Homeಕರ್ನಾಟಕಪದವೀಧರ ಭಾಷ ಶಿಕ್ಷಕರ ನೇಮಕಾತಿ: ಪದವಿಯಲ್ಲಿ ಆಂಗ್ಲಭಾಷೆಯನ್ನು ಐಚ್ಚಿಕ ವಿಷಯವಾಗಿ ಅಭ್ಯಾಸಿಸಿದವರಿಗೂ ಅವಕಾಶ ನೀಡಲು ಒತ್ತಾಯ

ಪದವೀಧರ ಭಾಷ ಶಿಕ್ಷಕರ ನೇಮಕಾತಿ: ಪದವಿಯಲ್ಲಿ ಆಂಗ್ಲಭಾಷೆಯನ್ನು ಐಚ್ಚಿಕ ವಿಷಯವಾಗಿ ಅಭ್ಯಾಸಿಸಿದವರಿಗೂ ಅವಕಾಶ ನೀಡಲು ಒತ್ತಾಯ

- Advertisement -
- Advertisement -

ಪದವೀಧರ ಭಾಷ ಶಿಕ್ಷಕರ ನೇಮಕಾತಿಗೆ ಸಂಭವಿಸಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯು ರಾಜ್ಯ ಗ್ಯಾಸೆಟಿಯರ್‌ನಲ್ಲಿ ಪ್ರಕಟಿಸಿರುವ ನೇಮಕಾತಿ ನಿಯಮಾವಳಿಯಲ್ಲಿ ಬದಲಾವಣೆ ಮಾಡಿ ಆಂಗ್ಲ ಭಾಷೆಯನ್ನು ಐಚ್ಚಿಕ ವಿಷಯವಾಗಿ ಅಭ್ಯಾಸಿಸಿದವರಿಗೂ ಶಿಕ್ಷಕರ ಹುದ್ದೆಗೆ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ಅಭ್ಯರ್ಥಿಗಳು ಒತ್ತಾಯಿಸಿದ್ದಾರೆ.

ಪದವಿಯಲ್ಲಿ ಸಮಾಜಶಾಸ್ತ್ರ ಮತ್ತು ಆಂಗ್ಲ ಭಾಷೆಯನ್ನು ಐಚ್ಚಿಕ ವಿಷಯವಾಗಿ ಅಭ್ಯಾಸಿಸಿದ ಅಭ್ಯರ್ಥಿಗಳು
ಪದವೀಧರ ಪ್ರಾಥಮಿಕ ಸಮಾಜ ವಿಜ್ಞಾನ ಶಿಕ್ಷಕರ ಹುದ್ದೆಗೆ ಸ್ಪರ್ಧಿಸಲು ಅರ್ಹರಾಗಿದ್ದಾರೆ. ಆದರೆ ಪದವೀಧರ ಪ್ರಾಥಮಿಕ ಆಂಗ್ಲ ಭಾಷೆ ಶಿಕ್ಷಕರ ಹುದ್ದೆಗೆ ಸ್ಪರ್ಧಿಸಲು ಅರ್ಹರಲ್ಲ ಎಂಬುದನ್ನು ಸುತ್ತೋಲೆಯಿಂದ ತೆಗೆಯಬೇಕು. ಅವರಿಗೂ ಶಿಕ್ಷಕ ಹುದ್ದೆಗೆ ಸ್ಪರ್ಧಿಸಲು ಅವಕಾಶ ನೀಡಿ ತಿದ್ದುಪಡಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

“ಭಾಷಾ ವಿಷಯಗಳನ್ನು ಹೊರತುಪಡಿಸಿ ಐಚ್ಚಿಕ ವಿಷಯವಾಗಿ 3 ವರ್ಷಗಳ ಪದವಿಯಲ್ಲಿ ಕನ್ನಡ/ಆಂಗ್ಲ/ಹಿಂದಿ/ಮರಾಠಿ/ಇತಿಹಾಸ/ಅರ್ಥಶಾಸ್ತ್ರ/ರಾಜ್ಯಶಾಸ್ತ್ರ/ಭೌಗೋಳಿಕ ವಿಷಯಗಳನ್ನು ಅಭ್ಯಾಸ ಮಾಡಿರಬೇಕು” ಎಂದು GPSTRನ ಹೊಸ C&R ನಿಯಮಾವಳಿಯಲ್ಲಿ ಪ್ರಕಟವಾಗಿದ್ದು ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ಅಘಾತವಾಗಿದೆ” ಎಂದು ಉದ್ಯೋಗಾಕಾಂಕ್ಷಿ ಮೋಹನರಾಜ ಜಿ. ಹೇಳಿದ್ದಾರೆ.

ಇದನ್ನೂ ಓದಿ: 5 ವರ್ಷಗಳ ಕಾನೂನು ಪದವಿಯ 2 & 4ನೇ ಸೆಮಿಸ್ಟರ್‌ ಪರೀಕ್ಷೆ ಬಹಿಷ್ಕರಿಸಿದ ವಿದ್ಯಾರ್ಥಿಗಳು

“ಅಷ್ಟೆ ಅಲ್ಲದೆ ಪದವಿಯಲ್ಲಿ ಸಮಾಜಶಾಸ್ತ್ರ ಮತ್ತು ಆಂಗ್ಲವನ್ನು ಐಚ್ಚಿಕ ವಿಷಯವಾಗಿ ಓದಿದದವರು ಪದವೀಧರ ಪ್ರಾಥಮಿಕ ಸಮಾಜ ವಿಜ್ಞಾನ ಶಿಕ್ಷಕ ಹುದ್ದೆಗೆ ಅರ್ಹರು. ಆದರೆ ಆಂಗ್ಲ ಶಿಕ್ಷಕರಾಗಲು ಅರ್ಹರಲ್ಲ ಎಂಬ ಅವೈಜ್ಞಾನಿಕ ನಿಯಮ ಪ್ರಾಥಮಿಕ ಶಾಲೆಗಳು ಆಂಗ್ಲ ಶಿಕ್ಷಕರ ಕೊರತೆ ಎದುರಿಸಲು ಮುಖ್ಯ ಕಾರಣ. ಈ ಅವೈಜ್ಞಾನಿಕ ನಿಯಮವನ್ನು ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಮುಂದಾಗುವ ಮೊದಲೆ ಸಮಾಜಶಾಸ್ತ್ರ ಮತ್ತು ಆಂಗ್ಲ ವನ್ನು ಪದವಿಯಲ್ಲಿ ಅಭ್ಯಾಸಿಸಿದವರಿಗೆ ಪ್ರಾಥಮಿಕ ಆಂಗ್ಲ-ಭಾಷೆ ಶಿಕ್ಷಕ ಹುದ್ದೆಯ ಆರ್ಹರೆಂದು ಪರಿಗಣಿಸಿ ತಿದ್ದುಪಡಿ ಮಾಡಬೇಕು” ಎಂದು ಮೋಹನರಾಜ್ ಮನವಿ ಮಾಡಿದ್ದಾರೆ.

“ತಮ್ಮ 3 ವರ್ಷದ ಪದವಿಯಲ್ಲಿ ಐಚ್ಚಿಕ ವಿಷಯವಾಗಿ ಆಂಗ್ಲಭಾಷೆಯ ಜೊತೆಗೆ ಸಮಾಜಶಾಸ್ತ್ರ/ ಮನೋವಿಜ್ಞಾನ/ ಶಿಕ್ಷಣ/ಪತ್ರಿಕೋದ್ಯಮ ಅಭ್ಯಾಸಿದ ಲಕ್ಷಾಂತರ ವಿದ್ಯಾರ್ಥಿಗಳು ಇದ್ದು ಟಿಇಟಿ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದಿರುತ್ತಾರೆ. ಇಂತಹ ಅಭ್ಯರ್ಥಿಗಳಿಗೆ ಪದವಿ ಭಾಷಾ ಶಿಕ್ಷಕರ ನೇಮಕಾತಿ ಪರೀಕ್ಷೆಯನ್ನು ಬರೆಯಲು ಇಲಾಖಾ ನೇಮಾಕಾತಿ ನಿಯಮಗಳಲ್ಲಿ ಅವಕಾಶ ಸಿಗದೆ ಅವಕಾಶ ವಂಚಿತರಾಗುತ್ತಿದ್ದು. ಹಲವು ಬಾರಿ ಶಿಕ್ಷಣ ಸಚಿವರನ್ನು ಭೇಟಿಯಾಗಿ ಗಮನಕ್ಕೆ ತಂದಿದ್ದು ಶಿಕ್ಷಣ ಸಚಿವರು ಬದಲಾವಣೆ ಮಾಡುವ ಭರವಸೆ ನೀಡಿಯು ಕೂಡ ಯಾವುದೆ ಬದಲಾವಣೆಯಾಗಿಲ್ಲ. ಇದರಿಂದ ಲಕ್ಷಾಂತರ ಆಕಾಂಕ್ಷಿಗಳ ಪದವಿ ಮತ್ತು ತರಬೇತಿ ಪ್ರಯೋಜನಕ್ಕೆ ಬಾರದಂತಾಗಿದೆ” ಎಂದು ಅಳಲು ತೋಡಿಕೊಂಡಿದ್ದಾರೆ.

ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಪದವೀಧರ ಭಾಷ ಶಿಕ್ಷಕರ ನೇಮಕಾತಿ ನಿಯಮನಾವಳಿಗೆ ಮರುಪರಿಶೀಲನೆ ಮಾಡಿ ತಿದ್ದುಪಡಿ ತಂದು ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ಪ್ರಯೋಜನವಾಗುವಂತೆ ಮಾಡಬೇಕು. 3 ವರ್ಷದ ಪದವಿಯಲ್ಲಿ ಐಚ್ಚಿಕ ವಿಷಯವಾಗಿ ಆಂಗ್ಲ ಭಾಷೆಯ ಜೊತೆಗೆ ಸಮಾಜಶಾಸ್ತ್ರ/ಮನೋವಿಜ್ಞಾನ/ಶಿಕ್ಷಣ/ಪತ್ರಿಕೋದ್ಯಮ ಅಭ್ಯಾಸ ಮಾಡಿದವರಿಗು ಅವಕಾಶ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಸೇವಾ ಅಭದ್ರತೆ, ವೇತನ ತಾರತಮ್ಯ ಖಂಡಿಸಿ ಅತಿಥಿ ಉಪನ್ಯಾಸಕರ ಬೃಹತ್‌ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...

ಇರಾಕ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಬಿಡುಗಡೆ

ಇರಾಕಿನ ರಾಜಧಾನಿ ಬಾಗ್ದಾದ್‌ನಲ್ಲಿ ಒಂದು ವಾರದ ಹಿಂದೆ ಅಪಹರಿಸಲ್ಪಟ್ಟಿದ್ದ ಅಮೆರಿಕದ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ತಿಳಿಸಿದ್ದಾರೆ. ಮಾರ್ಚ್ 31ರಂದು ಶೆಲ್ಲಿ...

ಅಸ್ಸಾಂನ ನಾಗಾಂವ್‌ನಲ್ಲಿ ದರೋಡೆ ಶಂಕೆಯ ಮೇಲೆ ಗುಂಪು ದಾಳಿ: ಮೂವರು ಮುಸ್ಲಿಂ ಪುರುಷರು ಸಾವು

ದರೋಡೆಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ನಡೆದ ಗುಂಪು ದಾಳಿಯಲ್ಲಿ ಮೂವರು ಮುಸ್ಲಿಂ ಪುರುಷರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸೈಫುಲ್ಲಾ, ಅಜೀಬುರ್ ಅಲಿಯಾಸ್ ಖೈರುಲ್ ಮತ್ತು ಇನಾಮುಲ್...

ಏ.10ರಂದು ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ : 10 ಷರತ್ತುಗಳನ್ನು ಮುಂದಿಟ್ಟ ಇರಾನ್

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಇಸ್ಲಾಮಾಬಾದ್‌ನಲ್ಲಿ ಶಾಂತಿ ಮಾತುಕತೆ ಆಯೋಜಿಸಲಾಗಿದೆ. ಅಮೆರಿಕ ಮತ್ತು ಇರಾನ್ ನಿಯೋಗಗಳ ನಡುವಿನ ಈ ಮಹತ್ವದ ಮಾತುಕತೆಯು 2026ರ ಏಪ್ರಿಲ್ 10ರಂದು (ಶುಕ್ರವಾರ) ಇಸ್ಲಾಮಾಬಾದ್‌ನಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ...

ಕದನ ವಿರಾಮ | ಟ್ರಂಪ್ ನಿರ್ಧಾರಕ್ಕೆ ಇಸ್ರೇಲ್ ಬೆಂಬಲ; ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದ ನೆತನ್ಯಾಹು!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಎರಡು ವಾರಗಳ ಕದನ ವಿರಾಮಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬೆಂಬಲ ಸೂಚಿಸಿದ್ದಾರೆ. ಆದರೆ, ಈ ಕದನ ವಿರಾಮವು ಕೇವಲ ಇರಾನ್‌ಗೆ ಮಾತ್ರ ಸೀಮಿತವಾಗಿದ್ದು, ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇರಾನ್ ತಕ್ಷಣವೇ ಹಾರ್ಮುಝ್...

ಹಾರ್ಮುಝ್ ಜಲಸಂಧಿಯ ಮೂಲಕ ಎರಡು ವಾರಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ : ಇರಾನ್ ಭರವಸೆ

ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮದ ಹಿನ್ನೆಲೆ, ಹಾರ್ಮುಝ್ ಜಲಸಂಧಿ  ಮೂಲಕ ಹಡಗುಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ ನೀಡುವುದಾಗಿ ಇರಾನ್ ಭರವಸೆ ನೀಡಿದೆ. ವಿಶ್ವದ ಒಟ್ಟು ಪೆಟ್ರೋಲಿಯಂ ರಫ್ತಿನ...

ಇರಾನ್ ಮೇಲಿನ ದಾಳಿ ಸ್ಥಗಿತ : ಎರಡು ವಾರಗಳ ಕದನ ವಿರಾಮ ಘೋಷಿಸಿದ ಟ್ರಂಪ್

ಇರಾನ್ ಮೇಲೆ ನಡೆಸುತ್ತಿರುವ ಬಾಂಬ್ ದಾಳಿ ಹಾಗೂ ಮಿಲಿಟರಿ ಕಾರ್ಯಾಚರಣೆಯನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸುವ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ (ಭಾರತೀಯ ಕಾಲಮಾನ ಏ.8) ಹೇಳಿದ್ದಾರೆ. ಪಾಕಿಸ್ತಾನ...

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...