Homeಕರ್ನಾಟಕಹನುಮ ಜಯಂತಿ: ಕೆ.ಆರ್‌.ಪೇಟೆಯಲ್ಲಿ ದಲಿತರ ಮೇಲೆ ಮಾರಣಾಂತಿಕ ಹಲ್ಲೆ; 27 ಮಂದಿ ಸವರ್ಣೀಯರ ಮೇಲೆ ಎಫ್‌ಐಆರ್‌‌

ಹನುಮ ಜಯಂತಿ: ಕೆ.ಆರ್‌.ಪೇಟೆಯಲ್ಲಿ ದಲಿತರ ಮೇಲೆ ಮಾರಣಾಂತಿಕ ಹಲ್ಲೆ; 27 ಮಂದಿ ಸವರ್ಣೀಯರ ಮೇಲೆ ಎಫ್‌ಐಆರ್‌‌

- Advertisement -
- Advertisement -

ಹನುಮ ಜಯಂತಿ ಪ್ರಯುಕ್ತ ದೇವಾಲಯ ಪ್ರವೇಶಿಸಿದ ದಲಿತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆ ತಾಲ್ಲೂಕಿನ ಹರಿಹರಪುರದಲ್ಲಿ ನಡೆದಿದೆ.

ಡಿ.16ರಂದು ಘಟನೆ ನಡೆದಿದ್ದು, ಕೆ.ಆರ್‌.ಪೇಟೆ ಸರ್ಕಲ್‌ ಇನ್‌ಸ್ಪೆಕ್ಟರ್‌ ನಿರಂಜನ್‌ ದೂರು ಸ್ವೀಕರಿಸಲು ನಿರಾಕರಿಸಿದ ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್‌.ಯತೀಶ್‌ ಅವರಲ್ಲಿ ದಲಿತರು ನೋವು ತೋಡಿಕೊಂಡಿದ್ದು, 27 ಮಂದಿಯ ಮೇಲೆ ಜಾತಿ ದೌರ್ಜನ್ಯ ಪ್ರಕರಣ ದಾಖಲಾಗಿದೆ.

“ನಿಮ್ಮಿಂದ ದೇವಸ್ಥಾನ ಮಲಿನಗೊಂಡಿದೆ. ನಿಮ್ಮಂಥ ಜನರನ್ನು ಭೂಮಿ ಮೇಲೆ ಇರದಂತೆ ಸುಟ್ಟು ಹಾಕುತ್ತೇವೆ ಎಂದು ಡಿ.16ರ ರಾತ್ರಿ 11.30ರ ಸಮಯದಲ್ಲಿ ಸುಮಾರು 50-60 ಜನ ಸವರ್ಣೀಯರು ಮಾರಕಾಸ್ತ್ರಗಳಿಂದ ದಲಿತರ ಮೇಲೆ ಹಲ್ಲೆ ನಡೆಸಿದ್ದಾರೆ. ಮಾರಕಾಸ್ತ್ರಗಳಾದ ದೊಣ್ಣೆ, ಕೊಡಲಿ, ಪಂಚ್‌, ಕಲ್ಲು ಮತ್ತು ಇಟ್ಟಿಗೆಗಳೊಂದಿಗೆ ದಲಿತ ಕಾಲೋನಿಗೆ ನುಗ್ಗಿ ದಾಂದಲೆ ನಡೆಸಿದ್ದಾರೆ. ಅಂಗವಿಕಲ ವ್ಯಕ್ತಿ ನಂಜಯ್ಯ ಎಂಬುವವರ ಮೇಲೆಯೂ ದಾಳಿ ನಡೆದಿದೆ. ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯ ನಡೆಸಲಾಗಿದೆ” ಎಂದು ದಲಿತರು ದೂರು ನೀಡಿದ್ದಾರೆ.

ಘಟನೆಯಲ್ಲಿ ಗಾಯಗೊಂಡ ದಲಿತ ಯುವಕರಾದ ದರ್ಶನ್, ಸುನಿಲ್‌, ಲೋಹಿತ್‌, ಅಭಿಷೇಕ್‌, ವಿನಯ್‌, ಸಂಜಯ್‌, ಚಲವರಾಜು, ಭಾಗ್ಯಮ್ಮ, ಕುಮಾರ, ರಂಜಮ್ಮ, ಶೋಭಾ, ನಂಜಯ್ಯ ಅವರು ನೀಡಿದ ದೂರಿನ ಅನ್ವಯ 27 ಜನರ ಮೇಲೆ ಪ್ರಕರಣ ದಾಖಲಾಗಿದೆ. ಆದರೆ ಯಾರನ್ನೂ ಈವರೆಗೆ ಬಂಧಿಸಿಲ್ಲ ಎಂದು ತಿಳಿದುಬಂದಿದೆ.

ಆರೋಪಿಗಳು: ಮಂಜುನಾಥ್‌ (ತಂದೆ: ತಮ್ಮೇಗೌಡ), ಶ್ರೀಧರ (ನಾಗೇಗೌಡ), ಸಂತೋಷ್ (ಕೃಷ್ಣೇಗೌಡ), ಶ್ರೀನಿವಾಸ ಎಚ್‌.ಟಿ. (ತಿಮ್ಮೇಗೌಡ), ರಂಜಿತ್‌ (ನಾರಾಯಣಗೌಡ), ಸತೀಶ (ರಾಮೇಗೌಡ), ಸ್ವಾಮಿ (ಸಹದೇವ), ಮುತ್ತು (ನಾರಾಯಣ), ರಜಿತ್‌ ಅಲಿಯಾಸ್ ಮಿಲ್ಟ್ರಿ (ನಾರಾಯಣಗೌಡ), ಮಂಜುನಾಥ (ತಮ್ಮೇಗೌಡ), ಮೋಹನ್ (ನಂಜೇಗೌಡ), ಮಂಜ (ಜಿಂಕೆ ಚಲುವಯ್ಯ), ಹರೀಶ ಮಡಗಿನಕುಡಿ, ವೆಂಕಟೇಶ್‌ ಹರಿಹರಪುರ, ರಾಘು (ವೆಂಕಟೇಶ್‌), ರವಿ ಅಲಿಯಾಸ್ ಚಡ್ಡಿ (ಮಂಜೇಗೌಡ), ಮಂಜ (ಜವರೇಗೌಡ), ಸುರೇಶ (ಕರಿಯಪ್ಪ), ಗುಂಡೂ (ವೆಂಕಟಾಚಲ), ಬಾನುಪ್ರಕಾಶ್ (ಗಂಗಾಧರ್‌), ಶಿವಕುಮಾರ (ಶ್ರೀನಿವಾಸ್), ದರ್ಶನ್‌ ಕುರೇನಹಳ್ಳಿ, ದೀಪು (ಶಂಕರ್‌ ಅಲಿಯಾಸ್‌ ರೇಷ್ಮೇ ಇಲಾಖೆ), ಮೋಹನ (ಶ್ರೀನಿವಾಸ್‌), ಪ್ರದೀಪ್ (ವೆಂಕಟೇಶ್), ಜಯಂತ್‌ (ಡಯಟ್ ಜಯರಾಮ್‌), ಗೌತಮ್ಮ ಅಲಿಯಾಸ್ ಕುಳ್ಳಯ್ಯ.

ಇದನ್ನೂ ಓದಿರಿ: ನೆಲಮಂಗಲ: ತಮಟೆ ಬಾರಿಸಿದ್ದಕ್ಕೆ ದಲಿತನಿಗೆ ಥಳಿತ; ಪ್ರಕರಣ ದಾಖಲು

ಕೆ.ಆರ್‌.ಪೇಟೆ ಸರ್ಕಲ್‌ ಇನ್‌ಸ್ಪೆಕ್ಟರ್‌ ನಿರ್ಲಕ್ಷ್ಯ

ಮೈಸೂರಿನ ವಕೀಲರಾದ ಎ.ಆರ್‌.ಕಾಂತರಾಜು ಅವರು ಘಟನೆ ಕುರಿತು ಮಾತನಾಡಿದ್ದು, “21ನೇ ಶತಮಾನ ಕಳೆದರೂ ಸಂವಿಧಾನದ ಆಶಯಗಳು ಈಡೇರಲಿಲ್ಲ. ದಲಿತರನ್ನು ಪ್ರಾಣಿಗಳಿಗಿಂತ ಕಡೆಯಾಗಿ ನಡೆಸಿಕೊಳ್ಳಲಾಗುತ್ತಿದೆ. ಇಂದು ಹಸು ಕೊಲ್ಲಬಾರದೆಂದು, ಮೇಕೆ ಕೊಲ್ಲಬಾರದೆಂದು ಕಾನೂನು ತರುತ್ತಾರೆ. ಆದರೆ ಮನುಷ್ಯರನ್ನು ಹಸು ಮತ್ತು ಮೇಕೆಗಳಿಗಿಂತ ಹೀನಾಯವಾಗಿ ನಡೆಸಿಕೊಳ್ಳುತ್ತಿದ್ದಾರೆ. ಪೊಲೀಸರು ದಲಿತರಿಗೆ ರಕ್ಷಣೆ ನೀಡಬೇಕಾದ ಸ್ಥಳೀಯ ಪೊಲೀಸರೇ ದಬ್ಬಾಳಿಕೆ ನಡೆಸಿದ್ದಾರೆ” ಎಂದು ದೂರಿದ್ದಾರೆ.

“ಹರಿಹರಪುರ ಗ್ರಾಮದಲ್ಲಿ ಹದಿನೇಳು ವರ್ಷಗಳಿಂದ ಹನುಮ ಜಯಂತಿ ನಡೆಯುತ್ತಿದೆ. ಹನುಮ ಜಯಂತಿ ನಡೆಸುವಾಗ ದಲಿತರಿಂದ ಯಾವುದೇ ವಂತಿಕೆಯನ್ನು ಪಡೆಯುವುದಿಲ್ಲ. ದಲಿತರಿಂದ ಹತ್ತು ರೂಪಾಯಿ ವಂತಿಕೆ ಪಡೆದರೂ ನಾಳೆ ದಲಿತರನ್ನು ದೇವಸ್ಥಾನಕ್ಕೆ ಬಿಟ್ಟುಕೊಳ್ಳಬೇಕಾಗುತ್ತದೆ ಎಂಬುದು ಇದಕ್ಕೆ ಕಾರಣ. ಇದುವರೆಗೂ ದಲಿತರು ಕದ್ದು ಮುಚ್ಚಿ ದೇವರಿಗೆ ನಮಸ್ಕಾರ ಮಾಡುತ್ತಿದ್ದರು. ಸವರ್ಣೀಯರನ್ನು ಎದುರು ಹಾಕಿಕೊಳ್ಳುವ ಶಕ್ತಿ ಇರಲಿಲ್ಲ. ಇದನ್ನು ಪ್ರಶ್ನಿಸಿ ದಲಿತರು ಈ ಬಾರಿ ದೇವಾಲಯ ಪ್ರವೇಶಿಸಿದ್ದರು. ಅದನ್ನು ನೋಡಿದ ಮೇಲ್ವರ್ಗದ ಜನ ದಲಿತರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ” ಎಂದು ತಿಳಿಸಿದ್ದಾರೆ.

ಕುಮಾರ್‌ ಎಂಬ ಯುವಕ ಈ ಘಟನೆಯನ್ನು ಸೆರೆ ಹಿಡಿಯಲು ಯತ್ನಿಸಿದಾಗ ಆತನ ಮೊಬೈಲ್‌ ಕೂಡ ಕಸಿದುಕೊಂಡು 20-30 ಜನ ಮನಬಂದಂತೆ ಥಳಿಸಿದ್ದಾರೆ. ಇಷ್ಟೆಲ್ಲ ಘಟನೆಯಾದ ಬಳಿಕ ಅಂದು ರಾತ್ರಿ 12.30ಕ್ಕೆ ಕೆ.ಆರ್‌.ಪೇಟೆ ಪೊಲೀಸ್ ಠಾಣೆಯಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್‌ ನಿರಂಜನ್‌ ಅವರನ್ನು ಭೇಟಿ ಮಾಡಿ ದೂರು ನೀಡಲು ಹೋಗುತ್ತಾರೆ. ಜನರಿಗೆ ರಕ್ಷಣೆ ಕೊಡಬೇಕಾದ ಇನ್‌ಸ್ಪೆಕ್ಟರ್‌ ನಿರಂಜನ್‌, “ದಲಿತರದ್ದು ಅತಿಯಾಯಿತು, ನಿಮ್ಮಂಥವರ ಕಂಪ್ಲೇಟ್‌ ತೆಗೆದುಕೊಳ್ಳಲು ಆಗಲ್ಲ. ನಿಮ್ಮಂಥವರ ಕಂಪ್ಲೇಟ್‌ ತೆಗೆದುಕೊಂಡು ಕೂತರೆ ದಿನವೆಲ್ಲ ತೆಗೆದುಕೊಳ್ಳಬೇಕಾಗುತ್ತದೆ. ನಾಳೆ ಬನ್ನಿ” ಎಂದು ಹೇಳುತ್ತಾರೆ. ಇದಾದ ಮೇಲೆ ಒಂದು ಗಂಟೆಯಲ್ಲೇ ಗ್ರಾಮಕ್ಕೆ ಪೊಲೀಸರನ್ನು ಕಳಿಸಿ, ದಲಿತರಿಗೆಯೇ ಎಚ್ಚರಿಕೆ ಕೊಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ದಲಿತರಿಗೆ ರಕ್ಷಣೆ ನೀಡಬೇಕಾದ ಪೊಲೀಸರೇ ದಲಿತರಿಗೆ ಭಯಭೀತಿ ಹುಟ್ಟಿಸಿದ್ದಾರೆ. ಮಾರನೇ ದಿನ ದೂರು ನೀಡಲು ಹೋದಾಗಲೂ ದೂರು ಸ್ವೀಕರಿಸಲಿಲ್ಲ. ಮಂಡ್ಯ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ದೂರು ನೀಡಲು ಹೋಗಿದ್ದೆವು. ಎಸ್‌ಪಿಯವರು ನಮ್ಮಿಂದ ವಿವರವಾದ ದೂರು ಸ್ವೀಕರಿಸಿದರು. “ಯಾರು ದೂರು ಸ್ವೀಕರಿಸಲ್ಲ ನೋಡ್ತೀನಿ. ಗ್ರಾಮದಲ್ಲಿ ಅಹಿತರಕ ಘಟನೆ ನಡೆಯದಂತೆ ಕ್ರಮ ವಹಿಸುತ್ತೇನೆ” ಎಂದು ತಿಳಿಸಿದರು. ಐಪಿಎಸ್‌‌ ಅಧಿಕಾರಿಗಳು ಸಾಂತ್ವನ ಹೇಳುತ್ತಾರೆ. ಆದರೆ ಸ್ಥಳೀಯವಾಗಿ ಇರುವಂತಹ ಜಾತಿವಾದಿ ಮನಸ್ಥಿತಿಯ ಅಧಿಕಾರಿಗಳೂ ದಲಿತರಿಗೆ ಯಾಕೆ ರಕ್ಷಣೆ ನೀಡುತ್ತಿಲ್ಲ. ಇದೇನಾ ಭಾರತದ ಕಾನೂನು? ಇದೇನಾ ದಲಿತರಿಗೆ ನೀಡುವ ರಕ್ಷಣೆ? ಎಂದು ಪ್ರಶ್ನಿಸಿದ್ದಾರೆ ಕಾಂತರಾಜು.


ಇದನ್ನೂ ಓದಿರಿ: ಸಾರ್ವಜನಿಕ ರಸ್ತೆ ಬಳಸಿದ್ದಕ್ಕೆ ದಲಿತ ಯುವಕನ ಮೇಲೆ ತೀವ್ರ ಹಲ್ಲೆ: ಕ್ರೂರ ಅಸ್ಪೃಶ್ಯತೆ ಆಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಇಂತಹ ಕೀಳು ಮನಸ್ಥಿತಿ ಇರುವ ಜನರು ನೀವು, ನಾಚಿಕೆಯಾಗಬೇಕು ನಿಮಗೆ ನಾಗರೀಕ ಸಮಾಜದಲ್ಲಿ ಬದುಕಲು ಯೋಗ್ಯತೆ ಇಲ್ಲದ ನೀವು ಹುಚಿನಾಯಿಗಳಿಗಿಂತ ಕೀಳು ನೀವು. ಮನುಷ್ಯರನ್ನು ಪ್ರೀತಿಸಿ ಗೌರವಿಸಿ.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...