Homeಮುಖಪುಟಪಂಜಾಬ್‌‌: ‘ನಿಶಾನ್‌ ಶಾಹಿಬ್‌’ಗೆ ಅಗೌರವ ಆರೋಪ; ಮತ್ತೊಬ್ಬ ವ್ಯಕ್ತಿಯ ಹತ್ಯೆ

ಪಂಜಾಬ್‌‌: ‘ನಿಶಾನ್‌ ಶಾಹಿಬ್‌’ಗೆ ಅಗೌರವ ಆರೋಪ; ಮತ್ತೊಬ್ಬ ವ್ಯಕ್ತಿಯ ಹತ್ಯೆ

- Advertisement -
- Advertisement -

ಅಮೃತಸರದ ಸ್ವರ್ಣಮಂದಿರದಲ್ಲಿ ಪವಿತ್ರ ಗ್ರಂಥಕ್ಕೆ ಅಗೌರವ ತೋರಿದ್ದಾನೆ ಎಂದು ಆರೋಪಿಸಿ ವ್ಯಕ್ತಿಯೊಬ್ಬನನ್ನು ಥಳಿಸಿ ಕೊಂದ ಒಂದು ದಿನದ ನಂತರ, ಭಾನುವಾರ ಬೆಳಿಗ್ಗೆ ಕಪುರ್ತಲದ ಗುರುದ್ವಾರವೊಂದರಲ್ಲಿ ‘ನಿಶಾನ್ ಸಾಹಿಬ್’ (ಸಿಖ್ ಧಾರ್ಮಿಕ ಧ್ವಜ) ಗೆ ಅಗೌರವ ತೋರಿದ ಆರೋಪದ ಮೇಲೆ ಇನ್ನೊಬ್ಬ ವ್ಯಕ್ತಿಯನ್ನು ಕೊಲ್ಲಲಾಗಿದೆ ಎಂದು ವರದಿಯಾಗಿದೆ.

ಕೊಲೆಗೀಡಾದ ವ್ಯಕ್ತಿ ನಿಶಾನ್ ಸಾಹಿಬ್‌ಗೆ ಅಗೌರವ ತೋರಿ, ಓಡಿಹೋಗಲು ಪ್ರಯತ್ನಿಸಿದಾಗ ಬೆನ್ನಟ್ಟಿ ಹಿಡಿಯಲಾಗಿದೆ ಎಂದು ನಿಜಾಂಪುರ್ ಗ್ರಾಮದ ಕೆಲವು ನಿವಾಸಿಗಳು ಹೇಳಿದ್ದಾರೆ. ಪೊಲೀಸರ ಪ್ರಕಾರ, ವ್ಯಕ್ತಿಯನ್ನು ಹೊಡೆದು ಸಾಯಿಸಲಾಗಿದೆ.

ಇದನ್ನೂ ಓದಿ: ಗೋಲ್ಡನ್ ಟೆಂಪಲ್‌ ಅಪವಿತ್ರತೆ ಆರೋಪ: ವ್ಯಕ್ತಿಯೊಬ್ಬನನ್ನು ಕ್ರೂರವಾಗಿ ಥಳಿಸಿ ಕೊಲೆ

ಶನಿವಾರದಂದು ಅಮೃತಸರದ ಸ್ವರ್ಣ ಮಂದಿರದಲ್ಲಿ ನಡೆದ ‘ಅನಾಹುತ’ದಲ್ಲಿ ಆಪಾದಿತ ವ್ಯಕ್ತಿಯನ್ನುಉದ್ರಿಕ್ತ ಜನಸಮೂಹ ಹತ್ಯೆ ಮಾಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ದಿನನಿತ್ಯದ ರೆಹ್ರಾಸ್ ಪಥ (ಸಾಮಾನ್ಯ ಸಂಜೆ ಪ್ರಾರ್ಥನೆ) ಸಮಯದಲ್ಲಿ ವ್ಯಕ್ತಿಯೊಬ್ಬ ಸ್ವರ್ಣ ಮಂದಿರದ ಗರ್ಭಗುಡಿಯೊಳಗಿನ ಕಂಬಿಯ ಮೇಲೆ ಹಾರಿ, ಪವಿತ್ರ ಕತ್ತಿಯನ್ನು ಸ್ಪರ್ಶಿಸಲು ಪ್ರಯತ್ನಿಸಿದ್ದನು ಎಂದು ಮೂಲಗಳು ತಿಳಿಸಿವೆ. ವ್ಯಕ್ತಿಯು ಕ್ಲೀನ್ ಶೇವ್ ಆಗಿದ್ದು, ತಲೆಗೆ ಹಳದಿ ಬಟ್ಟೆಯನ್ನು ಕಟ್ಟಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಕರ್ತವ್ಯ ನಿರತ ಶಿರೋಮಣಿ ಗುರುದ್ವಾರ ಪರ್ಬಂಡಕ್ ಸಮಿತಿ (SGPC) ನೌಕರರು ಅವರನ್ನು ಬಂಧಿಸಿದ್ದಾರೆ. ಇಷ್ಟೆಲ್ಲ ನಡೆಯುವಾಗ ಪ್ರಾರ್ಥನೆ ಸಲ್ಲಿಸುತ್ತಿದ್ದ ಧಾರ್ಮಿಕ ಗುರು ತನ್ನ ಪ್ರಾರ್ಥನೆಯನ್ನು ಮುಂದುವರಿಸಿದ್ದರು.

ಇದನ್ನೂ ಓದಿ: ದೆಹಲಿ ಗಡಿಗಳಲ್ಲಿನ ಹೋರಾಟಕ್ಕೆ ತೆರೆ: ವಿಜಯೀ ಮೆರವಣಿಗೆ ಮೂಲಕ ಪಂಜಾಬ್‌ಗೆ ತೆರಳಲಿರುವ ರೈತರು

ಆಪಾದಿತ ವ್ಯಕ್ತಿಯನ್ನು ಎಸ್‌ಜಿಪಿಸಿಯ ನೌಕರರು ಮಂದಿರದ ಆವರಣದೊಳಗಿನ ಕೋಣೆಗೆ ಕರೆದೊಯ್ದಿದ್ದರು. ಅಲ್ಲಿ ವಿಚಾರಣೆಯ ಸಮಯದಲ್ಲಿ ಥಳಿಸಲಾಯಿದ್ದು, ನಂತರ ಗಾಲಿಕುರ್ಚಿಯಲ್ಲಿ ಎಸ್‌ಜಿಪಿಸಿ ಪ್ರಧಾನ ಕಚೇರಿಗೆ ಕರೆದೊಯ್ಯಲಾಯಿತು ಎಂದು ಮೂಲಗಳು ತಿಳಿಸಿವೆ ಎಂದು TNIE ವರದಿ ಮಾಡಿದೆ.

ಟಿವಿ ಚಾನೆಲ್‌ವೊಂದು ಸ್ವರ್ಣ ಮಂದಿರದ ಸಂಜೆಯ ಪ್ರಾರ್ಥನೆಯನ್ನು ನೇರ ಪ್ರಸಾರವನ್ನು ಮಾಡುತ್ತಿತ್ತು. ಹೀಗಾಗಿ ಘಟನೆಯ ವಿಡಿಯೊಗಳು ಶೀಘ್ರವೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಇದು ತಿಳಿಯುತ್ತಿದ್ದಂತೆ ನಿಹಾಂಗ್ಸ್ (ಸಿಖ್ ಯೋಧರು) ಸೇರಿದಂತೆ ಸಾರ್ವಜನಿಕರು ಸ್ವರ್ಣ ಮಂದಿರಕ್ಕೆ ಧಾವಿಸಿದ್ದರು.

ಇದರ ನಂತರ, ಸ್ವರ್ಣ ಮಂದಿರದ ಕಾಂಪ್ಲೆಕ್ಸ್‌ನಲ್ಲಿ ನೆಲದ ಮೇಲೆ ಮಲಗಿರುವ ಆರೋಪಿಯ ಮೃತದೇಹದ ವಿಡಿಯೊ ವೈರಲ್‌ ಆಗಿದೆ. ಮೃತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ:ಆಕ್ಸಿಜನ್ ಕೊರತೆಯಿಂದ ಸಾವು ಸಂಭವಿಸಿಲ್ಲವೆಂದು ಸುಳ್ಳು ಹೇಳಿದ ಸರ್ಕಾರ; ಸಾಕ್ಷ್ಯಗಳು ಹೀಗಿವೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...