Homeಕರ್ನಾಟಕರಮೇಶ್‌ಕುಮಾರ್‌ ಹೇಳಿಕೆಗೆ ಪ್ರಿಯಾಂಕಾ ಗಾಂಧಿ ಖಂಡನೆ

ರಮೇಶ್‌ಕುಮಾರ್‌ ಹೇಳಿಕೆಗೆ ಪ್ರಿಯಾಂಕಾ ಗಾಂಧಿ ಖಂಡನೆ

- Advertisement -
- Advertisement -

ಕರ್ನಾಟಕ ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕ, ಮಾಜಿ ಸ್ಪೀಕರ್‌‌ ಕೆ.ಆರ್.ರಮೇಶ್ ಕುಮಾರ್ ಅವರು “ಅತ್ಯಾಚಾರವನ್ನು ಆನಂದಿಸಿ” ಎಂದು ಹೇಳಿರುವುದನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಖಂಡಿಸಿದ್ದಾರೆ.

“ರಮೇಶ್ ಕುಮಾರ್ ಅವರು ನೀಡಿದ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ಅಂತಹ ಮಾತುಗಳನ್ನು ಯಾರಾದರೂ ಹೇಗೆ ಹೇಳಬಹುದು ಎಂಬುದನ್ನು ವಿವರಿಸಲಾಗದು, ಅವು ಅಸಮರ್ಥನೀಯವಾಗಿವೆ. ಅತ್ಯಾಚಾರವು ಘೋರ ಅಪರಾಧ. ಪೂರ್ಣ ವಿರಾಮ” ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು ರಮೇಶ್‌ಕುಮಾರ್‌‌ ಅವರ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ್ದು, “ನಾಚಿಕೆಗೇಡು” ಎಂದಿದ್ದಾರೆ. ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ಮಹಿಳಾ ಪ್ರಚಾರ ಕಾರ್ಯಕ್ರಮವನ್ನು ಉಲ್ಲೇಖಿಸಿ ಅವರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಅವರ ಮೇಲೆ ವಾಗ್ದಾಳಿ ನಡೆಸಿದ್ದಾರೆ. “ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುವ ಮೊದಲು ಮತ್ತು ಉತ್ತರ ಪ್ರದೇಶದಲ್ಲಿ -ಲಡ್ಕಿ ಹೂ, ಲಾಡ್ ಸಕ್ತಿ ಹೂ- ಎಂಬ ಘೋಷಣೆಗಳನ್ನು ಎತ್ತುವ ಮೊದಲು ಕಾಂಗ್ರೆಸ್‌ ತಮ್ಮ ನಾಯಕನನ್ನು ಅಮಾನತುಗೊಳಿಸಬೇಕು” ಎಂದು ಸ್ಮೃತಿ ಇರಾನಿ ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ ಎನ್ನಲಾಗಿದೆ.

ಇರಾನಿ ಅವರು ಸಂಸತ್ತಿನಲ್ಲೂ ಈ ವಿಷಯವನ್ನು ಪ್ರಸ್ತಾಪಿಸಿದ್ದರು. “ನಿಮಗೆ ಹೆಣ್ಣಿನ ವಿಚಾರದಲ್ಲಿ ನಿಜವಾದ ನಂಬಿಕೆ ಇದ್ದರೆ ರಮೇಶ್‌ ಕುಮಾರ್‌ ಅವರ ಹೇಳಿಕೆಯನ್ನು ಖಂಡಿಸಬೇಕು” ಎಂದಿದ್ದರು.

ಕೆ.ಆರ್.ರಮೇಶ್ ಕುಮಾರ್ ಅವರನ್ನು ಅವರ ಪಕ್ಷದವರು ಸೇರಿದಂತೆ ಹಲವು ನಾಯಕರು ಟೀಕಿಸಿದ್ದಾರೆ. ಸಮಾಜವಾದಿ ಪಕ್ಷದ ರಾಜ್ಯಸಭಾ ಸಂಸದೆ ಜಯಾ ಬಚ್ಚನ್ ಅವರು ರಮೇಶ್‌ಕುಮಾರ್‌‌ ವಿರುದ್ಧ ಕಾಂಗ್ರೆಸ್ ಪಕ್ಷ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

“ಕರ್ನಾಟಕ ವಿಧಾನಸಭೆ ಸ್ಪೀಕರ್ ಮತ್ತು ಹಿರಿಯ ಕಾಂಗ್ರೆಸ್ ಶಾಸಕರ ನಡುವೆ ಸದನದಲ್ಲಿ ನಡೆದ ಸಂವೇದನಾ ರಹಿತ ಮಾತುಗಳನ್ನು ಕಾಂಗ್ರೆಸ್ ಒಪ್ಪುವುದಿಲ್ಲ” ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿರಿ: ʼದತ್ತಜಯಂತಿ ಹಿನ್ನೆಲೆʼ: ಮದ್ಯ ಮಾರಾಟ ನಿಷೇಧಕ್ಕೆ ಹಾಸನ ಡಿಸಿ ಆದೇಶ

ವಿಧಾನಸಭೆಯ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌‌ ವಿಧಾನಸಭೆಯಲ್ಲಿ ಮಾತನಾಡುತ್ತಾ, “ಅತ್ಯಾಚಾರ ಅನಿವಾರ್ಯವಾದರೆ ಮಲಗಿ ಆನಂದಿಸಿ” ಎಂಬ ಹೇಳಿಕೆಯನ್ನು ಉಲ್ಲೇಖಿಸಿ ಭಾರಿ ಟೀಕೆಗೆ ಗುರಿಯಾಗಿದ್ದರು. ರಮೇಶ್ ಕುಮಾರ್‌ ಹೇಳಿಕೆಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ಉಂಟಾಗಿತ್ತು.

ಬಳಿಕ ಕ್ಷಮೆಯಾಚಿಸಿದ್ದ ಅವರು, “ಅತ್ಯಾಚಾರದ ಕುರಿತು ಇಂದಿನ ವಿಧಾನಸಭೆಯಲ್ಲಿ ನಾನು ಮಾಡಿದ ಅಸಡ್ಡೆ ಮತ್ತು ನಿರ್ಲಕ್ಷ್ಯದ ಹೇಳಿಕೆಗಾಗಿ ನಾನು ಎಲ್ಲರಲ್ಲಿಯೂ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ. ನನ್ನ ಉದ್ದೇಶವು ಒಂದು ಹೇಯ ಅಪರಾಧವನ್ನು ಕ್ಷುಲ್ಲಕಗೊಳಿಸುವುದು ಅಥವಾ ಅಮುಖ್ಯವಾಗಿಸುವುದು ಆಗಿರಲಿಲ್ಲ. ಅದು ಯೋಚಿಸದೇ ಬಂದ ಹೇಳಿಕೆ! ಇನ್ನು ಮುಂದೆ ನನ್ನ ಮಾತುಗಳಲ್ಲಿ ಎಚ್ಚರಿಕೆ ವಹಿಸುತ್ತೇನೆ” ಎಂದಿದ್ದರು.

ಗುರುವಾರ ಅಧಿವೇಶನದ ಸಮಯದಲ್ಲಿ ರೈತರ ಸಮಸ್ಯೆಗಳ ಮೇಲಿನ ಚರ್ಚೆ ವೇಳೆ ಎಲ್ಲರಿಗೂ ಸಮಯ ನೀಡಿದರೆ ಅಧಿವೇಶನ ನಡೆಸುವುದಾದರೂ ಹೇಗೆ ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಶ್ನಿಸಿದಾಗ ರಮೇಶ್‌ ಕುಮಾರ್‌ ಈ ಆಕ್ಷೇಪಾರ್ಹ ಹೇಳಿಕೆಯನ್ನು ಉಲ್ಲೇಖಿಸಿದ್ದರು.

“ಎಲ್ಲರೂ ಮಾತನಾಡಬೇಕು ಎನ್ನುತ್ತಾರೆ. ನೀವು ಏನು ಡಿಸೈಡ್ ಮಾಡಿಕೊಳ್ಳುತ್ತಿರೋ ಅದಕ್ಕೆ ನಾನು ಎಸ್‌, ಎಸ್‌ ಎನ್ನಬೇಕು ಅಷ್ಟೇ. ರಮೇಶ್ ಕುಮಾರ್ ಅವರೇ ಈಗ ನನ್ನ ಪರಿಸ್ಥಿತಿ ಹೇಗಾಗಿದೆ ಅಂದರೆ ಲೆಟ್ಸ್ ಎಂಜಾಯ್​ದ ಸಿಚುಯೇಷನ್ ಅನ್ನೋ ರೀತಿ ಆಗಿದೆ. ಇದನ್ನು ಕಂಟ್ರೋಲ್ ಮಾಡಿ ನಿಯಂತ್ರಣದಲ್ಲಿಟ್ಟು, ಒಂದು ವ್ಯವಸ್ಥಿತವಾಗಿ ತೆಗೆದುಕೊಂಡು ಹೋಗುವ ಪ್ರಯತ್ನ ಬಿಟ್ಟು ಹೀಗೆ ಮಾತಾಡಿ ಎಂದು ಬಿಟ್ಟುಬಿಡುವುದು. ಆ ಸ್ಥಿತಿಗೆ ಬಂದುಬಿಟ್ಟಿದೆ” ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ರಮೇಶ್​ಕುಮಾರ್, ‘ದೆರ್‌ ಈಸ್‌ ಎ ಸೇಯಿಂಗ್‌, ವೆನ್‌ ರೇಪ್‌ ಈಸ್‌ ಇನೆವಿಟಬಲ್‌ ಲೆಟ್‌ ಲೇಡೌನ್‌ ಅಂಡ್‌ ಎಂಜಾಯ್‌’ (ಒಂದು ಹೇಳಿಕೆಯಿದೆ. ಅತ್ಯಾಚಾರ ಅನಿವಾರ್ಯವಾದಾಗ, ಮಲಗಿ ಆನಂದಿಸಿ) ಎಂದು ಹೇಳಿದ್ದರು. ಈ ಹೇಳಿಕೆಗೆ ಸ್ಪೀಕರ್ ಕಾಗೇರಿ ಸೇರಿದಂತೆ ಹಲವು ಮಂದಿ ನಕ್ಕು, ತಮಾಷೆಯಾಗಿ ತೆಗೆದುಕೊಂಡಿದ್ದರು. ಸದನವನ್ನು ಗಮನಿಸುತ್ತಿರುವ ರಾಜ್ಯದ ಜನತೆ ಜನಪ್ರತಿನಿಧಿಗಳ ವರ್ತನೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.


ಇದನ್ನೂ ಓದಿರಿ: ಮತಾಂತರ ನಿಷೇಧ ಕಾಯಿದೆ ಹಿಂದೆ ದೇಶದ ಕೋಮುಸೌಹಾರ್ದತೆ ಹಾಳುಗೆಡವುವ ದುರುದ್ದೇಶವಿದೆ- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...