Homeಕರ್ನಾಟಕಪದವೀಧರ ಭಾಷ ಶಿಕ್ಷಕರ ನೇಮಕಾತಿ: ಪದವಿಯಲ್ಲಿ ಆಂಗ್ಲಭಾಷೆಯನ್ನು ಐಚ್ಚಿಕ ವಿಷಯವಾಗಿ ಅಭ್ಯಾಸಿಸಿದವರಿಗೂ ಅವಕಾಶ ನೀಡಲು ಒತ್ತಾಯ

ಪದವೀಧರ ಭಾಷ ಶಿಕ್ಷಕರ ನೇಮಕಾತಿ: ಪದವಿಯಲ್ಲಿ ಆಂಗ್ಲಭಾಷೆಯನ್ನು ಐಚ್ಚಿಕ ವಿಷಯವಾಗಿ ಅಭ್ಯಾಸಿಸಿದವರಿಗೂ ಅವಕಾಶ ನೀಡಲು ಒತ್ತಾಯ

- Advertisement -
- Advertisement -

ಪದವೀಧರ ಭಾಷ ಶಿಕ್ಷಕರ ನೇಮಕಾತಿಗೆ ಸಂಭವಿಸಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯು ರಾಜ್ಯ ಗ್ಯಾಸೆಟಿಯರ್‌ನಲ್ಲಿ ಪ್ರಕಟಿಸಿರುವ ನೇಮಕಾತಿ ನಿಯಮಾವಳಿಯಲ್ಲಿ ಬದಲಾವಣೆ ಮಾಡಿ ಆಂಗ್ಲ ಭಾಷೆಯನ್ನು ಐಚ್ಚಿಕ ವಿಷಯವಾಗಿ ಅಭ್ಯಾಸಿಸಿದವರಿಗೂ ಶಿಕ್ಷಕರ ಹುದ್ದೆಗೆ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ಅಭ್ಯರ್ಥಿಗಳು ಒತ್ತಾಯಿಸಿದ್ದಾರೆ.

ಪದವಿಯಲ್ಲಿ ಸಮಾಜಶಾಸ್ತ್ರ ಮತ್ತು ಆಂಗ್ಲ ಭಾಷೆಯನ್ನು ಐಚ್ಚಿಕ ವಿಷಯವಾಗಿ ಅಭ್ಯಾಸಿಸಿದ ಅಭ್ಯರ್ಥಿಗಳು
ಪದವೀಧರ ಪ್ರಾಥಮಿಕ ಸಮಾಜ ವಿಜ್ಞಾನ ಶಿಕ್ಷಕರ ಹುದ್ದೆಗೆ ಸ್ಪರ್ಧಿಸಲು ಅರ್ಹರಾಗಿದ್ದಾರೆ. ಆದರೆ ಪದವೀಧರ ಪ್ರಾಥಮಿಕ ಆಂಗ್ಲ ಭಾಷೆ ಶಿಕ್ಷಕರ ಹುದ್ದೆಗೆ ಸ್ಪರ್ಧಿಸಲು ಅರ್ಹರಲ್ಲ ಎಂಬುದನ್ನು ಸುತ್ತೋಲೆಯಿಂದ ತೆಗೆಯಬೇಕು. ಅವರಿಗೂ ಶಿಕ್ಷಕ ಹುದ್ದೆಗೆ ಸ್ಪರ್ಧಿಸಲು ಅವಕಾಶ ನೀಡಿ ತಿದ್ದುಪಡಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

“ಭಾಷಾ ವಿಷಯಗಳನ್ನು ಹೊರತುಪಡಿಸಿ ಐಚ್ಚಿಕ ವಿಷಯವಾಗಿ 3 ವರ್ಷಗಳ ಪದವಿಯಲ್ಲಿ ಕನ್ನಡ/ಆಂಗ್ಲ/ಹಿಂದಿ/ಮರಾಠಿ/ಇತಿಹಾಸ/ಅರ್ಥಶಾಸ್ತ್ರ/ರಾಜ್ಯಶಾಸ್ತ್ರ/ಭೌಗೋಳಿಕ ವಿಷಯಗಳನ್ನು ಅಭ್ಯಾಸ ಮಾಡಿರಬೇಕು” ಎಂದು GPSTRನ ಹೊಸ C&R ನಿಯಮಾವಳಿಯಲ್ಲಿ ಪ್ರಕಟವಾಗಿದ್ದು ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ಅಘಾತವಾಗಿದೆ” ಎಂದು ಉದ್ಯೋಗಾಕಾಂಕ್ಷಿ ಮೋಹನರಾಜ ಜಿ. ಹೇಳಿದ್ದಾರೆ.

ಇದನ್ನೂ ಓದಿ: 5 ವರ್ಷಗಳ ಕಾನೂನು ಪದವಿಯ 2 & 4ನೇ ಸೆಮಿಸ್ಟರ್‌ ಪರೀಕ್ಷೆ ಬಹಿಷ್ಕರಿಸಿದ ವಿದ್ಯಾರ್ಥಿಗಳು

“ಅಷ್ಟೆ ಅಲ್ಲದೆ ಪದವಿಯಲ್ಲಿ ಸಮಾಜಶಾಸ್ತ್ರ ಮತ್ತು ಆಂಗ್ಲವನ್ನು ಐಚ್ಚಿಕ ವಿಷಯವಾಗಿ ಓದಿದದವರು ಪದವೀಧರ ಪ್ರಾಥಮಿಕ ಸಮಾಜ ವಿಜ್ಞಾನ ಶಿಕ್ಷಕ ಹುದ್ದೆಗೆ ಅರ್ಹರು. ಆದರೆ ಆಂಗ್ಲ ಶಿಕ್ಷಕರಾಗಲು ಅರ್ಹರಲ್ಲ ಎಂಬ ಅವೈಜ್ಞಾನಿಕ ನಿಯಮ ಪ್ರಾಥಮಿಕ ಶಾಲೆಗಳು ಆಂಗ್ಲ ಶಿಕ್ಷಕರ ಕೊರತೆ ಎದುರಿಸಲು ಮುಖ್ಯ ಕಾರಣ. ಈ ಅವೈಜ್ಞಾನಿಕ ನಿಯಮವನ್ನು ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಮುಂದಾಗುವ ಮೊದಲೆ ಸಮಾಜಶಾಸ್ತ್ರ ಮತ್ತು ಆಂಗ್ಲ ವನ್ನು ಪದವಿಯಲ್ಲಿ ಅಭ್ಯಾಸಿಸಿದವರಿಗೆ ಪ್ರಾಥಮಿಕ ಆಂಗ್ಲ-ಭಾಷೆ ಶಿಕ್ಷಕ ಹುದ್ದೆಯ ಆರ್ಹರೆಂದು ಪರಿಗಣಿಸಿ ತಿದ್ದುಪಡಿ ಮಾಡಬೇಕು” ಎಂದು ಮೋಹನರಾಜ್ ಮನವಿ ಮಾಡಿದ್ದಾರೆ.

“ತಮ್ಮ 3 ವರ್ಷದ ಪದವಿಯಲ್ಲಿ ಐಚ್ಚಿಕ ವಿಷಯವಾಗಿ ಆಂಗ್ಲಭಾಷೆಯ ಜೊತೆಗೆ ಸಮಾಜಶಾಸ್ತ್ರ/ ಮನೋವಿಜ್ಞಾನ/ ಶಿಕ್ಷಣ/ಪತ್ರಿಕೋದ್ಯಮ ಅಭ್ಯಾಸಿದ ಲಕ್ಷಾಂತರ ವಿದ್ಯಾರ್ಥಿಗಳು ಇದ್ದು ಟಿಇಟಿ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದಿರುತ್ತಾರೆ. ಇಂತಹ ಅಭ್ಯರ್ಥಿಗಳಿಗೆ ಪದವಿ ಭಾಷಾ ಶಿಕ್ಷಕರ ನೇಮಕಾತಿ ಪರೀಕ್ಷೆಯನ್ನು ಬರೆಯಲು ಇಲಾಖಾ ನೇಮಾಕಾತಿ ನಿಯಮಗಳಲ್ಲಿ ಅವಕಾಶ ಸಿಗದೆ ಅವಕಾಶ ವಂಚಿತರಾಗುತ್ತಿದ್ದು. ಹಲವು ಬಾರಿ ಶಿಕ್ಷಣ ಸಚಿವರನ್ನು ಭೇಟಿಯಾಗಿ ಗಮನಕ್ಕೆ ತಂದಿದ್ದು ಶಿಕ್ಷಣ ಸಚಿವರು ಬದಲಾವಣೆ ಮಾಡುವ ಭರವಸೆ ನೀಡಿಯು ಕೂಡ ಯಾವುದೆ ಬದಲಾವಣೆಯಾಗಿಲ್ಲ. ಇದರಿಂದ ಲಕ್ಷಾಂತರ ಆಕಾಂಕ್ಷಿಗಳ ಪದವಿ ಮತ್ತು ತರಬೇತಿ ಪ್ರಯೋಜನಕ್ಕೆ ಬಾರದಂತಾಗಿದೆ” ಎಂದು ಅಳಲು ತೋಡಿಕೊಂಡಿದ್ದಾರೆ.

ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಪದವೀಧರ ಭಾಷ ಶಿಕ್ಷಕರ ನೇಮಕಾತಿ ನಿಯಮನಾವಳಿಗೆ ಮರುಪರಿಶೀಲನೆ ಮಾಡಿ ತಿದ್ದುಪಡಿ ತಂದು ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ಪ್ರಯೋಜನವಾಗುವಂತೆ ಮಾಡಬೇಕು. 3 ವರ್ಷದ ಪದವಿಯಲ್ಲಿ ಐಚ್ಚಿಕ ವಿಷಯವಾಗಿ ಆಂಗ್ಲ ಭಾಷೆಯ ಜೊತೆಗೆ ಸಮಾಜಶಾಸ್ತ್ರ/ಮನೋವಿಜ್ಞಾನ/ಶಿಕ್ಷಣ/ಪತ್ರಿಕೋದ್ಯಮ ಅಭ್ಯಾಸ ಮಾಡಿದವರಿಗು ಅವಕಾಶ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಸೇವಾ ಅಭದ್ರತೆ, ವೇತನ ತಾರತಮ್ಯ ಖಂಡಿಸಿ ಅತಿಥಿ ಉಪನ್ಯಾಸಕರ ಬೃಹತ್‌ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...