Homeಕರ್ನಾಟಕಹನುಮ ಜಯಂತಿ: ಕೆ.ಆರ್‌.ಪೇಟೆಯಲ್ಲಿ ದಲಿತರ ಮೇಲೆ ಮಾರಣಾಂತಿಕ ಹಲ್ಲೆ; 27 ಮಂದಿ ಸವರ್ಣೀಯರ ಮೇಲೆ ಎಫ್‌ಐಆರ್‌‌

ಹನುಮ ಜಯಂತಿ: ಕೆ.ಆರ್‌.ಪೇಟೆಯಲ್ಲಿ ದಲಿತರ ಮೇಲೆ ಮಾರಣಾಂತಿಕ ಹಲ್ಲೆ; 27 ಮಂದಿ ಸವರ್ಣೀಯರ ಮೇಲೆ ಎಫ್‌ಐಆರ್‌‌

- Advertisement -
- Advertisement -

ಹನುಮ ಜಯಂತಿ ಪ್ರಯುಕ್ತ ದೇವಾಲಯ ಪ್ರವೇಶಿಸಿದ ದಲಿತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆ ತಾಲ್ಲೂಕಿನ ಹರಿಹರಪುರದಲ್ಲಿ ನಡೆದಿದೆ.

ಡಿ.16ರಂದು ಘಟನೆ ನಡೆದಿದ್ದು, ಕೆ.ಆರ್‌.ಪೇಟೆ ಸರ್ಕಲ್‌ ಇನ್‌ಸ್ಪೆಕ್ಟರ್‌ ನಿರಂಜನ್‌ ದೂರು ಸ್ವೀಕರಿಸಲು ನಿರಾಕರಿಸಿದ ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್‌.ಯತೀಶ್‌ ಅವರಲ್ಲಿ ದಲಿತರು ನೋವು ತೋಡಿಕೊಂಡಿದ್ದು, 27 ಮಂದಿಯ ಮೇಲೆ ಜಾತಿ ದೌರ್ಜನ್ಯ ಪ್ರಕರಣ ದಾಖಲಾಗಿದೆ.

“ನಿಮ್ಮಿಂದ ದೇವಸ್ಥಾನ ಮಲಿನಗೊಂಡಿದೆ. ನಿಮ್ಮಂಥ ಜನರನ್ನು ಭೂಮಿ ಮೇಲೆ ಇರದಂತೆ ಸುಟ್ಟು ಹಾಕುತ್ತೇವೆ ಎಂದು ಡಿ.16ರ ರಾತ್ರಿ 11.30ರ ಸಮಯದಲ್ಲಿ ಸುಮಾರು 50-60 ಜನ ಸವರ್ಣೀಯರು ಮಾರಕಾಸ್ತ್ರಗಳಿಂದ ದಲಿತರ ಮೇಲೆ ಹಲ್ಲೆ ನಡೆಸಿದ್ದಾರೆ. ಮಾರಕಾಸ್ತ್ರಗಳಾದ ದೊಣ್ಣೆ, ಕೊಡಲಿ, ಪಂಚ್‌, ಕಲ್ಲು ಮತ್ತು ಇಟ್ಟಿಗೆಗಳೊಂದಿಗೆ ದಲಿತ ಕಾಲೋನಿಗೆ ನುಗ್ಗಿ ದಾಂದಲೆ ನಡೆಸಿದ್ದಾರೆ. ಅಂಗವಿಕಲ ವ್ಯಕ್ತಿ ನಂಜಯ್ಯ ಎಂಬುವವರ ಮೇಲೆಯೂ ದಾಳಿ ನಡೆದಿದೆ. ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯ ನಡೆಸಲಾಗಿದೆ” ಎಂದು ದಲಿತರು ದೂರು ನೀಡಿದ್ದಾರೆ.

ಘಟನೆಯಲ್ಲಿ ಗಾಯಗೊಂಡ ದಲಿತ ಯುವಕರಾದ ದರ್ಶನ್, ಸುನಿಲ್‌, ಲೋಹಿತ್‌, ಅಭಿಷೇಕ್‌, ವಿನಯ್‌, ಸಂಜಯ್‌, ಚಲವರಾಜು, ಭಾಗ್ಯಮ್ಮ, ಕುಮಾರ, ರಂಜಮ್ಮ, ಶೋಭಾ, ನಂಜಯ್ಯ ಅವರು ನೀಡಿದ ದೂರಿನ ಅನ್ವಯ 27 ಜನರ ಮೇಲೆ ಪ್ರಕರಣ ದಾಖಲಾಗಿದೆ. ಆದರೆ ಯಾರನ್ನೂ ಈವರೆಗೆ ಬಂಧಿಸಿಲ್ಲ ಎಂದು ತಿಳಿದುಬಂದಿದೆ.

ಆರೋಪಿಗಳು: ಮಂಜುನಾಥ್‌ (ತಂದೆ: ತಮ್ಮೇಗೌಡ), ಶ್ರೀಧರ (ನಾಗೇಗೌಡ), ಸಂತೋಷ್ (ಕೃಷ್ಣೇಗೌಡ), ಶ್ರೀನಿವಾಸ ಎಚ್‌.ಟಿ. (ತಿಮ್ಮೇಗೌಡ), ರಂಜಿತ್‌ (ನಾರಾಯಣಗೌಡ), ಸತೀಶ (ರಾಮೇಗೌಡ), ಸ್ವಾಮಿ (ಸಹದೇವ), ಮುತ್ತು (ನಾರಾಯಣ), ರಜಿತ್‌ ಅಲಿಯಾಸ್ ಮಿಲ್ಟ್ರಿ (ನಾರಾಯಣಗೌಡ), ಮಂಜುನಾಥ (ತಮ್ಮೇಗೌಡ), ಮೋಹನ್ (ನಂಜೇಗೌಡ), ಮಂಜ (ಜಿಂಕೆ ಚಲುವಯ್ಯ), ಹರೀಶ ಮಡಗಿನಕುಡಿ, ವೆಂಕಟೇಶ್‌ ಹರಿಹರಪುರ, ರಾಘು (ವೆಂಕಟೇಶ್‌), ರವಿ ಅಲಿಯಾಸ್ ಚಡ್ಡಿ (ಮಂಜೇಗೌಡ), ಮಂಜ (ಜವರೇಗೌಡ), ಸುರೇಶ (ಕರಿಯಪ್ಪ), ಗುಂಡೂ (ವೆಂಕಟಾಚಲ), ಬಾನುಪ್ರಕಾಶ್ (ಗಂಗಾಧರ್‌), ಶಿವಕುಮಾರ (ಶ್ರೀನಿವಾಸ್), ದರ್ಶನ್‌ ಕುರೇನಹಳ್ಳಿ, ದೀಪು (ಶಂಕರ್‌ ಅಲಿಯಾಸ್‌ ರೇಷ್ಮೇ ಇಲಾಖೆ), ಮೋಹನ (ಶ್ರೀನಿವಾಸ್‌), ಪ್ರದೀಪ್ (ವೆಂಕಟೇಶ್), ಜಯಂತ್‌ (ಡಯಟ್ ಜಯರಾಮ್‌), ಗೌತಮ್ಮ ಅಲಿಯಾಸ್ ಕುಳ್ಳಯ್ಯ.

ಇದನ್ನೂ ಓದಿರಿ: ನೆಲಮಂಗಲ: ತಮಟೆ ಬಾರಿಸಿದ್ದಕ್ಕೆ ದಲಿತನಿಗೆ ಥಳಿತ; ಪ್ರಕರಣ ದಾಖಲು

ಕೆ.ಆರ್‌.ಪೇಟೆ ಸರ್ಕಲ್‌ ಇನ್‌ಸ್ಪೆಕ್ಟರ್‌ ನಿರ್ಲಕ್ಷ್ಯ

ಮೈಸೂರಿನ ವಕೀಲರಾದ ಎ.ಆರ್‌.ಕಾಂತರಾಜು ಅವರು ಘಟನೆ ಕುರಿತು ಮಾತನಾಡಿದ್ದು, “21ನೇ ಶತಮಾನ ಕಳೆದರೂ ಸಂವಿಧಾನದ ಆಶಯಗಳು ಈಡೇರಲಿಲ್ಲ. ದಲಿತರನ್ನು ಪ್ರಾಣಿಗಳಿಗಿಂತ ಕಡೆಯಾಗಿ ನಡೆಸಿಕೊಳ್ಳಲಾಗುತ್ತಿದೆ. ಇಂದು ಹಸು ಕೊಲ್ಲಬಾರದೆಂದು, ಮೇಕೆ ಕೊಲ್ಲಬಾರದೆಂದು ಕಾನೂನು ತರುತ್ತಾರೆ. ಆದರೆ ಮನುಷ್ಯರನ್ನು ಹಸು ಮತ್ತು ಮೇಕೆಗಳಿಗಿಂತ ಹೀನಾಯವಾಗಿ ನಡೆಸಿಕೊಳ್ಳುತ್ತಿದ್ದಾರೆ. ಪೊಲೀಸರು ದಲಿತರಿಗೆ ರಕ್ಷಣೆ ನೀಡಬೇಕಾದ ಸ್ಥಳೀಯ ಪೊಲೀಸರೇ ದಬ್ಬಾಳಿಕೆ ನಡೆಸಿದ್ದಾರೆ” ಎಂದು ದೂರಿದ್ದಾರೆ.

“ಹರಿಹರಪುರ ಗ್ರಾಮದಲ್ಲಿ ಹದಿನೇಳು ವರ್ಷಗಳಿಂದ ಹನುಮ ಜಯಂತಿ ನಡೆಯುತ್ತಿದೆ. ಹನುಮ ಜಯಂತಿ ನಡೆಸುವಾಗ ದಲಿತರಿಂದ ಯಾವುದೇ ವಂತಿಕೆಯನ್ನು ಪಡೆಯುವುದಿಲ್ಲ. ದಲಿತರಿಂದ ಹತ್ತು ರೂಪಾಯಿ ವಂತಿಕೆ ಪಡೆದರೂ ನಾಳೆ ದಲಿತರನ್ನು ದೇವಸ್ಥಾನಕ್ಕೆ ಬಿಟ್ಟುಕೊಳ್ಳಬೇಕಾಗುತ್ತದೆ ಎಂಬುದು ಇದಕ್ಕೆ ಕಾರಣ. ಇದುವರೆಗೂ ದಲಿತರು ಕದ್ದು ಮುಚ್ಚಿ ದೇವರಿಗೆ ನಮಸ್ಕಾರ ಮಾಡುತ್ತಿದ್ದರು. ಸವರ್ಣೀಯರನ್ನು ಎದುರು ಹಾಕಿಕೊಳ್ಳುವ ಶಕ್ತಿ ಇರಲಿಲ್ಲ. ಇದನ್ನು ಪ್ರಶ್ನಿಸಿ ದಲಿತರು ಈ ಬಾರಿ ದೇವಾಲಯ ಪ್ರವೇಶಿಸಿದ್ದರು. ಅದನ್ನು ನೋಡಿದ ಮೇಲ್ವರ್ಗದ ಜನ ದಲಿತರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ” ಎಂದು ತಿಳಿಸಿದ್ದಾರೆ.

ಕುಮಾರ್‌ ಎಂಬ ಯುವಕ ಈ ಘಟನೆಯನ್ನು ಸೆರೆ ಹಿಡಿಯಲು ಯತ್ನಿಸಿದಾಗ ಆತನ ಮೊಬೈಲ್‌ ಕೂಡ ಕಸಿದುಕೊಂಡು 20-30 ಜನ ಮನಬಂದಂತೆ ಥಳಿಸಿದ್ದಾರೆ. ಇಷ್ಟೆಲ್ಲ ಘಟನೆಯಾದ ಬಳಿಕ ಅಂದು ರಾತ್ರಿ 12.30ಕ್ಕೆ ಕೆ.ಆರ್‌.ಪೇಟೆ ಪೊಲೀಸ್ ಠಾಣೆಯಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್‌ ನಿರಂಜನ್‌ ಅವರನ್ನು ಭೇಟಿ ಮಾಡಿ ದೂರು ನೀಡಲು ಹೋಗುತ್ತಾರೆ. ಜನರಿಗೆ ರಕ್ಷಣೆ ಕೊಡಬೇಕಾದ ಇನ್‌ಸ್ಪೆಕ್ಟರ್‌ ನಿರಂಜನ್‌, “ದಲಿತರದ್ದು ಅತಿಯಾಯಿತು, ನಿಮ್ಮಂಥವರ ಕಂಪ್ಲೇಟ್‌ ತೆಗೆದುಕೊಳ್ಳಲು ಆಗಲ್ಲ. ನಿಮ್ಮಂಥವರ ಕಂಪ್ಲೇಟ್‌ ತೆಗೆದುಕೊಂಡು ಕೂತರೆ ದಿನವೆಲ್ಲ ತೆಗೆದುಕೊಳ್ಳಬೇಕಾಗುತ್ತದೆ. ನಾಳೆ ಬನ್ನಿ” ಎಂದು ಹೇಳುತ್ತಾರೆ. ಇದಾದ ಮೇಲೆ ಒಂದು ಗಂಟೆಯಲ್ಲೇ ಗ್ರಾಮಕ್ಕೆ ಪೊಲೀಸರನ್ನು ಕಳಿಸಿ, ದಲಿತರಿಗೆಯೇ ಎಚ್ಚರಿಕೆ ಕೊಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ದಲಿತರಿಗೆ ರಕ್ಷಣೆ ನೀಡಬೇಕಾದ ಪೊಲೀಸರೇ ದಲಿತರಿಗೆ ಭಯಭೀತಿ ಹುಟ್ಟಿಸಿದ್ದಾರೆ. ಮಾರನೇ ದಿನ ದೂರು ನೀಡಲು ಹೋದಾಗಲೂ ದೂರು ಸ್ವೀಕರಿಸಲಿಲ್ಲ. ಮಂಡ್ಯ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ದೂರು ನೀಡಲು ಹೋಗಿದ್ದೆವು. ಎಸ್‌ಪಿಯವರು ನಮ್ಮಿಂದ ವಿವರವಾದ ದೂರು ಸ್ವೀಕರಿಸಿದರು. “ಯಾರು ದೂರು ಸ್ವೀಕರಿಸಲ್ಲ ನೋಡ್ತೀನಿ. ಗ್ರಾಮದಲ್ಲಿ ಅಹಿತರಕ ಘಟನೆ ನಡೆಯದಂತೆ ಕ್ರಮ ವಹಿಸುತ್ತೇನೆ” ಎಂದು ತಿಳಿಸಿದರು. ಐಪಿಎಸ್‌‌ ಅಧಿಕಾರಿಗಳು ಸಾಂತ್ವನ ಹೇಳುತ್ತಾರೆ. ಆದರೆ ಸ್ಥಳೀಯವಾಗಿ ಇರುವಂತಹ ಜಾತಿವಾದಿ ಮನಸ್ಥಿತಿಯ ಅಧಿಕಾರಿಗಳೂ ದಲಿತರಿಗೆ ಯಾಕೆ ರಕ್ಷಣೆ ನೀಡುತ್ತಿಲ್ಲ. ಇದೇನಾ ಭಾರತದ ಕಾನೂನು? ಇದೇನಾ ದಲಿತರಿಗೆ ನೀಡುವ ರಕ್ಷಣೆ? ಎಂದು ಪ್ರಶ್ನಿಸಿದ್ದಾರೆ ಕಾಂತರಾಜು.


ಇದನ್ನೂ ಓದಿರಿ: ಸಾರ್ವಜನಿಕ ರಸ್ತೆ ಬಳಸಿದ್ದಕ್ಕೆ ದಲಿತ ಯುವಕನ ಮೇಲೆ ತೀವ್ರ ಹಲ್ಲೆ: ಕ್ರೂರ ಅಸ್ಪೃಶ್ಯತೆ ಆಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಇಂತಹ ಕೀಳು ಮನಸ್ಥಿತಿ ಇರುವ ಜನರು ನೀವು, ನಾಚಿಕೆಯಾಗಬೇಕು ನಿಮಗೆ ನಾಗರೀಕ ಸಮಾಜದಲ್ಲಿ ಬದುಕಲು ಯೋಗ್ಯತೆ ಇಲ್ಲದ ನೀವು ಹುಚಿನಾಯಿಗಳಿಗಿಂತ ಕೀಳು ನೀವು. ಮನುಷ್ಯರನ್ನು ಪ್ರೀತಿಸಿ ಗೌರವಿಸಿ.

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...