ತಮ್ಮ ಅಭಿಪ್ರಾಯವನ್ನು ಸಾಕ್ಷಿ ಸಮೇತ ವಿವರಿಸಲು ವಿಫಲವಾದ ಹಿನ್ನೆಲೆಯಲ್ಲಿ ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಾಲಯವು ‘ಹಲಾಲ್ ಉತ್ಪನ್ನಗಳ ಬಳಕೆಯನ್ನು ಪ್ರಶ್ನಿಸುವ ಅರ್ಜಿಯನ್ನು ಸಲ್ಲಿಸುವ ಮೊದಲು, ಎಂದು ಅಭಿಪ್ರಾಯಪಟ್ಟಿದೆ. ಸುಮ್ಮನೆ ನಿರಾಧಾರ ಆರೋಪ ಮಾಡುವುದು ಥರವಲ್ಲ ಎಂದು ತಾಕೀತು ಮಾಡಿದೆ.

ಹಲಾಲ್ ಪರಿಕಲ್ಪನೆಯು ಕೆಲವು ವಿಷಯಗಳನ್ನು ನಿಷೇಧಿಸಲಾಗಿದೆ ಎಂದು ಮಾತ್ರ ಹೇಳುತ್ತದೆ; ಉಳಿದಂತೆ ಎಲ್ಲಾ ಇತರ ವಿಷಯಗಳು ಹಲಾಲ್‌ಗೆ ಒಳಪಟ್ಟಿವೆ ಎಂದು ಸೂಚಿಸಲಾಗುತ್ತದೆ. ಈ ಪ್ರಮಾಣೀಕರಣವು (ಹಲಾಲ್‌) ಆ ನಿಷೇಧಿತ ವಸ್ತುಗಳನ್ನು ನಿರ್ದಿಷ್ಟ ಉತ್ಪನ್ನದಲ್ಲಿ ಸೇರಿಸಲಾಗಿಲ್ಲ ಎಂಬುದನ್ನು ಮಾತ್ರ ಖಾತ್ರಿಪಡಿಸುತ್ತವೆ. ಯುಕೆಯಂತಹ ಇತರ ದೇಶಗಳಲ್ಲಿ ಇದು ಜಾರಿಯಲ್ಲಿದೆ. ಅಲ್ಲದೆ, ಕೆಲವು ಸುಪ್ರೀಂ ಕೋರ್ಟ್ ತೀರ್ಪುಗಳು ಕೂಡ ಅದರ ಬಗ್ಗೆ ಉಲ್ಲೇಖಿಸಿವೆ.

ಇದಲ್ಲದೆ, ಪ್ರಕರಣದ ವಿಚಾರಣೆಯ ಪ್ರಕ್ರಿಯೆಯ ಅವಧಿಯಲ್ಲಿ, ವೈರಲ್ ಪೋಸ್ಟ್‌ನಲ್ಲಿ ಮಾಡಿದ ಹೇಳಿಕೆಗೆ ವಿರುದ್ಧವಾಗಿ ಯಾವುದೇ ಮುಸ್ಲಿಂ ಸಂಘಟನೆ ಅಥವಾ ಯಾವುದೇ ಮುಸ್ಲಿಂ ವ್ಯಕ್ತಿಯನ್ನು ಪ್ರತಿವಾದಿಯನ್ನಾಗಿ ಮಾಡಲಾಗಿಲ್ಲ ಎಂದು ನಮೂದಿಸುವುದು ಗಮನಾರ್ಹವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಂ ಸಮುದಾಯವು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ.


ಇದನ್ನೂ ಓದಿ: ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಟ್ಯ್ರಾಪ್‌‌ ಮಾಡುತ್ತಿದ್ದಾರೆ ಎಂದು ತಪ್ಪಾಗಿ ವಿಡಿಯೊ ಶೇರ್‌ ಮಾಡಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...