Homeಕರ್ನಾಟಕಉಪ್ಪಿನಂಗಡಿ ಅಶಾಂತಿ ಪ್ರಕರಣಕ್ಕೆ ಪಿಎಫ್‌ಐ, ಸಂಘ ಪರಿವಾರ, ಪೊಲೀಸರು ಸಮಾನ ಹೊಣೆಗಾರರು- ಸಿಪಿಐ(ಎಂ)

ಉಪ್ಪಿನಂಗಡಿ ಅಶಾಂತಿ ಪ್ರಕರಣಕ್ಕೆ ಪಿಎಫ್‌ಐ, ಸಂಘ ಪರಿವಾರ, ಪೊಲೀಸರು ಸಮಾನ ಹೊಣೆಗಾರರು- ಸಿಪಿಐ(ಎಂ)

"ಉಭಯ ಕೋಮುಗಳ ಪ್ರತಿಭಟನೆಯಲ್ಲಿ ಭಜನೆ ಹಾಗೂ ನಮಾಜಿಗೆ ಅವಕಾಶ ನೀಡುತ್ತಿರುವುದು ಪೊಲೀಸ್ ಇಲಾಖೆಯ ದೌರ್ಬಲ್ಯ"

- Advertisement -
- Advertisement -

ಉಪ್ಪಿನಂಗಡಿ ಪೊಲೀಸ್ ಠಾಣೆಯ ಎದುರು ಸಂಭವಿಸಿದ ಲಾಠಿಚಾರ್ಜ್, ಅಶಾಂತಿಯ ಪ್ರಕರಣಗಳು ಜಿಲ್ಲೆಯಲ್ಲಿ ಕಳೆದ 4 ತಿಂಗಳಿನಿಂದ ಸಂಘ ಪರಿವಾರ ಮತ್ತು ಪಿಎಫ್‌ಐ ಸಂಘಟನೆಗಳು ಸಂಯೋಜಿಸಿ ನಿರ್ದೇಶಿಸುತ್ತಿರುವ ಮತೀಯ ಹುನ್ನಾರ, ಕೋಮು ಗಲಭೆಗೆ ವೇದಿಕೆ ನಿರ್ಮಿಸುವ ಪೂರ್ವ ಯೋಜಿತ ಕೃತ್ಯಗಳ ಮುಂದುವರಿದ ಭಾಗವೇ ಆಗಿವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಿ.ಪಿ.ಐ(ಎಂ) ಸಮಿತಿ ಕಾರ್ಯದರ್ಶಿ ಕೆ.ಯಾದವ ಶೆಟ್ಟಿ ಹೇಳಿದ್ದಾರೆ.

ಪತ್ರಿಕೆ ಹೇಳಿಕೆ ನೀಡಿರುವ ಅವರು, ವಿದ್ಯಾರ್ಥಿಗಳ ಮೇಲೆ ಹಲ್ಲೆ, ಭಿನ್ನ ಧರ್ಮಿಯ ಸಹಭೋಜನ ಮತ್ತು ಸಹಕೂಟಗಳ ಮೇಲೆ ಗುಂಪು ಹಲ್ಲೆ, ಪರಸ್ಪರ ವ್ಯಾಪಾರ-ವ್ಯವಹಾರಗಳ ಮೇಲೆ ದಾಂಧಲೆ, ಲವ್ ಜಿಹಾದ್ ಕಟ್ಟುಕತೆಗಳು, ದನ ಕಳ್ಳತನ ಮತ್ತು ನಾಗಬನ ಧ್ವಂಸದ ಪ್ರಕರಣ ಹಾಗೂ ಪೂಜಾ ಸ್ಥಳಗಳ ಅಪವಿತ್ರ ಇವೇ ಮೊದಲಾದ ಸಮಾಜ ಬಾಹಿರ ಕೃತ್ಯಗಳು ಒಂದಾದ ಮೇಲೆ ಒಂದರಂತೆ ಜಿಲ್ಲೆಯಲ್ಲಿ ಕಳೆದ 4 ತಿಂಗಳಿನಿಂದ ನಿರಂತರವಾಗಿ ನಡೆಯುತ್ತಿವೆ. ಇವುಗಳ ಹಿಂದೆ ಸಂಘ ಪರಿವಾರದ ಸಂಘಟನೆಗಳ ಸಿದ್ಧಾಂತ ಮತ್ತು ಕಾರ್ಯಕರ್ತರು ಭಾಗಿಯಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಅದೇ ರೀತಿ ಅದಕ್ಕೆ ಪ್ರತಿಯಾಗಿ ಪಿ.ಎಫ್.ಐ.ನ ಸಿದ್ಧಾಂತದಿಂದ ಪ್ರಭಾವಿತರಾದ ಕಾರ್ಯಕರ್ತರು ಕ್ರಿಯೆಗೆ ಪ್ರತಿಕ್ರಿಯೆ ಎಂಬ ನೆಲೆಯಲ್ಲಿ ಸಕ್ರಿಯವಾಗಿ ಸಮಾಜ ಬಾಹಯ, ಶಾಂತಿ ಭಂಗದ ಕೃತ್ಯಗಳಲ್ಲಿ ಭಾಗವಹಿಸಿ ಕಾನೂನನ್ನು ಕೈಗೆತ್ತಿಕೊಂಡಿರುತ್ತಾರೆ. ಇಂತಹ ಸಂದರ್ಭಗಳಲ್ಲಿ ನೆಲದ ಕಾನೂನನ್ನು ಎತ್ತಿ ಹಿಡಿದು ಕಾನೂನಿನನ್ವಯ ಕಾರ್ಯ ಪ್ರವೃತ್ತರಾಗಿ ಸಮಾಜದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸರು ಮತ್ತೆ ಇದೇ ಸಂಘಟನೆಗಳ ನಾಯಕರೊಂದಿಗೆ ಒಪ್ಪಂದ ನಡೆಸಿ ಲೋಪವೆಸಗಿದ್ದಾರೆ ಎಂದು ಯಾದವ್‌ ದೂರಿದ್ದಾರೆ.

ಅಪರಾಧಿಗಳನ್ನು ಹಸ್ತಾಂತರ ಮತ್ತು ಕೆಲವು ಘಟನೆಗಳಲ್ಲಿ ಅಪರಾಧಿಗಳ ಅದಲು ಬದಲಿನಂತಹ ಪರಸ್ಪರ ಸಂಯೋಜನೆಯನ್ನು ರೂಪಿಸುವ ಮೂಲಕ ಸಂಘ ಪರಿವಾರ ಹಾಗೂ ಪಿಎಫ್‌ಐನಂತಹ ಸಮಾಜಬಾಹಿರ ಸಂಘಟನೆಗಳಿಗೆ ಪೊಲೀಸರು ಕುಮ್ಮಕ್ಕು ನೀಡಿರುವುದನ್ನು ಕಾಣಬಹುದು. ಆದುದರಿಂದ ಉಪ್ಪಿನಂಗಡಿಯಲ್ಲಿ ನಡೆದ ಅಹಿತಕರ ಘಟನೆಗಳು ಈ ಎರಡು ಸಮಾಜ ಬಾಹಿರ ಕೃತ್ಯಗಳ ವಾರೀಸುದಾರ ಸಂಘಟನೆಗಳೊಂದಿಗೆ ಪೊಲೀಸ್ ಇಲಾಖೆಯೂ ಹೊಣೆಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: ದಕ್ಷಿಣ ಕನ್ನಡ: ಯುವಕರ ಮೇಲೆ ತಲವಾರ್‌‌ ದಾಳಿ; ಐವರಿಗೆ ಗಾಯ

ಸಂಘ ಪರಿವಾರ ಹಾಗೂ ಪಿಎಫ್‌ಐ ಸಂಘಟನೆಗಳು ಇತ್ತೀಚಿನ ಪೊಲೀಸ್ ಠಾಣೆಗಳ ಮುಂಭಾಗದ ಪ್ರತಿಭಟನೆಯಲ್ಲಿ ಭಜನೆ, ನಮಾಜಿನಂತಹ ಪವಿತ್ರ ಧಾರ್ಮಿಕ ಆಚರಣೆಗಳನ್ನು ಬಳಕೆ ಮಾಡಿರುವುದು ಸಮಾಜದಲ್ಲಿ ಮತೀಯ ದ್ರುವೀಕರಣ ಮತ್ತಷ್ಟು ಆಳಗೊಳಿಸುವ ವ್ಯವಸ್ಥಿತ ಹುನ್ನಾರವಾಗಿದೆ. ಇಂತಹ ಅಪಾಯಕಾರಿ ಬೆಳವಣಿಗೆಗಳನ್ನು ಜನತೆ ಒಕ್ಕೊರಲಿನಿಂದ ವಿರೋಧಿಸಬೇಕಾಗಿದೆ ಎಂದು ಮನವಿ ಮಾಡಿದ್ದಾರೆ.

ದಕ್ಷಿಣ ಜಿಲ್ಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬೂದಿಮುಚ್ಚಿದ ಕೆಂಡದಂತಿರುವ ಕೋಮು ಉದ್ವಿಘ್ನತೆಯ ಸಮಯದಲ್ಲಿ ಕಳೆದ ಎರಡು ತಿಂಗಳ ಹಿಂದೆ ನೀಡಿರುವ ಹೇಳಿಕೆ ಸಮಾಜ ಬಾಹಿರ ಕೃತ್ಯಗಳಲ್ಲಿರುವ ಸಂಘ ಪರಿವಾರದ ಕಾರ್ಯಕರ್ತರನ್ನು ಹುರಿದುಂಬಿಸಿದೆ. ಸಂವಿಧಾನವನ್ನು ಎತ್ತಿ ಹಿಡಿಯಬೇಕಾದ ಮುಖ್ಯಮಂತ್ರಿ, ಉಸ್ತುವಾರಿ ಸಚಿವರು, ಬಿಜೆಪಿ ಪಕ್ಷದ ಸಂಸದರು, ಶಾಸಕರು, ನಾಯಕರು ಪೊಲೀಸ್ ಇಲಾಖೆಯ ಸ್ವತಂತ್ರ ಕಾರ್ಯನಿರ್ವಹಣೆಯ ಮೇಲೆ ಪ್ರಭಾವ ಬೀರಿದ್ದಾರೆ. ಇದರ ಪರಿಣಾಮವಾಗಿ ಜಿಲ್ಲೆಯ ಕೆಲವು ಪೊಲೀಸ್ ಠಾಣೆಗಳಲ್ಲಿ ಆಯುಧ ಪೂಜೆ ಆಚರಣೆಯು ಸಂಘ ಪರಿವಾರದ ಡ್ರೆಸ್ ಕೋಡಿನೊಂದಿಗೆ ನಡೆದಿದೆ. ಇದನ್ನು ಬಲವಾಗಿ ಉನ್ನತ ಪೊಲೀಸರು ಬೆಂಬಲಿಸಿ ಪ್ರತಿಪಾದಿಸಿರುವುದನ್ನು ಈ ಹಿನ್ನೆಲೆಯಲ್ಲಿ ಗಮನಿಸಬೇಕು ಎಂದು ಅವರು ಹೇಳಿದ್ದಾರೆ.

ಅದೇ ರೀತಿ ಇತ್ತೀಚೆಗೆ ಕರಾವಳಿ ಜಿಲ್ಲೆಯ ಪೊಲೀಸ್ ಠಾಣೆಗಳಲ್ಲಿ ಸಂಘ ಪರಿವಾರ ಪ್ರತಿಭಟನೆಯ ಭಾಗವಾಗಿ ಭಜನೆ ಹಾಡುವ ಕ್ರಮವನ್ನು ಪೊಲೀಸರು ತಡೆಯದಿರುವುದು. ಇದೇ ರೀತಿಯಲ್ಲಿ ಉಪ್ಪಿನಂಗಡಿ ಠಾಣೆ ಆವರಣದಲ್ಲಿ ಪ್ರತಿಭಟನಾಕಾರರು ಧಾರ್ಮಿಕ ನಮಾಜನ್ನು ಕೂಡಾ ಮಾಡಲು ಅವಕಾಶ ನೀಡಿರುವುದು ಪೊಲೀಸ್ ಇಲಾಖೆಯ ದೌರ್ಬಲ್ಯವಾಗಿದೆ. ಅಷ್ಟು ಮಾತ್ರವೇ ಅಲ್ಲದೆ ಕೆಲವು ಪೊಲೀಸ್ ಠಾಣೆಗಳಲ್ಲಿ ಗರ್ಭಿಣೆ ಮಹಿಳೆಯರಿಗೆ ಸಂಪ್ರದಾಯದ ಹಿನ್ನೆಲೆಯ ಸೀಮಂತ ಥರದ ಮೊದಲಾದ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಪೊಲೀಸ್ ಇಲಾಖೆ ಕರ್ತವ್ಯದ ಪರಿಧಿಯನ್ನು ದಾಟಿರುವ ಪ್ರಕರಣಗಳು ನಡೆದಿವೆ ಎಂದು ಅವರು ಎಚ್ಚರಿಸಿದ್ದಾರೆ.

ಸಂಘ ಪರಿವಾರದ ಕ್ರಿಯೆ, ಪಿಎಫ್‌ಐನಂತಹ ಸಂಘಟನೆಗಳ ಪ್ರತಿತಂತ್ರ ಮತ್ತು ಪೊಲೀಸರ ಓಲೈಕೆಯ ಅಧಿಕಾರ ತಂತ್ರಗಳು ಜಿಲ್ಲೆಯನ್ನು ಕೋಮು ಉದ್ವಿಘ್ನತೆಯ ಅಗ್ನಿ ಕುಂಡದ ಬಳಿ ತಂದಿರಿಸಿದೆ. ಜಿಲ್ಲೆಯ ಶಾಂತಿ, ಸಾಮರಸ್ಯ, ಸಹಬಾಳ್ವೆ ಮರೀಚಿಕೆಯಾಗಿದೆ. ಕೊರೊನಾ ಸಾಂಕ್ರಾಮಿಕದಿಂದ, ಕೇಂದ್ರ, ರಾಜ್ಯ ಸರಕಾರದ ತಪ್ಪು ಆರ್ಥಿಕ ನೀತಿ, ಕೈಗಾರಿಕಾ ನೀತಿಯಿಂದ; ವ್ಯಾಪಕ ಬಡತನ, ಹಸಿವು, ಬೆಲೆ ಏರಿಕೆ, ನಿರುದ್ಯೋಗದಿಂದ ಜಿಲ್ಲೆಯ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಹಿಳೆಯರ ಮೇಲೆ, ಅಪ್ರಾಪ್ತ ಮಕ್ಕಳ ಮೇಲೆ ದೌರ್ಜನ್ಯ, ಅತ್ಯಾಚಾರದ ಘಟನೆಗಳು ಹೆಚ್ಚಾಗುತ್ತಿದೆ. ಇಂತಹ ಜ್ವಲಂತ ಸಮಸ್ಯೆಗಳು ಜನರನ್ನು ಕಾಡುತ್ತಿರುವಾಗ ಸಂಘ ಪರಿವಾರದ ಸಂಘಟನೆಗಳು ಮತ್ತು ಪಿ.ಎಫ್.ಐ. ಜನರನ್ನು ದಾರಿ ತಪ್ಪಿಸಿ ರಾಜಕೀಯ ಲಾಭ ಪಡೆಯಲು ಕೋಮು ದ್ವೇಷದ ವಿಷ ಪ್ರಸರಿಸುತ್ತಿರುವುದು ತೀವ್ರ ಖಂಡನೀಯ ಎಂದಿದ್ದಾರೆ.

ಜಿಲ್ಲೆಯ ಜಾತ್ಯಾತೀತ ಪರಂಪರೆ, ಶಾಂತಿ ಮತ್ತು ಅಭಿವೃದ್ಧಿಗಾಗಿ ಪ್ರಗತಿಪರ ಶಕ್ತಿಗಳೊಂದಿಗೆ ಸೇರಿ ಪರಸ್ಪರ ಶಾಂತಿ ಸೌಹಾರ್ದತೆಗಾಗಿ ಕಾರ್ಯಕ್ರಮ ರೂಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿರಿ: ಉಪ್ಪಿನಂಗಡಿ ಲಾಠಿಚಾರ್ಜ್‌: ಪಾಪ್ಯುಲರ್ ಫ್ರಂಟ್‌‌ ಆಫ್‌ ಇಂಡಿಯಾ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...