Homeಚಳವಳಿರಾಜಸ್ಥಾನ: ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 13 ಮಂದಿಗೆ 20 ವರ್ಷ ಜೈಲು

ರಾಜಸ್ಥಾನ: ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 13 ಮಂದಿಗೆ 20 ವರ್ಷ ಜೈಲು

- Advertisement -
- Advertisement -

ರಾಜಸ್ಥಾನದಲ್ಲಿ ಈ ವರ್ಷದ ಆರಂಭದಲ್ಲಿ 15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಒಂಬತ್ತು ದಿನಗಳ ಕಾಲ ಸತತವಾಗಿ ಸಾಮೂಹಿಕ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ನ್ಯಾಯಾಲಯವು 13 ಜನರಿಗೆ ತಲಾ 20 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿದೆ.

ಇದೇ ಪ್ರಕರಣದಲ್ಲಿ ಮತ್ತಿಬ್ಬರು ಅಪರಾಧಿಗಳಿಗೆ ತಲಾ ನಾಲ್ಕು ವರ್ಷಗಳ ಜೈಲು ಶಿಕ್ಷೆಯನ್ನು ಕೋಟಾ ನ್ಯಾಯಾಲಯ ಶನಿವಾರ ವಿಧಿಸಿದೆ.

ಫೋಕ್ಸೋ ಕಾಯಿದೆಯಡಿ ಸ್ಥಾಪಿಸಲಾದ ವಿಶೇಷ ನ್ಯಾಯಾಲಯದ ನೇತೃತ್ವ ವಹಿಸಿಕೊಂಡಿರುವ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಶೋಕ್ ಚೌಧರಿ, ಮನೆಯಿಂದ ಬಾಲಕಿಯನ್ನು ಅಪಹರಿಸಿ ಮಾರಾಟ ಮಾಡಿದ್ದ ಮಹಿಳೆಗೆ ನಾಲ್ಕು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದ್ದಾರೆ. ಅಪರಾಧಿ ಮಹಿಳೆ ಬಾಲಕಿಯನ್ನು ಮನೆಯಿಂದ ಅಪಹರಿಸಿ ಜಲಾವರ್‌ಗೆ ಕರೆದೊಯ್ದು ಅಲ್ಲಿ ಹಲವು ಮಂದಿಗೆ ಮಾರಾಟ ಮಾಡಿದ್ದರು.

13 ಅಪರಾಧಿಗಳಿಗೆ ತಲಾ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿರುವ ಜೊತೆಗೆ ತಲಾ 10,000 ರೂಪಾಯಿ ದಂಡ ವಿಧಿಸಲಾಗಿದೆ. ಜೊತೆಗೆ ನಾಲ್ಕು ವರ್ಷಗಳ ಶಿಕ್ಷೆಗೆ ಒಳಗಾದವರಿಗೆ 7,000 ರೂಪಾಯಿ ದಂಡ ವಿಧಿಸಲಾಗಿದೆ.

ಇದನ್ನೂ ಓದಿ: ಅತ್ಯಾಚಾರದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಕ್ಷಮೆ ಕೇಳಿದ ಮಾಜಿ ಸ್ಪೀಕರ್‌ ರಮೇಶ್ ಕುಮಾರ್‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌

ಈ 16 ಜನರಿಗೆ ಶಿಕ್ಷೆ ವಿಧಿಸುವ ಸಂದರ್ಭದಲ್ಲಿ, ಅಪರಾಧದಲ್ಲಿ ಭಾಗಿಯಾಗಿದ್ದ ಇತರ 12 ಜನರನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ನ್ಯಾಯಾಲಯವು ಖುಲಾಸೆಗೊಳಿಸಿದೆ. ನಾಲ್ವರು ಅಪ್ರಾಪ್ತ ಅಪರಾಧಿಗಳು ಇನ್ನೂ ಸ್ಥಳೀಯ ಬಾಲ ನ್ಯಾಯ ಮಂಡಳಿಯಲ್ಲಿ ಪ್ರತ್ಯೇಕವಾಗಿ ಪ್ರಕರಣದ ವಿಚಾರಣೆಯನ್ನು ಎದುರಿಸುತ್ತಿದ್ದಾರೆ.

ಈ ವರ್ಷದ ಮಾರ್ಚ್ 6 ರಂದು ಸುಕೇತ್ ಪೊಲೀಸ್ ಠಾಣೆಯಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಎಫ್‌ಐಆರ್ ದಾಖಲಿಸಲಾಗಿದೆ. ಅಪ್ರಾಪ್ತ ಬಾಲಕಿಗೆ ಬ್ಯಾಗ್ ಕೊಡಿಸುವ ನೆಪದಲ್ಲಿ ಬುಲ್ಬುಲ್ ಅಲಿಯಾಸ್ ಪೂಜಾ ಜೈನ್ ಎಂಬ ಮಹಿಳೆ ಆಕೆಯನ್ನು ಕೋಟಾದಿಂದ ಅಪಹರಿಸಿದ್ದರು. ಅಲ್ಲಿಂದ ಆಕೆ ತನ್ನನ್ನು ಜಲಾವರ್‌ಗೆ ಕರೆದೊಯ್ದರು. ಅಲ್ಲಿ ಒಂಬತ್ತು ದಿನಗಳ ಕಾಲ ತನ್ನ ಮೇಲೆ ಅತ್ಯಾಚಾರ ಎಸಗಿದದ ಬಳಿಕ ಒಬ್ಬರ ಬಳಿಕ ಒಬ್ಬರಂತೆ ಹಲವಾರು ಜನರಿಗೆ ಹಸ್ತಾಂತರಿಸಿದರು ಎಂದು ಬಾಲಕಿ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ.

ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಿದ ಕೋಟಾ ಪೊಲೀಸರು ಮೇ 7 ರಂದು ನ್ಯಾಯಾಲಯಕ್ಕೆ 1750 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದರು.


ಇದನ್ನೂ ಓದಿ: ರಾಜಸ್ಥಾನ: ನಾಲ್ವರು ವಿದ್ಯಾರ್ಥಿನಿಯರ ಮೇಲೆ ಶಾಲಾ ಶಿಕ್ಷಕರಿಂದ ಸಾಮೂಹಿಕ ಅತ್ಯಾಚಾರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅತ್ಯಾಚಾರ ಮಾಡಿದವರಿಗೆ ಗಲ್ಲು ಶಿಕ್ಷೆಯನ್ನು ನೀಡಬೇಕು ವಿನಹ ಇಂತ ಕೆಳಮಟ್ಟದ ಶಿಕ್ಷೇಗಳಿಂದ ಸಮಾಜದಲ್ಲಿ ಭಯದ ಬದಲು ಬಂಡತನ ಉಂಟಾಗುತ್ತೇ ಅತ್ಯಾಚಿರಿಗಳಿಗೆ ಇಂತ ವಿಷಯಗಳಲ್ಲಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...