Homeಕರ್ನಾಟಕಬೆಳಗಾವಿಯ ಪುಂಡರನ್ನು ಸೆದೆ ಬಡಿಯುತ್ತೇವೆ: ಸಿಎಂ

ಬೆಳಗಾವಿಯ ಪುಂಡರನ್ನು ಸೆದೆ ಬಡಿಯುತ್ತೇವೆ: ಸಿಎಂ

- Advertisement -
- Advertisement -

ಬೆಳಗಾವಿಯಲ್ಲಿ ನಿನ್ನೆ ರಾತ್ರಿ ನಡೆದ ಪುಂಡಾಟಿಕೆಯನ್ನು ಖಂಡಿಸುತ್ತಿದ್ದು, ಅಂತಹ ಪುಂಡರನ್ನು ಸೆದೆ ಬಡಿಯುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹುಬ್ಬಳಿಯಲ್ಲಿ ಶನಿವಾರ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತವಾಡಿದ ಅವರು, “ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಜರುಗಿಸಲು ಗೃಹ ಸಚಿವರಿಗೆ ಸೂಚಿಸಿದ್ದೇನೆ. ಅವರೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಈಗಾಗಲೇ ಕೆಲವರನ್ನು ಬಂಧಿಸಲಾಗಿದೆ. ಕಲ್ಲು ತೂರಾಟ ಮಾಡುವುದು, ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾಗೂ ಸರ್ಕಾರಿ ವಾಹನಗಳಿಗೆ ಹಾನಿ ಉಂಟುಮಾಡುವುದು ಕಾನೂನು ಬಾಹಿರ. ಇಂಥ ಘಟನೆ ಪುನಃ ಜರುಗದಂತೆ ಇನ್ನಷ್ಟು ಕಠಿಣ ಹಾಗೂ ದೀರ್ಘಾವಧಿ ಕ್ರಮಗಳನ್ನು ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಈ ಪ್ರವೃತ್ತಿ ಸರಿಯಲ್ಲ” ಎಂದು ಹೇಳಿದ್ದಾರೆ.

“ರಾಷ್ಟ್ರಭಕ್ತರ ಪ್ರತಿಮೆ ಭಗ್ನಗೊಳಿಸುವುದು ದೇಶಭಕ್ತರ ಕೆಲಸವಲ್ಲ. ದೇಶಭಕ್ತರು ಎಲ್ಲಾ ಸಮುದಾಯಕ್ಕೆ ಸೇರಿದವರು. ದೇಶಕ್ಕಾಗಿ ತ್ಯಾಗ ಮಾಡಿದವರು. ಪ್ರತಿಮೆ ಸ್ಥಾಪಿಸುವುದು ಅವರನ್ನು ಗೌರವಿಸಬೇಕೆಂದೇ ವಿನಃ ಅವರ ಮುಖಾಂತರ ಸಮಾಜದಲ್ಲಿ ಕ್ಷೋಭೇ ಉಂಟುಮಾಡುವುದಲ್ಲ. ಈ ವರ್ತನೆ ಎಳ್ಳಷ್ಟೂ ಸರಿಯಲ್ಲ. ಕೆಲವು ಪುಂಡರು ಈ ರೀತಿ ಮಾಡುತ್ತಿದ್ದು ಅವರನ್ನು ಸದೆ ಬಡಿಯಲಾವುದು. ಇದು ಉದ್ದೇಶಪೂರ್ವಕವೇ ಎನ್ನುವ ಬಗ್ಗೆ ತನಿಖೆ ನಡೆಸಲಾಗುವುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಕೊರೊನಾ 3ನೇ ಅಲೆಯ ಉತ್ತುಂಗ ಫೆಬ್ರವರಿಯಲ್ಲಿ: ಕೇಂದ್ರ ಸಮಿತಿ

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಮುಖ್ಯಮಂತ್ರಿ, ಮಹಾರಾಷ್ಟ್ರದಲ್ಲಿ ನೆಲೆಸಿರುವ ಕನ್ನಡಿಗರ ರಕ್ಷಣೆಯ ಹೊಣೆ ನಮ್ಮ ಸರ್ಕಾರದ್ದಾಗಿದ್ದು ನಮ್ಮ ಪೋಲಿಸ್ ಮಹಾ ನಿರ್ದೇಶಕರು ಅಲ್ಲಿನ ಪೊಲೀಸ್ ಮಹಾನಿರ್ದೇಶಕರೊಂದಿಗೆ ಹಾಗೂ ಗೃಹ ಸಚಿವರು ಮಹಾರಾಷ್ಟ್ರದ ಗೃಹ ಸಚಿವರು ರೊಂದಿಗೆ ಮಾತನಾಡಲಿದ್ದಾರೆ ಎಂದು ತಿಳಿಸಿದ್ದಾರೆ.

“ಕೆಲವರು ಕಾನೂನು ಬಾಹಿರವಾಗಿ ಪುಂಡಾಟಿಕೆ ಮಾಡಿದ್ದಾರೆ. ಕರ್ನಾಟಕದ ಕಾನೂನು ಸುವ್ಯವಸ್ಥೆ ನಮ್ಮ ಜವಾಬ್ದಾರಿ. ಮಹಾರಾಷ್ಟ್ರದಲ್ಲಿ ಕಾನೂನು ಸುವ್ಯವಸ್ತೆ ಕಾಪಾಡಿಕೊಳ್ಳುವುದು ಅಲ್ಲಿನ ಸರ್ಕಾರದ ಜವಾಬ್ದಾರಿ. ಅಲ್ಲಿನ ಕನ್ನಡಿಗರ ರಕ್ಷಣೆ ಹಾಗೂ ಬಸ್ಸು ಇತ್ಯಾದಿ ವಾಹನಗಳ ರಕ್ಷಣೆ ಮಾಡಲು ನಮ್ಮ ಪೋಲಿಸ್ ಮಹಾನಿರ್ದೇಶಕರು ಅಲ್ಲಿನ ಪೊಲೀಸ್ ಮಹಾನಿರ್ದೇಶಕರೊಂದಿಗೆ ಹಾಗೂ ಗೃಹ ಸಚಿವರು ಮಹಾರಾಷ್ಟ್ರದ ಗೃಹ ಸಚಿವರು ರೊಂದಿಗೆ ಮಾತನಾಡಲಿದ್ದಾರೆ. ಮೊದಲು ಅಧಿಕಾರಿಗಳು ಮಾತನಾಡುತ್ತಾರೆ. ನಂತರ ಅಗತ್ಯ ಬಿದ್ದರೆ ಅಲ್ಲಿನ ಮುಖ್ಯಮಂತ್ರಿಗಳೊಂದಿಗೆ ಮಾತನಾಡುತ್ತೇನೆ” ಎಂದು ಹೇಳಿದ್ದಾರೆ.

ಶಿವಸೇನೆಯ ಸಂಜಯ್ ರಾವತ್ ಅವರು ಮರಾಠಿಗಳು ಒಂದಾಗುವಂತೆ ಕರೆ ನೀಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, “ಜವಾಬ್ದಾರಿ ಇರುವ ಜನರು ಯಾರನ್ನೂ ಯಾವ ಸಮಯದಲ್ಲಿಯೂ ಪ್ರಚೋದನೆ ಮಾಡಬಾರದು. ಛತ್ರಪತಿ ಶಿವಾಜಿ, ಸಂಗೊಳ್ಳಿ ರಾಯಣ್ಣ, ಕಿತ್ತೂರು ಚನ್ನಮ್ಮ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿ, ದೇಶವನ್ನು ಒಗ್ಗೂಡಿಸಿದವರು. ಅವರ ಹೆಸರಿನಲ್ಲಿ ನಾವು ಜಗಳವಾಡಿಕೊಂಡು ಒಡಕು ಮೂಡಿಸಿದರೆ ಅದು ಅವರ ಹೋರಾಟಕ್ಕೆ ಅನ್ಯಾಯವೆಸಗಿದಂತಾಗುತ್ತದೆ. ಕಾನೂನನ್ನ ಕೈಗೆ ತೆಗೆದುಕೊಂಡು ಯಾರನ್ನೂ ಇಂತಹ ಕೆಲಸಗಳನ್ನು ಮಾಡಲು ಕುಮ್ಮಕ್ಕು ನೀಡಬಾರದು” ಎಂದು ಹೇಳಿದ್ದಾರೆ.

ಇದನ್ನೂ ಓದಿ:‘ಯುಪಿ ಪ್ಲಸ್ ಯೋಗಿ ತುಂಬಾ ಉಪಯೋಗಿ’: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...