Homeಚಳವಳಿಜ್ಞಾನಪೀಠ ವಿಜೇತ ಲೇಖಕ ದಾಮೋದರ್ ಮೌಜೋ ಸಹ ಸನಾತನಾ ಸಂಸ್ಥೆಯ ಹಿಟ್ ಲಿಸ್ಟ್‌ನಲ್ಲಿದ್ದರು!

ಜ್ಞಾನಪೀಠ ವಿಜೇತ ಲೇಖಕ ದಾಮೋದರ್ ಮೌಜೋ ಸಹ ಸನಾತನಾ ಸಂಸ್ಥೆಯ ಹಿಟ್ ಲಿಸ್ಟ್‌ನಲ್ಲಿದ್ದರು!

ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ನಂತರದ ತನಿಖೆಯಲ್ಲಿ ಮೌಜೋರವರ ಹೆಸರು ಸಹ ಇರುವುದು ಬಹಿರಂಗವಾಗಿತ್ತು.

- Advertisement -
- Advertisement -

2021ರ ಸಾಲಿನ ಜ್ಞಾನಪೀಠ ಪ್ರಶಸ್ತಿಯು ಕೊಂಕಣಿ ಭಾಷೆಯ ಖ್ಯಾತ ಲೇಖಕ ದಾಮೋದರ ಮೌಜೋರವರಿಗೆ ಲಭಿಸಿದ್ದು ನಮಗೆಲ್ಲ ಗೊತ್ತಿದೆ. 1944 ರಲ್ಲಿ ಗೋವಾದಲ್ಲಿ ಜನಿಸಿದ ದಾಮೋದರ ಮೌಜೋ ಅವರು ತಮ್ಮ ಸಣ್ಣ ಕತೆಗಳು ಮತ್ತು ಕಾದಂಬರಿಗಳಿಗೆ ಪ್ರಸಿದ್ಧರು. ಜಾತಿ, ಮತ, ಲಿಂಗ ಇತ್ಯಾದಿಗಳು ಮಾನವ ಸಂಬಂಧಗಳಲ್ಲಿ ತಂದೊಡ್ಡುವ ಬಿರುಕುಗಳನ್ನು ಅವರು ದಿಟ್ಟವಾಗಿ ಮತ್ತು ವ್ಯಂಗ್ಯವಾಗಿ ಅಭಿವ್ಯಕ್ತಿಸಿದ್ದಾರೆ. ಜಿ.ಎನ್ ದೇವಿ, ಎಂ.ಎಂ ಕಲಬುರ್ಗಿ ಮೊದಲಾದವರೊಡನೆ ಕೆಲಸ ಮಾಡಿದ ಮೌಜೋ ಅವರು ತಮ್ಮ ಕ್ರಿಯಾಶೀಲತೆಗೂ ಹೆಸರಾದವರು. ಆ ಮೂಲಕ ಕೊಂಕಣಿ ಭಾಷೆಗೆ ಎರಡನೇ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಹೆಗ್ಗಳಿಕೆ ಅವರದು. ಅಷ್ಟು ಮಾತ್ರವಲ್ಲದೆ ಅವರು ಶೋಷಿತರು, ತಳಸಮುದಾಯಗಳು ಪರವಾಗಿ ಮತ್ತು ಕೋಮುವಾದದ ವಿರುದ್ಧದ ಸ್ಪಷ್ಟ ನಿಲುವುಗಳಿಂದಾಗಿ ಸನಾತನಾ ಸಂಸ್ಥೆಯ ಹಿಟ್‌ ಲಿಸ್ಟ್‌ನಲ್ಲಿದ್ದರು ಎಂಬ ಅಂಶ ತಿಳಿದುಬಂದಿದೆ.

ಬಲಪಂಥೀಯ ತೀವ್ರವಾದಿಗಳ ವಿರುದ್ಧ ಮೌಜೋರವರು ಧೈರ್ಯದಿಂದ ಮಾತನಾಡಲು ಎಂದಿಗೂ ಹಿಂಜರಿದಿರಲಿಲ್ಲ. 2015ರಲ್ಲಿ ವಿಚಾರವಾದಿ ಎಂ.ಎಂ ಕಲಬುರ್ಗಿ ಅವರ ಹತ್ಯೆಯ ನಂತರ ಮೌಜೋರವರು ಅಭಿವ್ಯಕ್ತಿ ಸ್ವಾತಂತ್ರ್ಯದ ಉಳಿವಿಗಾಗಿ ದಿಟ್ಟ ನಿಲುವು ತೆಗೆದುಕೊಂಡಿದ್ದರು. ಸಾಹಿತ್ಯ ಅಕಾಡೆಮಿ ಮುಖ್ಯಸ್ಥರಿಗೆ ಬರೆದ ಪತ್ರದಲ್ಲಿ, “ಸಾಹಿತಿ, ಬರಹಗಾರರು, ಚಿಂತಕರು ಏಕ ಸಂಸ್ಕೃತಿಯ ಗೂಂಡಾಗಿರಿ ಮತ್ತು ಮಾರಲ್ ಪೊಲೀಸಿಂಗ್ ಅನ್ನು ತಡೆಯಲು ಒಗ್ಗಟ್ಟಾಗಿ ನಿಲ್ಲಬೇಕು” ಎಂದು ಆಗ್ರಹಿಸಿದ್ದರು. ಹಲವು ಸನಾತನಾವಾದಿಗ ಬೆದರಿಕೆಗಳ ನಡುವೆಯೂ ಜನವರಿ 2016 ರಲ್ಲಿ ಗುಜರಾತ್‌ನ ದಂಡಿಯಲ್ಲಿ ನಡೆದ ಸೆಮಿನಾರ್‌ನಲ್ಲಿ ಅವರ ಭಾಷಣವದಲ್ಲಿ ಅವರು ಬಲಪಂಥೀಯ ಉಗ್ರಗಾಮಿಗಳನ್ನು ಕಟು ಪದಗಳಲ್ಲಿ ಟೀಕಿಸಿದ್ದರು. ಅಲ್ಲದೆ 2019 ರ ಲೋಕಸಭಾ ಚುನಾವಣೆಯ ಮುನ್ನಾದಿನದಂದು “ಫ್ಯಾಸಿಸ್ಟ್ ಆಡಳಿತವನ್ನು ಸೋಲಿಸಿ” ಎಂದು ನಾಗರಿಕರಿಗೆ ಮನವಿ ಮಾಡಿದ್ದರು.

ಹಾಗಾಗಿಯೇ ಸಾಹಿತಿ, ಚಿಂತಕರು, ಪತ್ರಕರ್ತರು ಮತ್ತು ಸಾಮಾಜಿಕ ಕಾರ್ಯಕರ್ತರನ್ನು ಹತ್ಯೆಗೈಯಲು ಬಲಪಂಥೀಯ ಉಗ್ರಗಾಗಮಿಗಳು ಸಿದ್ದಪಡಿಸಿದ್ದ ಲಿಸ್ಟ್‌ನಲ್ಲಿ ದಾಮೋದರ ಮೌಜೋರವರ ಹೆಸರು ಸಹ ಇತ್ತು. ಕರ್ನಾಟಕದಲ್ಲಿ ಕೋಮುವಾದಿಗಳಿಗೆ ಸಿಂಹ ಸ್ವಪ್ನವಾಗಿದ್ದ, ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ನಂತರ ಕರ್ನಾಟಕ ಎಸ್‌ಐಟಿ ಪೊಲೀಸರು ಮತ್ತು ಭಯೋತ್ಪಾದನಾ ನಿಗ್ರಹ ದಳದ ತನಿಖೆಯಲ್ಲಿ ಮೌಜೋರವರ ಹೆಸರು ಸಹ ಇರುವುದು ಬಹಿರಂಗವಾಗಿತ್ತು. ಅವರೊಂದಿಗೆ ದಿವಗಂತ ಗಿರೀಶ್ ಕಾರ್ನಾಡ್, ವಿಚಾರವಾದಿ ಕೆ.ಎಸ್ ಭಗವಾನ್, ಪತ್ರಕರ್ತ ನಿಖಿಲ್ ವಾಗ್ಲೆ ಸೇರಿದಂತೆ ಇತರರ ಹೆಸರುಗಳಿದ್ದವು.

2013 ರ ಆಗಸ್ಟ್ 20 ರಂದು ಪುಣೆಯಲ್ಲಿ ನರೇಂದ್ರ ದಾಭೋಲ್ಕರ್ ಅವರನ್ನು ಗುಂಡಿಕ್ಕಿ ಕೊಲ್ಲಲಾಯಿತು. ಗೋವಿಂದ ಪನ್ಸಾರೆ ಅವರನ್ನು ಫೆಬ್ರವರಿ 16, 2015 ರಂದು ಪಶ್ಚಿಮ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಗುಂಡಿಕ್ಕಲಾಯಿತು, ಇದಾಗಿ ನಾಲ್ಕು ದಿನಗಳ ನಂತರ ಅವರು ನಿಧನರಾದರು. ಸಂಶೋಧಕ ಎಂ.ಎಂ. ಕಲ್ಬುರ್ಗಿ ಅವರನ್ನು ಆಗಸ್ಟ್ 30, 2015 ರಂದು ಧಾರವಾಡದಲ್ಲಿ ಗುಂಡಿಕ್ಕಿ ಕೊಲ್ಲಲಾಯಿತು.

ಈ ಮೂರು ಪ್ರಕರಣಗಳಿಗೂ, ಸೆಪ್ಟಂಬರ್ 05, 2017ರಂದು ಬೆಂಗಳೂರಿನಲ್ಲಿ ಹತ್ಯೆಗೀಡಾದ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಗೂ ಸಂಬಂಧವಿದೆ. ಈ ಹತ್ಯೆಗಳ ಹಿಂದೆ ಬಲಪಂಥೀಯ ಸನಾತನಾ ಸಂಸ್ಥೆಯ ಕೈವಾಡವಿದೆ ಎಂದು ತನಿಖಾ ಸಂಸ್ಥೆಗಳು ತಿಳಿಸಿವೆ. ಈ ಸಂಬಂಧ ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿನ 30ಕ್ಕೂ ಹೆಚ್ಚು ಸನಾತನಾ ಸಂಸ್ಥೆಯ ಸದಸ್ಯರನ್ನು ಬಂಧಿಸಲಾಗಿದೆ.

ಆ ಸಂದರ್ಭದಲ್ಲಿ ಎಲ್ಲಾ ಹೋರಾಟಗಾರರಂತೆ ಮೌಜೋರವರಿಗೆ ಇಷ್ಟವಿಲ್ಲದಿದ್ದರೂ ಪೊಲೀಸ್ ರಕ್ಷಣೆ ನೀಡಲಾಗಿತ್ತು. ಆದರೆ ದಾಮೋದರ ಮೌಜೋರವರು ಧೈರ್ಯವಾಗಿ ಮಾತನಾಡುವುದನ್ನು ನಿಲ್ಲಿಸಿರಲಿಲ್ಲ. ಅವರು ಪತ್ರಕರ್ತ ನಿಖಿಲ್ ವಾಗ್ಲೆ ಜೊತೆಗಿನ ಸಂದರ್ಶನವೊಂದರಲ್ಲಿ “ಭಾರತ ಸರ್ಕಾರವು ಸಿಮಿ [ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ] ಅಥವಾ ಝಾಕಿರ್ ನಾಯ್ಕ್ ಅವರ ಸಂಘಟನೆಗಳನ್ನು ನಿಷೇಧಿಸಲು ಸಾಧ್ಯವಾದರೆ, ಹಿಂದುತ್ವದ ಉಗ್ರಗಾಮಿ ಗುಂಪುಗಳನ್ನು ನಿಷೇಧಿಸಲು ಏಕೆ ಸಾಧ್ಯವಿಲ್ಲ? ನಿಷೇಧ ಮಾಡದಂತೆ ತಡೆಯುತ್ತಿರುವವರಾದರೂ ಯಾರು? ಈ ಸಂಘಟನೆಗಳು ಹಿಂದೂ ಗುಂಪು ಎಂಬ ಕಾರಣಕ್ಕಾಗಿ ನಿರ್ಭಯವಾಗಿ ಕುಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ” ಎಂದು ಹೇಳಿದ್ದರು.

ಮೌಝೋರವರು 1980ರಲ್ಲಿಯೇ ‘ಕಾರ್ಮೆಲಿನ್’ ಎಂಬ ಕಾದಂಬರಿಯಲ್ಲಿ ಮಧ್ಯಪ್ರಾಚ್ಯದಲ್ಲಿ ಮನೆಗೆಲಸದ ಮಹಿಳೆಯರ ಮೇಲಿನ ದೌರ್ಜನ್ಯದ ಬಗ್ಗೆ ಬರೆದಿದ್ದಾರೆ. ಅವರ ‘ದಿ ಬರ್ಗರ್’ ಎಂಬ ಕಥೇಯಲ್ಲಿ ದನದ ಮಾಂಸದ ಪ್ರಸ್ತಾಪ ಬರುತ್ತದೆ. ಇನ್ನೊಂದು ಕಥೆಯಲ್ಲಿ ಗೋರಕ್ಷಕರು ದಲಿತ ಯುವಕರನ್ನು ಹೇಗೆ ಬೆದರಿಸಿದರು ಎಂಬುದನ್ನು ವಿವರಿಸಿದ್ದಾರೆ. ಅಂದರೆ ಬಹುತೇಕ ಈ ವಿಚಾರಗಳು ಇತ್ತೀಚಿನ ದಿನಗಳಲ್ಲಿ ಚರ್ಚೆಗೆ ಬರುವ ಮುನ್ನವೇ ಅವರು ತಮ್ಮ ಸಾಹಿತ್ಯಗಳಲ್ಲಿ ಉಲ್ಲೇಖಿಸಿದ್ದಾರೆ. ಅವರು ಇಂದಿಗೂ ಬಲಪಂಥೀಯ ತೀವ್ರವಾದಗಳ ಅಪಾಯಗಳ ಕುರಿತು ಮಾತನಾಡುತ್ತಲೇ ಇದ್ದಾರೆ.

ಮಾಹಿತಿ ಕೃಪೆ: ನ್ಯೂಸ್ ಕ್ಲಿಕ್


ಇದನ್ನೂ ಓದಿ:  ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಕರ್ನಾಟಕ ವಿಶೇಷ ತನಿಖಾ ದಳ (SIT) ಭೇದಿಸಿದ್ದಾದರೂ ಹೇಗೆ?

ಭಾಗ -2: ಗೌರಿ ಹತ್ಯೆಯ ತನಿಖೆಯ ಜಾಡು ಹಿಡಿದು ಹೊರಟಾಗ ಸಿಕ್ಕ ಸತ್ಯಗಳು… ಭಾಗ-2

ಭಾಗ -3: ಗೌರಿ ಹತ್ಯೆಯ ತನಿಖೆ ನಡೆದದ್ದು ಹೇಗೆ? ಈಗ ಎಲ್ಲಿಯವರೆಗೂ ಬಂದಿದೆ? ಕೊನೆಯ ಭಾಗ ಓದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...