Homeಅಂತರಾಷ್ಟ್ರೀಯಪ್ಯಾಲೆಸ್ತೀನಿಯನ್ ಗ್ರಾಮಗಳಲ್ಲಿ ಹಿಂಸಾಚಾರ ಎಸಗಿದ ಅಕ್ರಮ ಯಹೂದಿ ವಸಾಹತುಗಾರರು

ಪ್ಯಾಲೆಸ್ತೀನಿಯನ್ ಗ್ರಾಮಗಳಲ್ಲಿ ಹಿಂಸಾಚಾರ ಎಸಗಿದ ಅಕ್ರಮ ಯಹೂದಿ ವಸಾಹತುಗಾರರು

- Advertisement -
- Advertisement -

ಅಕ್ರಮ ಯಹೂದಿ ವಸಾಹತುಗಾರರ ಹಿಂಸಾಚಾರಕ್ಕೆ ಆಕ್ರಮಿತ ಪಶ್ಚಿಮ ದಂಡೆಯಲ್ಲಿರುವ ಅನೇಕ ಪ್ಯಾಲೆಸ್ತೀನಿಯನ್ ಗ್ರಾಮಗಳು ಶುಕ್ರವಾರ ಗುರಿಯಾಗಿದೆ ಎಂದು ಅಲ್‌ ಜಝೀರಾ ವರದಿ ಮಾಡಿದೆ. ಪಶ್ಚಿಮ ದಂಡೆಯ ಹೊರಠಾಣೆ ಬಳಿ ಯಹೂದಿ ವಸಾಹತುಗಾರನನ್ನು ಗುಂಡಿಕ್ಕಿ ಕೊಂದ ಒಂದು ದಿನದ ನಂತರ ಈ ಘಟನೆ ನಡೆದಿದೆ.

ನಬುಲಸ್ ನಗರದ ಪಕ್ಕದಲ್ಲಿರುವ ಪ್ಯಾಲೇಸ್ಟಿನಿಯನ್ ಗ್ರಾಮಗಳಿಗೆ ಪ್ರವೇಶಿಸಿದ ಯಹೂದಿ ವಸಾಹತುಗಾರರು ಮನೆಗಳು, ಕಾರುಗಳು ಇತ್ಯಾದಿಗಳನ್ನು ನಾಶಪಡಿಸಿ, ಜನರಿಗೆ ಥಳಿಸಿದರು ಎಂದು ಪ್ಯಾಲೇಸ್ಟಿನಿಯನ್ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ಪ್ಯಾಲೆಸ್ತೀನಿಗಳನ್ನು ಅಕ್ರಮ ಸ್ಥಳಾಂತರ ಮಾಡುವ ಇಸ್ರೇಲ್‌‌ನ ನಡೆ ಹಿಂಸಾಚಾರ ಹೆಚ್ಚಿಸುತ್ತದೆ: ಯುರೋಪಿಯನ್‌ ಯುನಿಯನ್‌

ಘಟನೆಯ ಫೋಟೋಗಳು ಮತ್ತು ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದ್ದು, ಇವುಗಳಲ್ಲಿ ನಿವಾಸಿಗಳು ಮತ್ತು ಶಸ್ತ್ರಸಜ್ಜಿತ ಇಸ್ರೇಲಿ ವಸಾಹತುಗಾರರ ನಡುವಿನ ದಾಳಿಗಳು ಮತ್ತು ಘರ್ಷಣೆಯ ಸಮಯದಲ್ಲಿ ಹಲ್ಲೆಗೊಳಗಾಗಿರುವ ಬಲಿಪಶುಗಳನ್ನು ಕಾಣಬಹುದಾಗಿದೆ. ದಾಳಿಕೋರರು ತಮ್ಮ ವಿರುದ್ಧ ಬಂದೂಕುಗಳನ್ನು ಬಳಸಿ, ನಿವಾಸಿಯನ್ನು ಅಪಹರಿಸಲು ಪ್ರಯತ್ನಿಸಿದರು ಎಂದು ಪ್ಯಾಲೆಸ್ತೀನಿಯನ್ನರು ಆರೋಪಿಸಿದ್ದಾರೆ.

ಗುರುವಾರದಂದು, ಪ್ಯಾಲೆಸ್ತೀನಿಯನ್‌‌ ಬಂದೂಕುದಾರಿಗಳು ಯಹೂದಿ ವಸಾಹತುಗಾರನ ಕಾರಿನ ಮೇಲೆ ಗುಂಡು ಹಾರಿಸಿ ಕೊಂದುಹಾಕಿ ಅವರ ಸಹಚರರನ್ನು ಗಾಯಗೊಳಿಸಿದ್ದರು ಎಂದು ವರದಿಯಾಗಿತ್ತು.

ಈ ಕೊಲೆಯಿಂದಾಗಿ ಪ್ಯಾಲೆಸ್ತೀನಿಯನ್ ನಿವಾಸಿಗಳು ಮತ್ತು ಇಸ್ರೇಲಿ ವಸಾಹತುಗಾರರ ನಡುವಿನ ಹಿಂಸಾಚಾರ ಮತ್ತು ಸಂಘರ್ಷವನ್ನು ಹೆಚ್ಚಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಗುರುವಾರದ ಬಂದೂಕುಧಾರಿಗಳನ್ನು ಪತ್ತೆ ಮಾಡುವುದಾಗಿ ಇಸ್ರೇಲ್ ಆಡಳಿತ ಹೇಳಿದ್ದು, ಘಟನೆ ನಡೆದ ಪ್ರದೇಶದಲ್ಲಿ ಭಾರೀ ಪಡೆಗಳನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ:ವಿಶ್ವಸಂಸ್ಥೆಯಲ್ಲಿ ಪ್ಯಾಲೆಸ್ತೀನನ್ನು ಮತ್ತೆ ಬೆಂಬಲಿಸಿದ ಭಾರತ

ರಾತ್ರಿಯ ದಾಳಿಯಲ್ಲಿ ಸೇನೆಯು ಕನಿಷ್ಠ ಮೂವರನ್ನು ಬಂಧಿಸಿದೆ ಎಂದು ಪ್ಯಾಲೆಸ್ತೀನಿಯನ್ ಸುದ್ದಿ ಸಂಸ್ಥೆ ವಫಾ ವರದಿ ಮಾಡಿದೆ.

ಆಕ್ರಮಿತ ಪಶ್ಚಿಮ ದಂಡೆ ಮತ್ತು ಪೂರ್ವ ಜೆರುಸಲೇಂನಲ್ಲಿ ಇತ್ತೀಚೆಗೆ ಹಿಂಸಾಚಾರ ಹೆಚ್ಚಳವಾಗಿದೆ ಎಂದು ವರದಿಯಾಗಿದೆ. ಇತ್ತಿಚೆಗೆ ಇಲ್ಲಿ ಪ್ಯಾಲೆಸ್ತೀನಿಯನ್‌‌ ಬಣಗಳು ಈ ಪ್ರದೇಶದಲ್ಲಿ ಇಸ್ರೇಲಿಗಳನ್ನು ಕೊಂದಿದ್ದವು ಮತ್ತು ಇಸ್ರೇಲಿ ಸೈನಿಕರು ಪ್ರತಿದಾಳಿ ನಡೆಸಿದ್ದರು.

ಇದಕ್ಕಿಂತಲೂ ಮುಂದೆ ಅಕ್ರಮ ಇಸ್ರೇಲಿ ವಸಾಹತುಗಳ ವಿರುದ್ಧ ಪ್ರತಿಭಟನೆಯ ಭಾಗವಾಗಿದ್ದ ಪ್ಯಾಲೆಸ್ತೀನ್ ವ್ಯಕ್ತಿಯನ್ನು ಇಸ್ರೇಲ್ ಸೇನೆ ಕೊಂದಿತ್ತು. ಜೊತೆಗೆ ಮಿಲಿಟರಿ ಚೆಕ್‌ಪಾಯಿಂಟ್‌ನಲ್ಲಿ ಕಾರು ಡಿಕ್ಕಿ ಹೊಡೆದ ಪರಿಣಾಮ ಅಪ್ರಾಪ್ತ ವಯಸ್ಕ ಬಾಲಕನೊಬ್ಬ ಸಾವನ್ನಪ್ಪಿದ್ದರು.

ಇದನ್ನೂ ಓದಿ:ಇಸ್ರೇಲ್‌ಗೆ ಹೊಸ ಪ್ರಧಾನಿ; ಪ್ಯಾಲೆಸ್ಟೇನಿಯನ್ನರು ಬೆಂಕಿಯಿಂದ ಬಾಣೆಲೆಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....