Homeಅಂತರಾಷ್ಟ್ರೀಯಪ್ಯಾಲೆಸ್ತೀನಿಯನ್ ಗ್ರಾಮಗಳಲ್ಲಿ ಹಿಂಸಾಚಾರ ಎಸಗಿದ ಅಕ್ರಮ ಯಹೂದಿ ವಸಾಹತುಗಾರರು

ಪ್ಯಾಲೆಸ್ತೀನಿಯನ್ ಗ್ರಾಮಗಳಲ್ಲಿ ಹಿಂಸಾಚಾರ ಎಸಗಿದ ಅಕ್ರಮ ಯಹೂದಿ ವಸಾಹತುಗಾರರು

- Advertisement -
- Advertisement -

ಅಕ್ರಮ ಯಹೂದಿ ವಸಾಹತುಗಾರರ ಹಿಂಸಾಚಾರಕ್ಕೆ ಆಕ್ರಮಿತ ಪಶ್ಚಿಮ ದಂಡೆಯಲ್ಲಿರುವ ಅನೇಕ ಪ್ಯಾಲೆಸ್ತೀನಿಯನ್ ಗ್ರಾಮಗಳು ಶುಕ್ರವಾರ ಗುರಿಯಾಗಿದೆ ಎಂದು ಅಲ್‌ ಜಝೀರಾ ವರದಿ ಮಾಡಿದೆ. ಪಶ್ಚಿಮ ದಂಡೆಯ ಹೊರಠಾಣೆ ಬಳಿ ಯಹೂದಿ ವಸಾಹತುಗಾರನನ್ನು ಗುಂಡಿಕ್ಕಿ ಕೊಂದ ಒಂದು ದಿನದ ನಂತರ ಈ ಘಟನೆ ನಡೆದಿದೆ.

ನಬುಲಸ್ ನಗರದ ಪಕ್ಕದಲ್ಲಿರುವ ಪ್ಯಾಲೇಸ್ಟಿನಿಯನ್ ಗ್ರಾಮಗಳಿಗೆ ಪ್ರವೇಶಿಸಿದ ಯಹೂದಿ ವಸಾಹತುಗಾರರು ಮನೆಗಳು, ಕಾರುಗಳು ಇತ್ಯಾದಿಗಳನ್ನು ನಾಶಪಡಿಸಿ, ಜನರಿಗೆ ಥಳಿಸಿದರು ಎಂದು ಪ್ಯಾಲೇಸ್ಟಿನಿಯನ್ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ಪ್ಯಾಲೆಸ್ತೀನಿಗಳನ್ನು ಅಕ್ರಮ ಸ್ಥಳಾಂತರ ಮಾಡುವ ಇಸ್ರೇಲ್‌‌ನ ನಡೆ ಹಿಂಸಾಚಾರ ಹೆಚ್ಚಿಸುತ್ತದೆ: ಯುರೋಪಿಯನ್‌ ಯುನಿಯನ್‌

ಘಟನೆಯ ಫೋಟೋಗಳು ಮತ್ತು ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದ್ದು, ಇವುಗಳಲ್ಲಿ ನಿವಾಸಿಗಳು ಮತ್ತು ಶಸ್ತ್ರಸಜ್ಜಿತ ಇಸ್ರೇಲಿ ವಸಾಹತುಗಾರರ ನಡುವಿನ ದಾಳಿಗಳು ಮತ್ತು ಘರ್ಷಣೆಯ ಸಮಯದಲ್ಲಿ ಹಲ್ಲೆಗೊಳಗಾಗಿರುವ ಬಲಿಪಶುಗಳನ್ನು ಕಾಣಬಹುದಾಗಿದೆ. ದಾಳಿಕೋರರು ತಮ್ಮ ವಿರುದ್ಧ ಬಂದೂಕುಗಳನ್ನು ಬಳಸಿ, ನಿವಾಸಿಯನ್ನು ಅಪಹರಿಸಲು ಪ್ರಯತ್ನಿಸಿದರು ಎಂದು ಪ್ಯಾಲೆಸ್ತೀನಿಯನ್ನರು ಆರೋಪಿಸಿದ್ದಾರೆ.

ಗುರುವಾರದಂದು, ಪ್ಯಾಲೆಸ್ತೀನಿಯನ್‌‌ ಬಂದೂಕುದಾರಿಗಳು ಯಹೂದಿ ವಸಾಹತುಗಾರನ ಕಾರಿನ ಮೇಲೆ ಗುಂಡು ಹಾರಿಸಿ ಕೊಂದುಹಾಕಿ ಅವರ ಸಹಚರರನ್ನು ಗಾಯಗೊಳಿಸಿದ್ದರು ಎಂದು ವರದಿಯಾಗಿತ್ತು.

ಈ ಕೊಲೆಯಿಂದಾಗಿ ಪ್ಯಾಲೆಸ್ತೀನಿಯನ್ ನಿವಾಸಿಗಳು ಮತ್ತು ಇಸ್ರೇಲಿ ವಸಾಹತುಗಾರರ ನಡುವಿನ ಹಿಂಸಾಚಾರ ಮತ್ತು ಸಂಘರ್ಷವನ್ನು ಹೆಚ್ಚಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಗುರುವಾರದ ಬಂದೂಕುಧಾರಿಗಳನ್ನು ಪತ್ತೆ ಮಾಡುವುದಾಗಿ ಇಸ್ರೇಲ್ ಆಡಳಿತ ಹೇಳಿದ್ದು, ಘಟನೆ ನಡೆದ ಪ್ರದೇಶದಲ್ಲಿ ಭಾರೀ ಪಡೆಗಳನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ:ವಿಶ್ವಸಂಸ್ಥೆಯಲ್ಲಿ ಪ್ಯಾಲೆಸ್ತೀನನ್ನು ಮತ್ತೆ ಬೆಂಬಲಿಸಿದ ಭಾರತ

ರಾತ್ರಿಯ ದಾಳಿಯಲ್ಲಿ ಸೇನೆಯು ಕನಿಷ್ಠ ಮೂವರನ್ನು ಬಂಧಿಸಿದೆ ಎಂದು ಪ್ಯಾಲೆಸ್ತೀನಿಯನ್ ಸುದ್ದಿ ಸಂಸ್ಥೆ ವಫಾ ವರದಿ ಮಾಡಿದೆ.

ಆಕ್ರಮಿತ ಪಶ್ಚಿಮ ದಂಡೆ ಮತ್ತು ಪೂರ್ವ ಜೆರುಸಲೇಂನಲ್ಲಿ ಇತ್ತೀಚೆಗೆ ಹಿಂಸಾಚಾರ ಹೆಚ್ಚಳವಾಗಿದೆ ಎಂದು ವರದಿಯಾಗಿದೆ. ಇತ್ತಿಚೆಗೆ ಇಲ್ಲಿ ಪ್ಯಾಲೆಸ್ತೀನಿಯನ್‌‌ ಬಣಗಳು ಈ ಪ್ರದೇಶದಲ್ಲಿ ಇಸ್ರೇಲಿಗಳನ್ನು ಕೊಂದಿದ್ದವು ಮತ್ತು ಇಸ್ರೇಲಿ ಸೈನಿಕರು ಪ್ರತಿದಾಳಿ ನಡೆಸಿದ್ದರು.

ಇದಕ್ಕಿಂತಲೂ ಮುಂದೆ ಅಕ್ರಮ ಇಸ್ರೇಲಿ ವಸಾಹತುಗಳ ವಿರುದ್ಧ ಪ್ರತಿಭಟನೆಯ ಭಾಗವಾಗಿದ್ದ ಪ್ಯಾಲೆಸ್ತೀನ್ ವ್ಯಕ್ತಿಯನ್ನು ಇಸ್ರೇಲ್ ಸೇನೆ ಕೊಂದಿತ್ತು. ಜೊತೆಗೆ ಮಿಲಿಟರಿ ಚೆಕ್‌ಪಾಯಿಂಟ್‌ನಲ್ಲಿ ಕಾರು ಡಿಕ್ಕಿ ಹೊಡೆದ ಪರಿಣಾಮ ಅಪ್ರಾಪ್ತ ವಯಸ್ಕ ಬಾಲಕನೊಬ್ಬ ಸಾವನ್ನಪ್ಪಿದ್ದರು.

ಇದನ್ನೂ ಓದಿ:ಇಸ್ರೇಲ್‌ಗೆ ಹೊಸ ಪ್ರಧಾನಿ; ಪ್ಯಾಲೆಸ್ಟೇನಿಯನ್ನರು ಬೆಂಕಿಯಿಂದ ಬಾಣೆಲೆಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...